Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:24 - ಪರಿಶುದ್ದ ಬೈಬಲ್‌

24 ಬಾಳನ ಪ್ರವಾದಿಗಳಾದ ನೀವು ನಿಮ್ಮ ದೇವರನ್ನು ಪ್ರಾರ್ಥಿಸಿ. ನಾನು ಯೆಹೋವನನ್ನು ಪ್ರಾರ್ಥಿಸುತ್ತೇನೆ. ನಮ್ಮಲ್ಲಿ ಯಾರ ಪ್ರಾರ್ಥನೆಗೆ ಉತ್ತರವಾಗಿ ದೇವರು ಸೌದೆಯನ್ನು ಉರಿಯುವಂತೆ ಮಾಡುತ್ತಾನೋ ಆತನೇ ನಿಜವಾದ ದೇವರು” ಎಂದು ಹೇಳಿದನು. ಜನರೆಲ್ಲರೂ ಇದು ಒಳ್ಳೆಯ ಆಲೋಚನೆಯೆಂದು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ, ಅನಂತರ ನಾನು ಯೆಹೋವನ ಹೆಸರು ಹೇಳಿ ಪ್ರಾರ್ಥಿಸುವೆನು. ಆ ಇಬ್ಬರಲ್ಲಿ ಯಾವನು ಲಾಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದೂ ನಿರ್ಣಯಿಸೋಣ” ಅಂದನು. ಎಲ್ಲಾ ಜನರು, “ಸರಿ ನೀನು ಹೇಳಿದಂತೆಯೇ ಆಗಲಿ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಅನಂತರ ನಾನು ಸರ್ವೇಶ್ವರನ ಹೆಸರು ಹೇಳಿ ಪ್ರಾರ್ಥಿಸುವೆನು. ಅವರಿಬ್ಬರಲ್ಲಿ ಯಾರು ಆಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದು ನಿಶ್ಚಯಿಸೋಣ,” ಎಂದನು. ಜನರೆಲ್ಲರು, “ಸರಿ, ನೀನು ಹೇಳಿದಂತೆಯೇ ಆಗಲಿ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಅನಂತರ ನಾನು ಯೆಹೋವನ ಹೆಸರು ಹೇಳಿ ಪ್ರಾರ್ಥಿಸುವೆನು. ಆ ಇಬ್ಬರಲ್ಲಿ ಯಾವನು ಲಾಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದು ನಿಶ್ಚಯಿಸೋಣ ಅಂದನು. ಎಲ್ಲಾ ಜನರೂ - ಸರಿ, ನೀನು ಹೇಳಿದಂತೆಯೇ ಆಗಲಿ ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಅನಂತರ ನಾನು ಯೆಹೋವ ದೇವರ ಹೆಸರು ಹೇಳಿ ಪ್ರಾರ್ಥಿಸುವೆನು. ಅವರಿಬ್ಬರಲ್ಲಿ ಯಾರು ಆಲಿಸಿ, ಬೆಂಕಿಯನ್ನು ಕಳುಹಿಸುವರೋ, ಅವರೇ ದೇವರೆಂದು ನಿಶ್ಚಯಿಸೋಣ,” ಎಂದನು. ಅದಕ್ಕೆ ಜನರೆಲ್ಲರು ಉತ್ತರವಾಗಿ, “ಈ ಮಾತು ಸರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:24
14 ತಿಳಿವುಗಳ ಹೋಲಿಕೆ  

ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಗಳನ್ನು, ಸೌದೆಯನ್ನು, ಕಲ್ಲುಗಳನ್ನು ಮತ್ತು ಯಜ್ಞವೇದಿಕೆಯ ಸುತ್ತಲಿನ ಮಣ್ಣನ್ನೆಲ್ಲ ದಹಿಸಿತು. ಆ ಹಳ್ಳದಲ್ಲಿದ್ದ ನೀರನ್ನೆಲ್ಲ ಬೆಂಕಿಯು ದಹಿಸಿ ಒಣಗಿಸಿತು.


ಅಲ್ಲಿ ದೇವರನ್ನು ಆರಾಧಿಸಲು ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ದಾವೀದನು ಅದರ ಮೇಲೆ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಅರ್ಪಿಸಿದನು. ದಾವೀದನು ಯೆಹೋವನಿಗೆ ಪ್ರಾರ್ಥಿಸಿದನು. ಯೆಹೋವನು ಪರಲೋಕದಿಂದ ಬೆಂಕಿಯನ್ನು ಕಳುಹಿಸುವುದರ ಮೂಲಕ ದಾವೀದನಿಗೆ ಉತ್ತರಿಸಿದನು. ಸರ್ವಾಂಗಹೋಮಗಳ ಯಜ್ಞವೇದಿಕೆಯ ಮೇಲೆ ಬೆಂಕಿಯು ಇಳಿದುಬಂದಿತು.


ಸೇರಿಬಂದ ಇಸ್ರೇಲ್ ಜನರೆಲ್ಲಾ ಆಕಾಶದಿಂದ ಬೆಂಕಿ ಬೀಳುವದನ್ನೂ ದೇವಾಲಯದಲ್ಲಿ ಯೆಹೋವನ ಮಹಿಮೆ ತುಂಬಿದ್ದನ್ನೂ ನೋಡಿ ನೆಲದ ಮೇಲೆ ಬೋರಲಬಿದ್ದು “ಯೆಹೋವನು ಒಳ್ಳೆಯವನು, ಅವನ ಕರುಣೆಯು ನಿರಂತರಕ್ಕೂ ಇರುವಂಥದ್ದು” ಎಂದು ಹೇಳುತ್ತಾ ದೇವರನ್ನು ಸುತ್ತಿಸಿ ಕೊಂಡಾಡಿದರು.


ಸೊಲೊಮೋನನು ಪ್ರಾರ್ಥಿಸುವದನ್ನು ನಿಲ್ಲಿಸಿದ ಕೂಡಲೇ ಆಕಾಶದಿಂದ ಬೆಂಕಿಯು ಬಂದು ಯಜ್ಞವೇದಿಕೆಯ ಮೇಲಿದ್ದ ಸರ್ವಾಂಗಹೋಮಗಳನ್ನೂ ಯಜ್ಞಮಾಂಸವನ್ನೂ ದಹಿಸಿಬಿಟ್ಟಿತು. ಯೆಹೋವನ ಮಹಿಮೆಯು ದೇವಾಲಯದಲ್ಲಿ ತುಂಬಿತು.


ಯೆಹೋವನ ಬಳಿಯಿಂದ ಬೆಂಕಿಯು ಬಂದು ವೇದಿಕೆಯ ಮೇಲಿದ್ದ ಸರ್ವಾಂಗಹೋಮವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿದಾಗ, ಅವರು ಆನಂದದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು.


ಯೆಹೋವನ ದೂತನ ಕೈಯಲ್ಲಿ ಒಂದು ಕೋಲಿತ್ತು. ಯೆಹೋವನ ದೂತನು ತನ್ನ ಕೋಲಿನ ತುದಿಯಿಂದ ಮಾಂಸವನ್ನು ಮತ್ತು ರೊಟ್ಟಿಯನ್ನು ಮುಟ್ಟಿದನು. ಆಗ ಆ ಕಲ್ಲಿನಿಂದ ಬೆಂಕಿಯ ಜ್ವಾಲೆಯು ಎದ್ದಿತು! ಮಾಂಸ ಮತ್ತು ರೊಟ್ಟಿ ಸಂಪೂರ್ಣವಾಗಿ ಸುಟ್ಟುಹೋದವು! ಆಮೇಲೆ ಯೆಹೋವನ ದೂತನು ಅದೃಶ್ಯನಾದನು.


ಅದಕ್ಕೆ ಹಿಜ್ಕೀಯನು ಯೆಶಾಯನಿಗೆ, “ಯೆಹೋವನ ಮಾತುಗಳು ಒಳ್ಳೆಯವೇ ಸರಿ” ಎಂದು ಹೇಳಿದನು. (ಯಾಕೆಂದರೆ ತಾನು ಅರಸನಾಗಿರುವಷ್ಟು ಕಾಲ ದೇಶದಲ್ಲಿ ಸಮಾಧಾನವಿರುವುದೆಂದು ಅವನು ಯೋಚಿಸಿಕೊಂಡನು.)


ರಾಜನು, “ಈ ವಿಚಾರಗಳನ್ನೆಲ್ಲ ಹೇಳಲು ಯೋವಾಬನು ನಿನಗೆ ತಿಳಿಸಿದನಲ್ಲವೇ?” ಎಂದನು. ಆ ಸ್ತ್ರೀಯು, “ರಾಜನಾದ ನನ್ನ ಒಡಯನೇ, ನಿಮ್ಮ ಆಣೆಯಾಗಿಯೂ, ನೀವು ಹೇಳಿದ್ದು ಸರಿ! ನಿಮ್ಮ ಸೇವಕನಾದ ಯೋವಾಬನು ಈ ವಿಷಯಗಳನ್ನು ಹೇಳಲು ನನಗೆ ತಿಳಿಸಿದನು.


ಸೇತನು ಒಬ್ಬ ಮಗನನ್ನು ಪಡೆದನು. ಆ ಮಗುವಿಗೆ ಅವನು ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು ಯೆಹೋವನ ಮೇಲೆ ಭರವಸೆ ಇಡಲಾರಂಭಿಸಿದರು.


ಎರಡು ಹೋರಿಗಳನ್ನು ತನ್ನಿ. ಬಾಳನ ಪ್ರವಾದಿಗಳು ಒಂದು ಹೋರಿಯನ್ನು ತೆಗೆದುಕೊಳ್ಳಲಿ. ಅವರು ಅದನ್ನು ಕೊಂದು, ತುಂಡುತುಂಡಾಗಿ ಕತ್ತರಿಸಲಿ. ನಂತರ ಅವರು ಆ ಮಾಂಸವನ್ನು ಸೌದೆಯ ಮೇಲಿಡಲಿ. ಆದರೆ ಬೆಂಕಿಯನ್ನು ಹೊತ್ತಿಸುವುದು ಬೇಡ. ಆಗ ನಾನು ಮತ್ತೊಂದು ಹೋರಿಯನ್ನು ಅವರಂತೆಯೇ ಕತ್ತರಿಸುವೆನು. ನಾನೂ ಬೆಂಕಿಯನ್ನು ಹೊತ್ತಿಸುವುದಿಲ್ಲ.


ನಂತರ ಎಲೀಯನು ಬಾಳನ ಪ್ರವಾದಿಗಳಿಗೆ, “ನಿಮ್ಮಲ್ಲಿ ಬಹು ಜನರು ಇರುವುದರಿಂದ ಮೊದಲು ನೀವೇ ಹೋಗಿ ನಿಮ್ಮ ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ. ನಿಮ್ಮ ದೇವರಿಗೆ ಪ್ರಾರ್ಥಿಸಿ. ಆದರೆ ನೀವು ಬೆಂಕಿಯನ್ನು ಹೊತ್ತಿಸಬೇಡಿ” ಎಂದು ಹೇಳಿದನು.


ಈ ದೃಶ್ಯವನ್ನು ಜನರೆಲ್ಲರೂ ನೋಡಿದರು. ಜನರು ನೆಲಕ್ಕೆ ಬಾಗಿ ನಮಸ್ಕರಿಸುತ್ತಾ, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.


ಆ ಜನರು ಯೆಹೋವನ ಸಂದೇಶವನ್ನು ತಂದ ಪ್ರವಾದಿಗಳಾಗಿದ್ದರೆ, ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಯೆಹೋವನ ಆಲಯದಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ರಾಜನ ಅರಮನೆಯಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಜೆರುಸಲೇಮಿನಲ್ಲಿರುವ ಪದಾರ್ಥಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಆ ವಸ್ತುಗಳನ್ನೆಲ್ಲ ಬಾಬಿಲೋನಿಗೆ ತೆಗೆದುಕೊಂಡು ಹೋಗಬಾರದೆಂದು ಅವರು ಪ್ರಾರ್ಥನೆ ಸಲ್ಲಿಸಲಿ.


ಅದಕ್ಕೆ ಶಿಮ್ಮಿಯು, “ನನ್ನ ರಾಜನೇ, ನೀನು ಹೇಳಿದಂತೆಯೇ ಆಗಲಿ. ನಾನು ನಿನಗೆ ವಿಧೇಯನಾಗಿರುವೆನು” ಎಂದು ಉತ್ತರಿಸಿದನು. ಹೀಗೆ ಶಿಮ್ಮಿಯು ಬಹು ದಿನಗಳವರೆಗೆ ಜೆರುಸಲೇಮಿನಲ್ಲಿ ವಾಸವಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು