Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:2 - ಪರಿಶುದ್ದ ಬೈಬಲ್‌

2 “ಎಲ್ಲರಂತೆ ನನಗೂ ಸಾಯುವ ಕಾಲ ಸಮೀಪಿಸಿತು. ನೀನಾದರೋ ಬಲಿಷ್ಠನಾಗಿರು; ಧೈರ್ಯವಂತನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಭೂಲೋಕದವರೆಲ್ಲರೂ ಹೋಗುವ ದಾರಿಯನ್ನು ನಾನೂ ಈಗ ಹಿಡಿಯಬೇಕು. ನೀನು ಧೈರ್ಯದಿಂದಿರು. ನಿನ್ನ ಪೌರುಷವನ್ನು ತೋರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಜಗದ ಜನರೆಲ್ಲರು ಹೋಗುವ ದಾರಿಯನ್ನು ನಾನು ಈಗ ಹಿಡಿಯಬೇಕು; ನೀನು ಧೈರ್ಯದಿಂದಿರು. ನಿನ್ನ ಸಾಮರ್ಥ್ಯವನ್ನು ತೋರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಭೂಲೋಕದವರೆಲ್ಲರೂ ಹೋಗುವ ದಾರಿಯನ್ನು ನಾನೂ ಈಗ ಹಿಡಿಯಬೇಕು; ನೀನು ಧೈರ್ಯದಿಂದಿರು, ನಿನ್ನ ಪೌರುಷವನ್ನು ತೋರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಭೂಮಿಯಲ್ಲಿರುವವರೆಲ್ಲರು ಹೋಗುವ ಮಾರ್ಗವಾಗಿ ನಾನು ಹೋಗುತ್ತೇನೆ. ನೀನು ಬಲಗೊಂಡು ಶೂರನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:2
21 ತಿಳಿವುಗಳ ಹೋಲಿಕೆ  

“ನಾನು ಇಹಲೋಕ ಯಾತ್ರೆಯನ್ನು ಮುಗಿಸುವ ಕಾಲಬಂದಂತಿದೆ. ಯೆಹೋವನು ನಿಮಗಾಗಿ ಅನೇಕ ಮಹತ್ಕಾರ್ಯಗಳನ್ನು ಮಾಡಿದ್ದು ನಿಮಗೆ ಗೊತ್ತಿದೆ; ಅದನ್ನು ನೀವು ಮನಃಪೂರ್ವಕವಾಗಿ ನಂಬುತ್ತೀರಿ. ಆತನು ತನ್ನ ಯಾವ ವಾಗ್ದಾನವನ್ನೂ ನೆರವೇರಿಸದೆ ಬಿಟ್ಟಿಲ್ಲ. ಯೆಹೋವನು ನಮಗೆ ಮಾಡಿದ ಪ್ರತಿಯೊಂದು ವಾಗ್ದಾನವನ್ನು ನೆರವೇರಿಸಿದ್ದಾನೆ.


ಕಡೇ ಮಾತೇನೆಂದರೆ, ಪ್ರಭುವಿನಲ್ಲಿಯೂ ಆತನ ಮಹಾಶಕ್ತಿಯಲ್ಲಿಯೂ ಬಲವಾಗಿರಿ.


ಜಾಗರೂಕರಾಗಿರಿ, ನಂಬಿಕೆಯಲ್ಲಿ ದೃಢವಾಗಿರಿ. ಧೈರ್ಯದಿಂದಿರಿ ಮತ್ತು ಬಲಿಷ್ಠರಾಗಿರಿ.


ಪ್ರತಿಯೊಬ್ಬರೂ ಒಂದೇಸಾರಿ ಸಾಯುವರು. ಅನಂತರ ಅವರಿಗೆ ನ್ಯಾಯತೀರ್ಪಾಗುವುದು.


ನೂನನ ಮಗನಾದ ಯೆಹೋಶುವನೊಂದಿಗೆ ಯೆಹೋವನು ಮಾತನಾಡಿ ಹೇಳಿದ್ದೇನೆಂದರೆ: “ಧೈರ್ಯವಂತನಾಗಿದ್ದು ಬಲಗೊಳ್ಳು, ನೀನು ಜನರನ್ನು ವಾಗ್ದಾನದ ದೇಶಕ್ಕೆ ನಡೆಸಬೇಕು. ನಾನು ನಿನ್ನೊಂದಿಗಿರುವೆನು.”


ಕ್ರಿಸ್ತ ಯೇಸುವಿನ ನಿಷ್ಠಾವಂತ ಸೈನಿಕನಾಗಿರುವ ತಿಮೊಥೆಯನೇ, ನೀನು ನನಗೆ ಮಗನಂತಿರುವೆ. ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲ ಹೊಂದಿದವನಾಗು.


ನೀನು ಯೌವನಸ್ಥನಾಗಿರುವುದರಿಂದ ನಿನ್ನನ್ನು ಪ್ರಮುಖನಲ್ಲವೆಂದು ಪರಿಗಣಿಸಿ ಅಸಡ್ಡೆಮಾಡಲು ಯಾರಿಗೂ ಅವಕಾಶಕೊಡದಿರು. ವಿಶ್ವಾಸಿಗಳು ಹೇಗೆ ಜೀವಿಸಬೇಕೆಂಬುದಕ್ಕೆ ನೀನೇ ಅವರಿಗೆ ಮಾದರಿಯಾಗಿರು. ನಡೆನುಡಿಗಳಲ್ಲಿ, ಪ್ರೀತಿಯಲ್ಲಿ, ನಂಬಿಕೆಯಲ್ಲಿ ಮತ್ತು ಪರಿಶುದ್ಧ ಜೀವನದಲ್ಲಿ ನೀನೇ ಅವರಿಗೆ ಮಾದರಿಯಾಗಿರು.


ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.


ಮರಣ ಹೊಂದದೆ ಚಿರಂಜೀವಿಯಾಗಿರುವವನು ಯಾರೂ ಇಲ್ಲ. ಯಾವ ವ್ಯಕ್ತಿಯೂ ಸಮಾಧಿಯಿಂದ ತಪ್ಪಿಸಿಕೊಳ್ಳಲಾರನು.


ನೀನು ನನ್ನನ್ನು ಮರಣಕ್ಕೀಡು ಮಾಡಿರುವುದು ನನಗೆ ಗೊತ್ತಿದೆ. ಜೀವಿಸಿರುವ ಪ್ರತಿಯೊಬ್ಬನೂ ಸಾಯಲೇಬೇಕು.


“ಯಾಕೆಂದರೆ ನಾನು ಮರಳಿ ಬರಲಾಗದ ಸ್ಥಳಕ್ಕೆ ಇನ್ನು ಕೆಲವೇ ವರ್ಷಗಳಲ್ಲಿ ಹೊರಟುಹೋಗುವೆನು.


ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಧೈರ್ಯವಾಗಿದ್ದು ಬಲಗೊಳ್ಳು ಮತ್ತು ಈ ಕಾರ್ಯವನ್ನು ಮಾಡಿ ಮುಗಿಸು. ನನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವದರಿಂದ ನೀನು ಭಯಪಡುವ ಕಾರಣವೇ ಇಲ್ಲ. ಆತನು ನಿನ್ನೊಂದಿಗಿದ್ದು ಆಲಯವನ್ನು ಸಂಪೂರ್ಣ ಮಾಡುವಂತೆ ನಿನ್ನನ್ನು ನಡೆಸುತ್ತಾನೆ. ನೀನು ಯೆಹೋವನ ಆಲಯವನ್ನು ಕಟ್ಟುವೆ.


ನನ್ನ ದೇವರಾದ ಯೆಹೋವನೇ, ನನ್ನ ತಂದೆಯ ಸ್ಥಾನದಲ್ಲಿ ನನ್ನನ್ನು ನೀನು ರಾಜನನ್ನಾಗಿ ಮಾಡಿದೆ. ಆದರೆ ನಾನೊಬ್ಬ ಚಿಕ್ಕ ಮಗುವಿನಂತಿದ್ದೇನೆ. ನಾನು ಮಾಡಬೇಕಾದ ಕಾರ್ಯಗಳನ್ನು ಮಾಡಲು ಇರಬೇಕಾದ ಬುದ್ದಿವಂತಿಕೆಯು ನನ್ನಲ್ಲಿಲ್ಲ.


ನೀನು ಶಕ್ತನಾಗಿರು. ನಮ್ಮ ಜನರಿಗಾಗಿ ಮತ್ತು ನಮ್ಮ ದೇವರ ನಗರಗಳಿಗಾಗಿ ಧೈರ್ಯದಿಂದ ಹೋರಾಡೋಣ. ಯೆಹೋವನು ತನಗೆ ಸರಿಯೆನಿಸುವುದನ್ನು ಮಾಡಲಿ” ಎಂದು ಹೇಳಿದನು.


ಆದರೆ ಈಗ ಮಗು ಸತ್ತುಹೋಗಿದೆ. ಆದ್ದರಿಂದ ಈಗ ನಾನೇಕೆ ಉಪವಾಸಮಾಡಬೇಕು? ಆ ಮಗುವಿಗೆ ಮತ್ತೆ ನಾನು ಜೀವವನ್ನು ಕೊಡಲು ಸಾಧ್ಯವೇ? ಇಲ್ಲ! ಎಂದಾದರೂ ಒಂದು ದಿನ ನಾನು ಅವನ ಬಳಿಗೆ ಹೋಗುತ್ತೇನೆ. ಆದರೆ ಅವನು ನನ್ನ ಬಳಿಗೆ ಹಿಂದಿರುಗುವುದಿಲ್ಲ” ಎಂದನು.


ಯೆಹೋವನು ಮೋಶೆಗೆ ಕೊಟ್ಟಿರುವ ಕಟ್ಟಳೆಗಳನ್ನು ನೀನು ಜಾಗ್ರತೆಯಾಗಿ ಅನುಸರಿಸಿ ನಡೆದರೆ ನಿನಗೆ ಯಶಸ್ಸು ಪ್ರಾಪ್ತವಾಗುವುದು. ಸ್ಥಿರಚಿತ್ತನಾಗಿರು; ಧೈರ್ಯದಿಂದಿರು; ಹೆದರಬೇಡ; ಕಳವಳಪಡಬೇಡ.


ಬಂಗಾರದ ಕೆಲಸಗಾರರೂ ಬೆಳ್ಳಿ, ತಾಮ್ರ, ಕಬ್ಬಿಣದ ಕೆಲಸಗಾರರೂ ಲೆಕ್ಕವಿಲ್ಲದಷ್ಟು ಇದ್ದಾರೆ. ಈಗ ನೀನು ಕೆಲಸ ಪ್ರಾರಂಭಿಸು. ದೇವರು ನಿನ್ನ ಸಂಗಡವಿರಲಿ” ಎಂದು ಹೇಳಿದನು.


ಸೊಲೊಮೋನನೇ, ಆತನ ಪವಿತ್ರ ದೇವಾಲಯವನ್ನು ಕಟ್ಟಲು ದೇವರು ನಿನ್ನನ್ನು ಆರಿಸಿಕೊಂಡಿರುತ್ತಾನೆಂಬುದನ್ನು ನೀನು ತಿಳಿಯಬೇಕು. ಆದ್ದರಿಂದ ನೀನು ಬಲಗೊಂಡು ಕಾರ್ಯವನ್ನು ಸಂಪೂರ್ಣಗೊಳಿಸು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು