Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:4 - ಪರಿಶುದ್ದ ಬೈಬಲ್‌

4 ಯೆಹೋವನು ದಾವೀದನನ್ನು ಪ್ರೀತಿಸಿದ್ದರಿಂದ ಅವನಿಗೋಸ್ಕರ ಅಬೀಯಾಮನಿಗೆ ಜೆರುಸಲೇಮಿನಲ್ಲಿ ರಾಜ್ಯವನ್ನು ದಯಪಾಲಿಸಿದನು; ಅವನಿಗೆ ಮಗನನ್ನು ಅನುಗ್ರಹಿಸಿದನು; ಜೆರುಸಲೇಮ್ ಸುರಕ್ಷಿತವಾಗಿರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೂ ಹಿತ್ತಿಯನಾದ ಊರೀಯನ ವಿಷಯದ ಹೊರತಾಗಿ ಬೇರೆ ಯಾವ ವಿಷಯದಲ್ಲಿಯೂ ತನ್ನ ಆಜ್ಞೆಗಳನ್ನು ಮೀರದೆ ಜೀವದಿಂದಿರುವವರೆಗೂ ತನ್ನ ಚಿತ್ತಕ್ಕನುಸಾರವಾಗಿ ನಡೆದ ದಾವೀದನ ನಿಮಿತ್ತವಾಗಿ ಯೆಹೋವನು ಯೆರೂಸಲೇಮಿನಲ್ಲಿರುವ ಅವನ ದೀಪವನ್ನು ಆರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟರೆ, ಬೇರೆ ಯಾವ ವಿಷಯದಲ್ಲೂ ತಮ್ಮ ಆಜ್ಞೆಯನ್ನು ಮೀರದೆ, ಜೀವದಿಂದಿರುವವರೆಗೂ ತಮ್ಮ ಚಿತ್ತಕ್ಕನುಸಾರ ನಡೆದ ದಾವೀದನ ನಿಮಿತ್ತ, ಸರ್ವೇಶ್ವರಸ್ವಾಮಿ ಜೆರುಸಲೇಮಿನಲ್ಲಿನ ಇವನ ದೀಪವನ್ನು ಆರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೂ ಹಿತ್ತಿಯನಾದ ಊರೀಯನ ವಿಷಯ ಹೊರತಾಗಿ ಬೇರೆ ಯಾವ ವಿಷಯದಲ್ಲಿಯೂ ತನ್ನ ಆಜ್ಞೆಯನ್ನು ಮೀರದೆ ಜೀವದಿಂದಿರುವವರೆಗೂ ತನ್ನ ಚಿತ್ತಕ್ಕನುಸಾರನಾಗಿ ನಡೆದ ದಾವೀದನ ನಿವಿುತ್ತವಾಗಿ ಯೆಹೋವನು ಯೆರೂಸಲೇವಿುನಲ್ಲಿನ ಇವನ ದೀಪವನ್ನು ಆರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನ ತರುವಾಯ ಅವನ ಮಗನನ್ನು ನೇಮಿಸುವುದಕ್ಕೂ, ಯೆರೂಸಲೇಮನ್ನು ಸ್ಥಿರಪಡಿಸುವುದಕ್ಕೂ, ತನ್ನ ದೇವರಾದ ಯೆಹೋವ ದೇವರು ದಾವೀದನ ನಿಮಿತ್ತ ಯೆರೂಸಲೇಮಿನಲ್ಲಿ ಅವನಿಗೆ ದೀಪವನ್ನು ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:4
26 ತಿಳಿವುಗಳ ಹೋಲಿಕೆ  

ಸೊಲೊಮೋನನ ಮಗನಿಗೆ ಒಂದು ಕುಲವನ್ನು ಮಾತ್ರ ಕೊಡುತ್ತೇನೆ. ಜೆರುಸಲೇಮಿನ ನನ್ನ ಸನ್ನಿಧಿಯಲ್ಲಿ ಆಳಲು ನನ್ನ ಸೇವಕನಾದ ದಾವೀದನು ಯಾವಾಗಲೂ ತನ್ನ ಸಂತತಿಯವರಲ್ಲಿ ಒಬ್ಬನನ್ನು ಹೊಂದಿರಲೆಂದು ನಾನು ಇದನ್ನು ಮಾಡುತ್ತೇನೆ. ಜೆರುಸಲೇಮ್ ನಗರವನ್ನು ನಾನು ನನ್ನ ಸ್ವಂತದ್ದೆಂದು ಆರಿಸಿಕೊಂಡೆನು.


ಆದರೆ ಯೆಹೋವನು ದಾವೀದನೊಂದಿಗೆ ಮಾಡಿದ ಒಡಂಬಡಿಕೆಯ ನಿಮಿತ್ತ ಅವನನ್ನು ನಾಶಮಾಡಲಿಲ್ಲ. ಯೆಹೋವನು, “ದಾವೀದನ ಸಂತತಿಯವರ ಬೆಳಕು ಉರಿಯುತ್ತಲೇ ಇರುವದು” ಎಂದು ವಾಗ್ದಾನ ಮಾಡಿದ್ದನು.


ನಾನು ಈ ಪಟ್ಟಣವನ್ನು ರಕ್ಷಿಸಿ ಕಾಪಾಡುವೆನು. ನನಗೋಸ್ಕರವಾಗಿಯೇ ಇದನ್ನು ಮಾಡುವೆನು. ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಮಾಡುವೆನು.”


ಇಲ್ಲಿಯೇ ನಾನು ದಾವೀದನನ್ನು ಬಲಗೊಳಿಸುವೆನು. ನಾನು ಅಭಿಷೇಕಿಸಿದ ಅವನಿಗೆ ದೀಪವನ್ನು ಒದಗಿಸುವೆನು.


ಯೆಹೋವನೇ, ನನ್ನ ದೀಪವನ್ನು ಹೊತ್ತಿಸುವವನು ನೀನೇ. ನನ್ನ ದೇವರು ನನ್ನ ಸುತ್ತಲೂ ಇರುವ ಕತ್ತಲೆಯನ್ನು ಬೆಳಕನ್ನಾಗಿ ಮಾಡುವನು.


ಒಂದು ಕುಲವನ್ನು ಮಾತ್ರ ದಾವೀದನ ವಂಶದ ಅಧೀನದಲ್ಲಿ ಬಿಡುತ್ತೇನೆ. ಅವರು ಈ ಕುಲವನ್ನು ಉಳಿಸಿಕೊಳ್ಳಲು ನಾನು ಅವಕಾಶ ಮಾಡಿಕೊಡುತ್ತೇನೆ. ನನ್ನ ಸೇವಕನಾದ ದಾವೀದನಿಗಾಗಿ ಮತ್ತು ಜೆರುಸಲೇಮಿಗಾಗಿ ನಾನು ಇದನ್ನು ಮಾಡುತ್ತೇನೆ. ಇಸ್ರೇಲಿನ ಎಲ್ಲಾ ಕುಲಗಳಿಂದಲೂ ನಾನು ಜೆರುಸಲೇಮ್ ನಗರವನ್ನು ಆರಿಸಿಕೊಂಡಿದ್ದೇನೆ.


ಆದರೆ ನಿನ್ನ ತಂದೆಯಾದ ದಾವೀದನನ್ನು ನಾನು ಪ್ರೀತಿಸಿದ್ದರಿಂದ ನೀನು ಜೀವಂತವಾಗಿರುವಾಗಲೇ ನಿನ್ನ ರಾಜ್ಯವನ್ನು ನಿನ್ನಿಂದ ನಾನು ತೆಗೆದುಕೊಳ್ಳುವುದಿಲ್ಲ. ನಿನ್ನ ಮಗನು ರಾಜನಾಗುವವರೆಗೆ ನಾನು ಕಾಯುತ್ತೇನೆ. ನಂತರ ನಾನು ಅದನ್ನು ಅವನಿಂದ ತೆಗೆದುಕೊಳ್ಳುತ್ತೇನೆ.


ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು; ನೀನು ಆಶೀರ್ವಾದದಾಯಕನಾಗುವಂತೆ ಮಾಡುವೆನು.


“ಯೇಸುವೆಂಬ ನಾನೇ, ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ಸಾಕ್ಷಿ ನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ದಾವೀದನ ವಂಶದಲ್ಲಿ ಹುಟ್ಟಿದವನೂ ಪ್ರಕಾಶಮಾನವಾದ ಉದಯನಕ್ಷತ್ರವೂ ಆಗಿದ್ದಾನೆ.”


ಯೆಹೂದ್ಯರು ಸುವಾರ್ತೆಯನ್ನು ಸ್ವೀಕರಿಸಿಕೊಳ್ಳಲಿಲ್ಲ. ಆದ್ದರಿಂದ ಅವರು ದೇವರ ಶತ್ರುಗಳಾಗಿದ್ದಾರೆ. ಯೆಹೂದ್ಯರಲ್ಲದ ಜನರಿಗೆ ಸಹಾಯವಾಗಲೆಂದೇ ಇದಾಯಿತು. ಆದರೆ ಯೆಹೂದ್ಯರು ಇನ್ನೂ ದೇವರಿಂದ ಆರಿಸಲ್ಪಟ್ಟ ಜನರಾಗಿದ್ದಾರೆ. ಆದ್ದರಿಂದ ಆತನು ಪಿತೃಗಳೊಂದಿಗೆ ತಾನು ಮಾಡಿಕೊಂಡ ಒಡಂಬಡಿಕೆಯ ನಿಮಿತ್ತ ಅವರನ್ನು ಪ್ರೀತಿಸುತ್ತಾನೆ.


ಬಳಿಕ, ಯೇಸುವು ಜನರೊಂದಿಗೆ ಮತ್ತೆ ಮಾತಾಡುತ್ತಾ, “ನಾನೇ ಈ ಲೋಕಕ್ಕೆ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ಎಂದಿಗೂ ಜೀವಿಸುವುದಿಲ್ಲ. ಅವನು ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು” ಎಂದು ಹೇಳಿದನು.


ಆತನು ಯೆಹೂದ್ಯರಲ್ಲದ ಜನರಿಗೆ ನಿನ್ನ ಮಾರ್ಗವನ್ನು ತೋರಿಸುವ ಬೆಳಕಾಗಿದ್ದಾನೆ. ಆತನಿಂದ ನಿನ್ನ ಜನರಾದ ಇಸ್ರೇಲರಿಗೆ ಕೀರ್ತಿಯಾಗುವುದು.”


ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.


“ಯೆಹೋವನು ಭೂಮಿಯನ್ನು ಸೃಷ್ಟಿಸಿದನು. ಆತನೇ ಅದನ್ನು ಸುರಕ್ಷಿತವಾಗಿಡುವನು. ಯೆಹೋವನು ಹೀಗೆನ್ನುತ್ತಾನೆ:


ಜೆರುಸಲೇಮ್ ನಗರವು ಜನರ ಹೊಗಳಿಕೆಗೆ ಪಾತ್ರವಾಗುವಂತೆ ಯೆಹೋವನು ಮಾಡುವ ತನಕ ನೀವು ಆತನಿಗೆ ಪ್ರಾರ್ಥಿಸುತ್ತಿರಬೇಕು.


ಆ ಸೈನ್ಯದವರು ತಮ್ಮ ದೇಶಕ್ಕೆ ಸಂದೇಶವಾಹಕರನ್ನು ಕಳುಹಿಸುತ್ತಾರೆ. ಆ ಸಂದೇಶವು ಏನಿರಬಹುದು? “ಫಿಲಿಷ್ಟಿಯರು ಸೋತುಹೋದರು. ಆದರೆ ಯೆಹೋವನು ಚೀಯೋನನ್ನು ಬಲಪಡಿಸಿದ್ದಾನೆ. ಆತನ ಬಡಜನರು ರಕ್ಷಣೆಗಾಗಿ ಅಲ್ಲಿಗೆ ಹೋಗಿದ್ದಾರೆ” ಎಂಬುದೇ ಆ ಸಂದೇಶ.


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


ಚೀಯೋನಿನಲ್ಲಿ ಜನಿಸಿದ ಪ್ರತಿಯೊಬ್ಬರೂ ದೇವರಿಗೆ ಗೊತ್ತು. ಮಹೋನ್ನತನಾದ ದೇವರೇ ಆ ಪಟ್ಟಣವನ್ನು ಕಟ್ಟಿದನು.


ಆದರೆ ಚೆರೂಯಳ ಮಗನಾದ ಅಬೀಷೈ ಆ ಫಿಲಿಷ್ಟಿಯನನ್ನು ಕೊಂದು ದಾವೀದನನ್ನು ರಕ್ಷಿಸಿದನು. ಆಗ ದಾವೀದನ ಜನರು ಅವನಿಂದ ವಿಶೇಷ ಪ್ರಮಾಣವನ್ನು ಮಾಡಿಸಿದರು. ಅವರು ಅವನಿಗೆ, “ನೀನು ನಮ್ಮೊಂದಿಗೆ ಇನ್ನು ಮೇಲೆ ಯುದ್ಧಕ್ಕೆ ಬರಬಾರದು. ನೀನು ಯುದ್ಧಕ್ಕೆ ಹೋಗಿ ಕೊಲ್ಲಲ್ಪಟ್ಟರೆ, ಇಸ್ರೇಲಿನ ಅತ್ಯಂತ ಮಹಾಪುರುಷನನ್ನು ಕಳೆದುಕೊಂಡಂತಾಗುತ್ತದೆ” ಎಂದು ಹೇಳಿದರು.


“ದೇವರಾದ ಯೆಹೋವನು ನಿಮ್ಮ ಪೂರ್ವಿಕರನ್ನು ಪ್ರೀತಿಸಿದ್ದರಿಂದ ನಿಮ್ಮನ್ನು ಆರಿಸಿಕೊಂಡನು. ಆತನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಹೊರತಂದನು.


ನಾನೇ ಇದನ್ನು ನೆರವೇರಿಸುವೆನು; ಯಾಕೆಂದರೆ ನಿನ್ನ ತಂದೆಯಾದ ಅಬ್ರಹಾಮನು ನನ್ನ ಮಾತುಗಳಿಗೆ ವಿಧೇಯನಾಗಿ ನಾನು ಹೇಳಿದಂತೆ ಮಾಡಿ ನನ್ನ ಆಜ್ಞೆಗಳನ್ನು, ಕಟ್ಟಳೆಗಳನ್ನು, ನಿಯಮಗಳನ್ನು ಕೈಕೊಂಡು ನಡೆದನು” ಎಂದು ಹೇಳಿದನು.


ದೇವರು ಆ ಸೀಮೆಯ ನಗರಗಳನ್ನು ನಾಶಮಾಡಿದರೂ ಅಬ್ರಹಾಮನನ್ನು ಜ್ಞಾಪಿಸಿಕೊಂಡು ಲೋಟನ ಪ್ರಾಣವನ್ನು ಉಳಿಸಿದನು; ಆದರೆ ಲೋಟನು ವಾಸಿಸುತ್ತಿದ್ದ ನಗರವನ್ನು ನಾಶಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು