Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:25 - ಪರಿಶುದ್ದ ಬೈಬಲ್‌

25 ನಂತರ ಎಲೀಯನು ಬಾಳನ ಪ್ರವಾದಿಗಳಿಗೆ, “ನಿಮ್ಮಲ್ಲಿ ಬಹು ಜನರು ಇರುವುದರಿಂದ ಮೊದಲು ನೀವೇ ಹೋಗಿ ನಿಮ್ಮ ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ. ನಿಮ್ಮ ದೇವರಿಗೆ ಪ್ರಾರ್ಥಿಸಿ. ಆದರೆ ನೀವು ಬೆಂಕಿಯನ್ನು ಹೊತ್ತಿಸಬೇಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಅವನು ಬಾಳನ ಪ್ರವಾದಿಗಳಿಗೆ, “ನೀವು ಹೆಚ್ಚು ಜನ ಇರುವುದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಆದರೆ ಬೆಂಕಿಯನ್ನು ಹೊತ್ತಿಸಬಾರದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಗ ಎಲೀಯನು ಬಾಳನ ಪ್ರವಾದಿಗಳಿಗೆ, “ನೀವು ಹೆಚ್ಚುಮಂದಿ ಇರುವುದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು, ಅದನ್ನು ಸಿದ್ಧಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಆದರೆ ಬೆಂಕಿಯನ್ನು ಹೊತ್ತಿಸಕೂಡದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಅವನು ಬಾಳನ ಪ್ರವಾದಿಗಳಿಗೆ - ನೀವು ಹೆಚ್ಚು ಮಂದಿ ಇರುವದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಆದರೆ ಬೆಂಕಿಯನ್ನು ಹೊತ್ತಿಸಕೂಡದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಎಲೀಯನು ಬಾಳನ ಪ್ರವಾದಿಗಳಿಗೆ, “ನೀವು ಅನೇಕರಾಗಿರುವುದರಿಂದ ಒಂದು ಹೋರಿಯನ್ನು ಆಯ್ದುಕೊಂಡು, ಅದನ್ನು ಮೊದಲು ಸಿದ್ಧಮಾಡಿ, ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ. ಆದರೆ ಬೆಂಕಿಯನ್ನು ಹೊತ್ತಿಸಬೇಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:25
4 ತಿಳಿವುಗಳ ಹೋಲಿಕೆ  

ಬಾಳನ ಪ್ರವಾದಿಗಳಾದ ನೀವು ನಿಮ್ಮ ದೇವರನ್ನು ಪ್ರಾರ್ಥಿಸಿ. ನಾನು ಯೆಹೋವನನ್ನು ಪ್ರಾರ್ಥಿಸುತ್ತೇನೆ. ನಮ್ಮಲ್ಲಿ ಯಾರ ಪ್ರಾರ್ಥನೆಗೆ ಉತ್ತರವಾಗಿ ದೇವರು ಸೌದೆಯನ್ನು ಉರಿಯುವಂತೆ ಮಾಡುತ್ತಾನೋ ಆತನೇ ನಿಜವಾದ ದೇವರು” ಎಂದು ಹೇಳಿದನು. ಜನರೆಲ್ಲರೂ ಇದು ಒಳ್ಳೆಯ ಆಲೋಚನೆಯೆಂದು ಒಪ್ಪಿಕೊಂಡರು.


ಪ್ರವಾದಿಗಳು ತಾವು ತಂದಿದ್ದ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. ಅವರು ಬಾಳನನ್ನು ಮಧ್ಯಾಹ್ನದವರೆಗೆ ಪ್ರಾರ್ಥಿಸಿದರು. “ಬಾಳನೇ, ದಯವಿಟ್ಟು ನಮಗೆ ಉತ್ತರ ನೀಡು!” ಎಂದು ಅವರು ಪ್ರಾರ್ಥಿಸಿದರು. ಆದರೆ ಯಾವ ಶಬ್ದವೂ ಆಗಲಿಲ್ಲ: ಯಾರೊಬ್ಬರೂ ಉತ್ತರಿಸಲಿಲ್ಲ; ಪ್ರವಾದಿಗಳು ತಾವು ನಿರ್ಮಿಸಿದ್ದ ಯಜ್ಞವೇದಿಕೆಯ ಸುತ್ತಲೂ ನರ್ತಿಸಿದರು. ಆದರೆ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ.


ಮೋಶೆಯು ಫರೋಹನಿಗೆ, “ಕಪ್ಪೆಗಳು ಯಾವಾಗ ಬಿಟ್ಟುಹೋಗಬೇಕೆಂದು ತಿಳಿಸು. ನಾನು ನಿನಗೋಸ್ಕರ, ನಿನ್ನ ಜನರಿಗೋಸ್ಕರ ಮತ್ತು ನಿನ್ನ ಅಧಿಕಾರಿಗಳಿಗೋಸ್ಕರ ಪ್ರಾರ್ಥಿಸುವೆನು. ಆಗ ಕಪ್ಪೆಗಳು ನಿನ್ನನ್ನೂ ನಿನ್ನ ಮನೆಗಳನ್ನೂ ಬಿಟ್ಟುಹೋಗಿ ನದಿಯಲ್ಲಿ ಮಾತ್ರ ಉಳಿಯುತ್ತವೆ” ಎಂದು ಹೇಳಿದನು.


“ಸಮಾರ್ಯದ ಪ್ರವಾದಿಗಳು ಕೆಟ್ಟದ್ದಾಗಿ ನಡೆದುಕೊಂಡದ್ದನ್ನು ನಾನು ನೋಡಿದ್ದೇನೆ. ಅವರು ಬಾಳ್ ದೇವತೆಗೋಸ್ಕರ ಆವೇಶದಿಂದ ಪ್ರವಾದಿಸಿದ್ದನ್ನು ನಾನು ಕಂಡಿದ್ದೇನೆ. ಆ ಪ್ರವಾದಿಗಳು ಇಸ್ರೇಲಿನ ಜನರನ್ನು ಯೆಹೋವನಿಂದ ದೂರ ತೆಗೆದುಕೊಂಡು ಹೋಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು