Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:9 - ಪರಿಶುದ್ದ ಬೈಬಲ್‌

9 ಆದರೆ ನೀನು ಅನೇಕ ಪಾಪಗಳನ್ನು ಮಾಡಿರುವೆ. ನಿನಗಿಂತಲೂ ಮೊದಲು ಆಳಿದವರ ಪಾಪಗಳಿಗಿಂತ ನಿನ್ನ ಪಾಪಗಳು ಹೆಚ್ಚು ಭಯಂಕರವಾಗಿವೆ. ನೀನು ನನ್ನನ್ನು ಅನುಸರಿಸುವುದನ್ನು ಬಿಟ್ಟುಬಿಟ್ಟೆ. ನೀನು ವಿಗ್ರಹಗಳನ್ನು ಮತ್ತು ಅನ್ಯದೇವರುಗಳನ್ನು ನಿರ್ಮಿಸಿದೆ. ಇದು ನನ್ನಲ್ಲಿ ಹೆಚ್ಚು ಕೋಪವುಂಟುಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ. ನನ್ನನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದೆ; ನನ್ನನ್ನು ತಿರಸ್ಕರಿಸಿ ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ; ನನ್ನನ್ನು ಉಲ್ಲಂಘಿಸಿ ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀನು ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದೆ. ಏಕೆಂದರೆ, ನೀನು ಹೋಗಿ ನನಗೆ ಕೋಪವನ್ನೆಬ್ಬಿಸುವ ಅನ್ಯದೇವರುಗಳನ್ನೂ, ಎರಕದ ವಿಗ್ರಹಗಳನ್ನೂ ಮಾಡಿಕೊಂಡು, ನನ್ನನ್ನು ತಿರಸ್ಕರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:9
42 ತಿಳಿವುಗಳ ಹೋಲಿಕೆ  

“ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದನು: ‘ಜೆರುಸಲೇಮೇ, ನೀನು ನನ್ನನ್ನು ಮರೆತುಬಿಟ್ಟೆ. ನೀನು ನನ್ನನ್ನು ತೊರೆದುಬಿಟ್ಟೆ; ಆದ್ದರಿಂದ ನೀನು ನನ್ನನ್ನು ತೊರೆದ ಸೂಳೆಯಂತೆ ಜೀವಿಸಿದ್ದಕ್ಕೆ ಶಿಕ್ಷೆ ಅನುಭವಿಸಬೇಕು. ನಿನ್ನ ನೀಚ ನಡತೆಗಾಗಿ ನೀನು ಕಷ್ಟ ಅನುಭವಿಸಬೇಕು.’”


ಹೀಗಿರಲು ನೀವು ನನ್ನ ಸುಶಿಕ್ಷಣವನ್ನು ದ್ವೇಷಿಸುವುದೇಕೆ? ನಾನು ಹೇಳುವುದನ್ನು ನೀವು ತುಚ್ಛೀಕರಿಸುವುದೇಕೆ?


ಅವರು ನಿನಗೆ ಎದುರುಬಿದ್ದು ನಿನ್ನ ಬೋಧನೆಯನ್ನು ತಾತ್ಸಾರ ಮಾಡಿದರು; ನಿನ್ನ ಪ್ರವಾದಿಗಳನ್ನು ಕೊಂದರು. ಆ ಪ್ರವಾದಿಗಳಾದರೋ ಜನರನ್ನು ಎಚ್ಚರಿಸಿದರು; ನಿನ್ನ ಬಳಿಗೆ ಹಿಂತಿರುಗುವಂತೆ ಜನರನ್ನು ಪ್ರೋತ್ಸಾಹಿಸಿದರು. ಆದರೆ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಭಯಂಕರವಾದ ಕೃತ್ಯಗಳನ್ನು ಮಾಡಿದರು.


ಯಾರೊಬ್ಬಾಮನು ತನಗೆ ಬೇಕಾದ ಯಾಜಕರನ್ನು ಆರಿಸಿ ತಾನು ಮಾಡಿಸಿದ ಬಸವನ ಮತ್ತು ಆಡುಗಳ ಪ್ರತಿಮೆಗಳನ್ನು ಉನ್ನತಸ್ಥಳಗಳಲ್ಲಿ ಪ್ರತಿಷ್ಠಾಪಿಸಿ ಆರಾಧಿಸಲು ನೇಮಿಸಿದನು.


ಬಳಿಕ ರಾಜನು ಈಗ ತಾನೇನು ಮಾಡಬೇಕೆಂದು ತನ್ನ ಸಲಹೆಗಾರರನ್ನು ಕೇಳಿದನು. ಅವರು ತಮ್ಮ ಸಲಹೆಯನ್ನು ಅವನಿಗೆ ನೀಡಿದರು. ಯಾರೊಬ್ಬಾಮನು ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ನೀವು ಆರಾಧಿಸಲು ಜೆರುಸಲೇಮಿಗೆ ಹೋಗಲೇಬಾರದು. ಇಸ್ರೇಲರೇ, ನಿಮ್ಮನ್ನು ಈಜಿಪ್ಟಿನಿಂದ ಹೊರತಂದ ದೇವರುಗಳು ಇಲ್ಲಿವೆ” ಎಂದು ಹೇಳಿದನು.


“ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ.


ಪ್ರಭುವಿಗೆ ಅಸೂಯೆಯನ್ನು ಉಂಟುಮಾಡಬೇಕೆಂದಿದ್ದೀರೋ? ಆತನಿಗಿಂತಲೂ ನಾವು ಬಲಿಷ್ಠರಾಗಿದ್ದೇವೋ? ಇಲ್ಲ!


ಆಗ ದೇವರು ನನಗೆ, “ನರಪುತ್ರನೇ, ಅವರು ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಯೆಹೂದದ ಜನರಿಗೆ ತಾವು ಮಾಡುತ್ತಿರುವ ಈ ಭಯಂಕರ ಕೃತ್ಯಗಳು ಸಾಕಾಗಿಲ್ಲ. ಇಡೀ ದೇಶವು ದುಷ್ಟತನದಿಂದ ತುಂಬಿಹೋಗಿದೆ. ಅವರು ನನ್ನನ್ನು ಇನ್ನೂ ಹೆಚ್ಚಿಗೆ ಕೋಪಗೊಳಿಸುತ್ತಿದ್ದಾರೆ. ವಿಗ್ರಹಾರಾಧನೆಯ ಪ್ರತೀಕವಾಗಿ ತಮ್ಮ ಮೂಗುಗಳಿಗೆ ಎಳೆಯ ಕೊಂಬೆಗಳನ್ನು ಸೋಕಿಸುತ್ತಾರೆ.


ಆಗ ಅದು ಕೈಯಂತಿದ್ದ ಒಂದನ್ನು ಚಾಚಿ ನನ್ನ ತಲೆಯ ಕೂದಲನ್ನು ಹಿಡಿದುಕೊಂಡಿತು. ಬಳಿಕ ಆತ್ಮವು ನನ್ನನ್ನು ಮೇಲಕ್ಕೆ ಎತ್ತಿ ದಿವ್ಯದರ್ಶನದಲ್ಲಿ ಜೆರುಸಲೇಮಿಗೆ ಕೊಂಡೊಯ್ಯಿತು. ಅದು ನನ್ನನ್ನು ಒಳದ್ವಾರಕ್ಕೆ ಕೊಂಡೊಯ್ಯಿತು. ಇದು ಉತ್ತರ ದಿಕ್ಕಿನಲ್ಲಿತ್ತು. ದೇವರನ್ನು ಸಿಟ್ಟಿಗೆಬ್ಬಿಸುವ ವಿಗ್ರಹವು ಈ ದ್ವಾರದ ಬಳಿ ಇತ್ತು.


ಯೆಹೋವನು ತನ್ನ ಜನರ ಮೇಲೆ ಬಹು ಕೋಪಗೊಂಡು ಅವರಿಗೆ ಭಯಂಕರವಾದ ಕಾಯಿಲೆಯನ್ನು ಬರಮಾಡಿದನು.


ಅಯ್ಯೋ, ಅವರು ಅರಣ್ಯದಲ್ಲಿ ಆತನಿಗೆ ವಿರುದ್ಧವಾಗಿ ಅನೇಕ ಸಲ ದಂಗೆ ಎದ್ದರು. ಆತನನ್ನು ಬಹಳವಾಗಿ ನೋಯಿಸಿದರು.


ಆದರೆ ಇಸ್ರೇಲರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ಆತನನ್ನು ಬಹಳವಾಗಿ ನೋಯಿಸಿದರು. ಅವರು ಆತನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ.


ಬೆನ್‌ಹಿನ್ನೋಮ್ ಕಣಿವೆಯಲ್ಲಿ ಮನಸ್ಸೆಯು ತನ್ನ ಸ್ವಂತ ಮಕ್ಕಳನ್ನು ಅನ್ಯದೇವತೆಗಳಿಗೆ ಯಜ್ಞವಾಗಿ ಅರ್ಪಿಸಿದನು; ಮಾಟಮಂತ್ರಗಳನ್ನು ಮಾಡಿದನು; ಪಿಶಾಚಿಗಳೊಂದಿಗೂ ದುರಾತ್ಮಗಳೊಂದಿಗೂ ಸಂಪರ್ಕವನ್ನಿಟ್ಟುಕೊಂಡಿದ್ದನು. ಯೆಹೋವನು ಕೆಟ್ಟದ್ದು ಎಂದು ಹೇಳಿದ್ದನ್ನೆಲ್ಲಾ ಅವನು ಮಾಡಿದ್ದರಿಂದ ಆತನು ಅವನ ಮೇಲೆ ಬಹಳವಾಗಿ ಕೋಪಗೊಂಡನು.


ಆದರೆ ಯೆಹೋವನು ಯೆಹೂದದ ಜನರ ಮೇಲೆ ಕೋಪಗೊಳ್ಳುವುದನ್ನು ನಿಲ್ಲಿಸಲೇ ಇಲ್ಲ. ಮನಸ್ಸೆಯು ಮಾಡಿದ ಕಾರ್ಯಗಳೆಲ್ಲವುಗಳಿಂದ ಯೆಹೋವನು ಅವರ ಮೇಲೆ ಇನ್ನೂ ಕೋಪಗೊಂಡಿದ್ದನು.


ಮನಸ್ಸೆಯು ತನ್ನ ತಂದೆಯಾದ ಹಿಜ್ಕೀಯನು ನಾಶಪಡಿಸಿದ್ದ ಉನ್ನತಸ್ಥಳಗಳನ್ನು ಮತ್ತೆ ನಿರ್ಮಿಸಿದನು. ಮನಸ್ಸೆಯು ಇಸ್ರೇಲಿನ ರಾಜನಾದ ಅಹಾಬನಂತೆ ಬಾಳನಿಗಾಗಿ ಯಜ್ಞವೇದಿಕೆಯನ್ನು ಮತ್ತು ಅಶೇರಸ್ತಂಭಗಳನ್ನು ನಿರ್ಮಿಸಿದನು. ಮನಸ್ಸೆಯು ಪರಲೋಕದ ನಕ್ಷತ್ರಗಳನ್ನು ಆರಾಧಿಸಿ ಅವುಗಳ ಸೇವೆಮಾಡಿದನು.


ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅಹಾಬನು ಮಾಡಿದರೂ ಅವು ಅವನಿಗೆ ಸಾಕಾಗಲಿಲ್ಲ. ಆದ್ದರಿಂದ ಅಹಾಬನು ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾದನು. ಎತ್ಬಾಳನು ಚೀದೋನ್ಯರ ರಾಜನಾಗಿದ್ದನು. ನಂತರ ಅಹಾಬನು ಬಾಳ್ ದೇವರನ್ನು ಪೂಜಿಸಿ ಅದರ ಸೇವೆ ಮಾಡಲಾರಂಭಿಸಿದನು.


ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಬಾಷನು ಮಾಡಿದನು. ತನಗಿಂತ ಮುಂಚೆ ಆಳಿದ ಇಸ್ರೇಲಿನ ರಾಜನಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಅವನು ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು.


ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನೆಲ್ಲ ಯೆಹೂದದ ಜನರು ಮಾಡಿ ಪಾಪಿಗಳಾದರು. ಯೆಹೋವನು ಅವರ ಮೇಲೆ ಹೆಚ್ಚು ಕೋಪಗೊಳ್ಳುವಂತೆ ಆತನಿಗೆ ವಿರುದ್ಧವಾದ ಅನೇಕ ಕಾರ್ಯಗಳನ್ನು ಮಾಡಿದರು. ಅವರಿಗಿಂತಲೂ ಮುಂಚೆ ಜೀವಿಸಿದ್ದ ಅವರ ಪೂರ್ವಿಕರಿಗಿಂತಲೂ ಈ ಜನರು ಹೆಚ್ಚು ಕೀಳಾಗಿದ್ದರು.


ಯಾರೊಬ್ಬಾಮನು ಪಾಪವನ್ನು ಮಾಡಿದನು. ನಂತರ ಇಸ್ರೇಲಿನ ಜನರೂ ಪಾಪ ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು. ಆದ್ದರಿಂದ ಇಸ್ರೇಲಿನ ಜನರು ಸೋಲಿಸಲ್ಪಡುವಂತೆ ಯೆಹೋವನು ಅವಕಾಶ ಮಾಡುತ್ತಾನೆ” ಎಂದು ಹೇಳಿದನು.


ಅವರು ಹೊಸ ದೇವರುಗಳನ್ನು ಆರಿಸಿಕೊಂಡರು; ಅದಕ್ಕಾಗಿ ಅವರು ತಮ್ಮ ಪಟ್ಟಣ ದ್ವಾರಗಳಲ್ಲಿ ಯುದ್ಧ ಮಾಡಬೇಕಾಯಿತು. ಇಸ್ರೇಲರ ನಲವತ್ತು ಸಾವಿರ ಸೈನಿಕರಲ್ಲಿ ಒಬ್ಬನಿಗೂ ಗುರಾಣಿ ಬರ್ಜಿಗಳಿರಲಿಲ್ಲ.


ಅವರು ದೆವ್ವಗಳನ್ನು ದೇವರನ್ನಾಗಿ ಮಾಡಿ ನನ್ನಲ್ಲಿ ಅಸೂಯೆಯನ್ನು ಉಂಟುಮಾಡಿದರು. ಆ ವಿಗ್ರಹಗಳು ನಿಜವಾದ ದೇವರುಗಳಲ್ಲ! ಅವರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಮಾಡಿ ನನ್ನನ್ನು ಸಿಟ್ಟಿಗೆಬ್ಬಿಸಿದರು. ಆದ್ದರಿಂದ ನಿಜವಾದ ಜನಾಂಗವಲ್ಲದವರಿಂದ ನಾನು ಅವರಲ್ಲಿ ಈರ್ಷೆಯನ್ನು ಉಂಟು ಮಾಡುವೆನು. ಮೂರ್ಖ ಜನಾಂಗದಿಂದ ಅವರನ್ನು ಸಿಟ್ಟಿಗೆಬ್ಬಿಸುವೆನು.


ನಾನು ನಿಮ್ಮನ್ನು ತಿಳಿದಿರುವ ಕಾಲದಿಂದ ನೀವು ಯೆಹೋವನಿಗೆ ಅವಿಧೇಯರಾಗಿಯೇ ಇದ್ದೀರಿ.


ಬಾಷನು ಹೊಸರಾಜನಾದ ಸಮಯದಲ್ಲಿ ಅವನು ಯಾರೊಬ್ಬಾಮನ ವಂಶದಲ್ಲಿ ಎಲ್ಲರನ್ನೂ ಕೊಂದುಹಾಕಿದನು. ಯಾರೊಬ್ಬಾಮನ ವಂಶದಲ್ಲಿ ಯಾರೂ ಜೀವಸಹಿತ ಉಳಿಯಲು ಬಾಷನು ಬಿಡಲಿಲ್ಲ. ಯೆಹೋವನು ಹೇಳಿದ್ದಂತೆಯೇ ಇದು ಸಂಭವಿಸಿತು. ಯೆಹೋವನು ತನ್ನ ಸೇವಕನಾದ ಶೀಲೋವಿನ ಅಹೀಯನ ಮೂಲಕ ಇದನ್ನು ಹೇಳಿದ್ದನು.


ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನೆಲ್ಲ ಒಮ್ರಿಯು ಮಾಡಿದನು. ಒಮ್ರಿಯು ಅವನಿಗಿಂತಲೂ ಮುಂಚೆ ಇದ್ದ ರಾಜರುಗಳಲ್ಲೆಲ್ಲಾ ಅತ್ಯಂತ ಕೆಟ್ಟವನು.


ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಅಹಾಬನು ಮಾಡಿದನು. ಅವನಿಗಿಂತಲೂ ಮುಂಚೆ ಇದ್ದ ರಾಜರುಗಳಲ್ಲೆಲ್ಲಾ ಅಹಾಬನೇ ಅತ್ಯಂತ ಕೆಟ್ಟವನು.


ಅಹಾಬನು ಅಶೇರ ದೇವತೆಯನ್ನು ಆರಾಧಿಸಲು ಒಂದು ವಿಶೇಷ ಸ್ತಂಭವನ್ನು ನೆಡಿಸಿದನು. ಹೀಗೆ ಎಷ್ಟೋ ಕೆಟ್ಟಕಾರ್ಯಗಳನ್ನು ಮಾಡಿ ತನ್ನ ಮುಂಚೆ ಇದ್ದ ಇಸ್ರೇಲ್ ರಾಜರುಗಳಿಗಿಂತಲೂ ಹೆಚ್ಚಾಗಿ ಇಸ್ರೇಲ್ ದೇವರಾದ ಯೆಹೋವನನ್ನು ರೇಗಿಸಿದನು.


ಆದರೆ ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಅವನು ಮುಂದುವರಿಸಿದನು. ಇಸ್ರೇಲರು ಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಯೋರಾಮನು ಯಾರೊಬ್ಬಾಮನ ಪಾಪಗಳನ್ನು ನಿಲ್ಲಿಸಲಿಲ್ಲ.


ಇಸ್ರೇಲರು ಎತ್ತರವಾದ ಸ್ಥಳಗಳನ್ನು ನಿರ್ಮಿಸಿ, ಆತನನ್ನು ಕೋಪಗೊಳಿಸಿದರು. ಸುಳ್ಳುದೇವರುಗಳ ವಿಗ್ರಹಗಳನ್ನು ರೂಪಿಸಿ ಆತನನ್ನು ರೇಗಿಸಿದರು.


ಯೆಹೂದದ ಜನರು ಹೀಗೆ ಮಾಡುತ್ತಿದ್ದಾರೆ; ಮಕ್ಕಳು ಸೌದೆಯನ್ನು ಆರಿಸುತ್ತಾರೆ. ತಂದೆಗಳು ಆ ಸೌಧೆಯಿಂದ ಬೆಂಕಿಯನ್ನು ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದಿ ಸ್ವರ್ಗದ ರಾಣಿಗಾಗಿ ಹೋಳಿಗೆಗಳನ್ನು ಮಾಡುತ್ತಾರೆ. ಈ ಯೆಹೂದದ ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ. ಅವರು ನನ್ನನ್ನು ರೇಗಿಸುವದಕ್ಕಾಗಿಯೇ ಹೀಗೆ ಮಾಡುತ್ತಾರೆ.


ಯೆಹೋವನೇ, ನೀನು ಸಾವಿರಾರು ಜನರಿಗೆ ನಂಬಿಗಸ್ತನಾಗಿಯೂ ಕರುಣಾಮಯಿಯಾಗಿಯೂ ಇರುವೆ. ಆದರೆ ತಂದೆಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಶಿಕ್ಷೆಯನ್ನು ವಿಧಿಸುವಾತನೂ ನೀನೇ. ಮಹತ್ವವುಳ್ಳವನೇ, ಪರಾಕ್ರಮಿಯಾದ ದೇವರೇ, ಸರ್ವಶಕ್ತನಾದ ಯೆಹೋವನು ಎಂಬುದೇ ನಿನ್ನ ನಾಮಧೇಯ.


“ವಿಗ್ರಹಾರಾಧನೆ ಮಾಡಬೇಡಿರಿ! ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು!


ರಾಜನಾದ ಯಾರೊಬ್ಬಾಮನು ಅನೇಕ ಪಾಪಗಳನ್ನು ಮಾಡಿದ್ದರಿಂದ ಇದು ಸಂಭವಿಸಿತು. ಇಸ್ರೇಲಿನ ಜನರು ಅನೇಕ ಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಇಸ್ರೇಲಿನ ದೇವರಾದ ಯೆಹೋವನು ಹೆಚ್ಚು ಕೋಪಗೊಳ್ಳುವಂತೆ ಯಾರೊಬ್ಬಾಮನು ಮಾಡಿದ್ದನು.


ಬಲಾಢ್ಯ ನಗರಗಳನ್ನು ಸ್ವಾಧೀನಪಡಿಸಿಕೊಂಡರು. ಉತ್ತಮವಾದ ಭೂಮಿಯನ್ನು ವಶಪಡಿಸಿಕೊಂಡರು. ಒಳ್ಳೆಯ ವಸ್ತುಗಳಿಂದ ತುಂಬಿದ್ದ ಮನೆಗಳನ್ನು ಅವರು ವಶಪಡಿಸಿಕೊಂಡರು. ಅಗೆದು ತಯಾರಾಗಿದ್ದ ಬಾವಿಗಳನ್ನು ಅವರಿಗೆ ನೀನು ಕೊಟ್ಟೆ, ದ್ರಾಕ್ಷಿತೋಟವನ್ನು, ಎಣ್ಣೆಮರಗಳ ತೋಪನ್ನು, ಬೇಕಾದಷ್ಟು ಹಣ್ಣಿನ ಮರಗಳನ್ನು ನೀನು ಅವರಿಗೆ ಕೊಟ್ಟೆ. ಅವರ ಹೊಟ್ಟೆ ತುಂಬಿ ಕೊಬ್ಬೇರುವಷ್ಟು ಅವರಿಗೆ ಕೊಟ್ಟೆ. ನೀನು ಕೊಟ್ಟ ಉತ್ತಮವಾದ ವಸ್ತುಗಳಲ್ಲಿ ಅವರು ಆನಂದಿಸಿದರು.


ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಅತಿ ಮೊಂಡರಾಗಿದ್ದು ಅವರ ತಂದೆಗಳಿಗಿಂತ ಹೆಚ್ಚಿನ ದುಷ್ಕೃತ್ಯಗಳನ್ನು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು