Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:14 - ಪರಿಶುದ್ದ ಬೈಬಲ್‌

14 ತನ್ನ ಸ್ನೇಹಿತರು ತಿಳಿಸಿದಂತೆಯೇ ಅವನು ಮಾಡಿದನು. ರೆಹಬ್ಬಾಮನು, “ನನ್ನ ತಂದೆಯು ಕಷ್ಟದ ಕೆಲಸಗಳನ್ನು ಮಾಡಲು ನಿಮ್ಮನ್ನು ಬಲಾತ್ಕರಿಸಿದನು. ನಾನು ನಿಮಗೆ ಮತ್ತಷ್ಟು ಹೆಚ್ಚು ಕೆಲಸವನ್ನು ಕೊಡುತ್ತೇನೆ. ನನ್ನ ತಂದೆಯು ಬಾರುಕೋಲಿನಿಂದ ನಿಮ್ಮನ್ನು ಹೊಡೆಸಿದನು. ಆದರೆ ನಾನು ನಿಮ್ಮನ್ನು ಮತ್ತಷ್ಟು ಕಠಿಣವಾಗಿ ಮುಳ್ಳುಕೋಲುಗಳಿಂದ ಹೊಡೆಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ, ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು; ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ಮುಳ್ಳುಕೊರಡೆಗಳಿಂದ ದಂಡಿಸುವೆನು,” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ - ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ಮುಳ್ಳುಕೊರಡೆಗಳಿಂದ ದಂಡಿಸುವೆನು ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ, “ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗಿ ಮಾಡಿದನು. ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಶಿಕ್ಷಿಸಿದನು. ಆದರೆ ನಾನು ಮುಳ್ಳು ಕೊರಡೆಗಳಿಂದ ಶಿಕ್ಷಿಸುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:14
20 ತಿಳಿವುಗಳ ಹೋಲಿಕೆ  

ನೀವು ಸ್ವಾರ್ಥಿಗಳೂ ತೀಕ್ಷ್ಣವಾದ ಮತ್ಸರವನ್ನು ಹೃದಯದಲ್ಲಿ ಹೊಂದಿರುವವರೂ ಆಗಿದ್ದರೆ, ನೀವು ಕೊಚ್ಚಿಕೊಳ್ಳುವುದರಲ್ಲಿ ಅರ್ಥವೇ ಇಲ್ಲ. ಏಕೆಂದರೆ ಅದು ಕೇವಲ ಸುಳ್ಳಷ್ಟೇ.


ರಾಜ್ಯದ ಸಕಲ ಮುಖ್ಯಾಧಿಕಾರಿಗಳು, ನಾಯಕರು, ದೇಶಾಧಿಪತಿಗಳು, ಮಂತ್ರಿಗಳು ಮತ್ತು ಸಂಸ್ಥಾನಾಧ್ಯಕ್ಷರು ಸೇರಿ ಒಂದು ಆಲೋಚನೆಯನ್ನು ಮಾಡಿದ್ದಾರೆ. ಈ ಸಂಬಂಧವಾಗಿ ಅರಸನು ಒಂದು ನಿಬಂಧನೆಯನ್ನು ಮಾಡಿ ರಾಜಾಜ್ಞೆಯನ್ನು ಹೊರಡಿಸಬೇಕೆಂದು ನಮ್ಮೆಲ್ಲರ ಅನಿಸಿಕೆ. ಎಲ್ಲರೂ ಆ ರಾಜಾಜ್ಞೆಯನ್ನು ಪಾಲಿಸಬೇಕು. ಆ ನಿಬಂಧನೆ ಹೀಗಿದೆ: ಬರಲಿರುವ ಮೂವತ್ತು ದಿನ ಯಾರೂ ಅರಸನಾದ ನಿನ್ನನ್ನು ಬಿಟ್ಟು ಬೇರೆ ಯಾವ ದೇವರನ್ನಾಗಲಿ ಮನುಷ್ಯನನ್ನಾಗಲಿ ಪ್ರಾರ್ಥಿಸಕೂಡದು. ಯಾರಾದರೂ ಹಾಗೆ ಮಾಡಿದರೆ ಅವರನ್ನು ಸಿಂಹಗಳ ಗುಹೆಯಲ್ಲಿ ಎಸೆಯಲಾಗುವುದು.


ಆರಂಭಿಸುವ ಸಮಯಕ್ಕಿಂತಲೂ ಪೂರ್ಣಗೊಳಿಸುವ ಸಮಯವೇ ಮೇಲು. ಗರ್ವಕ್ಕಿಂತಲೂ ತಾಳ್ಮೆಯೇ ಉತ್ತಮ.


ವಾದವು ಜಲಾಶಯದ ಕಟ್ಟೆಯಲ್ಲಿ ಮಾಡುವ ರಂಧ್ರಕ್ಕೆ ಸಮಾನ. ಅದು ಹೆಚ್ಚೆಚ್ಚು ದೊಡ್ಡದಾಗುವುದಕ್ಕಿಂತ ಮೊದಲೇ ನಿಲ್ಲಿಸು.


ಅಹಂಕಾರಿಯು ನಾಶನದ ಅಪಾಯದಲ್ಲಿದ್ದಾನೆ. ದುರಾಭಿಮಾನಿಯು ಸೋಲಿನ ಅಪಾಯದಲ್ಲಿದ್ದಾನೆ.


ದುರಾಭಿಮಾನವು ಕೇವಲ ಜಗಳಕ್ಕೆ ಕಾರಣ. ಬುದ್ಧಿವಾದವನ್ನು ಕೇಳುವವರು ವಿವೇಕಿಗಳಾಗಿದ್ದಾರೆ.


ಶಿಷ್ಟರ ಆಲೋಚನೆ ನ್ಯಾಯವಾಗಿವೆ. ದುಷ್ಟರ ಉಪದೇಶ ಮೋಸಕರ.


ಈಜಿಪ್ಟಿನವರು ಇಸ್ರೇಲರ ಜೀವಿತವನ್ನು ಕಷ್ಟಕರವನ್ನಾಗಿ ಮಾಡಿದರು. ಇಸ್ರೇಲರಿಂದ ಇಟ್ಟಿಗೆ, ಗಾರೆ, ಬೇಸಾಯ ಮತ್ತು ಪ್ರತಿಯೊಂದು ಕೆಲಸವನ್ನು ಬಲವಂತವಾಗಿ ಮಾಡಿಸಿಕೊಂಡರು.


ಅಲ್ಲದೆ ಇನ್ನೂ ಪ್ರಯಾಸಕರವಾದ ಕೆಲಸವನ್ನು ಬಲವಂತದಿಂದ ಮಾಡಿಸಿಕೊಂಡರು.


ಆ ಸಮಯದಲ್ಲಿ, ರೆಹಬ್ಬಾಮನು ಅವರೊಂದಿಗೆ ಕಠಿಣವಾಗಿ ಮಾತನಾಡಿದನು. ಹಿರಿಯರು ನೀಡಿದ ಸಲಹೆಗೆ ಅವನು ಕಿವಿಗೊಡಲಿಲ್ಲ.


ಅಧಿಪತಿಯು ಸುಳ್ಳುಮಾತುಗಳಿಗೆ ಕಿವಿಗೊಟ್ಟರೆ, ಅವನ ಅಧೀನದಲ್ಲಿರುವ ಅಧಿಕಾರಿಗಳೆಲ್ಲರು ಕೆಡುಕರಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು