Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:12 - ಪರಿಶುದ್ದ ಬೈಬಲ್‌

12 ಆ ಸ್ತ್ರೀಯು, “ನನ್ನಲ್ಲಿ ರೊಟ್ಟಿಯಿಲ್ಲವೆಂದು ನಿನ್ನ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಾನು ಪ್ರಮಾಣ ಮಾಡುತ್ತೇನೆ. ನನ್ನ ಮಡಕೆಯಲ್ಲಿ ಸ್ವಲ್ಪ ಹಿಟ್ಟು ಮಾತ್ರ ಇದೆ; ಪಾತ್ರೆಯಲ್ಲಿ ಸ್ವಲ್ಪ ಆಲೀವ್ ಎಣ್ಣೆಯಿದೆ. ಬೆಂಕಿ ಹೊತ್ತಿಸಲು ಸೌದೆ ಚೂರುಗಳನ್ನು ಆಯ್ದುಕೊಳ್ಳವುದಕ್ಕಾಗಿ ನಾನು ಈ ಸ್ಥಳಕ್ಕೆ ಬಂದೆ. ಸೌಧೆಯನ್ನು ನಾನು ಮನೆಗೆ ತೆಗೆದುಕೊಂಡು ಹೋಗಿ, ನಮ್ಮ ಕೊನೆಯ ಊಟವನ್ನು ಸಿದ್ಧಪಡಿಸುತ್ತೇನೆ. ನನ್ನ ಮಗ ಮತ್ತು ನಾನು ಅದನ್ನು ತಿಂದು, ನಂತರ ಹಸಿವಿನಿಂದ ಸಾಯುತ್ತೇವೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಕೆ, “ನಿನ್ನ ದೇವರಾದ ಸರ್ವೇಶ್ವರನಾಣೆ, ನನ್ನ ಹತ್ತಿರ ರೊಟ್ಟಿಯಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆ, ಇವುಗಳ ಹೊರತು ಬೇರೇನೂ ಇಲ್ಲ. ಈಗ ಸೌದೆ ಆಯ್ದುಕೊಂಡು ಹೋಗಿ ನನಗೂ ನನ್ನ ಮಗನಿಗೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ,” ಎಂದು ಉತ್ತರ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಕೆಯು ಅವನಿಗೆ - ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿಯಿರುವದಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಹೆಕ್ಕಿ ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದಕ್ಕೆ ಅವಳು, “ನಿನ್ನ ದೇವರಾದ ಯೆಹೋವ ದೇವರಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ನಾನೂ, ನನ್ನ ಪುತ್ರನೂ ಅದನ್ನು ತಿಂದು ಸತ್ತು ಹೋಗುವಹಾಗೆ ಅದನ್ನು ನನಗೂ, ಅವನಿಗೂ ಸಿದ್ಧಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:12
21 ತಿಳಿವುಗಳ ಹೋಲಿಕೆ  

ಎಲೀಯನು ಗಿಲ್ಯಾದಿನ ತಿಷ್ಬೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು.


ಹಾಗರಳು ಸ್ವಲ್ಪ ದೂರ ನಡೆದುಹೋಗಿ ಕುಳಿತುಕೊಂಡು ತನ್ನ ಮಗನು ಸಾಯುವುದನ್ನು ನೋಡಲಾರದೆ ಅಳತೊಡಗಿದಳು.


ಬರಗಾಲದ ನಿಮಿತ್ತ ಸತ್ತವರಿಗಿಂತಲೂ ಖಡ್ಗಗಳಿಂದ ಹತರಾದವರ ಸಾವೇ ಮೇಲಾಗಿತ್ತು. ಹಸಿವೆಯಿಂದಿದ್ದ ಜನರು ನೋವಿನಿಂದ ನರಳಾಡಿದರು. ಭೂಮಿಯಿಂದ ಆಹಾರವನ್ನು ಪಡೆಯಲಾಗದೆ ಅವರು ಸತ್ತುಹೋದರು.


ನಾನು ನಗರಗಳ ಹೊರಗಡೆ ಹೋದರೆ ಖಡ್ಗಗಳಿಗೆ ಆಹುತಿಯಾಗಿ ಸತ್ತವರು ನನ್ನ ಕಣ್ಣಿಗೆ ಬೀಳುತ್ತಾರೆ. ನಾನು ನಗರಗಳಿಗೆ ಹೋದರೆ ಕ್ಷಾಮದಿಂದ ಬಳಲುವ ಜನರು ನನ್ನ ಕಣ್ಣಿಗೆ ಬೀಳುತ್ತಾರೆ. ಅವರಿಗೆ ತಿನ್ನಲು ಅನ್ನವಿಲ್ಲ. ಯಾಜಕರನ್ನು ಮತ್ತು ಪ್ರವಾದಿಗಳನ್ನು ಪರದೇಶಕ್ಕೆ ತೆಗೆದುಕೊಂಡು ಹೋಗಲಾಗಿದೆ.’”


ಜನರು ಆಣೆ ಮಾಡುವಾಗ ‘ಯೆಹೋವನಾಣೆ’ ಎಂದು ಹೇಳುವರು. ಆದರೆ ಅದು ಕೇವಲ ಬಾಯಿ ಮಾತಷ್ಟೇ ಹೊರತು ಯಥಾರ್ಥವಾದದ್ದಲ್ಲ.”


ನೀನು ಹೀಗೆ ಮಾಡಿದರೆ ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. ‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ. ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.”


ಅದಕ್ಕೆ ಇತ್ತೈಯನು ರಾಜನಿಗೆ, “ಯೆಹೋವನಾಣೆ ಮತ್ತು ನಿನ್ನಾಣೆ, ನಾನಂತೂ ನಿನ್ನೊಂದಿಗೆ ಇರುತ್ತೇನೆ. ನನಗೆ ಜೀವ ಹೋದರೂ ಉಳಿದರೂ ನಿನ್ನೊಂದಿಗೆ ಇರುತ್ತೇನೆ” ಎಂದು ಹೇಳಿದನು.


ಯೆಹೋವನಾಣೆ, ಸೌಲನನ್ನು ಸ್ವತಃ ಯೆಹೋವನೇ ದಂಡಿಸುತ್ತಾನೆ. ಸೌಲನು ಸ್ವಾಭಾವಿಕನಾದ ಮರಣಹೊಂದಬಹುದು ಅಥವಾ ಯುದ್ಧದಲ್ಲಿ ಕೊಲ್ಲಲ್ಪಡಬಹುದು.


ಮುಗ್ದಜನರನ್ನು ಕೊಂದು ಅಪರಾಧಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನ ಆಣೆಯಾಗಿಯೂ ನಿನ್ನ ಆಣೆಯಾಗಿಯೂ ನಿನ್ನ ಶತ್ರುಗಳೂ ನಿನಗೆ ಕೇಡುಮಾಡುವವರೂ ನಾಬಾಲನಂತಾಗಲಿ.


ನಂತರ ಆ ಬಾಣಗಳನ್ನು ಹುಡುಕಿಕೊಂಡು ಬರಲು ಹುಡುಗನನ್ನು ಕಳುಹಿಸುತ್ತೇನೆ. ಎಲ್ಲವೂ ಒಳಿತಾಗಿದ್ದರೆ ನಾನು ಆ ಹುಡುಗನಿಗೆ, ‘ನೀನು ಬಹು ದೂರ ಹೋಗಿರುವೆ! ಬಾಣಗಳು ನನ್ನ ಹತ್ತಿರದಲ್ಲೇ ಇವೆ. ಹಿಂತಿರುಗಿಬಂದು ಅವುಗಳನ್ನು ತೆಗೆದುಕೋ’ ಎಂದು ಹೇಳುತ್ತೇನೆ. ನಾನು ಆ ರೀತಿ ಹೇಳಿದರೆ, ನೀನು ಅಡಗಿದ್ದ ಸ್ಥಳದಿಂದ ಹೊರಗೆ ಬಾ. ಯೆಹೋವನಾಣೆ, ನೀನು ಸುರಕ್ಷಿತನಾಗಿರುವೆ. ನಿನಗೆ ಯಾವ ಅಪಾಯವೂ ಇಲ್ಲ.


ಆದರೆ ದಾವೀದನು, “ನಾನು ನಿನ್ನ ಗೆಳೆಯನೆಂಬುದು ನಿನ್ನ ತಂದೆಗೆ ಚೆನ್ನಾಗಿ ತಿಳಿದಿದೆ. ನಿನ್ನ ತಂದೆಯು, ‘ಯೋನಾತಾನನಿಗೆ ಇದು ತಿಳಿಯಲೇಬಾರದು. ಅವನಿಗೆ ತಿಳಿದುಬಿಟ್ಟರೆ ಅವನು ತನ್ನ ಹೃದಯದಲ್ಲಿ ದುಃಖಪಟ್ಟು ದಾವೀದನಿಗೆ ಹೇಳಿಬಿಡುತ್ತಾನೆ’ ಎಂದುಕೊಂಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ, ನಾನು ಸಾವಿಗೆ ಬಹು ಹತ್ತಿರವಾಗಿದ್ದೇನೆ” ಎಂದು ಹೇಳಿದನು.


ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.


ಇಸ್ರೇಲನ್ನು ರಕ್ಷಿಸುವ ಯೆಹೋವನಾಣೆಯಿಟ್ಟು ಹೇಳುತ್ತಿದ್ದೇನೆ, ನನ್ನ ಸ್ವಂತ ಮಗನಾದ ಯೋನಾತಾನನೇ ಈ ಪಾಪ ಮಾಡಿದ್ದರೂ ಅವನು ಸಾಯಲೇಬೇಕು” ಎಂದು ಹೇಳಿದನು. ಜನರಲ್ಲಿ ಯಾರೊಬ್ಬರೂ ಮಾತನಾಡಲಿಲ್ಲ.


ಆಗ ಸ್ತ್ರೀಯೊಬ್ಬಳು ಬಹು ಬೆಲೆಬಾಳುವ ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು ಊಟಕ್ಕೆ ಕುಳಿತ್ತಿದ್ದ ಯೇಸುವಿನ ತಲೆಯ ಮೇಲೆ ಆ ಸುಗಂಧ ತೈಲವನ್ನು ಸುರಿದಳು.


ಸ್ವಲ್ಪ ಸಮಯದ ನಂತರ, ಇದ್ದ ನೀರೆಲ್ಲಾ ಮುಗಿದುಹೋಯಿತು. ಕುಡಿಯುವುದಕ್ಕೆ ಏನೂ ಇರಲಿಲ್ಲ. ಆದ್ದರಿಂದ ಹಾಗರಳು ತನ್ನ ಮಗನನ್ನು ಪೊದೆಯ ಕೆಳಗೆ ಮಲಗಿಸಿದಳು.


ಆ ಸ್ತ್ರೀಯು ಅವನಿಗೆ ನೀರನ್ನು ತರಲು ಹೋಗುತ್ತಿರುವಾಗ, ಎಲೀಯನು, “ದಯವಿಟ್ಟು ಒಂದು ತುಂಡು ರೊಟ್ಟಿಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು.


ಎಲೀಯನು ಆ ಸ್ತ್ರೀಗೆ, “ಚಿಂತಿಸದಿರು, ಮನೆಗೆ ಹೋಗಿ ನೀನು ಹೇಳಿದಂತೆ ಆಹಾರವನ್ನು ಸಿದ್ಧಪಡಿಸು. ಆದರೆ ನಿನ್ನಲ್ಲಿರುವ ಹಿಟ್ಟಿನಿಂದ ಮೊದಲು ಒಂದು ಚಿಕ್ಕ ರೊಟ್ಟಿಯನ್ನು ಮಾಡು. ಆ ರೊಟ್ಟಿಯನ್ನು ನನಗೆ ತಂದುಕೊಡು; ನಂತರ ನಿನಗೆ ಮತ್ತು ನಿನ್ನ ಮಗನಿಗೆ ಅಡಿಗೆ ಮಾಡಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು