Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:15 - ಪರಿಶುದ್ದ ಬೈಬಲ್‌

15 ಎಲೀಯನು, “ನಾನು ಸೇವೆ ಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಈ ದಿನ ನಾನು ರಾಜನ ಎದುರಿನಲ್ಲಿ ಹಾಜರಾಗುತ್ತೇನೆ ಎಂಬುದಾಗಿ ಪ್ರಮಾಣ ಮಾಡುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಎಲೀಯನು ಅವನಿಗೆ, “ನಾನು ಸನ್ನಿಧಿ ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ನಾನು ಈ ಹೊತ್ತು ಅಹಾಬನಿಗೆ ಹೇಗೂ ಕಾಣಿಸಿಕೊಳ್ಳುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಎಲೀಯನು, “ನಾನು ಸನ್ನಿಧಿಸೇವೆಮಾಡುತ್ತಿರುವ ಸರ್ವಶಕ್ತನಾಣೆ, ಈ ದಿನ ನಾನು ಅಹಾಬನಿಗೆ ಹೇಗೂ ಕಾಣಿಸಿಕೊಳ್ಳಲೇಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಎಲೀಯನು ಅವನಿಗೆ - ನಾನು ಸನ್ನಿಧಿ ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಈಹೊತ್ತು ಅಹಾಬನಿಗೆ ಹೇಗೂ ಕಾಣಿಸಿಕೊಳ್ಳುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅದಕ್ಕೆ ಎಲೀಯನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸೇನಾಧೀಶ್ವರ ಯೆಹೋವ ದೇವರಾಣೆ, ಇಂದು ನನ್ನನ್ನು ಅವನಿಗೆ ತೋರಿಸಿಕೊಳ್ಳುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:15
19 ತಿಳಿವುಗಳ ಹೋಲಿಕೆ  

ಎಲೀಯನು ಗಿಲ್ಯಾದಿನ ತಿಷ್ಬೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು.


ನಿನ್ನ ದೇವರಾದ ಯೆಹೋವನಾಣೆ, ರಾಜನು ನಿನಗಾಗಿ ಎಲ್ಲಾ ಕಡೆಯೂ ಹುಡುಕುತ್ತಿದ್ದಾನೆ! ಅವನು ನಿನ್ನನ್ನು ಕಂಡುಹಿಡಿಯಲು ಎಲ್ಲಾ ದೇಶಗಳಿಗೂ ಜನರನ್ನು ಕಳುಹಿಸಿದ್ದಾನೆ. ಒಂದು ದೇಶದ ಅಧಿಪತಿಯು ನಮ್ಮ ದೇಶದಲ್ಲಿ ಎಲೀಯನು ಇಲ್ಲವೆಂದು ಹೇಳಿದರೆ ಆ ಮಾತು ಸತ್ಯವೊ ಎಂಬುದನ್ನು ತಿಳಿದುಕೊಳ್ಳುವುದಕ್ಕಾಗಿ ಅಹಾಬನು ಆ ಅಧಿಪತಿಯಿಂದ ಪ್ರಮಾಣ ಮಾಡಿಸುತ್ತಾನೆ.


ದೇವದೂತನು, “ನನ್ನ ಹೆಸರು ಗಬ್ರಿಯೇಲ. ನಾನು ದೇವರ ಸನ್ನಿಧಿಯಲ್ಲಿ ನಿಂತುಕೊಂಡಿರುವವನು. ನಿನಗೆ ಈ ಶುಭಸಮಾಚಾರವನ್ನು ತಿಳಿಸಲು ದೇವರು ನನ್ನನ್ನು ಕಳುಹಿಸಿದ್ದಾನೆ.


ಜೆರುಸಲೇಮಿನ ಜನರು ಸೂರ್ಯನನ್ನು, ಚಂದ್ರನನ್ನು, ನಕ್ಷತ್ರಗಣಗಳನ್ನು ಪ್ರೀತಿಸಿ, ಅನುಸರಿಸಿ, ವಿಚಾರಿಸಿ, ಪೂಜಿಸಿದ್ದರಿಂದ ಅವರ ಎಲುಬುಗಳನ್ನು ಅವುಗಳ ಕೆಳಗೆ ಭೂಮಿಯ ಮೇಲೆ ಹರಡುವರು. ಯಾರೊಬ್ಬರೂ ಆ ಎಲುಬುಗಳನ್ನು ಪುನಃ ಒಂದೆಡೆ ಸೇರಿಸಿ ಹೂಳುವುದಿಲ್ಲ. ಆ ಎಲುಬುಗಳು ಭೂಮಿಯ ಮೇಲೆ ಎಸೆದ ಸಗಣಿಯಂತಾಗುವವು.


ಪ್ರತಿಯೊಬ್ಬ ದೂತನು ಇನ್ನೊಬ್ಬ ದೂತನನ್ನು ಕರೆದು, “ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಸರ್ವಶಕ್ತನಾದ ಯೆಹೋವನು ಮಹಾ ಪರಿಶುದ್ಧನು. ಆತನ ಮಹಿಮೆಯು ಇಡೀ ಭೂಮಂಡಲವನ್ನು ಆವರಿಸಿಕೊಂಡಿದೆ” ಎಂದು ಗಟ್ಟಿಯಾದ ಸ್ವರದಲ್ಲಿ ಹೇಳುತ್ತಿದ್ದರು.


ಆತನ ಸೈನ್ಯಗಳೇ, ಚಿತ್ತವನ್ನು ನೇರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ.


ಯಾವನೂ ಆತನ ಸೈನ್ಯಗಳನ್ನು ಲೆಕ್ಕಿಸಲಾರನು. ಆತನ ಸೂರ್ಯನು ಜನರೆಲ್ಲರ ಮೇಲೆ ಉದಯಿಸುವನು.


ನೀವು ಆಕಾಶವನ್ನು ತಲೆಯೆತ್ತಿ ನೋಡುವಾಗ ಅಲ್ಲಿ ಕಾಣುವ ಸೂರ್ಯಚಂದ್ರ ನಕ್ಷತ್ರಾದಿಗಳನ್ನು ಪೂಜಿಸಬೇಡಿ. ಇವುಗಳನ್ನೆಲ್ಲಾ ಅನ್ಯರು ಪೂಜಿಸುವರು.


ಆದರೆ ನಿನ್ನ ಸಹಾಯಕನಾದ ನೂನನ ಮಗನಾದ ಯೆಹೋಶುವನು ಆ ದೇಶವನ್ನು ಪ್ರವೇಶಿಸುವನು. ಯೆಹೋಶುವನನ್ನು ಪ್ರೋತ್ಸಾಹಿಸು; ಯಾಕೆಂದರೆ ಆ ದೇಶವನ್ನು ವಶಪಡಿಸಿಕೊಳ್ಳಲು ಅವನು ಇಸ್ರೇಲರನ್ನು ಮುನ್ನಡೆಸಬೇಕು’ ಎಂದು ಹೇಳಿದನು.


ಹೀಗೆ ಭೂಮಿಯೂ ಆಕಾಶವೂ ಅವುಗಳಲ್ಲಿರುವ ಪ್ರತಿಯೊಂದೂ ನಿರ್ಮಿತವಾದವು.


ಈಗ ನಿನ್ನ ಅಪೇಕ್ಷೆಯಂತೆ ನಾನು ಹೋಗಿ, ನೀನು ಇಲ್ಲಿರುವೆ ಎಂಬುದನ್ನು ರಾಜನಿಗೆ ತಿಳಿಸಿದರೆ, ರಾಜನು ನನ್ನನ್ನು ಕೊಂದು ಹಾಕುತ್ತಾನೆ” ಎಂದು ಹೇಳಿದನು.


ಓಬದ್ಯನು ರಾಜನಾದ ಅಹಾಬನ ಬಳಿಗೆ ಹೋಗಿ ಎಲೀಯನು ಇರುವ ಸ್ಥಳವನ್ನು ತಿಳಿಸಿದನು. ರಾಜನಾದ ಅಹಾಬನು ಎಲೀಯನನ್ನು ಭೇಟಿಮಾಡಲು ಹೋದನು.


ಆದರೆ ಮೀಕಾಯೆಹುವು, “ಇಲ್ಲ! ಯೆಹೋವನಾಣೆ, ಆತನು ತಿಳಿಸುವುದನ್ನೇ ನಾನು ಹೇಳುತ್ತೇನೆ” ಎಂದು ಉತ್ತರಿಸಿದನು.


ಆದರೆ ಅಂದು ಎಬೆದ್ಮೆಲೆಕನೇ, ನಾನು ನಿನ್ನನ್ನು ರಕ್ಷಿಸುತ್ತೇನೆ.’ ಇದು ಯೆಹೋವನ ನುಡಿ. ‘ನೀನು ಊಹಿಸಿ ಭಯಪಟ್ಟಂತೆ ನಿನ್ನನ್ನು ಆ ಜನರ ಕೈಗೆ ಒಪ್ಪಿಸುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು