Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:13 - ಪರಿಶುದ್ದ ಬೈಬಲ್‌

13 ಎಲೀಯನು ಆ ಸ್ತ್ರೀಗೆ, “ಚಿಂತಿಸದಿರು, ಮನೆಗೆ ಹೋಗಿ ನೀನು ಹೇಳಿದಂತೆ ಆಹಾರವನ್ನು ಸಿದ್ಧಪಡಿಸು. ಆದರೆ ನಿನ್ನಲ್ಲಿರುವ ಹಿಟ್ಟಿನಿಂದ ಮೊದಲು ಒಂದು ಚಿಕ್ಕ ರೊಟ್ಟಿಯನ್ನು ಮಾಡು. ಆ ರೊಟ್ಟಿಯನ್ನು ನನಗೆ ತಂದುಕೊಡು; ನಂತರ ನಿನಗೆ ಮತ್ತು ನಿನ್ನ ಮಗನಿಗೆ ಅಡಿಗೆ ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಎಲೀಯನು ಆಕೆಗೆ, “ಹೆದರಬೇಡ, ನೀನು ಹೇಳಿದಂತೆಯೇ ಮಾಡು. ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ. ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಎಲೀಯನು, “ಹೆದರಬೇಡ, ನೀನು ಹೇಳಿದಂತೆ ಮಾಡು; ಆದರೆ ಮೊದಲು ಅದರಿಂದ ನನಗೆ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ; ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಎಲೀಯನು ಆಕೆಗೆ - ಹೆದರಬೇಡ; ನೀನು ಹೇಳಿದಂತೆ ಮಾಡು, ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ; ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಎಲೀಯನು ಅವಳಿಗೆ, “ಭಯಪಡಬೇಡ, ನೀನು ಹೇಳಿದ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿಮಾಡಿ, ನನ್ನ ಬಳಿಗೆ ತೆಗೆದುಕೊಂಡು ಬಾ. ತರುವಾಯ ನಿನಗೂ, ನಿನ್ನ ಮಗನಿಗೂ ಸಿದ್ಧಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:13
19 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.


ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.


ದೇವರ ದೂತನು, ‘ಪೌಲನೇ, ಭಯಪಡಬೇಡ! ನೀನು ಸೀಸರನ ಮುಂದೆ ನಿಂತುಕೊಳ್ಳಬೇಕು. ನಿನ್ನೊಂದಿಗೆ ನೌಕಾಯಾನ ಮಾಡತ್ತಿರುವ ಎಲ್ಲಾ ಜನರ ಪ್ರಾಣಗಳನ್ನು ಉಳಿಸುವುದಾಗಿ ದೇವರು ನಿನಗೆ ವಾಗ್ದಾನವನ್ನು ಮಾಡಿದ್ದಾನೆ’ ಎಂದು ಹೇಳಿದನು.


ದೇವದೂತನು ಆ ಸ್ತ್ರೀಯರಿಗೆ, “ಹೆದರಬೇಡಿ, ಶಿಲುಬೆಗೇರಿಸಲ್ಪಟ್ಟ ಯೇಸುವನ್ನು ನೀವು ಹುಡುಕುತ್ತಿದ್ದೀರೆಂಬುದು ನನಗೆ ತಿಳಿದಿದೆ.


ನಿನ್ನ ದೇವರಾದ ಯೆಹೋವನು ನಾನೇ. ನಾನು ನಿನ್ನ ಬಲಗೈಯನ್ನು ಹಿಡಿದಿದ್ದೇನೆ. ‘ನೀನು ಹೆದರಬೇಡ, ನಾನೇ ನಿನಗೆ ಸಹಾಯ ಮಾಡುತ್ತೇನೆ’ ಎಂದು ಹೇಳುತ್ತಿದ್ದೇನೆ.


ನಿನಗೆ ಬರುವ ಆದಾಯದಿಂದಲೂ ಬೆಳೆಯ ಪ್ರಥಮ ಫಲದಿಂದಲೂ ಯೆಹೋವನನ್ನು ಸನ್ಮಾನಿಸು.


ನೀವು ಈ ಯುದ್ಧದಲ್ಲಿ ಹೋರಾಡುವ ಅವಶ್ಯವಿಲ್ಲ. ನಿಮ್ಮ ಸ್ಥಳಗಳಲ್ಲಿ ಸ್ಥಿರವಾಗಿ ನಿಂತುಕೊಂಡಿರಿ. ಯೆಹೋವನ ರಕ್ಷಣಾಕಾರ್ಯವನ್ನು ನೀವು ನೋಡುವಿರಿ. ಭಯಪಡಬೇಡಿರಿ; ಚಿಂತೆಗೊಳಗಾಗಬೇಡಿರಿ; ಯೆಹೋವನು ನಿಮ್ಮೊಂದಿಗಿದ್ದಾನೆ. ಆದ್ದರಿಂದ ನೀವು ನಾಳೆ ಹೋಗಿ ಆ ಸೈನ್ಯವನ್ನು ಎದುರಿಸಿರಿ’” ಎಂದು ಹೇಳಿದನು.


ಎಲೀಷನು, “ನೀನು ಹೆದರದಿರು! ನಮಗಾಗಿ ಯುದ್ಧಮಾಡುವ ಸೇನೆಯು ಅರಾಮ್ಯರಿಗಾಗಿ ಯುದ್ಧಮಾಡುವ ಸೇನೆಗಿಂತ ಬಹಳ ಹೆಚ್ಚಿನದಾಗಿದೆ!” ಎಂದು ಹೇಳಿದನು.


ಆದರೆ ಮೋಶೆ ಆ ಜನರಿಗೆ, “ಭಯಪಡಬೇಡಿರಿ! ಓಡಿಹೋಗಬೇಡಿರಿ! ಇಲ್ಲೇ ಇದ್ದು ಯೆಹೋವನು ಈ ದಿನ ನಿಮ್ಮನ್ನು ರಕ್ಷಿಸುವುದನ್ನು ನೋಡಿರಿ. ಈ ದಿನದ ನಂತರ ನೀವು ಇನ್ನೆಂದಿಗೂ ಈ ಈಜಿಪ್ಟಿನವರನ್ನು ನೋಡುವುದಿಲ್ಲ.


ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಿದನು. ಇಸಾಕನನ್ನು ಯಜ್ಞವಾಗಿ ಸಮರ್ಪಿಸೆಂದು ದೇವರು ಅವನಿಗೆ ಹೇಳಿದನು. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ ವಿಧೇಯನಾದನು. ದೇವರು ಅವನಿಗೆ, “ನಿನ್ನ ಸಂತತಿಗಳವರು ಇಸಾಕನ ಮೂಲಕ ಬರುವರು” ಎಂದು ಮೊದಲೇ ವಾಗ್ದಾನ ಮಾಡಿದ್ದನು. ಆದರೂ ತನ್ನ ಒಬ್ಬನೇ ಮಗನನ್ನು ಅರ್ಪಿಸಲು ಅವನು ಸಿದ್ಧನಾಗಿದ್ದನು.


“ಯಾರಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆ ಅಥವಾ ತಾಯಿಯನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. ಯಾವನಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಇಲ್ಲವೆ ಮಗಳನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ.


ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.


ಆ ಸ್ತ್ರೀಯು, “ನನ್ನಲ್ಲಿ ರೊಟ್ಟಿಯಿಲ್ಲವೆಂದು ನಿನ್ನ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಾನು ಪ್ರಮಾಣ ಮಾಡುತ್ತೇನೆ. ನನ್ನ ಮಡಕೆಯಲ್ಲಿ ಸ್ವಲ್ಪ ಹಿಟ್ಟು ಮಾತ್ರ ಇದೆ; ಪಾತ್ರೆಯಲ್ಲಿ ಸ್ವಲ್ಪ ಆಲೀವ್ ಎಣ್ಣೆಯಿದೆ. ಬೆಂಕಿ ಹೊತ್ತಿಸಲು ಸೌದೆ ಚೂರುಗಳನ್ನು ಆಯ್ದುಕೊಳ್ಳವುದಕ್ಕಾಗಿ ನಾನು ಈ ಸ್ಥಳಕ್ಕೆ ಬಂದೆ. ಸೌಧೆಯನ್ನು ನಾನು ಮನೆಗೆ ತೆಗೆದುಕೊಂಡು ಹೋಗಿ, ನಮ್ಮ ಕೊನೆಯ ಊಟವನ್ನು ಸಿದ್ಧಪಡಿಸುತ್ತೇನೆ. ನನ್ನ ಮಗ ಮತ್ತು ನಾನು ಅದನ್ನು ತಿಂದು, ನಂತರ ಹಸಿವಿನಿಂದ ಸಾಯುತ್ತೇವೆ” ಎಂದು ಹೇಳಿದಳು.


ಇಸ್ರೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ಆ ಮಡಕೆಯಲ್ಲಿರುವ ಹಿಟ್ಟು ಎಂದೆಂದಿಗೂ ಖಾಲಿಯಾಗುವುದಿಲ್ಲ. ಆ ಪಾತ್ರೆಯಲ್ಲಿ ಯಾವಾಗಲೂ ಎಣ್ಣೆಯಿರುತ್ತದೆ. ಯೆಹೋವನು ಭೂಮಿಯ ಮೇಲೆ ಮಳೆಯನ್ನು ಸುರಿಸುವ ತನಕ ಇದು ಹೀಗೆಯೇ ಮುಂದುವರಿಯುತ್ತದೆ’” ಎಂದು ಹೇಳಿದನು.


ಆ ರಾತ್ರಿ ಯೆಹೋವನು ಇಸಾಕನಿಗೆ ಪ್ರತ್ಯಕ್ಷನಾಗಿ, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು. ಭಯಪಡಬೇಡ, ನಾನು ನಿನ್ನ ಸಂಗಡವಿದ್ದೇನೆ. ನಾನು ನಿನ್ನನ್ನು ಆಶೀರ್ವದಿಸುವೆನು. ನಾನು ನಿನ್ನ ಕುಟುಂಬವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಸೇವಕನಾದ ಅಬ್ರಹಾಮನಿಗಾಗಿಯೇ ಇದನ್ನು ಮಾಡುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು