Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:17 - ಪರಿಶುದ್ದ ಬೈಬಲ್‌

17 ಸ್ವಲ್ಪಕಾಲದ ತರುವಾಯ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಅವನಿಗೆ ರೋಗವು ಹೆಚ್ಚಾಗುತ್ತಲೇ ಇತ್ತು. ಕೊನೆಗೆ ಆ ಬಾಲಕನು ಉಸಿರಾಡುವುದನ್ನೇ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕೆಲವು ದಿನಗಳಾದನಂತರ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಹುಡುಗನಿಗೆ ರೋಗವು ಹೆಚ್ಚಾಗಿದ್ದುದರಿಂದ ಉಸಿರಾಡುವುದು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕೆಲವು ದಿನಗಳಾದ ನಂತರ ಆ ಮನೆಯಜಮಾನಿಯ ಮಗನು ಅಸ್ಪಸ್ಥನಾದನು; ಅವನ ರೋಗ ಹೆಚ್ಚುತ್ತಾ ಕೊನೆಗೆ ಉಸಿರಾಡುವುದು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕೆಲವು ದಿನಗಳಾದನಂತರ ಮನೆಯ ಯಜಮಾನಿಯಾದ ಆ ಸ್ತ್ರೀಯ ಮಗನು ಅಸ್ವಸ್ಥನಾದನು; ಹುಡುಗನಿಗೆ ರೋಗವು ಹೆಚ್ಚಾದದರಿಂದ ಉಸಿರಾಡುವುದು ನಿಂತು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಸ್ವಲ್ಪ ಸಮಯದ ತರುವಾಯ, ಮನೆಯ ಯಜಮಾನಿಯಾದ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಕೊನೆಗೆ ರೋಗವು ಹೆಚ್ಚಾಗಿದ್ದುದರಿಂದ ಉಸಿರಾಡುವುದು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:17
16 ತಿಳಿವುಗಳ ಹೋಲಿಕೆ  

ನನ್ನ ಸ್ನೇಹಿತರೇ, ನೀವು ಈಗ ಅನುಭವಿಸುತ್ತಿರುವ ಸಂಕಟಗಳ ವಿಷಯದಲ್ಲಿ ಆಶ್ಚರ್ಯಪಡದಿರಿ. ಅವು ನಿಮ್ಮ ನಂಬಿಕೆಯನ್ನು ಪರೀಕ್ಷಿಸುತ್ತಿವೆ. ವಿಪರೀತವಾದದ್ದು ನಿಮಗೆ ಸಂಭವಿಸುತ್ತಿದೆಯೆಂದು ಯೋಚಿಸದಿರಿ.


ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.


ಒಬ್ಬ ವ್ಯಕ್ತಿಯ ದೇಹದಲ್ಲಿ ಆತ್ಮವಿಲ್ಲದಿದ್ದರೆ, ಅವನ ದೇಹವು ಸತ್ತದ್ದೇ. ಅದೇ ರೀತಿಯಲ್ಲಿ ಕ್ರಿಯೆಯಿಲ್ಲದ ನಂಬಿಕೆಯು ಸತ್ತದ್ದೇ.


ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ.


ಆದ್ದರಿಂದ ಯೇಸು, “ಲಾಜರನು ಸತ್ತುಹೋಗಿದ್ದಾನೆ.


ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.


ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.


ನೀನು ಅವುಗಳಿಗೆ ವಿಮುಖನಾದಾಗ ಅವು ಭಯಗೊಳ್ಳುತ್ತವೆ. ಅವುಗಳ ಶ್ವಾಸವು ಹೋಗಿ ಬಲಹೀನತೆಯಿಂದ ಸತ್ತು ಮತ್ತೆ ಮಣ್ಣಾಗುತ್ತವೆ.


ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು, ತನ್ನ ಆತ್ಮವನ್ನೂ ಜೀವದ ಉಸಿರನ್ನೂ ಜನರಿಂದ ತೆಗೆದುಕೊಳ್ಳುವುದಾದರೆ,


ಪ್ರತಿಯೊಂದು ಪ್ರಾಣಿಯ ಜೀವವೂ ಪ್ರತಿಯೊಬ್ಬ ವ್ಯಕ್ತಿಯ ಆತ್ಮವೂ ದೇವರ ಕೈಯಲ್ಲಿವೆ.


ಮಡಕೆಯಲ್ಲಿದ್ದ ಹಿಟ್ಟು ಮತ್ತು ಪಾತ್ರೆಯಲ್ಲಿದ್ದ ಎಣ್ಣೆ ಎಂದೆಂದಿಗೂ ಖಾಲಿಯಾಗಲಿಲ್ಲ. ಯೆಹೋವನು ಎಲೀಯನ ಮೂಲಕ ಹೇಳಿದ್ದಂತೆಯೇ ಇದು ಸಂಭವಿಸಿತು.


ಆ ಸ್ತ್ರೀಯು ಎಲೀಯನಿಗೆ, “ನೀನು ದೇವಮನುಷ್ಯ. ನೀನು ನನಗೆ ಸಹಾಯಮಾಡಲು ಬಂದಿರುವೆಯಾ? ಅಥವಾ ನನ್ನ ಪಾಪಗಳನ್ನೆಲ್ಲ ನನ್ನ ನೆನಪಿಗೆ ತಂದುಕೊಳ್ಳುವಂತೆ ಮಾಡಲು, ನನ್ನ ಮಗನಿಗೆ ಸಾವನ್ನು ಉಂಟುಮಾಡುವುದಕ್ಕಾಗಿಯೇ ಬಂದಿರುವೆಯಾ?” ಎಂದು ಕೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು