Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:15 - ಪರಿಶುದ್ದ ಬೈಬಲ್‌

15 ಆ ಸ್ತ್ರೀಯು ತನ್ನ ಮನೆಗೆ ಹೋದಳು. ಎಲೀಯನು ಹೇಳಿದಂತೆ ಆಕೆಯು ಮಾಡಿದಳು. ಎಲೀಯನು, ಆ ಸ್ತ್ರೀಯು ಮತ್ತು ಅವಳ ಮಗನು ಅನೇಕ ದಿನಗಳಿಗಾಗುವಷ್ಟು ಆಹಾರವನ್ನು ಹೊಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ, ಆಕೆಯ ಮನೆಯವರೂ ಮತ್ತು ಎಲೀಯನು ಅದನ್ನು ಅನೇಕ ದಿನಗಳವರೆಗೆ ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಕೆ ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ ಆಕೆಯ ಮನೆಯವರೂ ಎಲೀಯನೂ ಅದನ್ನು ಅನೇಕ ದಿವಸಗಳವರೆಗೆ ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು; ಆಕೆಯೂ ಆಕೆಯ ಮನೆಯವರೂ ಎಲೀಯನೂ ಅದನ್ನು ಅನೇಕ ದಿವಸಗಳವರೆಗೆ ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿದಳು. ಎಲೀಯನಿಗೂ, ಮಹಿಳೆಗೂ, ಆಕೆಯ ಮಗನಿಗೂ ಪ್ರತಿದಿನ ಸಾಕಾಗುವಷ್ಟು ಆಹಾರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:15
13 ತಿಳಿವುಗಳ ಹೋಲಿಕೆ  

ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಿದನು. ಇಸಾಕನನ್ನು ಯಜ್ಞವಾಗಿ ಸಮರ್ಪಿಸೆಂದು ದೇವರು ಅವನಿಗೆ ಹೇಳಿದನು. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ ವಿಧೇಯನಾದನು. ದೇವರು ಅವನಿಗೆ, “ನಿನ್ನ ಸಂತತಿಗಳವರು ಇಸಾಕನ ಮೂಲಕ ಬರುವರು” ಎಂದು ಮೊದಲೇ ವಾಗ್ದಾನ ಮಾಡಿದ್ದನು. ಆದರೂ ತನ್ನ ಒಬ್ಬನೇ ಮಗನನ್ನು ಅರ್ಪಿಸಲು ಅವನು ಸಿದ್ಧನಾಗಿದ್ದನು.


ಯೇಸು ತನ್ನ ಶಿಷ್ಯರನ್ನು ಬಳಿಗೆ ಕರೆದು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಕಾಣಿಕೆ ಹಾಕಿದವರೆಲ್ಲರಲ್ಲಿ ಈ ಬಡವಿಧವೆ ಹೆಚ್ಚು ಹಾಕಿದ್ದಾಳೆ.


ಆಗ ಯೇಸು, “ಅಮ್ಮಾ, ನಿನ್ನ ನಂಬಿಕೆ ದೊಡ್ಡದು. ನಿನ್ನ ಕೋರಿಕೆಯನ್ನು ನಾನು ಈಡೇರಿಸುತ್ತೇನೆ” ಎಂದನು. ಆ ಕ್ಷಣದಲ್ಲೇ ಆಕೆಯ ಮಗಳು ಗುಣವಾದಳು.


ದೇವರು ಆಜ್ಞಾಪಿಸಿದಂತೆಯೇ ನೋಹನು ಮಾಡಿದನು.


ಯೇಸು ಮಾರ್ಥಳಿಗೆ, “ನಾನು ನಿನಗೆ ಹೇಳಿದ್ದನ್ನು ಜ್ಞಾಪಿಸಿಕೊಳ್ಳುವಿಯಾ? ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಿದೆನು” ಎಂದನು.


ಮರುದಿನ ಮುಂಜಾನೆ ಯೆಹೋಷಾಫಾಟನ ಸೈನ್ಯವು ತೆಕೋವದ ಅರಣ್ಯಕ್ಕೆ ಹೊರಟಿತು. ಅವರು ಹೊರಡುವ ಮುಂಚೆ ಯೆಹೋಷಾಫಾಟನು ಎದ್ದುನಿಂತು, “ಜೆರುಸಲೇಮಿನವರೇ, ಯೆಹೂದ ಪ್ರಾಂತ್ಯದವರೇ, ನನ್ನ ಮಾತನ್ನು ಕೇಳಿರಿ. ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಡಿರಿ. ಆಗ ನೀವು ಸ್ಥಿರಗೊಳ್ಳುವಿರಿ. ಯೆಹೋವನ ಪ್ರವಾದಿಗಳ ಮೇಲೆ ಭರವಸವಿಡಿರಿ; ಆಗ ನೀವು ಜಯಗಳಿಸುವಿರಿ” ಎಂದು ಹೇಳಿದನು.


ಮುಂಜಾನೆ ಅಬ್ರಹಾಮನು ಎದ್ದು ಕತ್ತೆಗೆ ತಡಿ ಹಾಕಿಸಿದನು; ಇಸಾಕನನ್ನೂ ಅವನೊಂದಿಗೆ ಇಬ್ಬರು ಸೇವಕರನ್ನೂ ಕರೆದುಕೊಂಡನು; ಯಜ್ಞಕ್ಕಾಗಿ ಕಟ್ಟಿಗೆಯನ್ನು ತೆಗೆದುಕೊಂಡನು. ಬಳಿಕ ದೇವರು ಹೇಳಿದ್ದ ಸ್ಥಳಕ್ಕೆ ಅವರು ಹೊರಟರು.


ಆದ್ದರಿಂದ ಅಬ್ರಾಮನು ಯೆಹೋವನಿಗೆ ವಿಧೇಯನಾದನು. ಅವನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟನು. ಅವನೊಡನೆ ಲೋಟನು ಸಹ ಹೋದನು. ಆಗ ಅಬ್ರಾಮನಿಗೆ ಎಪ್ಪತ್ತೈದು ವರ್ಷ ವಯಸ್ಸಾಗಿತ್ತು.


ಇಸ್ರೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ಆ ಮಡಕೆಯಲ್ಲಿರುವ ಹಿಟ್ಟು ಎಂದೆಂದಿಗೂ ಖಾಲಿಯಾಗುವುದಿಲ್ಲ. ಆ ಪಾತ್ರೆಯಲ್ಲಿ ಯಾವಾಗಲೂ ಎಣ್ಣೆಯಿರುತ್ತದೆ. ಯೆಹೋವನು ಭೂಮಿಯ ಮೇಲೆ ಮಳೆಯನ್ನು ಸುರಿಸುವ ತನಕ ಇದು ಹೀಗೆಯೇ ಮುಂದುವರಿಯುತ್ತದೆ’” ಎಂದು ಹೇಳಿದನು.


ಮಡಕೆಯಲ್ಲಿದ್ದ ಹಿಟ್ಟು ಮತ್ತು ಪಾತ್ರೆಯಲ್ಲಿದ್ದ ಎಣ್ಣೆ ಎಂದೆಂದಿಗೂ ಖಾಲಿಯಾಗಲಿಲ್ಲ. ಯೆಹೋವನು ಎಲೀಯನ ಮೂಲಕ ಹೇಳಿದ್ದಂತೆಯೇ ಇದು ಸಂಭವಿಸಿತು.


ಆ ಸ್ತ್ರೀಯು ಎಲೀಷನ ಬಳಿಯಿಂದ ತನ್ನ ಮನೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿದಳು. ಅವಳು ಮತ್ತು ಅವಳ ಮಕ್ಕಳು ಮಾತ್ರ ಮನೆಯಲ್ಲಿದ್ದರು. ಅವಳ ಮಕ್ಕಳು ಪಾತ್ರೆಗಳನ್ನು ಅವಳ ಬಳಿಗೆ ತಂದರು; ಅವಳು ಆ ಪಾತ್ರೆಗಳಿಗೆ ಎಣ್ಣೆಯನ್ನು ಸುರಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು