Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:33 - ಪರಿಶುದ್ದ ಬೈಬಲ್‌

33 ರಾಜನಾದ ಯಾರೊಬ್ಬಾಮನು ಇಸ್ರೇಲರಿಗೆ ತನ್ನದೇ ಆದ ಹಬ್ಬದ ದಿನವನ್ನು ಆರಿಸಿಕೊಂಡನು. ಅದು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಮಯದಲ್ಲಿ ಅವನು ತಾನು ನಿರ್ಮಿಸಿದ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಮತ್ತು ಧೂಪವನ್ನು ಅರ್ಪಿಸಿದನು. ಇದು ಬೇತೇಲ್ ನಗರದಲ್ಲಿ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಇಸ್ರಾಯೇಲರು ಎಂಟನೆಯ ತಿಂಗಳ ಹದಿನೈದನೆಯ ದಿನದಲ್ಲಿ ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವ ಇಚ್ಛೆಯಿಂದ ಗೊತ್ತುಮಾಡಿ ಆ ಸಮಯಕ್ಕೆ ತಾನೂ ಬೇತೇಲಿನ ಯಜ್ಞವೇದಿಯ ಬಳಿಗೆ ಹೋಗಿ ಧೂಪಹಾಕುವುದಕ್ಕಾಗಿ ಅದರ ಮೆಟ್ಟಲುಗಳನ್ನು ಹತ್ತುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಎಂಟನೆಯ ತಿಂಗಳ ಹದಿನೈದನೆಯ ದಿನ ಇಸ್ರಯೇಲರು ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವೇಚ್ಛೆಯಿಂದ ಗೊತ್ತುಮಾಡಿದನು. ಆ ಸಮಯಕ್ಕೆ ತಾನೂ ಬೇತೇಲಿನ ಬಲಿಪೀಠದ ಬಳಿಗೆ ಹೋಗಿ ಧೂಪಾರತಿ ಎತ್ತಲು ಅದರ ಮೆಟ್ಟಲುಗಳನ್ನು ಹತ್ತುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಇಸ್ರಾಯೇಲ್ಯರು ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವೇಚ್ಫೆಯಿಂದ ಗೊತ್ತುಮಾಡಿ ಆ ಸಮಯಕ್ಕೆ ತಾನೂ ಬೇತೇಲಿನ ಯಜ್ಞವೇದಿಯ ಬಳಿಗೆ ಹೋಗಿ ಧೂಪಸುಡುವದಕ್ಕಾಗಿ ಅದರ ಮೆಟ್ಲುಗಳನ್ನು ಹತ್ತುತ್ತಿರುವಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಹೀಗೆ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಅವನು ಬೇತೇಲಿನಲ್ಲಿ ಕಟ್ಟಿಸಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ, ಇಸ್ರಾಯೇಲರಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:33
11 ತಿಳಿವುಗಳ ಹೋಲಿಕೆ  

ಯೆಹೂದ ದೇಶದವನಾದ ಒಬ್ಬ ದೇವಮನುಷ್ಯನು ಯೆಹೋವನ ಆಜ್ಞೆಯಂತೆ ಬೇತೇಲಿಗೆ ಬಂದನು. ಆಗ ಯಾರೊಬ್ಬಾಮನು ಧೂಪವನ್ನು ಅರ್ಪಿಸುತ್ತಾ, ಯಜ್ಞವೇದಿಕೆಯ ಹತ್ತಿರ ನಿಂತಿದ್ದನು.


ಈ ಗೊಂಡೆಗಳನ್ನು ನೀವು ನೋಡುವಾಗ, ಯೆಹೋವನು ನಿಮಗೆ ಕೊಟ್ಟ ಅಪ್ಪಣೆಗಳನ್ನೆಲ್ಲ ಜ್ಞಾಪಕಮಾಡಿಕೊಳ್ಳಬೇಕು ಮತ್ತು ಅವುಗಳಿಗೆ ವಿಧೇಯರಾಗಬೇಕು. ನೀವು ನಿಮ್ಮ ಮನಸ್ಸಿಗೆ ಮತ್ತು ಕಣ್ಣಿಗೆ ತೋರಿದ ಪ್ರಕಾರ ನಡೆಯದೆ ನಂಬಿಗಸ್ತರಾಗಿರಬೇಕು.


ಹೀಗಿರಲು ದೇವರ ಆಜ್ಞೆಯನ್ನು ಅನುಸರಿಸುವುದಕ್ಕಿಂತಲೂ ನಿಮ್ಮ ಸಂಪ್ರದಾಯಗಳನ್ನು ಅನುಸರಿಸುವುದೇ ಬಹಳ ಮುಖ್ಯವೆಂದು ನೀವು ಬೋಧಿಸಿದಂತಾಯಿತು. ಇಂಥ ಅನೇಕ ಕಾರ್ಯಗಳನ್ನು ನೀವು ಮಾಡುತ್ತೀರಿ” ಎಂದು ಹೇಳಿದನು.


ಅವನು ತನ್ನ ತಂದೆಯನ್ನು ಗೌರವಿಸಬೇಕಿಲ್ಲ ಎಂದು ನೀವು ಬೋಧಿಸುತ್ತೀರಿ. ಹೀಗಿರಲು ನಿಮ್ಮ ಸಂಪ್ರದಾಯವೇ ದೇವರ ಆಜ್ಞೆಯನ್ನು ತಳ್ಳಿಹಾಕಿದೆ.


ನನ್ನ ಒಡೆಯನು ಹೇಳುವುದೇನೆಂದರೆ, “ನನ್ನನ್ನು ಪ್ರೀತಿಸುವದಾಗಿ ಇವರು ಹೇಳುತ್ತಾರೆ. ಅವರು ತಮ್ಮ ಮಾತುಗಳಿಂದ ನನ್ನನ್ನು ಗೌರವಿಸುತ್ತಾರೆ. ಆದರೆ ಅವರ ಹೃದಯಗಳು ನನ್ನಿಂದ ದೂರವಾಗಿವೆ. ಅವರು ನನಗೆ ತೋರಿಸುವ ಗೌರವವು ಅವರು ಬಾಯಿಪಾಠ ಮಾಡಿದ ಮಾನವ ನಿರ್ಮಿತವಾದ ನಿಯಮಗಳಾಗಿವೆ.


ತಮ್ಮ ಪಾಪಕೃತ್ಯಗಳಿಂದ ದೇವಜನರು ಮಲಿನಗೊಂಡರು. ಅವರು ದೇವರಿಗೆ ಅಪನಂಬಿಗಸ್ತರಾಗಿ ಅನ್ಯಜನರು ಮಾಡಿದವುಗಳನ್ನು ಮಾಡಿದರು.


ಉಜ್ಜೀಯನು ಫಿಲಿಷ್ಟಿಯರೊಂದಿಗೆ ಯುದ್ಧಮಾಡಿ ಅವರ ಪಟ್ಟಣಗಳಾದ ಗತ್, ಯೆಬ್ನೆ ಮತ್ತು ಅಷ್ಡೋದ್‌ಗಳ ಪೌಳಿಗೋಡೆಗಳನ್ನು ಕೆಡವಿಹಾಕಿದನು. ಅವನು ಅಷ್ಡೋದಿನ ಮತ್ತು ಇತರ ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ನಾನು ನನ್ನಲ್ಲಿಯೇ ಯೋಚಿಸುತ್ತಾ, ‘ಫಿಲಿಷ್ಟಿಯರು ಇಲ್ಲಿಗೆ ಬಂದು ಗಿಲ್ಗಾಲಿನಲ್ಲಿ ನನ್ನ ಮೇಲೆ ಆಕ್ರಮಣ ಮಾಡುತ್ತಾರೆ. ನಮಗೆ ಸಹಾಯ ಮಾಡುವಂತೆ ನಾನು ದೇವರಲ್ಲಿ ಇನ್ನೂ ಪ್ರಾರ್ಥಿಸಿಲ್ಲ. ಆದ್ದರಿಂದ ನನ್ನಲ್ಲಿಯೇ ಆದ ಒತ್ತಡದಿಂದ ಸರ್ವಾಂಗಹೋಮವನ್ನು ಅರ್ಪಿಸಿದೆನು’” ಎಂದನು.


ರಾಜನು ದಮಸ್ಕದಿಂದ ಹಿಂದಿರುಗಿಬಂದು ಯಜ್ಞವೇದಿಕೆಯನ್ನು ನೋಡಿದನು. ಅವನು ಯಜ್ಞಗಳನ್ನು ಅದರ ಮೇಲೆ ಅರ್ಪಿಸಿದನು.


ಆದರೆ ಅವರು ಯೆಹೋವನಲ್ಲಿಯೂ ಭಕ್ತಿಯನ್ನಿಟ್ಟಿದ್ದರು. ಅವರು ಉನ್ನತಸ್ಥಳಗಳಿಗೆ ಯಾಜಕರನ್ನು ಜನರಲ್ಲಿಯೇ ಆಯ್ಕೆ ಮಾಡಿಕೊಂಡರು. ಆ ಯಾಜಕರು ಜನರಿಗಾಗಿ ಉನ್ನತಸ್ಥಳಗಳಲ್ಲಿನ ದೇವಾಲಯಗಳಲ್ಲಿ ಯಜ್ಞವನ್ನು ಅರ್ಪಿಸಿದರು.


ತನ್ನ ಪೂರ್ವಿಕರು ಅನುಸರಿಸಿದ ದೇವರನ್ನು ನಿರೀಕ್ಷಿಸಿದನು. ಆತನ ಆಜ್ಞೆಗಳನ್ನು ಅನುಸರಿಸಿದನು. ಇಸ್ರೇಲಿ ಅರಸರು ನಡೆದಂತೆ ಇವನು ನಡೆಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು