Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:19 - ಪರಿಶುದ್ದ ಬೈಬಲ್‌

19 ಎಲೀಯನು ಆ ಸ್ಥಳದಿಂದ ಹೊರಟು ಶಾಫಾಟನ ಮಗನಾದ ಎಲೀಷನನ್ನು ಕಂಡುಹಿಡಿಯಲು ಹೋದನು. ಎಲೀಷನು ಹನ್ನೆರಡು ಜೋಡಿ ಎತ್ತುಗಳನ್ನು ತಂದು ಭೂಮಿಯನ್ನು ಉಳುತ್ತಿದ್ದನು. ಎಲೀಯನು ಬಂದಾಗ ಎಲೀಷನು ಹನ್ನೆರಡನೆಯ ಜೋಡಿಯಿಂದ ತಾನಾಗಿ ಭೂಮಿಯನ್ನು ಉಳುತ್ತಿದ್ದನು. ಎಲೀಯನು ಎಲೀಷನ ಹತ್ತಿರಕ್ಕೆ ಹೋಗಿ ತನ್ನ ಮೇಲಂಗಿಯನ್ನು ಎಲೀಷನಿಗೆ ತೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆ ಜೋಡಿಯಿಂದ ತಾನಾಗಿಯೇ ಹೊಲವನ್ನು ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆಯ ಜೋಡಿಯಿಂದ ತಾನಾಗಿ ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆಯ ಜೋಡಿಯಿಂದ ತಾನಾಗಿ ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹಾಗೆಯೇ ಎಲೀಯನು ಅಲ್ಲಿಂದ ಹೊರಟು ಶಾಫಾಟನ ಮಗ ಎಲೀಷನನ್ನು ಕಂಡುಕೊಂಡನು. ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡಿ ಎತ್ತುಗಳಿಂದ ಹೊಲವನ್ನು ಉಳುತ್ತಿದ್ದನು. ಅವನು ಹನ್ನೆರಡನೆಯ ಜೋಡಿನ ಸಂಗಡ ಇದ್ದಾಗ, ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ, ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:19
14 ತಿಳಿವುಗಳ ಹೋಲಿಕೆ  

ಎಲೀಯನು ತನ್ನ ಮೇಲಂಗಿಯನ್ನು ತೆಗೆದು ಅದರಿಂದ ನೀರನ್ನು ಹೊಡೆದನು. ಆಗ ನೀರು ಎರಡು ಭಾಗವಾಗಿ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ನಿಂತುಕೊಂಡಿತು. ನಂತರ ಎಲೀಯ ಮತ್ತು ಎಲೀಷರು ಒಣನೆಲದ ಮೇಲೆ ನದಿಯನ್ನು ದಾಟಿದರು.


ಸೌಲನು, “ಅವನ ರೂಪ ಹೇಗಿದೆ?” ಎಂದು ಕೇಳಿದನು. ಆ ಹೆಂಗಸು, “ಅವನು ನಿಲುವಂಗಿಯನ್ನು ಧರಿಸಿಕೊಂಡಿರುವ ಒಬ್ಬ ಮುದುಕನಂತಿದ್ದಾನೆ” ಎಂದು ಹೇಳಿದಳು. ಅವನೇ ಸಮುವೇಲನೆಂಬುದನ್ನು ಸೌಲನು ತಿಳಿದುಕೊಂಡು ಸಾಷ್ಟಾಂಗನಮಸ್ಕಾರ ಮಾಡಿದನು.


ಅವನು, ‘ನಾನು ಪ್ರವಾದಿಯಲ್ಲ, ನಾನೊಬ್ಬ ರೈತ. ನಾನು ಬಾಲ್ಯಪ್ರಾಯದಿಂದಲೇ ರೈತನಾಗಿದ್ದೇನೆ’ ಎಂದು ಹೇಳುವನು.


ಎಲೀಯನಿಗೆ ಆ ಧ್ವನಿಯು ಕೇಳಿಸಿದಾಗ, ಅವನು ತನ್ನ ಮೇಲಂಗಿಯಿಂದ ಮುಖವನ್ನು ಮುಚ್ಚಿಕೊಂಡನು. ನಂತರ ಅವನು ಗುಹೆಯ ಹತ್ತಿರಕ್ಕೆ ಹೋಗಿ, ಅದರ ದ್ವಾರದಲ್ಲಿ ನಿಂತುಕೊಂಡನು. ಆಗ ಆ ಧ್ವನಿಯು, “ಎಲೀಯನೇ, ನೀನು ಏಕೆ ಇಲ್ಲಿರುವೆ?” ಎಂದು ಅವನನ್ನು ಕೇಳಿತು.


ಆ ಸಮಯದಲ್ಲಿ ಯೆಹೋವನ ದೂತನು ಗಿದ್ಯೋನ ಎಂಬ ವ್ಯಕ್ತಿಯ ಬಳಿಗೆ ಬಂದನು. ಯೆಹೋವನ ದೂತನು ಒಫ್ರ ಎಂಬ ಊರಲ್ಲಿ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಆ ಗಿಡವು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಯೋವಾಷನು ಗಿದ್ಯೋನನ ತಂದೆ. ಗಿದ್ಯೋನನು ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು. ಯೆಹೋವನ ದೂತನು ಗಿದ್ಯೋನನ ಹತ್ತಿರ ಕುಳಿತುಕೊಂಡನು. ಮಿದ್ಯಾನ್ಯರಿಗೆ ಗೋಧಿ ಕಾಣಬಾರದೆಂದು ಗಿದ್ಯೋನನು ಮರೆಯಾಗಿದ್ದನು.


ಮೋಶೆಯ ಮಾವನ ಹೆಸರು ಇತ್ರೋನನು. ಇತ್ರೋನನು ಮಿದ್ಯಾನಿನ ಯಾಜಕನಾಗಿದ್ದನು. ಮೋಶೆಯು ಇತ್ರೋನನ ಕುರಿಗಳಿಗೆ ಕುರುಬನಾಗಿದ್ದನು. ಒಂದು ದಿನ, ಮೋಶೆಯು ಕುರಿಗಳನ್ನು ಮರುಭೂಮಿಯ ಪಶ್ಚಿಮಭಾಗಕ್ಕೆ ನಡೆಸಿಕೊಂಡು ದೇವರ ಬೆಟ್ಟವೆಂದು ಕರೆಯಲ್ಪಡುವ ಸೀನಾಯಿ ಎಂಬ ಹೋರೇಬ್ ಬೆಟ್ಟಕ್ಕೆ ಹೋದನು.


ಅದಕ್ಕೆ ಅಮೋಸನು ಅಮಚ್ಯನಿಗೆ, “ಪ್ರವಾದಿಸುವದು ನನ್ನ ಕೆಲಸವಲ್ಲ. ಅಲ್ಲದೆ ನಾನು ಪ್ರವಾದಿಗಳ ಕುಟುಂಬಕ್ಕೂ ಸೇರಿದವನಲ್ಲ. ನಾನು ದನ ಮೇಯಿಸುವವನೂ, ಅತ್ತಿ ಮರಗಳನ್ನು ಹತ್ತಿ ಹಣ್ಣು ಕೀಳುವವನೂ ಆಗಿದ್ದೇನೆ.


ಕೆಲವರನ್ನು ಕಲ್ಲೆಸೆದು ಕೊಂದರು, ಕೆಲವರನ್ನು ಅರ್ಧಕತ್ತರಿಸಿ ಎರಡು ಭಾಗ ಮಾಡಿದರು. ಕೆಲವರನ್ನು ಕತ್ತಿಗಳಿಂದ ಇರಿದುಕೊಂದರು. ಇವರಲ್ಲಿ ಕೆಲವರು ಕುರಿ ಮತ್ತು ಹೋತಗಳ ಚರ್ಮಗಳನ್ನು ತೊಟ್ಟುಕೊಂಡಿದ್ದರು; ಕೆಲವರು ಬಡವರಾಗಿದ್ದರು; ಹಿಂಸೆಗೆ ಒಳಗಾಗಿದ್ದರು ಮತ್ತು ಜನರ ಕ್ರೂರ ವರ್ತನೆಗೆ ಗುರಿಯಾಗಿದ್ದರು.


ಸೌಲನು ಹಸುಗಳನ್ನು ಹೊಡೆದುಕೊಂಡು ಹೊಲಕ್ಕೆ ಹೋಗಿದ್ದನು. ಸೌಲನು ಹೊಲದಿಂದ ಬಂದಾಗ ಜನರೆಲ್ಲ ಅಳುವುದು ಕೇಳಿಸಿತು. ಸೌಲನು, “ಏನಾಯಿತು? ಜನರು ಅಳುತ್ತಿರುವುದೇಕೆ?” ಎಂದು ಕೇಳಿದನು. ಆಗ ಜನರೆಲ್ಲ ಯಾಬೇಷಿನ ಸಂದೇಶಕರು ಹೇಳಿದ್ದನ್ನೆಲ್ಲ ಸೌಲನಿಗೆ ತಿಳಿಸಿದರು.


ನಂತರ ನಿಂಷಿಯ ಮಗನಾದ ಯೇಹುವನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸು. ಅಬೇಲ್ ಮೆಹೋಲದ ಶಾಫಾಟನ ಮಗನಾದ ಎಲೀಷನನ್ನು ನಿನ್ನ ಜಾಗದಲ್ಲಿ ಪ್ರವಾದಿಯನ್ನಾಗಿ ಅಭಿಷೇಕಿಸು.


ನಾನು ಕುರಿಕಾಯುತ್ತಿರುವಾಗ ಯೆಹೋವನು ನನ್ನನ್ನು ಕುರಿಗಳ ಹಿಂದೆ ಹೋಗಬೇಡ ಎಂದು ಕರೆದನು. ಆತನು ನನಗೆ, ‘ನನ್ನ ಜನರಾದ ಇಸ್ರೇಲರ ಬಳಿಗೆ ಹೋಗಿ ಪ್ರವಾದಿಸು’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು