Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:7 - ಪರಿಶುದ್ದ ಬೈಬಲ್‌

7 ಓಬದ್ಯನು ಸಂಚರಿಸುತ್ತಿರುವಾಗ ಎಲೀಯನನ್ನು ಭೇಟಿಯಾದನು. ಓಬದ್ಯನು ಎಲೀಯನನ್ನು ಕಂಡ ಕೂಡಲೇ ಅವನನ್ನು ಗುರುತಿಸಿ ಎಲೀಯನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ನನ್ನ ಒಡೆಯನಾದ ಎಲೀಯನು ನೀನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ಪಕ್ಕನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು, ಸಾಷ್ಟಾಂಗನಮಸ್ಕಾರ ಮಾಡಿ, “ನೀನು ನನ್ನ ಸ್ವಾಮಿಯಾದ ಎಲೀಯನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ತಟ್ಟನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು ಸಾಷ್ಟಾಂಗ ನಮಸ್ಕಾರ ಮಾಡಿದನು. “ತಾವು ನನ್ನ ಸ್ವಾಮಿ ಎಲೀಯರೋ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ಫಕ್ಕನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು ಸಾಷ್ಟಾಂಗನಮಸ್ಕಾರ ಮಾಡಿ - ನೀನು ನನ್ನ ಸ್ವಾವಿುಯಾದ ಎಲೀಯನೋ ಎಂದು ಕೇಳಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಓಬದ್ಯನು ಮಾರ್ಗದಲ್ಲಿ ಹೋಗುತ್ತಿರುವಾಗ, ಎಲೀಯನು ಅವನನ್ನು ಸಂಧಿಸಿದನು. ಓಬದ್ಯನು ಅವನನ್ನು ಗುರುತಿಸಿ ಸಾಷ್ಟಾಂಗ ನಮಸ್ಕಾರಮಾಡಿ, “ನೀನು ನನ್ನ ಒಡೆಯನಾದ ಎಲೀಯನಲ್ಲವೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:7
16 ತಿಳಿವುಗಳ ಹೋಲಿಕೆ  

ನಿಜವಾಗಿಯೂ ನೀವು ಏನನ್ನು ನೋಡುವುದಕ್ಕೆ ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡಿರುವ ಮನುಷ್ಯನನ್ನೋ? ಇಲ್ಲ! ನಯವಾದ ಉಡುಪನ್ನು ಹಾಕಿಕೊಂಡಿರುವ ಜನರು ರಾಜರ ಅರಮನೆಗಳಲ್ಲಿ ವಾಸಿಸುತ್ತಾರೆ.


ಯೋಹಾನನ ಉಡುಪುಗಳು ಒಂಟೆಯ ಕೂದಲಿನಿಂದ ಮಾಡಲ್ಪಟ್ಟಿದ್ದವು. ಅವನಿಗೆ ಸೊಂಟದಲ್ಲಿ ತೊಗಲಿನ ನಡುಪಟ್ಟಿ ಇತ್ತು. ಅವನು ಮಿಡತೆ ಮತ್ತು ಕಾಡುಜೇನನ್ನು ಆಹಾರವಾಗಿ ತಿನ್ನುತ್ತಿದ್ದನು.


ಹಿಂದಿನ ದಿವಸಗಳಲ್ಲಿ ಜನರು ನಿನಗೆ ಹಿಂಸೆ ಕೊಟ್ಟರು. ಆ ಜನರು ಈಗ ನಿನ್ನ ಮುಂದೆ ಅಡ್ಡಬೀಳುವರು. ಗತಿಸಿದ ದಿವಸಗಳಲ್ಲಿ ಜನರು ನಿನ್ನನ್ನು ದ್ವೇಷಿಸಿದರು. ಆದರೆ ಈಗ ಅವರು ನಿನ್ನ ಕಾಲಿನ ಮುಂದೆ ಬೀಳುವರು. ಅವರು ನಿನ್ನನ್ನು ‘ಯೆಹೋವನ ಪಟ್ಟಣ,’ ‘ಇಸ್ರೇಲಿನ ಪರಿಶುದ್ಧನಾದ ಯೆಹೋವನ ಚೀಯೋನ್’ ಎಂದು ಕರೆಯುವರು.


ಒಂದು ದಿನ ಯಾರೊಬ್ಬಾಮನು ಜೆರುಸಲೇಮಿನ ಹೊರಗೆ ಹೋಗುತ್ತಿದ್ದನು. ಶೀಲೋವಿನ ಪ್ರವಾದಿಯಾದ ಅಹೀಯನು ಅವನನ್ನು ರಸ್ತೆಯಲ್ಲಿ ಸಂಧಿಸಿದನು. ಅಹೀಯನು ಹೊಸ ಅಂಗಿಯನ್ನು ಧರಿಸಿದ್ದನು. ನಿರ್ಜನವಾಗಿದ್ದ ಆ ದೇಶದಲ್ಲಿ ಇವರಿಬ್ಬರೇ ಇದ್ದರು.


ರಾಜನ ಕುಟುಂಬವನ್ನು ಯೆಹೂದಕ್ಕೆ ಕರೆತರಲು ಜನರೆಲ್ಲರೂ ಜೋರ್ಡನ್ ನದಿಯನ್ನು ದಾಟಿ ಹೋದರು. ರಾಜನು ಅಪೇಕ್ಷೆಪಟ್ಟಿದ್ದನ್ನು ಜನರು ಮಾಡಿದರು. ರಾಜನು ನದಿಯನ್ನು ದಾಟುತ್ತಿರುವಾಗ, ಗೇರನ ಮಗನಾದ ಶಿಮ್ಮಿಯು ಅವನನ್ನು ಸಂಧಿಸಲು ಬಂದನು. ರಾಜನ ಎದುರಿನಲ್ಲಿ ಶಿಮ್ಮಿಯು ನೆಲಕ್ಕೆ ಬಾಗಿ ನಮಸ್ಕರಿಸಿದನು.


ಬಾಲಕನು ಹೊರಟುಹೋದನು. ದಾವೀದನು ತಾನು ಅಡಗಿದ್ದ ಬೆಟ್ಟದ ಮತ್ತೊಂದು ಕಡೆಯ ಸ್ಥಳದಿಂದ ಹೊರಬಂದನು. ದಾವೀದನು ಯೋನಾತಾನನ ಮುಂದೆ ಬಂದು ಮೂರು ಸಲ ತನ್ನ ಮುಖವನ್ನು ನೆಲದವರೆಗೂ ಬಗ್ಗಿಸಿ ನಮಸ್ಕರಿಸಿದನು. ನಂತರ ದಾವೀದ ಮತ್ತು ಯೋನಾತಾನರು ಪರಸ್ಪರ ಮುದ್ದಿಟ್ಟರು, ಅವರಿಬ್ಬರೂ ಒಟ್ಟಾಗಿ ಅತ್ತರು. ದಾವೀದನು ಯೋನಾತಾನನಿಗಿಂತ ಹೆಚ್ಚು ಅತ್ತನು.


ಆಗ ಆರೋನನು ಮೋಶೆಗೆ, “ಸ್ವಾಮೀ, ನಾವು ಮೂರ್ಖತನದಿಂದ ಮಾಡಿದ ಪಾಪಕ್ಕೆ ದಯವಿಟ್ಟು ನಮ್ಮನ್ನು ದಂಡಿಸಬೇಡ.


ಸಹೋದರರು ಯೋಸೇಫನ ಬಳಿಗೆ ಹೋಗಿ ಅವನ ಮುಂದೆ ಅಡ್ಡಬಿದ್ದು, “ನಾವು ನಿನ್ನ ಸೇವಕರಾಗಿದ್ದೇವೆ” ಎಂದು ಹೇಳಿದರು.


ಆದ್ದರಿಂದ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ಈ ಯುವಕನು ತನ್ನ ಸಹೋದರರೊಂದಿಗೆ ಹಿಂತಿರುಗಿ ಹೋಗಲಿ; ನಾನು ಇಲ್ಲಿ ನಿಮಗೆ ಗುಲಾಮನಾಗಿರುವೆನು.


ನಾವು ನಿಮಗೆ, ‘ನಮಗೆ ಒಬ್ಬ ತಂದೆಯಿದ್ದಾನೆ, ಅವನು ವೃದ್ಧನಾಗಿದ್ದಾನೆ; ನಮಗೆ ಪ್ರಾಯದ ತಮ್ಮನಿದ್ದಾನೆ, ನಮ್ಮ ತಂದೆಗೆ ತುಂಬ ವಯಸ್ಸಾಗಿದ್ದಾಗ ಅವನು ಹುಟ್ಟಿದ್ದರಿಂದ ನಮ್ಮ ತಂದೆಯು ಅವನನ್ನು ಪ್ರೀತಿಸುತ್ತಾನೆ. ಆ ಕಿರಿಯ ಮಗನ ಸಹೋದರನು ಸತ್ತುಹೋದನು. ಆದ್ದರಿಂದ ಆ ತಾಯಿಯಲ್ಲಿ ಹುಟ್ಟಿದವರಲ್ಲಿ ಇವನೊಬ್ಬನೇ ಉಳಿದಿದ್ದಾನೆ. ನಮ್ಮ ತಂದೆಯು ಅವನನ್ನು ತುಂಬಾ ಪ್ರೀತಿಸುವನು’ ಎಂದು ಹೇಳಿದೆವು.


ಯೆಹೂದನು, “ಸ್ವಾಮಿ, ನಾವು ಹೇಳುವಂಥದ್ದು ಏನೂ ಇಲ್ಲ; ವಿವರಿಸಲು ಯಾವ ದಾರಿಯೂ ಇಲ್ಲ; ನಾವು ತಪ್ಪಿತಸ್ಥರಲ್ಲವೆಂದು ತೋರಿಸಲು ಯಾವ ಮಾರ್ಗವೂ ಇಲ್ಲ. ನಾವು ಮಾಡಿದ ಬೇರೊಂದು ಕಾರ್ಯದ ನಿಮಿತ್ತ ದೇವರು ನಮ್ಮನ್ನು ತಪ್ಪಿತಸ್ಥರೆಂದು ನಿರ್ಣಯಿಸಿದ್ದಾನೆ. ಆದ್ದರಿಂದ ನಾವೆಲ್ಲರೂ ಬೆನ್ಯಾಮೀನನೂ ನಿನಗೆ ಗುಲಾಮರಾಗಿರುವೆವು” ಎಂದು ಹೇಳಿದನು.


ಆದ್ದರಿಂದ ಸಾರಳಿಗೆ ನಂಬಲಾಗಲಿಲ್ಲ. ಆಕೆ ತನ್ನೊಳಗೆ, “ಈಗಾಗಲೇ ನನಗೆ ವಯಸ್ಸಾಗಿದೆ; ನನ್ನ ಗಂಡನಿಗೂ ವಯಸ್ಸಾಗಿದೆ” ಅಂದುಕೊಂಡಳು.


ಅಬ್ರಹಾಮನು ದೃಷ್ಟಿಸಿ ನೋಡಿದಾಗ ತನ್ನ ಮುಂದೆ ಮೂವರು ಪುರುಷರು ನಿಂತಿರುವುದನ್ನು ಕಂಡನು. ಕೂಡಲೇ ಅವರ ಬಳಿಗೆ ಓಡಿಹೋಗಿ ಅವರಿಗೆ ಸಾಷ್ಟಾಂಗನಮಸ್ಕಾರ ಮಾಡಿ ಅವರಿಗೆ,


ಅಂತೆಯೇ ನೀರನ್ನು ಕಂಡುಕೊಳ್ಳಲು ದೇಶದ ಒಂದು ಕಡೆಗೆ ಅಹಾಬನು, ಮತ್ತೊಂದು ಕಡೆಗೆ ಓಬದ್ಯನು ಹೊರಟರು. ಅವರಿಬ್ಬರೂ ದೇಶವನ್ನೆಲ್ಲಾ ಸಂಚರಿಸಿದರು.


ಎಲೀಯನು, “ಹೌದು, ನಾನೇ. ಹೋಗಿ, ನಿನ್ನ ಒಡೆಯನಾದ ರಾಜನಿಗೆ ನಾನಿಲ್ಲಿದ್ದೇನೆಂದು ಹೇಳು” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು