Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:23 - ಪರಿಶುದ್ದ ಬೈಬಲ್‌

23 ಆಗ ಸೊಲೊಮೋನನು, “ಯೆಹೋವನಾಣೆ, ಅದೋನೀಯನು ಈ ರೀತಿ ನನ್ನನ್ನು ಕೇಳಿದ್ದಕ್ಕಾಗಿ ಅವನು ತನ್ನ ಜೀವವನ್ನೇ ಬೆಲೆಯಾಗಿ ತೆರಬೇಕಾಗುವುದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇದಲ್ಲದೆ ಅರಸನಾದ ಸೊಲೊಮೋನನು, “ಯೆಹೋವನಾಣೆ, ಅದೋನೀಯನ ಈ ಮಾತಿಗೋಸ್ಕರ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇದಲ್ಲದೆ, ಅರಸ ಸೊಲೊಮೋನನು, “ಸರ್ವೇಶ್ವರನಾಣೆ, ಅದೋನೀಯನ ಈ ಮಾತಿನ ನಿಮಿತ್ತ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದುದನ್ನು ಮಾಡಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇದಲ್ಲದೆ ಅರಸನಾದ ಸೊಲೊಮೋನನು - ಯೆಹೋವನಾಣೆ, ಅದೋನೀಯನ ಈ ಮಾತಿಗೋಸ್ಕರ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ತರುವಾಯ ಅರಸನಾದ ಸೊಲೊಮೋನನು, “ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ, ನನಗೆ ದೇವರು ಹಾಗೆಯೂ, ಅದಕ್ಕಿಂತಲೂ ಅಧಿಕವಾಗಿಯೂ ಮಾಡಲಿ,” ಎಂದು ಯೆಹೋವ ದೇವರ ಹೆಸರಿನಲ್ಲಿ ಆಣೆ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:23
14 ತಿಳಿವುಗಳ ಹೋಲಿಕೆ  

ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲಿಯೇ ನನಗೆ ಸಮಾಧಿಯಾಗಬೇಕು. ಈ ಪ್ರತಿಜ್ಞೆಯನ್ನು ನಾನು ಪೂರ್ಣಗೊಳಿಸದಿದ್ದರೆ ನನ್ನನ್ನು ಶಿಕ್ಷಿಸು ಎಂದು ನಾನು ಯೆಹೋವನಲ್ಲಿ ಕೇಳಿಕೊಳ್ಳುತ್ತೇನೆ. ಮರಣವು ಮಾತ್ರ ನಮ್ಮಿಬ್ಬರನ್ನು ಅಗಲಿಸಬಲ್ಲದು” ಎಂದು ದೃಢವಾಗಿ ಹೇಳಿದಳು.


ನನ್ನ ವೈರಿಗಳಿಗೆ ಜಯವಾಗಲು ಬಿಡಬೇಡ. ಅವರು ಕುಯುಕ್ತಿಗಳನ್ನು ಮಾಡುತ್ತಿದ್ದಾರೆ; ಅವುಗಳನ್ನು ವಿಫಲಗೊಳಿಸು.


ದುಷ್ಟರು ಬೇರೆಯವರಿಗೆ ಕೇಡುಮಾಡಲು ಆಲೋಚಿಸುವರು. ಆದರೆ ಆ ಕೇಡುಗಳು ಅವರಿಗೇ ಸಂಭವಿಸುವಂತೆ ದೇವರು ಮಾಡುವನು. ಆಗ ಅವರನ್ನು ಕಂಡ ಪ್ರತಿಯೊಬ್ಬನೂ ಆಶ್ಚರ್ಯದಿಂದ ತಲೆಯಾಡಿಸುವನು.


“ಆಗ ಅರಸನು ಆ ಸೇವಕನಿಗೆ, ‘ನೀನು ಕೆಟ್ಟ ಆಳು! ನಿನ್ನ ಸ್ವಂತ ಮಾತುಗಳಿಂದಲೇ ನಿನಗೆ ತೀರ್ಪು ಮಾಡುತ್ತೇನೆ. ನನ್ನನ್ನು ಕಠಿಣ ಮನುಷ್ಯನೆಂದು ನೀನು ಹೇಳಿದೆ. ಸ್ವತಃ ನಾನೇ ಸಂಪಾದನೆ ಮಾಡದ ಹಣವನ್ನು ನಾನು ತೆಗೆದುಕೊಳ್ಳುವುದಾಗಿಯೂ ಸ್ವತಃ ನಾನೇ ಬೆಳೆಯದ ದವಸಧಾನ್ಯಗಳನ್ನು ನಾನು ಸಂಗ್ರಹಿಸುವುದಾಗಿಯೂ ನೀನು ಹೇಳಿದೆ.


ಜ್ಞಾನಿಯ ಮಾತುಗಳು ಅವನಿಗೆ ಘನತೆಯನ್ನು ತರುತ್ತವೆ; ಮೂಢನ ಮಾತುಗಳು ಅವನಿಗೆ ನಾಶನವನ್ನು ತರುತ್ತವೆ.


ಇದಲ್ಲದೆ ರಾಜನು, “ಈ ದಿನದ ಅಂತ್ಯದೊಳಗೆ ನಾನು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದ ಮೇಲೆ ಉಳಿಯುವಂತೆ ಮಾಡಿದರೆ ದೇವರು ನನ್ನನ್ನು ದಂಡಿಸಲಿ!” ಎಂದು ಹೇಳಿದನು.


ನಂತರ ಅವರು ಬೆನ್ಹದದನ ಮತ್ತೊಂದು ಸಂದೇಶದೊಂದಿಗೆ ಹಿಂದಿರುಗಿ ಬಂದರು. ಆ ಸಂದೇಶವು ಹೀಗಿತ್ತು: “ನಾನು ಸಮಾರ್ಯವನ್ನು ಸಂಪೂರ್ಣವಾಗಿ ನಾಶಗೊಳಿಸುತ್ತೇನೆ. ಆ ನಗರದಲ್ಲಿ ಏನನ್ನೂ ಉಳಿಸುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ನನ್ನ ಜನರು, ಆ ನಗರವನ್ನು ಕಂಡುಹಿಡಿಯಲಾಗದಂತೆ ಮತ್ತು ಮನೆಗೆ ತೆಗೆದುಕೊಂಡು ಹೋಗಲು ಒಂದು ಹಿಡಿ ಧೂಳೂ ಉಳಿಯದಂತೆ ಮಾಡಿಬಿಡುತ್ತಾರೆ. ನಾನು ಇದನ್ನು ಮಾಡದೆ ಹೋದರೆ ದೇವರು ನನ್ನನ್ನು ನಾಶಪಡಿಸಲಿ!”


ಅಲ್ಲದೆ ಅಮಾಸನಿಗೆ, ‘ನೀನು ನನ್ನ ಕುಟುಂಬದ ಒಂದು ಭಾಗವಾಗಿರುವೆ. ನಾನು ನಿನ್ನನ್ನು ಯೋವಾಬನ ಸ್ಥಾನದಲ್ಲಿ ಸೇನಾಪತಿಯನ್ನಾಗಿ ಮಾಡದೆ ಹೋದರೆ, ದೇವರು ನನ್ನನ್ನು ದಂಡಿಸಲಿ’ ಎಂದು ಹೇಳಿ” ಎಂದನು.


ಅಂದು ಹೊತ್ತು ಇಳಿಯುವ ಮೊದಲೇ ಜನರು ದಾವೀದನಿಗೆ ಊಟ ಮಾಡುವಂತೆ ಒತ್ತಾಯಿಸಿದರು. ಆದರೆ ದಾವೀದನು, “ಸೂರ್ಯನು ಮುಳುಗುವುದಕ್ಕೆ ಮುಂಚಿತವಾಗಿ ನಾನು ರೊಟ್ಟಿಯನ್ನಾಗಲಿ ಇತರ ಆಹಾರವನ್ನಾಗಲಿ ತಿಂದರೆ, ದೇವರು ನನ್ನನ್ನು ದಂಡಿಸಲಿ ಅಥವಾ ನನಗೆ ಕೇಡು ಬರಮಾಡಲಿ” ಎಂದು ಪ್ರತಿಜ್ಞೆ ಮಾಡಿದನು.


ಯೆಹೋವನು ಹೇಳಿರುವ ಸಂಗತಿಗಳು ನಿಜವಾಗಿಯೂ ಸಂಭವಿಸುತ್ತವೆ ಎಂದು ನಾನು ಪ್ರಮಾಣ ಮಾಡುತ್ತೇನೆ. ಸೌಲನ ವಂಶದವರಿಂದ ರಾಜ್ಯಾಧಿಕಾರವನ್ನು ಕಿತ್ತುಕೊಂಡು ದಾವೀದನಿಗೆ ಕೊಡುವುದಾಗಿ ಯೆಹೋವನು ಹೇಳಿದ್ದಾನೆ. ಯೆಹೋವನು ಇಸ್ರೇಲಿಗೂ ಯೆಹೂದಕ್ಕೂ ದಾವೀದನನ್ನು ರಾಜನನ್ನಾಗಿ ಮಾಡುತ್ತಾನೆ. ಅವನು ದಾನಿನಿಂದ ಬೇರ್ಷೆಬದವರೆಗೆ ಆಳುತ್ತಾನೆ. ಈ ಸಂಗತಿಗಳು ನೆರವೇರುವುದಕ್ಕೆ ನಾನು ಸಹಾಯ ಮಾಡದಿದ್ದರೆ ದೇವರು ನನಗೆ ಕೆಟ್ಟದ್ದನ್ನು ಮಾಡಲಿ” ಎಂದು ಹೇಳಿದನು.


ಸೌಲನು, “ನಾನು ನನ್ನ ಆಣೆಯನ್ನು ನೆರವೇರಿಸದಿದ್ದರೆ ಯೆಹೋವನು ಬಹುಶಃ ನನಗೆ ಬಹಳ ಕೆಟ್ಟದ್ದನ್ನು ಮಾಡಬಹುದು. ಯೋನಾತಾನನು ಸಾಯಲೇಬೇಕು” ಎಂದು ಹೇಳಿದನು.


ರಾಜನ ಕೋಪವು ಸಿಂಹದ ಘರ್ಜನೆಯಂತಿದೆ. ರಾಜನನ್ನು ಕೋಪಗೊಳಿಸಿದರೆ ಪ್ರಾಣಕ್ಕೆ ಹಾನಿ.


ಆದ್ದರಿಂದ ಈಜೆಬೆಲಳು ಎಲೀಯನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದಳು. ಈಜೆಬೆಲಳು, “ನೀನು ಆ ಪ್ರವಾದಿಗಳನ್ನು ಕೊಂದುಹಾಕಿದಂತೆ ನಾಳೆಯ ದಿನ ನಾನು ಇದೇ ಸಮಯಕ್ಕೆ ಮುಂಚೆ, ನಿನ್ನನ್ನು ಕೊಂದುಹಾಕುವೆನೆಂದು ಪ್ರಮಾಣ ಮಾಡುತ್ತೇನೆ. ನಾನು ಈ ಕಾರ್ಯದಲ್ಲಿ ವಿಜಯಿಯಾಗದಿದ್ದಲ್ಲಿ, ದೇವರುಗಳು ನನ್ನನ್ನು ಕೊಲ್ಲಲಿ” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು