Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:3 - ಪರಿಶುದ್ದ ಬೈಬಲ್‌

3 ಎಲೀಯನು ಇದನ್ನು ಕೇಳಿ ಭಯಗೊಂಡನು. ಅವನು ತನ್ನ ಜೀವರಕ್ಷಣೆಗಾಗಿ ಓಡಿಹೋದನು. ಅವನು ತನ್ನ ಸೇವಕನನ್ನೂ ತನ್ನ ಸಂಗಡ ಕರೆದೊಯ್ದನು. ಅವರು ಯೆಹೂದದ ಬೇರ್ಷೆಬಕ್ಕೆ ಹೋದರು. ಎಲೀಯನು ಬೇರ್ಷೆಬದಲ್ಲಿ ತನ್ನ ಸೇವಕನನ್ನು ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣ ರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನು ಅದನ್ನು ಕೇಳಿದೊಡನೆ ಪ್ರಾಣರಕ್ಷಣೆಗಾಗಿ ಅಲ್ಲಿಂದ ಹೊರಟು ಜುದೇಯದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬೀಳ್ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಅದನ್ನು ಕೇಳಿ ಎದ್ದು, ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ, ಅಲ್ಲಿ ತನ್ನ ಸೇವಕನನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:3
13 ತಿಳಿವುಗಳ ಹೋಲಿಕೆ  

ಅವರು ಆ ಸ್ಥಳದಲ್ಲಿ ಒಪ್ಪಂದ ಮಾಡಿಕೊಂಡಿದ್ದರಿಂದ ಆ ಬಾವಿಗೆ ಬೇರ್ಷೆಬ ಎಂದು ಹೆಸರಾಯಿತು.


ಆದರೆ ಪ್ರವಾದಿಗಳು ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ಆದರೆ ನನಗೆ ತೋರಿಸಲ್ಪಟ್ಟ ಆಶ್ಚರ್ಯಕರವಾದ ಸಂಗತಿಗಳ ಬಗ್ಗೆ ನಾನು ಬಹು ಹೆಮ್ಮೆಪಡಕೂಡದು. ಆದ್ದರಿಂದಲೇ ಬಾಧೆಯ ಸಮಸ್ಯೆಯೊಂದು ನನಗೆ ಕೊಡಲ್ಪಟ್ಟಿತು. ಸೈತಾನನಿಂದ ಬಂದ ದೂತನೇ ಈ ಸಮಸ್ಯೆ. ಬಹಳವಾಗಿ ಹೆಮ್ಮೆಪಡದಂತೆ ನನ್ನನ್ನು ಹೊಡೆಯುವುದಕ್ಕಾಗಿ ಅದನ್ನು ಕಳುಹಿಸಲಾಗಿತ್ತು.


ಸೊಲೊಮೋನನ ಆಳ್ವಿಕೆಯಲ್ಲಿ ಯೆಹೂದದ ಮತ್ತು ಇಸ್ರೇಲಿನ ಜನರೆಲ್ಲರೂ ದಾನ್‌ನಿಂದ ಬೇರ್ಷೆಬದವರೆಗೆ ಸುರಕ್ಷಿತವಾಗಿದ್ದರು; ಶಾಂತಿಯಿಂದ ಜೀವಿಸುತ್ತಿದ್ದರು. ಜನರು ತಮ್ಮ ಅಂಜೂರ ಗಿಡಗಳ ಮತ್ತು ದ್ರಾಕ್ಷಾಲತೆಗಳ ನೆರಳಿನಲ್ಲಿ ಸಮಾಧಾನದಿಂದ ಕುಳಿತಿರುತ್ತಿದ್ದರು.


ಆದರೆ ದಾವೀದನು, “ಸೌಲನು ಎಂದಾದರೂ ಒಂದು ದಿನ ನನ್ನನ್ನು ಹಿಡಿದುಕೊಳ್ಳುವನು. ಈಗ ಫಿಲಿಷ್ಟಿಯರ ರಾಜ್ಯಕ್ಕೆ ತಪ್ಪಿಸಿಕೊಂಡು ಹೋಗುವುದೇ ನಾನು ಮಾಡಬಹುದಾದ ಒಳ್ಳೆಯ ಕೆಲಸ. ಆಗ ಸೌಲನು ಇಸ್ರೇಲಿನಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುತ್ತಾನೆ. ಸೌಲನಿಂದ ತಪ್ಪಿಸಿಕೊಳ್ಳಲು ಇದೇ ಸರಿಯಾದ ಮಾರ್ಗ” ಎಂದು ತನ್ನಲ್ಲೇ ಯೋಚಿಸಿದನು.


ಮೋಶೆಯು ಮಾಡಿದ್ದು ಫರೋಹನಿಗೂ ತಿಳಿಯಿತು. ಆದ್ದರಿಂದ ಮೋಶೆಯನ್ನು ಕೊಲ್ಲಿಸಲು ಅವನು ತೀರ್ಮಾನಿಸಿದನು. ಆದರೆ ಮೋಶೆ ಫರೋಹನ ಬಳಿಯಿಂದ ಮಿದ್ಯಾನ್ ದೇಶಕ್ಕೆ ಓಡಿಹೋದನು.


ಮರುದಿನ ಮುಂಜಾನೆ, ಅಬ್ರಹಾಮನು ಸ್ವಲ್ಪ ಆಹಾರವನ್ನು ಮತ್ತು ಸ್ವಲ್ಪ ನೀರನ್ನು ತೆಗೆದು ಹಾಗರಳಿಗೆ ಕೊಟ್ಟನು. ಹಾಗರಳು ಅವುಗಳನ್ನು ತೆಗೆದುಕೊಂಡು ತನ್ನ ಮಗನೊಡನೆ ಅಲ್ಲಿಂದ ಹೊರಟುಹೋದಳು. ಹಾಗರಳು ಆ ಸ್ಥಳವನ್ನು ಬಿಟ್ಟು ಬೇರ್ಷೆಬದ ಮರಳುಗಾಡಿನಲ್ಲಿ ಅಲೆಯತೊಡಗಿದಳು.


ಅವನ ಮೊದಲನೆಯ ಮಗ ಯೋವೇಲ್, ಎರಡನೆಯ ಮಗ ಅಬೀಯ. ಯೋವೇಲನು ಮತ್ತು ಅಬೀಯನು ಬೇರ್ಷೆಬದಲ್ಲಿ ನ್ಯಾಯಾಧೀಶರಾಗಿದ್ದರು.


ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು