Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:34 - ಪರಿಶುದ್ದ ಬೈಬಲ್‌

34 ಅವನ ರಾಜ್ಯವು ವಿನಾಶಗೊಳ್ಳಲು ಮತ್ತು ಹಾಳಾಗಲು ಆ ಪಾಪವೇ ಕಾರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಈ ಕಾರಣ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ವಿಸರ್ಜಿತರಾಗಿ ನಿರ್ನಾಮವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯಾರೊಬ್ಬಾಮನ ಮನೆಯವರನ್ನು ಭೂಮಿಯಿಂದ ಸಂಹರಿಸುವುದಕ್ಕೂ, ನಾಶಮಾಡುವುದಕ್ಕೂ ಈ ಪಾಪವು ಅವರಿಗೆ ಕಾರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:34
17 ತಿಳಿವುಗಳ ಹೋಲಿಕೆ  

ಆದ್ದರಿಂದ ಯಾರೊಬ್ಬಾಮನೇ, ನಾನು ನಿನ್ನ ಕುಟುಂಬಕ್ಕೆ ಕೇಡುಗಳನ್ನು ಬರಮಾಡುತ್ತೇನೆ. ನಿನ್ನ ಕುಟುಂಬದ ಗಂಡಸರೆಲ್ಲರನ್ನು ನಾನು ಕೊಲ್ಲುತ್ತೇನೆ. ಬೆಂಕಿಯು ಕಸವನ್ನು ಸುಟ್ಟುಹಾಕುವಂತೆ ನಾನು ನಿನ್ನ ಕುಟುಂಬವನ್ನು ಸಂಪೂರ್ಣವಾಗಿ ನಾಶಪಡಿಸುತ್ತೇನೆ.


ಆದರೆ ಇದು ಮಹಾ ಪಾಪವಾಗಿತ್ತು. ಇಸ್ರೇಲಿನ ಜನರು ಕರುಗಳನ್ನು ಆರಾಧಿಸಲು ಬೇತೇಲ್ ಮತ್ತು ದಾನ್ ನಗರಗಳಿಗೆ ಪ್ರಯಾಣ ಮಾಡಿದರು.


ಯೆಹೋವನು ಇಸ್ರೇಲನ್ನು ದಾವೀದನ ವಂಶಾವಳಿಯಿಂದ ಕಿತ್ತುಹಾಕಿದನು. ಇಸ್ರೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ತಮ್ಮ ರಾಜನನ್ನಾಗಿಸಿಕೊಂಡರು. ಯಾರೊಬ್ಬಾಮನು ಇಸ್ರೇಲರನ್ನು ಯೆಹೋವನಿಂದ ದೂರಮಾಡಿದನು. ಇಸ್ರೇಲರು ಮಹಾಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು.


ನೀತಿಯು ಯಥಾರ್ಥವಂತನನ್ನು ಕಾಪಾಡುವುದು. ಕೆಡುಕತನವು ಪಾಪವನ್ನು ಪ್ರೀತಿಸುವವನನ್ನು ಸೋಲಿಸುವುದು.


ಆದರೆ ಯೇಹು ಇಸ್ರೇಲಿನ ದೇವರಾದ ಯೆಹೋವನ ನಿಯಮಗಳನ್ನು ಪೂರ್ಣಮನಸ್ಸಿನಿಂದಲೂ ಎಚ್ಚರಿಕೆಯಿಂದಲೂ ಪಾಲಿಸಲಿಲ್ಲ. ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ಮಾಡುವುದನ್ನು ನಿಲ್ಲಿಸಲೇ ಇಲ್ಲ.


ಯಾರೊಬ್ಬಾಮನು ತನ್ನಲ್ಲೇ, “ಜನರು ಜೆರುಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಹೋಗುವುದನ್ನೇ ಮುಂದುವರಿಸಿದರೆ, ಆಗ ಅವರು ದಾವೀದನ ಕುಟುಂಬವೇ ನಮ್ಮನ್ನು ಆಳಲಿ ಎಂದು ಅಪೇಕ್ಷೆಪಡಬಹುದು. ಜನರು ಯೆಹೂದದ ರಾಜನಾದ ರೆಹಬ್ಬಾಮನನ್ನೇ ಮತ್ತೆ ಅನುಸರಿಸಬಹುದು. ನಂತರ ಅವರು ನನ್ನನ್ನು ಕೊಂದುಬಿಡಬಹುದು.” ಅಂದುಕೊಂಡನು.


ಆ ಸಮಯದಲ್ಲಿ, ಯಾರೊಬ್ಬಾಮನ ಮಗನಾದ ಅಬೀಯನು ಅಸ್ವಸ್ಥನಾದನು.


ಯಾರೊಬ್ಬಾಮನು ಪಾಪವನ್ನು ಮಾಡಿದನು. ನಂತರ ಇಸ್ರೇಲಿನ ಜನರೂ ಪಾಪ ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು. ಆದ್ದರಿಂದ ಇಸ್ರೇಲಿನ ಜನರು ಸೋಲಿಸಲ್ಪಡುವಂತೆ ಯೆಹೋವನು ಅವಕಾಶ ಮಾಡುತ್ತಾನೆ” ಎಂದು ಹೇಳಿದನು.


ನಾದಾಬನು ಯೆಹೋವನ ವಿರುದ್ಧ ಕೆಟ್ಟಕಾರ್ಯಗಳನ್ನು ಮಾಡಿದನು. ತನ್ನ ತಂದೆಯಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಅವನೂ ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು.


ನೆಬಾಟನ ಮಗನಾದ, ರಾಜನಾದ ಯಾರೊಬ್ಬಾಮನ ಕುಟುಂಬಕ್ಕೆ ಆದ ಗತಿಯೇ ನಿನ್ನ ಕುಟುಂಬಕ್ಕೂ ಆಗುವುದು. ರಾಜನಾದ ಬಾಷನ ಕುಟುಂಬಕ್ಕೆ ಆದ ಗತಿಯೇ ನಿನ್ನ ಕುಟುಂಬಕ್ಕೂ ಆಗುವುದು. ಈ ಎರಡು ಕುಟುಂಬಗಳೂ ಸಂಪೂರ್ಣವಾಗಿ ನಾಶಗೊಂಡವು. ನೀನು ನನ್ನನ್ನು ಕೋಪಗೊಳಿಸಿದ್ದಕ್ಕಾಗಿ ನಾನು ನಿನಗೆ ಹೀಗೆ ಮಾಡುತ್ತೇನೆ. ಇಸ್ರೇಲಿನ ಜನರು ಪಾಪಮಾಡುವುದಕ್ಕೆ ನೀನು ಕಾರಣನಾದೆ’ ಎನ್ನುತ್ತಾನೆ.


ಆದರೂ ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ, ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಂದ ಯೇಹುವು ಸಂಪೂರ್ಣವಾಗಿ ವಿಮುಖನಾಗಲಿಲ್ಲ. ಬೇತೇಲ್ ಮತ್ತು ದಾನ್‌ಗಳಲ್ಲಿದ್ದ ಬಂಗಾರದ ಕರುಗಳನ್ನು ಯೇಹುವು ನಾಶಗೊಳಿಸಲಿಲ್ಲ.


ಅದಕ್ಕಾಗಿ ಯೆಹೋವನು ಹೀಗೆ ಹೇಳುತ್ತಾನೆ: ‘ಹನನ್ಯನೇ, ನಾನು ನಿನ್ನನ್ನು ಶೀಘ್ರದಲ್ಲಿ ಈ ಜಗತ್ತಿನಿಂದ ತೆಗೆದುಬಿಡುತ್ತೇನೆ. ನೀನು ಈ ವರ್ಷ ಮರಣಹೊಂದುವೆ. ಏಕೆಂದರೆ ನೀನು ಜನರನ್ನು ಯೆಹೋವನ ವಿರುದ್ಧ ತಿರುಗುವಂತೆ ಮಾಡಿದೆ.’”


ಇಸ್ರೇಲ್ ಪಾಪ ಮಾಡುತ್ತಾ ಇನ್ನೂ ಹೆಚ್ಚಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿತು. ಆವೆನ್‌ನಲ್ಲಿರುವ ಎತ್ತರವಾದ ಸ್ಥಳ ನಾಶಮಾಡಲ್ಪಡುವದು. ಅದರ ಮೇಲೆ ಮುಳ್ಳುಗಿಡಗಳೂ ಹಣಜಿಗಳೂ ಬೆಳೆಯುವವು. ಆಗ ಅವರು ಪರ್ವತಗಳಿಗೆ, “ನಮ್ಮನ್ನು ಮುಚ್ಚಿರಿ” ಎಂದೂ ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ” ಎಂದೂ ಹೇಳುವರು.


ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆಂದು ನೀನು ಹಿಂದಿರುಗಿ ಹೋಗಿ ಯಾರೊಬ್ಬಾಮನಿಗೆ ತಿಳಿಸು. ಯೆಹೋವನು ಹೀಗೆನ್ನುತ್ತಾನೆ: ‘ಯಾರೊಬ್ಬಾಮನೇ, ಇಸ್ರೇಲಿನ ಜನರಲ್ಲೆಲ್ಲಾ ನಾನು ನಿನ್ನನ್ನು ಆರಿಸಿಕೊಂಡೆ. ನನ್ನ ಜನರನ್ನು ಆಳಲು ನಾನು ನಿನ್ನನ್ನು ನೇಮಿಸಿದೆ.


ನಿನ್ನ ಕುಟುಂಬದಲ್ಲಿ ಯಾವನಾದರೂ ನಗರದಲ್ಲಿ ಸತ್ತರೆ, ಅವನನ್ನು ನಾಯಿಗಳು ಕಿತ್ತುತಿನ್ನುತ್ತವೆ. ನಿನ್ನ ಕುಟುಂಬದಲ್ಲಿ ಯಾವನಾದರೂ ಹೊಲಗಳಲ್ಲಿ ಸತ್ತರೆ, ಅವನನ್ನು ಪಕ್ಷಿಗಳು ಕಿತ್ತುತಿನ್ನುತ್ತವೆ. ಇದು ಯೆಹೋವನ ನುಡಿ’” ಎಂದು ಹೇಳಿದನು.


ಆಸನು ಯೆಹೂದದ ರಾಜನಾಗಿದ್ದ ಎರಡನೆಯ ವರ್ಷದಲ್ಲಿ, ಯಾರೊಬ್ಬಾಮನ ಮಗನಾದ ನಾದಾಬನು ಇಸ್ರೇಲಿನ ರಾಜನಾದನು. ನಾದಾಬನು ಇಸ್ರೇಲನ್ನು ಎರಡು ವರ್ಷ ಆಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು