Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:18 - ಪರಿಶುದ್ದ ಬೈಬಲ್‌

18 ಎಲೀಯನು, “ಇಸ್ರೇಲಿನ ತೊಂದರೆಗೆ ನಾನು ಕಾರಣನಲ್ಲ. ನೀನು ಮತ್ತು ನಿನ್ನ ತಂದೆಯ ಕುಟುಂಬವು ಈ ತೊಂದರೆಗಳಿಗೆಲ್ಲ ಕಾರಣ. ಯೆಹೋವನ ಆಜ್ಞೆಗಳಿಗೆ ವಿಧೇಯನಾಗದೆ ಸುಳ್ಳುದೇವರುಗಳನ್ನು ಅನುಸರಿಸತೊಡಗಿದ್ದರಿಂದ ಆ ತೊಂದರೆಗಳಿಗೆಲ್ಲಾ ನೀನೇ ಕಾರಣನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದಕ್ಕೆ ಅವನು, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ. ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ಮತ್ತು ನಿನ್ನ ಮನೆಯವರೂ ಅದಕ್ಕೆ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅದಕ್ಕೆ ಎಲೀಯನು, “ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಸರ್ವೇಶ್ವರನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದಕ್ಕೆ ಅವನು - ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅದಕ್ಕೆ ಅವನು, “ನಾನು ಇಸ್ರಾಯೇಲನ್ನು ಕಳವಳಪಡಿಸುವುದಿಲ್ಲ. ಆದರೆ ನೀನೂ, ನಿನ್ನ ತಂದೆಯ ಕುಟುಂಬದವರೂ ಯೆಹೋವ ದೇವರ ಆಜ್ಞೆಯನ್ನು ತೊರೆದುಬಿಟ್ಟು, ಬಾಳನನ್ನು ಹಿಂಬಾಲಿಸುವ ನೀವೇ ಕಳವಳಪಡಿಸುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:18
23 ತಿಳಿವುಗಳ ಹೋಲಿಕೆ  

‘ಇದು ಏಕೆ ಸಂಭವಿಸಿತೆಂದರೆ, ಅವರು ತಮ್ಮ ದೇವರಾದ ಯೆಹೋವನನ್ನು ತ್ಯಜಿಸಿದರು. ಆತನು ಅವರ ಪೂರ್ವಿಕರನ್ನು ಈಜಿಪ್ಟಿನಿಂದ ಬರಮಾಡಿದನು. ಆದರೆ ಅವರು ಅನ್ಯದೇವರುಗಳನ್ನು ಅನುಸರಿಸಲು ತೀರ್ಮಾನಿಸಿದರು. ಅವರು ಆ ದೇವರುಗಳ ಪೂಜೆಯನ್ನೂ ಸೇವೆಯನ್ನೂ ಮಾಡಲಾರಂಭಿಸಿದರು. ಆದಕಾರಣವೇ ಈ ಕೆಟ್ಟಕಾರ್ಯಗಳೆಲ್ಲಾ ಅವರಿಗೆ ಸಂಭವಿಸುವಂತೆ ಯೆಹೋವನು ಮಾಡಿದನು’ ಎಂದು ಅನ್ಯಜನರು ಉತ್ತರಿಸುವರು.”


ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.


ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅಹಾಬನು ಮಾಡಿದರೂ ಅವು ಅವನಿಗೆ ಸಾಕಾಗಲಿಲ್ಲ. ಆದ್ದರಿಂದ ಅಹಾಬನು ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾದನು. ಎತ್ಬಾಳನು ಚೀದೋನ್ಯರ ರಾಜನಾಗಿದ್ದನು. ನಂತರ ಅಹಾಬನು ಬಾಳ್ ದೇವರನ್ನು ಪೂಜಿಸಿ ಅದರ ಸೇವೆ ಮಾಡಲಾರಂಭಿಸಿದನು.


ಅಹಾಬನು ಮಾಡಿದಷ್ಟು ಪಾಪಗಳನ್ನು, ಇಲ್ಲವೆ ಕೆಟ್ಟಕಾರ್ಯಗಳನ್ನು ಮಾಡಿದ ಮನುಷ್ಯರು ಬೇರೆ ಯಾರೂ ಇಲ್ಲ. ಅವನು ಆ ಕಾರ್ಯಗಳನ್ನು ಮಾಡುವುದಕ್ಕೆ ಅವನ ಪತ್ನಿಯಾದ ಈಜೆಬೆಲಳು ಅವನನ್ನು ಒತ್ತಾಯಪಡಿಸಿದಳು.


ನಾನು ಜೆರುಸಲೇಮಿನಲ್ಲಿ ಯೆಹೂದ್ಯ ನ್ಯಾಯಸಭೆಯ ಮುಂದೆ ನಿಂತಿದ್ದಾಗ, ನನ್ನಲ್ಲಿ ಅವರಿಗೆ ಯಾವ ಅಪರಾಧಗಳು ಕಂಡುಬಂದವೆಂದು ಇಲ್ಲಿರುವ ಈ ಯೆಹೂದ್ಯರನ್ನೇ ಕೇಳು.


ಈಗ ನನಗೆ ವಿರೋಧವಾಗಿ ಹೇಳುತ್ತಿರುವ ಸಂಗತಿಗಳನ್ನು ಈ ಯೆಹೂದ್ಯರು ನಿರೂಪಿಸಲಾರರು.


ಯೋಹಾನನು ಹೆರೋದನಿಗೆ, “ಹೆರೋದ್ಯಳನ್ನು ನೀನು ಇಟ್ಟುಕೊಂಡಿರುವುದು ಸರಿಯಲ್ಲ” ಎಂದು ಹೇಳುತ್ತಿದ್ದುದೇ ಈ ಸೆರೆವಾಸಕ್ಕೆ ಕಾರಣ.


ಅವರು ಕಠಿಣರಾಗಿರುವಂತೆಯೇ ನಾನು ನಿನ್ನನ್ನೂ ಕಠಿಣಗೊಳಿಸುತ್ತೇನೆ. ನಿನಗೂ ಅವರಂತೆ ಮೊಂಡತನವನ್ನು ಕೊಡುವೆನು.


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ. ಅವರು ನನ್ನಿಂದ ಮುಖ ತಿರುವಿದ್ದಾರೆ. ನಾನು ಜೀವಜಲದ ಬುಗ್ಗೆಯಾಗಿದ್ದೇನೆ. ಅವರು ತಮ್ಮದೇ ಆದ ನೀರಿನ ತೊಟ್ಟಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ.


ಆದರೆ ದುಷ್ಟರ ಗತಿಯನ್ನು ಏನು ಹೇಳಲಿ. ದುಷ್ಟರಿಗೆ ಕೆಡುಕು ಸಂಭವಿಸುವದು. ಅವರಿಗೆ ಬಹಳ ಸಂಕಟಗಳು ಬಂದೊದಗುವವು. ಅವರು ಮಾಡಿರುವ ಎಲ್ಲಾ ದುಷ್ಟಕ್ರಿಯೆಗಳಿಗೆ ಶಿಕ್ಷೆ ಕೊಡಲ್ಪಡುವದು.


ಪಾಪಿಗಳು ಹೋದಲ್ಲೆಲ್ಲಾ ಕೇಡು ಅವರನ್ನು ಹಿಂಬಾಲಿಸುವುದು. ಸಜ್ಜನರಿಗಾದರೋ ಒಳ್ಳೆಯದೇ ಆಗುತ್ತದೆ.


ನೀತಿವಂತನು ನಿಜವಾಗಿಯೂ ಜೀವವನ್ನು ಹೊಂದಿಕೊಳ್ಳುವನು, ಆದರೆ ಕೆಡುಕನನ್ನು ಹಿಂಬಾಲಿಸುತ್ತಾ ಹೋಗುವವನು ಸಾವಿಗೀಡಾಗುವನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.


ಬಳಲಿಹೋಗಿದ್ದ ಜನರನ್ನು ಕಂಡ ಯೋನಾತಾನನು, “ನನ್ನ ತಂದೆಯು ದೇಶಕ್ಕೆ ತೊಂದರೆ ಮಾಡಿದನು. ನಾನು ಸ್ವಲ್ಪ ಜೇನನ್ನು ತಿಂದ ಮೇಲೆ ಎಷ್ಟೋ ಚೈತನ್ಯ ಬಂದಿತು.


ಅಹಾಬನು ಬಹುಕೆಟ್ಟ ಪಾಪವನ್ನು ಮಾಡಿದನು ಮತ್ತು ವಿಗ್ರಹಗಳನ್ನು ಆರಾಧಿಸಿದನು. ಅಮೋರಿಯರು ಇಂತಹ ಕಾರ್ಯವನ್ನೇ ಮಾಡಿದ್ದರು. ಯೆಹೋವನು ಅವರನ್ನು ಅವರ ನಾಡಿನಿಂದ ಓಡಿಸಿದನು ಮತ್ತು ಅದನ್ನು ಇಸ್ರೇಲಿನ ಜನರಿಗೆ ದಯಪಾಲಿಸಿದನು.


ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗದಿದ್ದರೆ ಕೆಡುಕರ ಪರವಾಗಿರುವೆ. ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗಿದ್ದರೆ ಕೆಡುಕರಿಗೆ ವಿರೋಧವಾಗಿರುವೆ.


“ಸಮಾರ್ಯದ ಪ್ರವಾದಿಗಳು ಕೆಟ್ಟದ್ದಾಗಿ ನಡೆದುಕೊಂಡದ್ದನ್ನು ನಾನು ನೋಡಿದ್ದೇನೆ. ಅವರು ಬಾಳ್ ದೇವತೆಗೋಸ್ಕರ ಆವೇಶದಿಂದ ಪ್ರವಾದಿಸಿದ್ದನ್ನು ನಾನು ಕಂಡಿದ್ದೇನೆ. ಆ ಪ್ರವಾದಿಗಳು ಇಸ್ರೇಲಿನ ಜನರನ್ನು ಯೆಹೋವನಿಂದ ದೂರ ತೆಗೆದುಕೊಂಡು ಹೋಗಿದ್ದಾರೆ.


ಯೆರೆಮೀಯನು ಜನರಿಗೆ ಹೇಳುತ್ತಿರುವ ವಿಷಯಗಳನ್ನು ಕೇಳಿದ ರಾಜಾಧಿಕಾರಿಗಳು ರಾಜನಾದ ಚಿದ್ಕೀಯನ ಬಳಿಗೆ ಹೋಗಿ, “ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇನ್ನೂ ನಗರದಲ್ಲಿರುವ ಸೈನಿಕರನ್ನೂ ಎಲ್ಲರನ್ನೂ ತನ್ನ ಮಾತುಗಳಿಂದ ಧೈರ್ಯಗೆಡಿಸುತ್ತಿದ್ದಾನೆ. ನಮಗೆ ಒಳ್ಳೆಯದಾಗಬೇಕೆಂದು ಅವನು ಬಯಸದೆ ಜೆರುಸಲೇಮಿನ ಜನರ ನಾಶನವನ್ನು ಬಯಸುತ್ತಾನೆ” ಎಂದು ಹೇಳಿದರು.


ಬಾಳನನ್ನು ಪೂಜಿಸಲು ಅಹಾಬನು ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿದನು. ಆ ಗುಡಿಯಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು.


ಅರಸನಾದ ಆಹಾಜನು ತನ್ನ ಜನರನ್ನು ಪಾಪಮಾಡಲು ಪ್ರೋತ್ಸಾಹಿಸಿದ್ದಕ್ಕಾಗಿ ಯೆಹೋವನು ಯೆಹೂದ ದೇಶಕ್ಕೆ ಕಷ್ಟವನ್ನು ಕೊಟ್ಟನು. ಆಹಾಜನು ದೇವರಿಗೆ ದ್ರೋಹಮಾಡಿದನು.


ಕೆಡುಕನ ದುಷ್ಕೃತ್ಯಗಳು ಅವನನ್ನೇ ಹಿಡಿಯುತ್ತವೆ. ಅವನ ಪಾಪಗಳು ಹಗ್ಗದಂತೆ ಅವನನ್ನೇ ಬಂಧಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು