Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:11 - ಪರಿಶುದ್ದ ಬೈಬಲ್‌

11 ಬೇತೇಲಿನಲ್ಲಿ ಒಬ್ಬ ವಯಸ್ಸಾದ ಪ್ರವಾದಿಯು ನೆಲೆಸಿದ್ದನು. ಬೇತೇಲಿನಲ್ಲಿ ದೇವಮನುಷ್ಯನು ಮಾಡಿದ್ದನ್ನು ಅವನ ಮಕ್ಕಳು ಬಂದು ಅವನಿಗೆ ಹೇಳಿದರು. ದೇವಮನುಷ್ಯನು ರಾಜನಾದ ಯಾರೊಬ್ಬಾಮನಿಗೆ ಹೇಳಿದುದ್ದನ್ನು ಅವರು ತಮ್ಮ ತಂದೆಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಬೇತೇಲಿನಲ್ಲಿ ಒಬ್ಬ ವೃದ್ಧ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ದೇವರ ಮನುಷ್ಯನು ಆ ದಿನ ಬೇತೇಲಿನಲ್ಲಿ ಮಾಡಿದ್ದನ್ನೂ ಮತ್ತು ಅವನು ಅರಸನಿಗೆ ಹೇಳಿದ್ದನ್ನೂ ತಮ್ಮ ತಂದೆಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬೇತೇಲಿನಲ್ಲಿ ಒಬ್ಬ ಮುದುಕ ಪ್ರವಾದಿ ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದೈವಭಕ್ತನು ಆ ದಿನ ಬೇತೇಲಿನಲ್ಲಿ ಮಾಡಿದ್ದನ್ನೂ ಅವನು ಅರಸನಿಗೆ ಹೇಳಿದ್ದನ್ನೂ ತಂದೆಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಬೇತೇಲಿನಲ್ಲಿ ಒಬ್ಬ ಮುದುಕನಾದ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ದೇವರ ಮನುಷ್ಯನು ಆ ದಿವಸ ಬೇತೇಲಿನಲ್ಲಿ ಮಾಡಿದ್ದನ್ನೂ ಅವನು ಅರಸನಿಗೆ ಅಂದದ್ದನ್ನೂ ತಂದೆಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಬೇತೇಲಿನಲ್ಲಿ ಒಬ್ಬ ವೃದ್ಧ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದಿನದಲ್ಲಿ ಬೇತೇಲಿನಲ್ಲಿ ದೇವರ ಮನುಷ್ಯನು ಮಾಡಿದ ಸಮಸ್ತ ಕ್ರಿಯೆಗಳನ್ನು ಮತ್ತು ಅರಸನಿಗೆ ಹೇಳಿದ ಮಾತುಗಳನ್ನು ತಮ್ಮ ತಂದೆಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:11
13 ತಿಳಿವುಗಳ ಹೋಲಿಕೆ  

ಯೋಷೀಯನು, “ಆ ಸಮಾಧಿಗೆ ಏನೂ ಮಾಡಬೇಡಿ. ಅವನ ಎಲುಬುಗಳನ್ನು ತೆಗೆಯಬೇಡಿ” ಎಂದು ಹೇಳಿದನು.


ಆದರೆ ಅವನು ಮಾಡುತ್ತಿರುವುದು ತಪ್ಪೆಂದು ಒಂದು ಹೇಸರಕತ್ತೆಯು ಅವನಿಗೆ ತಿಳಿಸಿತು. ಅದು ಒಂದು ಮೂಕಪ್ರಾಣಿ. ಆದರೆ ಅದು ಮಾನವನಂತೆ ಮಾತಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.


(ತನ್ನ ಸ್ವಂತ ಕುಟುಂಬವನ್ನು ಆಳಲು ತಿಳಿಯದವನು ದೇವರ ಸಭೆಯನ್ನು ಪರಾಮರಿಸಲು ಸಮರ್ಥನಲ್ಲ.)


ಕೊನೆಯ ದಿನಗಳಲ್ಲಿ ಅನೇಕರು ನನಗೆ, ‘ನೀನೇ ನಮ್ಮ ಪ್ರಭು! ನಿನ್ನ ವಿಷಯವಾಗಿ ನಾವು ಬೋಧಿಸಿದೆವು. ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸಿದೆವು ಮತ್ತು ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆವು’ ಎಂದು ಹೇಳುವರು.


“ಇವೆಲ್ಲಾ ಇಸ್ರೇಲಿನ ಸುಳ್ಳು ಪ್ರವಾದಿಗಳಿಗಾಗುವದು. ಆ ಪ್ರವಾದಿಗಳು ಜೆರುಸಲೇಮಿನ ಬಗ್ಗೆ ಪ್ರವಾದಿಸಿದರು ಮತ್ತು ಶಾಂತಿಯಿಲ್ಲದಿರುವಾಗಲೂ ಶಾಂತಿಯ ದರ್ಶನಗಳನ್ನು ಕಂಡರು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.


“ನರಪುತ್ರನೇ, ನೀನು ಇಸ್ರೇಲಿನ ಪ್ರವಾದಿಗಳಿಗೆ ನನ್ನ ಪರವಾಗಿ ಹೇಳಬೇಕು. ಅವರು ನಿಜವಾಗಿ ನನ್ನ ಪರವಾಗಿ ಮಾತನಾಡುವುದಿಲ್ಲ. ಅವರು ಏನು ಹೇಳಬೇಕೆಂದು ಇಷ್ಟಪಡುತ್ತಾರೋ ಅದನ್ನೇ ಹೇಳುತ್ತಾರೆ. ಅದಕ್ಕಾಗಿ ನೀನು ಅವರ ಕೂಡ ಮಾತನಾಡಿ ಇಂತೆನ್ನಬೇಕು, ‘ಯೆಹೋವನ ಸಂದೇಶವನ್ನು ಕೇಳಿರಿ.


ಆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕೆಲವರು ಆ ದೇಹವನ್ನೂ ಮತ್ತು ಆ ದೇಹದ ಬಳಿ ನಿಂತಿದ್ದ ಸಿಂಹವನ್ನೂ ನೋಡಿದರು. ಆ ಜನರು ಪ್ರವಾದಿಯು ವಾಸಿಸುತ್ತಿದ್ದ ನಗರಕ್ಕೆ ಬಂದು, ಅವರು ರಸ್ತೆಯ ಮೇಲೆ ಕಂಡದ್ದನ್ನು ಹೇಳಿದರು.


ಸೌಲನನ್ನು ಮೊದಲು ನೋಡಿದ್ದ ಜನರು, ಪ್ರವಾದಿಗಳ ಜೊತೆಯಲ್ಲಿ ಸೌಲನು ಪ್ರವಾದಿಸುತ್ತಿರುವುದನ್ನು ಕಂಡರು. ಈ ಜನರು, “ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನಾದನೇ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಬಿಳಾಮನು ಕಣ್ಣೆತ್ತಿ ನೋಡಿದಾಗ ಇಸ್ರೇಲರೆಲ್ಲರನ್ನು ಕಂಡನು. ಅವರು ತಮ್ಮ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದರು.


ಆದ್ದರಿಂದ ಅವನು ಬೇರೆ ರಸ್ತೆಯಲ್ಲಿ ಹೋದನು. ಅವನು ಬೇತೇಲಿಗೆ ಬಂದ ರಸ್ತೆಯಲ್ಲಿ ಮತ್ತೆ ಹಿಂದಿರುಗಿಹೋಗಲಿಲ್ಲ.


ಆ ವಯಸ್ಸಾದ ಪ್ರವಾದಿಯು, “ಅವನು ಬಿಟ್ಟುಹೋಗುವಾಗ ಯಾವ ರಸ್ತೆಯಲ್ಲಿ ಹೋದನು?” ಎಂದು ಕೇಳಿದನು. ಯೆಹೂದ ದೇಶದವನಾದ ದೇವಮನುಷ್ಯನು ಯಾವ ರಸ್ತೆಯಲ್ಲಿ ಹಿಂದಿರುಗಿ ಹೋದನೆಂಬುದನ್ನು ಅವನ ಮಕ್ಕಳು ತಂದೆಗೆ ತೋರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು