21 ರೆಹಬ್ಬಾಮನು ಜೆರುಸಲೇಮಿಗೆ ಹಿಂದಿರುಗಿ ಹೋದನು. ಅವನು ಯೆಹೂದದ ಕುಟುಂಬಗಳನ್ನು ಮತ್ತು ಬೆನ್ಯಾಮೀನ್ ಕುಟುಂಬಗಳನ್ನು ಒಟ್ಟಾಗಿ ಸೇರಿಸಿದನು. ಅವರಲ್ಲಿ ಒಂದು ಲಕ್ಷದ ಎಂಭತ್ತು ಸಾವಿರ ಸೈನಿಕರಿದ್ದರು. ರೆಹಬ್ಬಾಮನು ಇಸ್ರೇಲಿನ ಜನರ ವಿರುದ್ಧ ಯುದ್ಧಮಾಡಲು ಅಪೇಕ್ಷಿಸಿದನು. ಅವನು ತನ್ನ ರಾಜ್ಯವನ್ನು ಪುನರ್ಸ್ಥಾಪಿಸಬೇಕೆಂದಿದ್ದನು.
21 ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೂ ರಾಜ್ಯವನ್ನು ತಿರುಗಿ ತನಗೆ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಬತ್ತು ಸಾವಿರ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.
21 ಸೊಲೊಮೋನನ ಮಗ ರೆಹಬ್ಬಾಮನು ಜೆರುಸಲೇಮನ್ನು ಮುಟ್ಟಿದನಂತರ ಇಸ್ರಯೇಲರಿಗೆ ವಿರುದ್ಧ ಯುದ್ಧಮಾಡುವುದಕ್ಕೂ ರಾಜ್ಯವನ್ನು ಮರಳಿ ತನಗೆ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಒಂದು ಲಕ್ಷದ ಎಂಬತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.
21 ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ, ರಾಜ್ಯವನ್ನು ತಿರುಗಿ ಪಡೆಯುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು ಬೆನ್ಯಾಮೀನನ ಗೋತ್ರದ ಮತ್ತು ಯೆಹೂದನ ಸಮಸ್ತ ಕುಟುಂಬಗಳಿಂದ 1,80,000 ಸಮರ್ಥ ಸೈನಿಕರನ್ನು ಆಯ್ದುಕೊಂಡು ಒಟ್ಟುಗೂಡಿಸಿದನು.
ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು.
ಆಸನ ಬಳಿ ಮೂರು ಲಕ್ಷ ಸೈನಿಕರಿದ್ದರು, ಯೆಹೂದಕುಲದ ಇವರು ಗುರಾಣಿಗಳನ್ನೂ ಬರ್ಜಿಗಳನ್ನೂ ಬಳಸಬಲ್ಲವರಾಗಿದ್ದರು. ಇವರಲ್ಲದೆ ಬೆನ್ಯಾಮೀನ್ ಕುಲದಿಂದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಸೈನಿಕರಿದ್ದರು. ಇವರು ಸಣ್ಣ ಗುರಾಣಿಗಳನ್ನೂ ಬಿಲ್ಲುಬಾಣಗಳನ್ನೂ ಬಳಸಬಲ್ಲವರಾಗಿದ್ದರು. ಇವರೆಲ್ಲರೂ ರಣವೀರರಾಗಿದ್ದರು.
ಅರಸನಿಗೆ ಜನಗಣತಿಯ ಲೆಕ್ಕ ಒಪ್ಪಿಸಿದನು. ಇಸ್ರೇಲಿನಲ್ಲಿ ಒಟ್ಟು ಹನ್ನೊಂದು ಲಕ್ಷ ಮಂದಿ ಖಡ್ಗ ಉಪಯೋಗಿಸುವವರು ಇದ್ದರು. ಯೆಹೂದದಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಮಂದಿ ಖಡ್ಗ ಉಪಯೋಗಿಸುವವರಿದ್ದರು.
ಒಂದು ಕುಲವನ್ನು ಮಾತ್ರ ದಾವೀದನ ವಂಶದ ಅಧೀನದಲ್ಲಿ ಬಿಡುತ್ತೇನೆ. ಅವರು ಈ ಕುಲವನ್ನು ಉಳಿಸಿಕೊಳ್ಳಲು ನಾನು ಅವಕಾಶ ಮಾಡಿಕೊಡುತ್ತೇನೆ. ನನ್ನ ಸೇವಕನಾದ ದಾವೀದನಿಗಾಗಿ ಮತ್ತು ಜೆರುಸಲೇಮಿಗಾಗಿ ನಾನು ಇದನ್ನು ಮಾಡುತ್ತೇನೆ. ಇಸ್ರೇಲಿನ ಎಲ್ಲಾ ಕುಲಗಳಿಂದಲೂ ನಾನು ಜೆರುಸಲೇಮ್ ನಗರವನ್ನು ಆರಿಸಿಕೊಂಡಿದ್ದೇನೆ.