Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:22 - ಪರಿಶುದ್ದ ಬೈಬಲ್‌

22 ಆದರೆ ಯೆಹೋವನು ದೇವರ ಮನುಷ್ಯನೊಬ್ಬನೊಡನೆ ಮಾತನಾಡಿದನು. ಅವನ ಹೆಸರು ಶೆಮಾಯ. ಯೆಹೋವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ದೇವರ ಮನುಷ್ಯನಾದ ಶೆಮಾಯನಿಗೆ ದೈವೋತ್ತರವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ದೈವಪುರುಷನಾದ ಶೆಮಾಯನಿಗೆ ಈ ದೈವವಾಣಿ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ದೇವರ ಮನುಷ್ಯನಾದ ಶೆಮಾಯನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ದೇವರ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:22
17 ತಿಳಿವುಗಳ ಹೋಲಿಕೆ  

ಆದರೆ ಯೆಹೋವನ ಮನುಷ್ಯನಾದ ಶೆಮಾಯನಿಗೆ ಯೆಹೋವನ ಸಂದೇಶವು ಬಂತು,


ಆದರೆ ನೀನು ದೇವರ ಮನುಷ್ಯ. ಆದ್ದರಿಂದ ಈ ಎಲ್ಲಾ ಸಂಗತಿಗಳಿಂದ ದೂರವಾಗಿರು. ದೇವರ ಸೇವೆಯನ್ನು ಮಾಡುತ್ತಾ ಉತ್ತಮಮಾರ್ಗದಲ್ಲಿ ಜೀವಿಸಲು ಪ್ರಯತ್ನಿಸು; ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತೆಗಳನ್ನು ಹೊಂದಿದವನಾಗಿರು.


ಆದರೆ ಶೂನೇಮಿನ ಈ ಸ್ತ್ರೀಯು ದೇವಮನುಷ್ಯನಿದ್ದ ಬೆಟ್ಟದವರೆಗೆ ಹೋದಳು. ಅವಳು ನೆಲಕ್ಕೆ ಬಾಗಿ, ಎಲೀಷನ ಪಾದಗಳನ್ನು ಹಿಡಿದುಕೊಂಡಳು. ಶೂನೇಮಿನ ಆ ಸ್ತ್ರೀಯನ್ನು ತಳ್ಳಿಬಿಡಲು ಗೇಹಜಿಯು ಹತ್ತಿರಕ್ಕೆ ಬಂದನು. ಆದರೆ ದೇವಮನುಷ್ಯನು ಗೇಹಜಿಗೆ, “ಅವಳನ್ನು ತಡೆಯಬೇಡ! ಅವಳು ಬಹಳ ತಳಮಳಗೊಂಡಿದ್ದಾಳೆ. ಯೆಹೋವನು ನನಗೆ ಆಕೆಯ ದುಃಖವನ್ನು ಪ್ರಕಟಿಸಲಿಲ್ಲ; ನನಗೆ ಮರೆಮಾಡಿದ್ದಾನೆ” ಎಂದು ಹೇಳಿದನು.


ಆ ಸ್ತ್ರೀಯು ದೇವಮನುಷ್ಯನನ್ನು ಕಾಣಲು ಕರ್ಮೆಲ್ ಪರ್ವತಕ್ಕೆ ಹೋದಳು. ಶೂನೇಮಿನ ಸ್ತ್ರೀಯು ದೂರದಿಂದ ಬರುತ್ತಿರುವುದನ್ನು ಕಂಡ ಎಲೀಷನು ತನ್ನ ಸೇವಕನಾದ ಗೇಹಜಿಗೆ, “ನೋಡು, ಶೂನೇಮ್ಯಳಾದ ಸ್ತ್ರೀಯು ಬರುತ್ತಿದ್ದಾಳೆ!


ಅವಳು ತನ್ನ ಗಂಡನನ್ನು ಕರೆದು, “ದಯವಿಟ್ಟು ಒಬ್ಬ ಸೇವಕನನ್ನೂ ಒಂದು ಹೇಸರಕತ್ತೆಯನ್ನೂ ನನಗೆ ಕಳುಹಿಸಿಕೊಡಿ. ನಾನು ದೇವಮನುಷ್ಯನನ್ನು ಕರೆತರಲು ಬೇಗ ಹೋಗಿ ಹಿಂದಿರುಗಿ ಬರುತ್ತೇನೆ” ಎಂದು ಹೇಳಿದಳು.


ಎಲೀಷನು ಆ ಸ್ತ್ರೀಗೆ, “ಮುಂದಿನ ವಸಂತಮಾಸದ ಈ ಕಾಲಕ್ಕೆ ನೀನು ನಿನ್ನ ಗಂಡುಮಗುವನ್ನು ಅಪ್ಪಿಕೊಂಡಿರುವೆ” ಎಂದು ಹೇಳಿದನು. ಆ ಸ್ತ್ರೀಯು, “ದೇವಮನುಷ್ಯನೇ, ಹೀಗೆ ಹೇಳಿ ನಿನ್ನ ಸೇವಕಿಯನ್ನು ವಂಚಿಸಬೇಡ” ಎಂದು ಹೇಳಿದಳು.


ಆ ಸ್ತ್ರೀಯು, “ಈಗ ನಿಜವಾಗಿಯೂ ನೀನು ದೇವಮನುಷ್ಯನೆಂಬುದು ನನಗೆ ತಿಳಿಯಿತು. ಯೆಹೋವನು ನಿನ್ನ ಮೂಲಕ ನಿಜವಾಗಿಯೂ ಮಾತಾಡುತ್ತಾನೆಂಬುದು ನನಗೆ ತಿಳಿದಿದೆ” ಎಂದು ಹೇಳಿದಳು.


ಆ ಸ್ತ್ರೀಯು ಎಲೀಯನಿಗೆ, “ನೀನು ದೇವಮನುಷ್ಯ. ನೀನು ನನಗೆ ಸಹಾಯಮಾಡಲು ಬಂದಿರುವೆಯಾ? ಅಥವಾ ನನ್ನ ಪಾಪಗಳನ್ನೆಲ್ಲ ನನ್ನ ನೆನಪಿಗೆ ತಂದುಕೊಳ್ಳುವಂತೆ ಮಾಡಲು, ನನ್ನ ಮಗನಿಗೆ ಸಾವನ್ನು ಉಂಟುಮಾಡುವುದಕ್ಕಾಗಿಯೇ ಬಂದಿರುವೆಯಾ?” ಎಂದು ಕೇಳಿದಳು.


ಬೇತೇಲಿನಲ್ಲಿ ಒಬ್ಬ ವಯಸ್ಸಾದ ಪ್ರವಾದಿಯು ನೆಲೆಸಿದ್ದನು. ಬೇತೇಲಿನಲ್ಲಿ ದೇವಮನುಷ್ಯನು ಮಾಡಿದ್ದನ್ನು ಅವನ ಮಕ್ಕಳು ಬಂದು ಅವನಿಗೆ ಹೇಳಿದರು. ದೇವಮನುಷ್ಯನು ರಾಜನಾದ ಯಾರೊಬ್ಬಾಮನಿಗೆ ಹೇಳಿದುದ್ದನ್ನು ಅವರು ತಮ್ಮ ತಂದೆಗೆ ಹೇಳಿದರು.


ಯೆಹೂದ ದೇಶದವನಾದ ಒಬ್ಬ ದೇವಮನುಷ್ಯನು ಯೆಹೋವನ ಆಜ್ಞೆಯಂತೆ ಬೇತೇಲಿಗೆ ಬಂದನು. ಆಗ ಯಾರೊಬ್ಬಾಮನು ಧೂಪವನ್ನು ಅರ್ಪಿಸುತ್ತಾ, ಯಜ್ಞವೇದಿಕೆಯ ಹತ್ತಿರ ನಿಂತಿದ್ದನು.


ದೇವರ ಮನುಷ್ಯನಾದ ಮೋಶೆಯು ತಾನು ಸಾಯುವ ಮೊದಲು ಇಸ್ರೇಲರನ್ನು ಆಶೀರ್ವದಿಸಿದನು.


ಆಗ ಆ ಸ್ತ್ರೀಯು ದೇವರ ಮನುಷ್ಯನ (ಎಲೀಷನ) ಬಳಿಗೆ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಎಲೀಷನು ಅವಳಿಗೆ, “ಹೋಗು, ಎಣ್ಣೆಯನ್ನು ಮಾರಾಟಮಾಡಿ, ನಿನ್ನ ಸಾಲವನ್ನು ತೀರಿಸು. ಉಳಿದ ಹಣದಲ್ಲಿ ನೀನು ಮತ್ತು ನಿನ್ನ ಮಕ್ಕಳು ಜೀವನಮಾಡಿ” ಎಂದು ಹೇಳಿದನು.


ಇಸ್ರೇಲಿನ ರಾಜನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದು ದೇವಮನುಷ್ಯನಾದ ಎಲೀಷನಿಗೆ ತಿಳಿಯಿತು. ಎಲೀಷನು ರಾಜನಿಗೆ ಈ ಸಂದೇಶವನ್ನು ಕಳುಹಿಸಿದನು: “ನೀನು ನಿನ್ನ ಬಟ್ಟೆಗಳನ್ನು ಹರಿದುಕೊಂಡಿದ್ದು ಏಕೆ? ನಾಮಾನನು ನನ್ನ ಬಳಿಗೆ ಬರಲಿ. ಇಸ್ರೇಲಿನಲ್ಲಿ ಒಬ್ಬ ಪ್ರವಾದಿ ಇದ್ದಾನೆಂಬುದು ಅವನಿಗೆ ತಿಳಿಯುತ್ತದೆ!”


ಅನಂತರ ನಾನು ರೇಕಾಬ ವಂಶದವರನ್ನು ಯೆಹೋವನ ಆಲಯದಲ್ಲಿ ಕರೆತಂದೆನು. ನಾವು ಹಾನಾನನ ಮಕ್ಕಳ ಕೋಣೆ ಎಂದು ಕರೆಯಲ್ಪಡುವ ಕೋಣೆಯೊಳಕ್ಕೆ ಹೋದೆವು. ಹಾನಾನನು ಇಗ್ದಲ್ಯನೆಂಬವನ ಮಗನು. ಹಾನಾನನು ದೇವರ ಮನುಷ್ಯ. ಈ ಕೋಣೆಯು ಯೆಹೂದದ ರಾಜಕುಮಾರರ ಕೋಣೆಯ ಪಕ್ಕದಲ್ಲಿತ್ತು. ಇದು ಶಲ್ಲೂಮನ ಮಗನಾದ ಮಾಸೇಯನ ಕೋಣೆಯ ಮೇಲ್ಗಡೆ ಇತ್ತು. ಮಾಸೇಯನು ಆಲಯದ ದ್ವಾರಪಾಲಕನಾಗಿದ್ದನು.


ಪ್ರವಾದಿಯಾದ ಶೆಮಾಯ ಮತ್ತು ದರ್ಶಿಯಾದ ಇದ್ದೋ ಬರೆದ ಚರಿತ್ರೆಗಳ ವಂಶಾವಳಿಗಳಲ್ಲಿ ರೆಹಬ್ಬಾಮನು ತಾನು ರಾಜನಾಗಿದ್ದಾಗ ತನ್ನ ಆಳ್ವಿಕೆಯ ಮೊದಲಿನಿಂದ ಕಡೆಯವರೆಗೆ ಮಾಡಿದ ಎಲ್ಲಾ ವಿಷಯಗಳು ಬರೆಯಲ್ಪಟ್ಟಿವೆ. ಅವನ ಆಳ್ವಿಕೆಯ ಕಾಲದಲ್ಲೆಲ್ಲಾ ಅವನಿಗೂ ಯಾರೊಬ್ಬಾಮನಿಗೂ ಯುದ್ಧಗಳು ನಡೆಯುತ್ತಲೇ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು