Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:4 - ಪರಿಶುದ್ದ ಬೈಬಲ್‌

4 ನೀನು ಆ ಹಳ್ಳದ ನೀರನ್ನು ಕುಡಿಯಬಹುದು. ಆ ಸ್ಥಳದಲ್ಲಿರುವ ನಿನಗೆ ಆಹಾರವನ್ನು ತಂದುಕೊಡಬೇಕೆಂದು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಹಳ್ಳದ ನೀರು ನಿನಗೆ ಕುಡಿಯುವ ಪಾನವಾಗಿರುವುದು. ನಿನಗೆ ಆಹಾರ ತಂದು ಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಹಳ್ಳದ ನೀರು ನಿನಗೆ ಪಾನವಾಗಿರುವುದು; ನಿನಗೆ ಆಹಾರ ತಂದುಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಹಳ್ಳದ ನೀರು ನಿನಗೆ ಪಾನವಾಗಿರುವದು; ನಿನಗೆ ಆಹಾರತಂದುಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅಲ್ಲಿ ನೀನು ಆ ಹೊಳೆಯ ನೀರನ್ನು ಕುಡಿಯುವೆ. ಅಲ್ಲಿ ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:4
15 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “‘ಮನುಷ್ಯನು ಬದುಕುವುದು ಕೇವಲ ರೊಟ್ಟಿಯಿಂದಲ್ಲ, ಮನುಷ್ಯನ ಜೀವಿತವು ದೇವರು ಹೇಳುವ ಪ್ರತಿಯೊಂದು ಮಾತನ್ನು ಅವಲಂಬಿಸಿಕೊಂಡಿದೆ’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂಬುದಾಗಿ ಉತ್ತರಕೊಟ್ಟನು.


“ಚೀದೋನ್ಯರ ಚಾರೆಪ್ತಗೆ ಹೋಗಿ ಅಲ್ಲಿ ವಾಸಮಾಡು. ಆ ಸ್ಥಳದಲ್ಲಿ ಒಬ್ಬ ವಿಧವೆಯು ವಾಸಿಸುತ್ತಾಳೆ. ನಿನಗೆ ಆಹಾರವನ್ನು ಕೊಡುವಂತೆ ಅವಳಿಗೆ ನಾನು ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.


ದೇವರು ಪ್ರಾಣಿಗಳಿಗೂ ಪಕ್ಷಿಯ ಮರಿಗಳಿಗೂ ಆಹಾರ ಕೊಡುವನು.


ಕಾಗೆಗಳು ಆಹಾರವಿಲ್ಲದೆ ಅಲೆದಾಡುತ್ತಿರುವ ಅವುಗಳ ಮರಿಗಳು ದೇವರಿಗೆ ಮೊರೆಯಿಡುವಾಗ ಅವುಗಳಿಗೆ ಆಹಾರವನ್ನು ಒದಗಿಸುವವರು ಯಾರು?


ಆದ್ದರಿಂದ ಸೈತಾನನು ಯೇಸುವನ್ನು ಬಿಟ್ಟುಹೋದನು. ಆಗ ಕೆಲವು ದೇವದೂತರು ಬಂದು ಆತನನ್ನು ಉಪಚರಿಸಿದರು.


ಆದರೆ ದೇವರು ಬಡಜನರಿಗೆ ಸಹಾಯಮಾಡದಿರಲು ನಿರ್ಧರಿಸಿದರೆ, ಆತನನ್ನು ದೋಷಿಯೆಂದು ತೀರ್ಪುಮಾಡುವವನು ಯಾರು? ದೇವರು ತನ್ನ ಮುಖವನ್ನು ಅವರಿಗೆ ಮರೆಮಾಡಿಕೊಂಡರೆ ಆತನನ್ನು ನೋಡಬಲ್ಲವರು ಯಾರು? ಮನುಷ್ಯರನ್ನೂ ಜನಾಂಗಗಳನ್ನೂ ಆಳುವವನು ದೇವರೇ.


“ಬಳಿಕ ನೀನು ಮತ್ತು ನಿನ್ನ ಸಹೋದರನಾದ ಆರೋನನು ಜನರನ್ನು ಬಂಡೆಯ ಮುಂದೆ ಸಭೆಸೇರಿಸಿ, ಜನರ ಮುಂದೆ ಆ ಬಂಡೆಗೆ ಮಾತಾಡು. ಆಗ ನೀರು ಬಂಡೆಯಿಂದ ಹರಿಯುವುದು ಮತ್ತು ನೀರನ್ನು ಜನರಿಗೂ ಅವರ ಪಶುಗಳಿಗೂ ಕೊಡು” ಎಂದು ಹೇಳಿದನು.


“ಈ ಸ್ಥಳವನ್ನು ತ್ಯಜಿಸಿ, ಪೂರ್ವದಿಕ್ಕಿಗೆ ಹೋಗು. ಕೆರೀತ್ ಹಳ್ಳದ ಹತ್ತಿರ ಅಡಗಿಕೊ. ಆ ಹಳ್ಳವು ಜೋರ್ಡನ್ ನದಿಯ ಪೂರ್ವದಲ್ಲಿದೆ.


ಆದ್ದರಿಂದ ಯೆಹೋವನು ಹೇಳಿದಂತೆ ಅವನು ಮಾಡಿದನು. ಅವನು ಜೋರ್ಡನ್ ನದಿಯ ಪೂರ್ವಕ್ಕಿರುವ ಕೆರೀತ್ ಹಳ್ಳದ ಹತ್ತಿರ ವಾಸಿಸಲು ಹೋದನು.


ಪ್ರವಾದಿಯು ಹೋಗಿ ರಸ್ತೆಯ ಮೇಲೆ ಬಿದ್ದಿರುವ ದೇಹವನ್ನು ಕಂಡನು. ಕತ್ತೆ ಮತ್ತು ಸಿಂಹವು ಆ ದೇಹದ ಹತ್ತಿರ ಇನ್ನೂ ನಿಂತಿದ್ದವು. ಸಿಂಹವು ಆ ದೇಹವನ್ನು ತಿಂದಿರಲಿಲ್ಲ ಮತ್ತು ಕತ್ತೆಗೆ ತೊಂದರೆಯನ್ನೂ ಮಾಡಿರಲಿಲ್ಲ.


ಯೋನನು ಮೀನಿನ ಹೊಟ್ಟೆಯೊಳಗಿದ್ದಾಗ ದೇವರಾದ ಯೆಹೋವನಿಗೆ ಪ್ರಾರ್ಥಿಸಿ ಹೀಗೆಂದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು