Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:13 - ಪರಿಶುದ್ದ ಬೈಬಲ್‌

13 ಬಾಷನ ಮತ್ತು ಅವನ ಮಗನಾದ ಏಲನ ಪಾಪಗಳೇ ಅದಕ್ಕೆ ಕಾರಣ. ಅವರು ಪಾಪಗಳನ್ನು ಮಾಡಿದರು ಮತ್ತು ಪಾಪಗಳನ್ನು ಮಾಡುವಂತೆ ಇಸ್ರೇಲಿನ ಜನರನ್ನು ಪ್ರೇರೇಪಿಸಿದರು. ಅವರಲ್ಲಿ ಅನೇಕ ವಿಗ್ರಹಗಳಿದ್ದುದರಿಂದ ಯೆಹೋವನು ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದುದರಿಂದ ಆತನು ಪ್ರವಾದಿಯಾದ ಯೇಹುವಿನ ಮುಖಾಂತರವಾಗಿ ಬಾಷನ ಮನೆಗೆ ಆಗುವ ದುರ್ಗತಿಯನ್ನು ಮುಂತಿಳಿಸಿದ್ದನು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಈ ಕಾರಣ ಪ್ರವಾದಿ ಯೇಹುವಿನ ಮುಖಾಂತರ ಸರ್ವೇಶ್ವರ ಬಾಷನ ಮನೆಗೆ ದುರ್ಗತಿಯನ್ನು ಮುಂತಿಳಿಸಿದ್ದರು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನು ಪ್ರವಾದಿಯಾದ ಯೇಹುವಿನ ಮುಖಾಂತರವಾಗಿ ಬಾಷನ ಮನೆಗೆ ದುರ್ಗತಿಯನ್ನು ಮುಂತಿಳಿಸಿದ್ದನು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತಾವು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ್ದರಿಂದಲೂ, ಯೆಹೋವ ದೇವರು ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೆ ವಿರೋಧವಾಗಿ ಹೇಳಿದ ಆತನ ವಾಕ್ಯದ ಪ್ರಕಾರವೇ ಜಿಮ್ರಿಯು ಬಾಷನ ಮನೆಯವರನ್ನೆಲ್ಲಾ ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:13
15 ತಿಳಿವುಗಳ ಹೋಲಿಕೆ  

ಅವರು ದೆವ್ವಗಳನ್ನು ದೇವರನ್ನಾಗಿ ಮಾಡಿ ನನ್ನಲ್ಲಿ ಅಸೂಯೆಯನ್ನು ಉಂಟುಮಾಡಿದರು. ಆ ವಿಗ್ರಹಗಳು ನಿಜವಾದ ದೇವರುಗಳಲ್ಲ! ಅವರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಮಾಡಿ ನನ್ನನ್ನು ಸಿಟ್ಟಿಗೆಬ್ಬಿಸಿದರು. ಆದ್ದರಿಂದ ನಿಜವಾದ ಜನಾಂಗವಲ್ಲದವರಿಂದ ನಾನು ಅವರಲ್ಲಿ ಈರ್ಷೆಯನ್ನು ಉಂಟು ಮಾಡುವೆನು. ಮೂರ್ಖ ಜನಾಂಗದಿಂದ ಅವರನ್ನು ಸಿಟ್ಟಿಗೆಬ್ಬಿಸುವೆನು.


ಆ ದೇವರುಗಳೆಲ್ಲಾ ಶೂನ್ಯಕ್ಕಿಂತಲೂ ಕಡಿಮೆಯೇ. ಅವುಗಳು ಏನೂ ಮಾಡಲಾರವು. ಆ ಪ್ರತಿಮೆಗಳು ಸಂಪೂರ್ಣವಾಗಿ ಬೆಲೆಯಿಲ್ಲದವುಗಳಾಗಿವೆ. ಅವುಗಳು ಖಂಡಿತವಾಗಿಯೂ ನಿಷ್ಪ್ರಯೋಜಕವಾದವುಗಳಾಗಿವೆ.


ರಾಜನಾದ ಯಾರೊಬ್ಬಾಮನು ಅನೇಕ ಪಾಪಗಳನ್ನು ಮಾಡಿದ್ದರಿಂದ ಇದು ಸಂಭವಿಸಿತು. ಇಸ್ರೇಲಿನ ಜನರು ಅನೇಕ ಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಇಸ್ರೇಲಿನ ದೇವರಾದ ಯೆಹೋವನು ಹೆಚ್ಚು ಕೋಪಗೊಳ್ಳುವಂತೆ ಯಾರೊಬ್ಬಾಮನು ಮಾಡಿದ್ದನು.


ವಿಗ್ರಹಗಳು ಕೇವಲ ಪ್ರತಿಮೆಗಳಷ್ಟೇ. ಅವು ನಿಮಗೆ ಸಹಾಯ ಮಾಡಲಾರವು. ಆದ್ದರಿಂದ ಅವುಗಳನ್ನು ಪೂಜಿಸಬೇಡಿ. ವಿಗ್ರಹಗಳು ನಿಮಗೆ ಸಹಾಯ ಮಾಡಲಾರವು ಮತ್ತು ರಕ್ಷಿಸಲಾರವು. ಅವುಗಳಿಂದ ಪ್ರಯೋಜನವೇನೂ ಇಲ್ಲ.


ಹೀಗಿರಲಾಗಿ, ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ತಿನ್ನುವುದರ ಬಗ್ಗೆ ನಾನು ಹೇಳುವುದೇನೆಂದರೆ: ಜಗತ್ತಿನಲ್ಲಿ ವಿಗ್ರಹವು ಕ್ಷುಲ್ಲಕವಾದದ್ದೆಂದು ನಮಗೆ ಗೊತ್ತಿದೆ. ಒಬ್ಬನೇ ಒಬ್ಬ ದೇವರಿದ್ದಾನೆ ಎಂಬುದು ನಮಗೆ ಗೊತ್ತಿದೆ.


“ಕೆಲವು ಜನರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಪೂಜಿಸುತ್ತಾರೆ. ಆದರೆ ಆ ವಿಗ್ರಹಗಳು ಅವರಿಗೆ ಸಹಾಯ ಮಾಡುವುದಿಲ್ಲ.


ಆ ವಿಗ್ರಹಗಳು ನಿಷ್ಪ್ರಯೋಜಕ ವಸ್ತುಗಳಾಗಿವೆ. ಅವು ಅಪಹಾಸ್ಯಕ್ಕೆ ಯೋಗ್ಯವಾದವುಗಳಾಗಿವೆ. ನ್ಯಾಯನಿರ್ಣಯದ ಸಮಯದಲ್ಲಿ ಆ ವಿಗ್ರಹಗಳನ್ನು ನಾಶಪಡಿಸಲಾಗುವುದು.


ಬೇರೆ ಜನಾಂಗಗಳ ಎಲ್ಲಾ ಜನರು ಮಂದಬುದ್ಧಿಯವರಾಗಿದ್ದಾರೆ ಮತ್ತು ಮೂರ್ಖರಾಗಿದ್ದಾರೆ; ಅವರ ಉಪದೇಶಗಳು ನಿಷ್ಪ್ರಯೋಜಕವಾದ ಮರದ ಬೊಂಬೆಗಳಿಂದ ಬಂದವುಗಳಾಗಿವೆ.


ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.


ರಾಜನಾದ ಆಸನು ಯೆಹೂದದ ಅರಸನಾಗಿದ್ದ ಕಾಲದಲ್ಲಿ ಅವನಿಗೆ ಮತ್ತು ಇಸ್ರೇಲಿನ ರಾಜನಾದ ಬಾಷನಿಗೆ ಯಾವಾಗಲೂ ಯುದ್ಧ ನಡೆಯುತ್ತಿತ್ತು.


ಯಾರೊಬ್ಬಾಮನು ಪಾಪವನ್ನು ಮಾಡಿದನು. ನಂತರ ಇಸ್ರೇಲಿನ ಜನರೂ ಪಾಪ ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು. ಆದ್ದರಿಂದ ಇಸ್ರೇಲಿನ ಜನರು ಸೋಲಿಸಲ್ಪಡುವಂತೆ ಯೆಹೋವನು ಅವಕಾಶ ಮಾಡುತ್ತಾನೆ” ಎಂದು ಹೇಳಿದನು.


ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅವನೂ ಮಾಡಿದನು, ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಆದ್ದರಿಂದ ಅವರು ಇಸ್ರೇಲಿನ ದೇವರಾದ ಯೆಹೋವನನ್ನು ಹೆಚ್ಚು ಕೋಪಗೊಳಿಸಿದರು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಆರಾಧಿಸಿದ್ದರಿಂದ ಯೆಹೋವನು ಕೋಪಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು