1 ಅರಸುಗಳು 18:36 - ಪರಿಶುದ್ದ ಬೈಬಲ್36 ಅದು ಮಧ್ಯಾಹ್ನದ ಯಜ್ಞಗಳನ್ನು ಅರ್ಪಿಸುವ ಸಮಯ. ಪ್ರವಾದಿಯಾದ ಎಲೀಯನು ಯಜ್ಞವೇದಿಕೆಯ ಹತ್ತಿರಕ್ಕೆ ಹೋಗಿ, “ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರಾದ ಯೆಹೋವನೇ, ನೀನು ಇಸ್ರೇಲಿನಲ್ಲಿರುವ ದೇವರೆಂಬುದನ್ನು ರುಜುವಾತುಪಡಿಸಲು ನಾನೀಗ ನಿನ್ನನ್ನು ಪ್ರಾರ್ಥಿಸುತ್ತಿದ್ದೇನೆ. ನಾನು ನಿನ್ನ ಸೇವಕನೆಂಬುದನ್ನೂ ನೀನು ನಿರೂಪಿಸು. ಈ ಕಾರ್ಯಗಳನ್ನೆಲ್ಲಾ ನಾನು ಮಾಡುವಂತೆ ನೀನು ಆಜ್ಞಾಪಿಸಿದೆ ಎನ್ನುವುದನ್ನೂ ಈ ಜನರಿಗೆ ತೋರಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, “ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಸಂಧ್ಯಾನೈವೇದ್ಯದ ಹೊತ್ತಿಗೆ, ಪ್ರವಾದಿ ಎಲೀಯನು ಪೀಠದ ಹತ್ತಿರ ಬಂದು, “ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರೇ, ಸರ್ವೇಶ್ವರಾ, ನೀವೊಬ್ಬರೇ ಇಸ್ರಯೇಲರ ದೇವರಾಗಿರುತ್ತೀರಿ ಎಂಬುದನ್ನು, ನಾನು ನಿನ್ನ ದಾಸನಾಗಿರುತ್ತೇನೆಂಬುದನ್ನು ಹಾಗು ಇದನ್ನೆಲ್ಲಾ ನಿಮ್ಮ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನು ಈ ದಿನ ತೋರಿಸಿಕೊಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ವೇದಿಯ ಹತ್ತಿರ ಬಂದು - ಅಬ್ರಹಾಮ್ ಇಸಾಕ್ ಇಸ್ರಾಯೇಲ್ಯರ ದೇವರೇ, ಯೆಹೋವನೇ, ನೀನೋಬ್ಬನೇ ಇಸ್ರಾಯೇಲ್ಯರ ದೇವರಾಗಿರುತ್ತೀ ಎಂಬದನ್ನೂ ನಾನು ನಿನ್ನ ಸೇವಕನಾಗಿರುತ್ತೇನೆಂಬದನ್ನೂ ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬದನ್ನೂ ಈಹೊತ್ತು ತೋರಿಸಿ ಕೊಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆಯಲ್ಲಿ ಪ್ರವಾದಿಯಾದ ಎಲೀಯನು ಬಲಿಪೀಠದ ಸಮೀಪಕ್ಕೆ ಬಂದು, “ಅಬ್ರಹಾಮನಿಗೂ, ಇಸಾಕನಿಗೂ, ಇಸ್ರಾಯೇಲಿಗೂ ದೇವರಾದ ಯೆಹೋವ ದೇವರೇ, ಇಸ್ರಾಯೇಲಿನಲ್ಲಿ ನೀವೇ ದೇವರೆಂದೂ, ನಾನು ನಿಮ್ಮ ಸೇವಕನೆಂದೂ, ನಾನು ಈ ಕಾರ್ಯಗಳನ್ನೆಲ್ಲಾ ನಿಮ್ಮ ಮಾತಿನ ಹಾಗೆಯೇ ಮಾಡಿದ್ದೇನೆಂದೂ ಇಂದು ತೋರಿಸಿಕೊಡಿರಿ. ಅಧ್ಯಾಯವನ್ನು ನೋಡಿ |
ಆಗ ಒಬ್ಬ ಪವಿತ್ರನು ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು.
ಸಂದೇಶಕರು ಅಹಜ್ಯನಿಗೆ, “ಒಬ್ಬನು ನಮ್ಮನ್ನು ಭೇಟಿಯಾಗಿ ನಿಮ್ಮನ್ನು ಕಳುಹಿಸಿದ ರಾಜನ ಬಳಿಗೆ ಹಿಂದಿರುಗಿ ಹೋಗಿ ಯೆಹೋವನು ಹೇಳುವುದನ್ನು ಅವನಿಗೆ ತಿಳಿಸಿ. ಯೆಹೋವನು ಹೇಳುವುದೇನೆಂದರೆ: ‘ಇಸ್ರೇಲಿನಲ್ಲಿ ಒಬ್ಬ ದೇವರಿದ್ದಾನೆ! ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಸಂದೇಶಕರನ್ನು ಕಳುಹಿಸಿದುದೇಕೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ!’” ಎಂಬುದಾಗಿ ಹೇಳಿದರು.