Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:24 - ಪರಿಶುದ್ದ ಬೈಬಲ್‌

24 ಆ ಸ್ತ್ರೀಯು, “ಈಗ ನಿಜವಾಗಿಯೂ ನೀನು ದೇವಮನುಷ್ಯನೆಂಬುದು ನನಗೆ ತಿಳಿಯಿತು. ಯೆಹೋವನು ನಿನ್ನ ಮೂಲಕ ನಿಜವಾಗಿಯೂ ಮಾತಾಡುತ್ತಾನೆಂಬುದು ನನಗೆ ತಿಳಿದಿದೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಆಕೆಯು ಎಲೀಯನಿಗೆ, “ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಿಂದ ಬಂದ ಯೆಹೋವನ ಮಾತು ಸತ್ಯವೆಂದೂ ಇದರಿಂದ ನನಗೆ ಗೊತ್ತಾಯಿತು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಗ ಆಕೆ, “ನೀವು ದೈವಪುರುಷರೆಂದೂ ನಿಮ್ಮ ಬಾಯಿಂದ ಬಂದ ಸರ್ವೇಶ್ವರನ ಮಾತು ಸತ್ಯವೆಂದೂ ಈಗ ನನಗೆ ಗೊತ್ತಾಯಿತು,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಗ ಆಕೆಯು ಅವನಿಗೆ - ನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಂದ ಬಂದ ಯೆಹೋವನ ಮಾತು ಸತ್ಯವೆಂದೂ ಈಗ ನನಗೆ ಗೊತ್ತಾಯಿತು ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಸ್ತ್ರೀಯು ಎಲೀಯನಿಗೆ, “ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಲ್ಲಿರುವ ಯೆಹೋವ ದೇವರ ವಾಕ್ಯವು ಸತ್ಯವೆಂದೂ ಇದರಿಂದ ಈಗ ತಿಳಿದಿದ್ದೇನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:24
14 ತಿಳಿವುಗಳ ಹೋಲಿಕೆ  

ನಿನಗೆ ಎಲ್ಲಾ ಸಂಗತಿಗಳು ತಿಳಿದಿವೆಯೆಂದು ನಮಗೆ ಈಗ ತಿಳಿಯಿತು. ಒಬ್ಬನು ಪ್ರಶ್ನೆಯನ್ನು ಕೇಳುವುದಕ್ಕಿಂತ ಮೊದಲೇ ನೀನು ಅವನ ಪ್ರಶ್ನೆಗೆ ಉತ್ತರ ಕೊಡಬಲ್ಲೆ. ಇದರಿಂದಾಗಿ, ನೀನು ದೇವರಿಂದ ಬಂದವನೆಂದು ನಾವು ನಂಬುತ್ತೇವೆ” ಎಂದು ಹೇಳಿದರು.


ಒಂದು ರಾತ್ರಿ ನಿಕೊದೇಮನು ಯೇಸುವಿನ ಬಳಿಗೆ ಬಂದನು. ನಿಕೊದೇಮನು, “ಗುರುವೇ, ನೀನು ದೇವರಿಂದ ಕಳುಹಿಸಲ್ಪಟ್ಟ ಉಪದೇಶಕನೆಂದು ನಮಗೆ ಗೊತ್ತಿದೆ. ನೀನು ಮಾಡುವ ಈ ಸೂಚಕಕಾರ್ಯಗಳನ್ನು ದೇವರ ಸಹಾಯದಿಂದಲ್ಲದೆ ಯಾರೂ ಮಾಡಲಾರರು” ಎಂದು ಹೇಳಿದನು.


ಯೇಸು ಮಾಡಿದ ಮೊದಲನೆಯ ಅದ್ಭುತಕಾರ್ಯವಿದು. ಯೇಸು ಇದನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹತ್ವವನ್ನು ತೋರಿದನು. ಆತನ ಶಿಷ್ಯರೂ ಆತನಲ್ಲಿ ನಂಬಿಕೆ ಇಟ್ಟರು.


ನಾನು ನಿಮಗೆ ಏಕೆ ಬರೆಯಬೇಕು? ನೀವು ಸತ್ಯವನ್ನು ತಿಳಿದಿಲ್ಲವೆಂದು ನಾನು ಬರೆಯಬೇಕೇ? ಇಲ್ಲ! ನೀವು ಸತ್ಯವನ್ನು ತಿಳಿದಿರುವುದರಿಂದ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ಸತ್ಯದಿಂದ ಯಾವ ಸುಳ್ಳೂ ಬರುವುದಿಲ್ಲ ಎಂಬುದು ನಿಮಗೆ ತಿಳಿದಿದೆ.


ನೀವು ದೇವರ ಸಂದೇಶವನ್ನು ಸ್ವೀಕರಿಸಿಕೊಂಡದ್ದಕ್ಕಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನೀವು ಆ ಸಂದೇಶವನ್ನು ನಮ್ಮಿಂದ ಕೇಳಿ, ಅದನ್ನು ದೇವರ ವಾಕ್ಯದಂತೆ ಒಪ್ಪಿಕೊಂಡಿರೇ ಹೊರತು ಮಾನವನ ವಾಕ್ಯಗಳೆಂದಲ್ಲ. ಅದು ನಿಜವಾಗಿಯೂ ದೇವರ ಸಂದೇಶ. ಆ ಸಂದೇಶವು ನಂಬುವವರಾದ ನಿಮ್ಮಲ್ಲಿ ಕಾರ್ಯಮಾಡುತ್ತದೆ.


ಬೇರೆ ಯಾವ ವ್ಯಕ್ತಿಯೂ ಹಿಂದೆಂದೂ ಮಾಡಿಲ್ಲದ ಕಾರ್ಯಗಳನ್ನು ಮಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ನಾನು ಮಾಡಿದ ಆ ಕಾರ್ಯಗಳನ್ನು ಅವರು ನೋಡಿದ್ದಾರೆ. ಹೀಗಿದ್ದರೂ ಅವರು ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸುತ್ತಾರೆ.


ನೀನು ಯಾವಾಗಲೂ ನನಗೆ ಕಿವಿಗೊಡುವೆ ಎಂಬುದು ನನಗೆ ತಿಳಿದಿದೆ. ಆದರೆ ಇಲ್ಲಿ ನನ್ನ ಸುತ್ತಲೂ ನೆರೆದಿರುವ ಜನರಿಗೋಸ್ಕರವಾಗಿ ನಾನು ಈ ಸಂಗತಿಗಳನ್ನು ಹೇಳಿದೆನು. ನೀನೇ ನನ್ನನ್ನು ಕಳುಹಿಸಿರುವುದಾಗಿ ಅವರು ನಂಬಬೇಕೆಂದು ನಾನು ಬಯಸುತ್ತೇನೆ” ಎಂದನು.


ಆದರೆ ನಾನು ಅಲ್ಲಿ ಇಲ್ಲದಿದ್ದ ಕಾರಣ ಸಂತೋಷಿಸುತ್ತೇನೆ. ನಿಮ್ಮ ವಿಷಯದಲ್ಲಿಯೂ ನಾನು ಸಂತೋಷಪಡುತ್ತೇನೆ. ಏಕೆಂದರೆ, ಆಗ ನೀವು ನನ್ನಲ್ಲಿ ನಂಬಿಕೆ ಇಡುವಿರಿ. ಬನ್ನಿ, ಅವನ ಬಳಿಗೆ ಹೋಗೋಣ” ಎಂದು ಸ್ವಷ್ಟವಾಗಿ ಹೇಳಿದನು.


ಪ್ರಸಂಗಿಯು ಸರಿಯಾದ ಪದಗಳನ್ನು ಪ್ರಯಾಸದಿಂದ ಕಂಡುಹಿಡಿದು ಬಳಸಿದನು; ಸತ್ಯವೂ ಭರವಸೆಗೆ ಯೋಗ್ಯವೂ ಆದ ಉಪದೇಶಗಳನ್ನು ಬರೆದನು.


ಎಲೀಯನು ಆ ಬಾಲಕನನ್ನು ಕೆಳ ಅಂತಸ್ತಿಗೆ ಕರೆದೊಯ್ದನು. ಎಲೀಯನು ಬಾಲಕನನ್ನು ಅವನ ತಾಯಿಗೆ ಒಪ್ಪಿಸಿ, “ನಿನ್ನ ಮಗ ಬದುಕಿದ್ದಾನೆ, ನೋಡು” ಎಂದು ಹೇಳಿದನು.


ಆದರೆ ಯೆಹೋವನು ದೇವರ ಮನುಷ್ಯನೊಬ್ಬನೊಡನೆ ಮಾತನಾಡಿದನು. ಅವನ ಹೆಸರು ಶೆಮಾಯ. ಯೆಹೋವನು,


ಆ ಸ್ತ್ರೀಯು ತನ್ನ ಗಂಡನಿಗೆ, “ನೋಡಿ, ನಮ್ಮ ಮನೆಯ ದಾರಿಯಲ್ಲಿ ಹಾದುಹೋಗುವ ಎಲೀಷನು ಪರಿಶುದ್ಧನೂ ದೇವಮನುಷ್ಯನೂ ಎಂದು ನನಗೆ ತೋರುತ್ತದೆ.


ಎಲೀಷನು ಆ ಸ್ತ್ರೀಗೆ, “ಮುಂದಿನ ವಸಂತಮಾಸದ ಈ ಕಾಲಕ್ಕೆ ನೀನು ನಿನ್ನ ಗಂಡುಮಗುವನ್ನು ಅಪ್ಪಿಕೊಂಡಿರುವೆ” ಎಂದು ಹೇಳಿದನು. ಆ ಸ್ತ್ರೀಯು, “ದೇವಮನುಷ್ಯನೇ, ಹೀಗೆ ಹೇಳಿ ನಿನ್ನ ಸೇವಕಿಯನ್ನು ವಂಚಿಸಬೇಡ” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು