Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:24 - ಪರಿಶುದ್ದ ಬೈಬಲ್‌

24 ನೀನು ಅವರಿಗೆ, ‘ನಿಮ್ಮ ಸೋದರರಾದ ಇಸ್ರೇಲರ ವಿರುದ್ಧ ನೀವು ಯುದ್ಧಕ್ಕೆ ಹೋಗಲೇಬಾರದೆಂದು ಯೆಹೋವನು ಹೇಳುತ್ತಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ಮನೆಗೆ ಹೋಗಬೇಕು. ಈ ಸಂಗತಿಗಳೆಲ್ಲ ಸಂಭವಿಸುವಂತೆ ನಾನೇ ಮಾಡಿದೆನು’ ಎಂದು ಹೇಳು” ಎಂಬುದಾಗಿ ತಿಳಿಸಿದನು. ಆದ್ದರಿಂದ ರೆಹಬ್ಬಾಮನ ಸೈನ್ಯದಲ್ಲಿನ ಜನರೆಲ್ಲರೂ ಯೆಹೋವನ ಆಜ್ಞೆಯನ್ನು ಅನುಸರಿಸಿದರು. ಅವರು ತಮ್ಮ ಮನೆಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ‘ಯೆಹೋವನ ಮಾತನ್ನು ಕೇಳಿರಿ, ನೀವು ನಿಮ್ಮ ಸಹೋದರರಾದ ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ. ಈ ಕಾರ್ಯವು ಯೆಹೋವನಿಂದಾಗಿದೆ’ ಎಂದು ಹೇಳಬೇಕು” ಎಂಬ ಯೆಹೋವನ ಮಾತನ್ನು ಜನರಿಗೆ ಹೇಳಿದನು. ಆಗ ಅವರು ಯೆಹೋವನ ಮಾತನ್ನು ಕೇಳಿ ವಿಧೇಯರಾಗಿ ಹಿಂದಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನೀವು ನಿಮ್ಮ ಸಹೋದರರಾದ ಇಸ್ರಯೇಲರೊಡನೆ ಯುದ್ಧಮಾಡಲು ಹೋಗಬಾರದು; ಎಲ್ಲರೂ ಹಿಂದಿರುಗಿ ಹೋಗಿರಿ; ಈ ವಿಭಜನಾಕಾರ್ಯ ಸರ್ವೇಶ್ವರನಿಂದಾಗಿದೆ, ಎಂದು ಹೇಳಬೇಕು.” ಅಂತೆಯೇ ಆ ಜನರು ಸರ್ವೇಶ್ವರನ ಮಾತನ್ನು ಕೇಳಿ ಹಿಂದಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಉಳಿದ ಜನರಿಗೂ - ಯೆಹೋವನ ಮಾತನ್ನು ಕೇಳಿರಿ, ನೀವು ನಿಮ್ಮ ಸಹೋದರರಾದ ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕೆ ಹೋಗಬಾರದು; ಎಲ್ಲರೂ ಹಿಂದಿರುಗಿ ಹೋಗಿರಿ; ಈ ಕಾರ್ಯವು ಯೆಹೋವನಿಂದಾಗಿದೆ ಎಂದು ಹೇಳಬೇಕು ಎಂಬ ದೈವೋತ್ತರ ಉಂಟಾಗಲು ಅವರು ಯೆಹೋವನ ಮಾತನ್ನು ಕೇಳಿ ಹಿಂದಿರುಗಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ‘ನೀವು ಇಸ್ರಾಯೇಲರಾಗಿರುವ ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗಬೇಡಿರಿ. ಪ್ರತಿ ಮನುಷ್ಯನು ತನ್ನ ಮನೆಗೆ ಹಿಂದಿರುಗಲಿ.’ ಏಕೆಂದರೆ ಈ ಕಾರ್ಯವು ತಮ್ಮಿಂದ ಉಂಟಾಯಿತೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. ಆದ್ದರಿಂದ ಅವರು ಯೆಹೋವ ದೇವರ ವಾಕ್ಯವನ್ನು ಕೇಳಿ, ಯೆಹೋವ ದೇವರ ವಾಕ್ಯದ ಪ್ರಕಾರವೇ ಹಿಂದಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:24
13 ತಿಳಿವುಗಳ ಹೋಲಿಕೆ  

ರಾಜನು ಜನರ ಅಪೇಕ್ಷೆಯನ್ನು ನೆರವೇರಿಸಲಿಲ್ಲ. ನೆಬಾಟನ ಮಗನಾದ ಯಾರೊಬ್ಬಾಮನಿಗೆ ತಾನು ಮಾಡಿದ್ದ ವಾಗ್ದಾನವನ್ನು ಈಡೇರಿಸಲು ಯೆಹೋವನೇ ಹೀಗೆ ಮಾಡಿದನು. ಯೆಹೋವನು ಪ್ರವಾದಿಯಾದ ಅಹೀಯನ ಮೂಲಕ ಈ ವಾಗ್ದಾನವನ್ನು ಮಾಡಿದ್ದನು. ಅಹೀಯನು ಶೀಲೋವಿನವನು.


ಇಸ್ರೇಲರು ತಮಗಾಗಿ ಅರಸನನ್ನು ಆರಿಸಿಕೊಂಡರು. ಆದರೆ ಸಲಹೆಗಳಿಗಾಗಿ ನನ್ನ ಬಳಿಗೆ ಬರಲಿಲ್ಲ. ಇಸ್ರೇಲರು ತಮ್ಮ ನಾಯಕರನ್ನು ಆರಿಸಿಕೊಂಡರು. ಆದರೆ ನಾನು ತಿಳಿದಿರುವ ನಾಯಕರನ್ನು ಆರಿಸಿಕೊಳ್ಳಲಿಲ್ಲ. ಇಸ್ರೇಲರು ತಮಗೆ ವಿಗ್ರಹಗಳನ್ನು ತಯಾರಿಸಲು ತಮ್ಮ ಬೆಳ್ಳಿಬಂಗಾರವನ್ನು ಉಪಯೋಗಿಸಿದರು. ಆದ್ದರಿಂದ ಅವರು ನಾಶವಾಗುವರು.


ಅಮಚ್ಯನು ಇಸ್ರೇಲಿನ ಸೈನಿಕರನ್ನು ಎಫ್ರಾಯೀಮ್ ಪ್ರಾಂತ್ಯಕ್ಕೆ ಕಳುಹಿಸಿದನು. ಅವರು ಯೆಹೂದದ ಅರಸನ ಮೇಲೆಯೂ ಜನರ ಮೇಲೆಯೂ ಸಿಟ್ಟುಗೊಂಡು ಕೋಪದಿಂದಲೇ ತಮ್ಮ ಮನೆಗಳಿಗೆ ಹಿಂತೆರಳಿದರು.


ಯೆಹೋವನು ಹೀಗೆನ್ನುತ್ತಾನೆ: ನಿಮ್ಮ ಸಹೋದರರೊಂದಿಗೆ ನೀವು ಯುದ್ಧಮಾಡಬಾರದು. ಪ್ರತಿಯೊಬ್ಬರು ತಮ್ಮ ತಮ್ಮ ಮನೆಗಳಿಗೆ ಹಿಂತಿರುಗಲಿ. ಯಾಕೆಂದರೆ ಇದನ್ನು ನಾನೇ ಮಾಡಿದ್ದೇನೆ.” ರೆಹಬ್ಬಾಮನೂ ಅವನೊಂದಿಗಿದ್ದ ಸೈನಿಕರೂ ಯೆಹೋವನ ಸಂದೇಶವನ್ನು ಕೇಳಿ ಹಿಂತಿರುಗಿದರು. ಅವರು ಯಾರೊಬ್ಬಾಮನೊಂದಿಗೆ ಯುದ್ಧಮಾಡಲಿಲ್ಲ.


ಯೆಹೋವನು ನಿಮ್ಮ ಸಂಗಡ ಇರುವುದಿಲ್ಲ. ನೀವು ಆ ದೇಶಕ್ಕೆ ಹೋಗಬೇಡಿರಿ. ಇಲ್ಲವಾದರೆ, ನಿಮ್ಮ ಶತ್ರುಗಳಿಂದ ಸೋಲಿಸಲ್ಪಡುವಿರಿ.


ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಶೆಕೆಮ್ ನಗರವಿತ್ತು. ಯಾರೊಬ್ಬಾಮನು ಶೆಕೆಮನ್ನು ಒಂದು ಬಲಾಢ್ಯ ನಗರವನ್ನಾಗಿಸಿಕೊಂಡು ಅಲ್ಲಿ ನೆಲೆಸಿದನು. ತರುವಾಯ ಅವನು ಪೆನೂವೇಲ್ ನಗರಕ್ಕೆ ಹೋಗಿ ಅದನ್ನು ಬಲಪಡಿಸಿದನು.


ಅದಕ್ಕೆ ಲಾಬಾನನು ಮತ್ತು ಬೆತೂವೇಲನು, “ನಿನ್ನನ್ನು ಯೆಹೋವನೇ ಕಳುಹಿಸಿದ್ದಾನೆ. ನಡೆಯತಕ್ಕದ್ದನ್ನು ಬದಲಾಯಿಸಲು ನಮಗೆ ಸಾಧ್ಯವಿಲ್ಲ.


ಇದು ಯೆಹೋವನ ಚಿತ್ತವೆಂಬುದು ಸಂಸೋನನ ತಂದೆತಾಯಿಗಳಿಗೆ ತಿಳಿದಿರಲಿಲ್ಲ. ಫಿಲಿಷ್ಟಿಯರಿಗೆ ಕೇಡುಮಾಡಲು ಯೆಹೋವನು ತಕ್ಕಮಾರ್ಗವನ್ನು ಹುಡುಕುತ್ತಿದ್ದನು. ಆ ಸಮಯದಲ್ಲಿ ಫಿಲಿಷ್ಟಿಯರು ಇಸ್ರೇಲರ ಮೇಲೆ ಆಳ್ವಿಕೆ ಮಾಡುತ್ತಿದ್ದರು.


ರೆಹಬ್ಬಾಮನ ಮತ್ತು ಯಾರೊಬ್ಬಾಮನ ನಡುವೆ ಯಾವಾಗಲೂ ಯುದ್ಧ ನಡೆಯುತ್ತಿತ್ತು.


ಯೋರಾಮನನ್ನು ಸಂಧಿಸಲು ಹೋದಾಗ ಅಹಜ್ಯನು ಕೊಲ್ಲಲ್ಪಡುವಂತೆ ಯೆಹೋವನು ಮಾಡಿದನು. ಅಹಜ್ಯನು ಯೇಹುವನ್ನು ಭೇಟಿಯಾಗಲು ಯೋರಾಮನೊಂದಿಗೆ ಹೋದನು. ಯೇಹುವಿನ ತಂದೆ ನಿಂಷಿ. ಅಹಾಬನ ಕುಟುಂಬವನ್ನು ನಾಶಗೊಳಿಸಲು ಯೆಹೋವನು ಯೇಹುವನ್ನು ಆರಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು