Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:3 - ಪರಿಶುದ್ದ ಬೈಬಲ್‌

3 ಪ್ರವಾದಿಗೆ ಹತ್ತು ರೊಟ್ಟಿಗಳನ್ನು, ಕೆಲವು ಸಿಹಿ ಪದಾರ್ಥಗಳನ್ನು ಮತ್ತು ಜೇನುತುಪ್ಪ ಜಾಡಿಯನ್ನು ಕೊಡು. ನಂತರ ನಮ್ಮ ಮಗನಿಗೆ ಏನಾಗುತ್ತದೆಂಬುದನ್ನು ಕೇಳು. ಪ್ರವಾದಿಯಾದ ಅಹೀಯನು ನಿನಗೆ ತಿಳಿಸುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ಹತ್ತು ರೊಟ್ಟಿಗಳನ್ನೂ, ಒಂದಷ್ಟು ಸಿಹಿಪದಾರ್ಥವನ್ನೂ ಮತ್ತು ಒಂದು ಕುಪ್ಪೆ ಜೇನುತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಹುಡುಗನಿಗೆ ಏನಾಗುವುದೆಂದು ಅವನು ತಿಳಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀನು ಹತ್ತು ರೊಟ್ಟಿಗಳನ್ನೂ ಸಿಹಿಪದಾರ್ಥಗಳನ್ನೂ ಒಂದು ಕುಪ್ಪಿ ಜೇನುತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು; ಹುಡುಗನಿಗೆ ಏನಾಗುವುದೆಂದು ಅವನು ತಿಳಿಸುವನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ಹತ್ತು ರೊಟ್ಟಿಗಳನ್ನೂ ವಿುಠಾಯಿಯನ್ನೂ ಒಂದು ಕುಪ್ಪಿ ಜೇನುತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು; ಹುಡುಗನಿಗೆ ಏನಾಗುವದೆಂದು ಅವನು ತಿಳಿಸುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದಲ್ಲದೆ ನೀನು ನಿನ್ನ ಕೈಯಲ್ಲಿ ಹತ್ತು ರೊಟ್ಟಿಗಳನ್ನೂ, ಭಕ್ಷ್ಯಗಳನ್ನೂ, ಒಂದು ಮಡಕೆ ಜೇನುತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಅವನು ಮಗುವಿಗೆ ಆಗುವುದನ್ನು ನಿನಗೆ ತಿಳಿಸುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:3
11 ತಿಳಿವುಗಳ ಹೋಲಿಕೆ  

ಬಾಳ್‌ಷಾಲಿಷಾದಿಂದ ಒಬ್ಬ ಮನುಷ್ಯನು ಪ್ರಥಮ ಸುಗ್ಗಿಯ ರೊಟ್ಟಿಗಳನ್ನು ದೇವಮನುಷ್ಯನಿಗೆ (ಎಲೀಷನಿಗೆ) ತೆಗೆದುಕೊಂಡು ಬಂದನು. ಇವನು ಇಪ್ಪತ್ತು ಜವೆಗೋಧಿ ರೊಟ್ಟಿಗಳನ್ನೂ ಒಂದು ಚೀಲದಲ್ಲಿ ಹಸೀ ತೆನೆಗಳನ್ನೂ ತಂದನು. ಆಗ ಎಲೀಷನು, “ಜನರಿಗೆ ಈ ಆಹಾರವನ್ನು ಕೊಡು, ಅವರು ತಿನ್ನಲಿ” ಎಂದು ಹೇಳಿದನು.


ಆಗ ರಾಜನು ದೇವಮನುಷ್ಯನಿಗೆ, “ದಯವಿಟ್ಟು ನನ್ನೊಡನೆ ಮನೆಗೆ ಬಾ. ನನ್ನೊಡನೆ ಊಟಮಾಡು. ನಾನು ನಿನಗೆ ಒಂದು ಕಾಣಿಕೆಯನ್ನು ಕೊಡುತ್ತೇನೆ” ಎಂದು ಹೇಳಿದನು.


ಆದ್ದರಿಂದ ಮರಿಯಳು ಮತ್ತು ಮಾರ್ಥಳು, “ಪ್ರಭುವೇ, ನಿನ್ನ ಪ್ರಿಯ ಸ್ನೇಹಿತನಾದ ಲಾಜರನು ಅಸ್ವಸ್ಥನಾಗಿದ್ದಾನೆ” ಎಂಬ ಸಂದೇಶವನ್ನು ಆತನಿಗೆ ತಿಳಿಸಲು ಒಬ್ಬನನ್ನು ಕಳುಹಿಸಿಕೊಟ್ಟರು.


ನಾಮಾನನು ತನ್ನ ಗುಂಪಿನೊಂದಿಗೆ ದೇವಮನುಷ್ಯನ ಹತ್ತಿರಕ್ಕೆ ಹಿಂದಿರುಗಿ ಬಂದನು. ಅವನು ಎಲೀಷನ ಮುಂದೆ ನಿಂತು, “ನೋಡಿ, ಇಸ್ರೇಲಿನಲ್ಲಿಯೇ ಹೊರತು ಭೂಮಂಡಲದ ಬೇರೆಲ್ಲಿಯೂ ದೇವರು ಇಲ್ಲವೇ ಇಲ್ಲ ಎಂಬುದು ಈಗ ತಾನೇ ನನಗೆ ತಿಳಿಯಿತು! ಈಗ ದಯಮಾಡಿ ನನ್ನ ಕಾಣಿಕೆಯನ್ನು ಸ್ವೀಕರಿಸಿ!” ಎಂದು ಹೇಳಿದನು.


ಆಗ ಅರಾಮ್ಯರ ರಾಜನು, “ಈಗಲೇ ಹೋಗು, ನಾನು ಇಸ್ರೇಲಿನ ರಾಜನಿಗೆ ಪತ್ರವೊಂದನ್ನು ಕಳುಹಿಸುತ್ತೇನೆ” ಎಂದು ಹೇಳಿದನು. ನಾಮಾನನು ಇಸ್ರೇಲಿಗೆ ಹೋದನು. ನಾಮಾನನು ಮುನ್ನೂರ ನಲವತ್ತು ಕಿಲೋಗ್ರಾಂ ಬೆಳ್ಳಿ, ಆರುಸಾವಿರ ಚಿನ್ನದ ನಾಣ್ಯಗಳನ್ನು ಮತ್ತು ಹತ್ತು ಥಾನು ಬಟ್ಟೆಗಳನ್ನು ಕಾಣಿಕೆಯಾಗಿ ತೆಗೆದುಕೊಂಡು ಹೋದನು.


ಒಂದು ದಿನ, ಅಹಜ್ಯನು ಸಮಾರ್ಯದ ತನ್ನ ಮನೆಯ ಮಾಳಿಗೆಯ ಮೇಲಿದ್ದನು. ಅಹಜ್ಯನು ಮನೆಯ ಮೇಲಿನ ಮರದ ಕಂಬಗಳ ಮೂಲಕ ಕೆಳಕ್ಕೆ ಬಿದ್ದನು. ಅವನಿಗೆ ಬಹಳ ಗಾಯಗಳಾದವು. ಅಹಜ್ಯನು ಸಂದೇಶಕರನ್ನು ಕರೆದು ಅವರಿಗೆ, “ಎಕ್ರೋನಿನ ದೇವರಾದ ಬಾಳ್ಜೆಬೂಬನ ಅರ್ಚಕರ ಬಳಿಗೆ ಹೋಗಿ, ನನ್ನ ಗಾಯಗಳು ಗುಣವಾಗುತ್ತವೆಯೇ ಎಂಬುದನ್ನು ಅವರಿಂದ ತಿಳಿದುಕೊಳ್ಳಿ” ಎಂದು ಹೇಳಿದನು.


ಆಗ ಸ್ತ್ರೀಯೊಬ್ಬಳು ಬಹು ಬೆಲೆಬಾಳುವ ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು ಊಟಕ್ಕೆ ಕುಳಿತ್ತಿದ್ದ ಯೇಸುವಿನ ತಲೆಯ ಮೇಲೆ ಆ ಸುಗಂಧ ತೈಲವನ್ನು ಸುರಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು