Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:19 - ಪರಿಶುದ್ದ ಬೈಬಲ್‌

19 ಆದ್ದರಿಂದ ಆ ಪ್ರವಾದಿಯ ಮನೆಗೆ ದೇವಮನುಷ್ಯನು ಹೋಗಿ, ಅವನ ಸಂಗಡ ಅನ್ನಪಾನಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದೇವರ ಮನುಷ್ಯನು ಆ ಪ್ರವಾದಿಯ ಮಾತನ್ನು ನಂಬಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದೈವಭಕ್ತನು ಹಿಂದಿರುಗಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದೇವರ ಮನುಷ್ಯನು ಹಿಂದಿರುಗಿಕೊಂಡು ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹಾಗೆಯೇ ದೇವರ ಮನುಷ್ಯನು ವೃದ್ಧನ ಸಂಗಡ ಹಿಂದಿರುಗಿ ಹೋಗಿ, ಅವನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:19
10 ತಿಳಿವುಗಳ ಹೋಲಿಕೆ  

ಆದರೆ ಪೇತ್ರ ಮತ್ತು ಯೋಹಾನ ಅವರಿಗೆ, “ನಾವು ನಿಮಗೆ ವಿಧೇಯರಾಗಬೇಕೇ ಅಥವಾ ದೇವರಿಗೆ ವಿಧೇಯರಾಗಬೇಕೇ? ಇದರಲ್ಲಿ ಯಾವುದು ದೇವರಿಗೆ ಅಪೇಕ್ಷೆಯಾದದು? ನೀವೇ ಹೇಳಿ.


ನಾನು ಏನನ್ನೂ ತಿನ್ನಬಾರದು ಮತ್ತು ಕುಡಿಯಬಾರದೆಂದು ಯೆಹೋವನು ನನಗೆ ಆಜ್ಞಾಪಿಸಿದ್ದಾನೆ. ನಾನು ಇಲ್ಲಿಗೆ ಬಂದ ರಸ್ತೆಯಲ್ಲಿ ಮತ್ತೆ ಹಿಂದಿರುಗಿ ಹೋಗಬಾರದೆಂದು ಯೆಹೋವನು ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು.


“ಒಬ್ಬ ಪ್ರವಾದಿಯು ನಾನು ಹೇಳದ ಸಂಗತಿಯನ್ನು ನಿಮಗೆ ಹೇಳಿದರೂ ಹೇಳಬಹುದು. ದೇವರಿಂದ ಬಂದ ಸಂದೇಶವನ್ನು ನಿಮಗೆ ತಿಳಿಸುತ್ತಿರುವೆನು ಎಂದು ಅವನು ಹೇಳಬಹುದು. ಇಂಥಾ ಸಂದರ್ಭಗಳು ಬಂದಲ್ಲಿ ಆ ಪ್ರವಾದಿಯನ್ನು ಸಾಯಿಸಬೇಕು. ಇಷ್ಟು ಮಾತ್ರವಲ್ಲ ಇತರ ದೇವರುಗಳ ಸಂದೇಶವನ್ನು ಕೊಡುವ ಪ್ರವಾದಿಗಳೂ ಬರಬಹುದು. ಅವರನ್ನೂ ನೀವು ಸಾಯಿಸಬೇಕು.


ಅಂಥ ಪ್ರವಾದಿ ಅಥವಾ ಕನಸಿನ ಅರ್ಥ ಹೇಳುವವನನ್ನು ಕೊಂದು ಹಾಕಬೇಕು. ಯಾಕೆಂದರೆ ಅವನು ಯೆಹೋವನನ್ನು ತೊರೆಯಲು ಪ್ರೇರೇಪಿಸಿದನಲ್ಲಾ? ದೇವರಾದ ಯೆಹೋವನೇ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದವನು. ಆತನು ನಿಮಗೆ ಹೇಳಿದ ನಿಯಮಗಳಿಗೆ ವಿರುದ್ಧವಾಗಿ ನಡೆಯಲು ಪ್ರೇರೇಪಿಸುವವನನ್ನು ಕೊಲ್ಲಬೇಕು; ನಿಮ್ಮ ಮಧ್ಯದಿಂದ ಅಂಥ ದುಷ್ಟತನವನ್ನು ತೆಗೆದುಹಾಕಬೇಕು.


ಅಂಥ ಮನುಷ್ಯನಿಗೆ ಕಿವಿಗೊಡಬೇಡಿ. ದೇವರು ನಿಮ್ಮನ್ನು ಪರೀಕ್ಷೆ ಮಾಡುತ್ತಿದ್ದಾನೆ. ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸುತ್ತೀರೋ ಇಲ್ಲವೋ ಎಂದು ನಿಮ್ಮನ್ನು ಪರೀಕ್ಷಿಸುವನು.


“ಒಬ್ಬ ಪ್ರವಾದಿಯಾಗಲಿ ಕನಸಿನ ಅರ್ಥ ಹೇಳುವವನಾಗಲಿ ನಿಮ್ಮ ಬಳಿಗೆ ಬಂದು ನಿಮಗೊಂದು ಸೂಚಕಕಾರ್ಯವನ್ನಾಗಲಿ ಅದ್ಭುತಕಾರ್ಯವನ್ನಾಗಲಿ ಮಾಡಿತೋರಿಸುತ್ತೇನೆ ಎಂದು ಹೇಳಿದರೂ ಹೇಳಬಹುದು.


ಸ್ತ್ರೀಗೆ ಆ ಮರ ಸುಂದರವಾಗಿ ಕಂಡಿತು. ಅದರ ಹಣ್ಣು ಆಕೆಗೆ ತಿನ್ನಲು ಯೋಗ್ಯವಾಗಿ ಕಂಡಿತು. ಆ ಮರ ತನ್ನನ್ನು ಜ್ಞಾನಿಯನ್ನಾಗಿ ಮಾಡುತ್ತದೆಯೆಂದು ಆಕೆ ಉತ್ಸಾಹಗೊಂಡಳು. ಆದ್ದರಿಂದ ಸ್ತ್ರೀಯು ಆ ಮರದ ಹಣ್ಣನ್ನು ಕಿತ್ತುಕೊಂಡು ತಿಂದಳು; ತನ್ನೊಂದಿಗಿದ್ದ ಗಂಡನಿಗೂ ಸ್ವಲ್ಪ ಹಣ್ಣನ್ನು ಕೊಟ್ಟಳು. ಅವನು ಸಹ ಅದನ್ನು ತಿಂದನು.


ಆಗ ಆ ಪ್ರವಾದಿಯು, “ಆದರೆ ನಾನೂ ನಿನ್ನಂತೆಯೇ ಒಬ್ಬ ಪ್ರವಾದಿ” ಎಂದು ಹೇಳಿದನು. ನಂತರ ವಯಸ್ಸಾದ ಪ್ರವಾದಿಯು ಅವನಿಗೆ “ಯೆಹೋವನಿಂದ ಒಬ್ಬ ದೇವದೂತನು ನನ್ನ ಬಳಿಗೆ ಬಂದಿದ್ದನು. ಆ ದೂತನು ನಿನ್ನನ್ನು ನನ್ನ ಮನೆಗೆ ಕರೆತರಲು ನಿನ್ನೊಂದಿಗೆ ಅನ್ನಪಾನಗಳನ್ನು ತೆಗೆದುಕೊಳ್ಳಲು ನನಗೆ ತಿಳಿಸಿದನು” ಎಂದು ಸುಳ್ಳು ಹೇಳಿದನು.


ಅವರು ಮೇಜಿನ ಮುಂದೆ ಕುಳಿತಿದ್ದಾಗ, ಯೆಹೋವನು ಆ ಪ್ರವಾದಿಯೊಂದಿಗೆ ಮಾತನಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು