Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:28 - ಪರಿಶುದ್ದ ಬೈಬಲ್‌

28 ಪ್ರವಾದಿಗಳು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿದರು. ಅವರು ಖಡ್ಗ ಮತ್ತು ಬರ್ಜಿಗಳಿಂದ ತಮ್ಮನ್ನು ತಾವೇ ತಿವಿದುಕೊಂಡರು. (ಅವರು ಆರಾಧಿಸುವ ರೀತಿಯೇ ಇದು.) ರಕ್ತವು ತಮ್ಮ ದೇಹದ ಮೇಲೆ ಚಿಮ್ಮುವತನಕ ಅವರು ತಮ್ಮನ್ನು ತಾವು ತಿವಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ದತಿಯ ಪ್ರಕಾರ ಈಟಿ ಕತ್ತಿಗಳಿಂದ ರಕ್ತಸೋರುವಷ್ಟು ಗಾಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ಧತಿಯ ಪ್ರಕಾರ ಈಟಿಕತ್ತಿಗಳಿಂದ ರಕ್ತಸೋರುವಷ್ಟು ಗಾಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ಧತಿಯ ಪ್ರಕಾರ ಈಟಿಕತ್ತಿಗಳಿಂದ ರಕ್ತಸೋರುವಷ್ಟು ಗಾಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರು ದೊಡ್ಡ ಶಬ್ದದಿಂದ ಕೂಗಿ, ತಮ್ಮ ಕ್ರಮದ ಪ್ರಕಾರವೇ ರಕ್ತವು ತಮ್ಮ ಮೇಲೆ ಸೋರುವ ಮಟ್ಟಿಗೂ ಖಡ್ಗಗಳಿಂದಲೂ, ಚೂರಿಗಳಿಂದಲೂ ತಮ್ಮನ್ನು ಕೊಯ್ದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:28
9 ತಿಳಿವುಗಳ ಹೋಲಿಕೆ  

ಸತ್ತವರನ್ನು ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಿಮ್ಮ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಚುಚ್ಚಿಸಿಕೊಳ್ಳಬಾರದು. ನಾನೇ ಯೆಹೋವನು!


“ನೀವು ನಿಮ್ಮ ದೇವರಾದ ಯೆಹೋವನ ಮಕ್ಕಳು. ನಿಮ್ಮಲ್ಲಿ ಯಾರಾದರೂ ಸತ್ತರೆ ನೀವು ತಲೆಬೋಳಿಸಿಕೊಂಡಾಗಲಿ ನಿಮ್ಮನ್ನು ಕತ್ತರಿಸಿಕೊಂಡಾಗಲಿ ನಿಮ್ಮ ದುಃಖವನ್ನು ಪ್ರದರ್ಶಿಸಕೂಡದು.


ಅವನು ಹಗಲಿರುಳು ಸಮಾಧಿಯ ಗವಿಗಳ ಸುತ್ತಲು ಮತ್ತು ಬೆಟ್ಟಗಳ ಮೇಲೆ ನಡೆದಾಡುತ್ತಿದ್ದನು. ಅವನು ಕಿರುಚುತ್ತಾ ತನ್ನನ್ನು ಕಲ್ಲುಗಳಿಂದ ಜಜ್ಜಿಕೊಳ್ಳುತ್ತಿದ್ದನು.


ಆಗಿಂದಾಗ್ಗೆ ದೆವ್ವವು ಅವನನ್ನು ಕೊಲ್ಲಲು ಬೆಂಕಿಯೊಳಗೆ ಅಥವಾ ನೀರಿನೊಳಗೆ ಎಸೆಯುತ್ತದೆ. ನಿನಗೆ ಸಾಧ್ಯವಿರುವುದಾದರೆ, ದಯವಿಟ್ಟು ನಮ್ಮ ಮೇಲೆ ಕರುಣೆಯಿಟ್ಟು ಸಹಾಯಮಾಡು” ಎಂದು ಉತ್ತರಿಸಿದನು.


ದೇವರಾದ ಯೆಹೋವನು ಒಂದು ಸಾವಿರ ಟಗರು, ಹತ್ತುಸಾವಿರ ಎಣ್ಣೆಯ ಹೊಳೆಗಳಲ್ಲಿ ಸಂತೋಷಿಸುವನೋ? ನಾನು ಮಾಡಿದ ತಪ್ಪಿನ ಪರಿಹಾರಕ್ಕಾಗಿ ನನ್ನ ಚೊಚ್ಚಲ ಮಗನನ್ನು ಸಮರ್ಪಿಸಲೋ? ನನ್ನ ಶರೀರದಿಂದ ಬಂದ ಮಗನನ್ನು ನನ್ನ ಪಾಪಗಳಿಗಾಗಿ ಸಮರ್ಪಿಸಲೋ?


ಮಧ್ಯಾಹ್ನವಾದಾಗ ಎಲೀಯನು ಅವರನ್ನು ಅಪಹಾಸ್ಯ ಮಾಡಲಾರಂಭಿಸಿದನು. ಎಲೀಯನು, “ಬಾಳನು ನಿಜವಾದ ದೇವರಾಗಿದ್ದರೆ, ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ! ಬಹುಶಃ ಅವನು ಯೋಚನಾನಿರತನಾಗಿರಬಹುದು! ಅಥವಾ ಕಾರ್ಯನಿರತನಾಗಿರಬಹುದು! ಅಥವಾ ಸಂಚಾರನಿರತನಾಗಿರಬಹುದು! ಅಥವಾ ನಿದ್ರಾಮಗ್ನನಾಗಿರಬಹುದು! ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ, ಅವನನ್ನು ಎಚ್ಚರಗೊಳಿಸಿ!” ಎಂದು ಹೇಳಿದನು.


ಅದರಲ್ಲಿ ಸ್ವಲ್ಪ ಮರದ ತುಂಡು ಉಳಿದಿರುತ್ತದೆ. ಅದನ್ನು ನೋಡಿ ಆ ಮನುಷ್ಯನು ಅದರಿಂದ ವಿಗ್ರಹವನ್ನು ತಯಾರಿಸುವನು. ಅದನ್ನು ದೇವರೆಂದು ಕರೆಯುವನು. ಅದರ ಮುಂದೆ ಅಡ್ಡಬಿದ್ದು ಆರಾಧಿಸುವನು. ಅದರ ಮುಂದೆ ಪ್ರಾರ್ಥಿಸಿ, “ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಹೇಳುತ್ತಾನೆ.


ಗಾಜಾದ ಜನರು ದುಃಖಿತರಾಗಿ ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವರು. ಅಷ್ಕೆಲೋನಿನ ಜನರನ್ನು ಸ್ತಬ್ಧಗೊಳಿಸಲಾಗುವುದು. ಕಣಿವೆ ಪ್ರದೇಶದಿಂದ ಉಳಿದುಕೊಂಡವರೇ, ನಿಮ್ಮನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿರಿ?


ಆದರೆ ಬೇರೆ ಜನರು, ‘ಹಾಗಾದರೆ ನಿನ್ನ ಕೈಯಲ್ಲಿ ಗಾಯಗಳೇನು?’ ಎಂದು ಕೇಳಿದಾಗ ಅವನು, ‘ನನ್ನ ಸ್ನೇಹಿತರ ಮನೆಯಲ್ಲಿ ನನಗೆ ಏಟು ಬಿತ್ತು’ ಎಂದು ಅನ್ನುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು