Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:28 - ಪರಿಶುದ್ದ ಬೈಬಲ್‌

28 ಯೋವಾಬನು ಈ ಸಂಗತಿಯನ್ನು ಕೇಳಿ ಹೆದರಿದನು. (ಅವನು ಅಬ್ಷಾಲೋಮನಿಗೆ ಬೆಂಬಲ ನೀಡಿಲ್ಲದಿದ್ದರೂ ಅದೋನೀಯನಿಗೆ ಬೆಂಬಲ ನೀಡಿದ್ದನು.) ಯೋವಾಬನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಕೆಯ ಕೊಂಬುಗಳನ್ನು ಹಿಡಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. ಅವನು ಅಬ್ಷಾಲೋಮನ ಪಕ್ಷವನ್ನು ಬೆಂಬಲಿಸದಿದ್ದರು ಅದೋನೀಯನ ಪಕ್ಷವನ್ನು ಬೆಂಬಲಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಈ ಸುದ್ದಿ ಯೋವಾಬನಿಗೆ ಮುಟ್ಟಿತು. ಅವನು ಕೂಡಲೆ ಸರ್ವೇಶ್ವರನ ಗುಡಾರಕ್ಕೆ ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದುಕೊಂಡನು. (ಅವನು ಅಬ್ಷಾಲೋಮನ ವಿರೋಧವಾಗಿದ್ದರೂ ಅದೋನೀಯನಿಗೆ ಪರವಾಗಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. (ಅವನು ಅಬ್ಷಾಲೋಮನ ಪಕ್ಷವನ್ನು ಹಿಡಿಯದಿದ್ದರೂ ಅದೋನೀಯನ ಪಕ್ಷವನ್ನು ಹಿಡಿದಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ಈ ಸುದ್ದಿ ಯೋವಾಬನಿಗೆ ಬಂತು. ಏಕೆಂದರೆ ಯೋವಾಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ, ಅದೋನೀಯನ ಹಿಂದೆ ಹೋದನು. ಆದ್ದರಿಂದ ಯೋವಾಬನು ಯೆಹೋವ ದೇವರ ಮಂದಿರಕ್ಕೆ ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:28
8 ತಿಳಿವುಗಳ ಹೋಲಿಕೆ  

ಅದೋನೀಯನೂ ಹೆದರಿಕೊಂಡು ಯಜ್ಞವೇದಿಕೆಯ ಬಳಿಗೆ ಹೋಗಿ, ಯಜ್ಞವೇದಿಕೆಯ ಕೊಂಬುಗಳನ್ನು ಹಿಡಿದುಕೊಂಡನು.


ಅದೋನೀಯನು ಚೆರೂಯಳ ಮಗನಾದ ಯೋವಾಬ ಮತ್ತು ಯಾಜಕನಾದ ಎಬ್ಯಾತಾರನೊಂದಿಗೆ ಮಾತನಾಡಿದನು. ತಾನು ರಾಜನಾಗಬೇಕೆಂಬ ಅದೋನೀಯನ ಯೋಜನೆಗೆ ಅವರು ಬೆಂಬಲ ನೀಡಿದರು.


ದಾವೀದನು ತನ್ನ ಜನರನ್ನು ಮೂರು ಗುಂಪುಗಳಾಗಿ ವಿಂಗಡಿಸಿ ಅವರನ್ನು ಹೊರಗೆ ಕಳುಹಿಸಿದನು. ಯೋವಾಬನು ಮೊದಲನೆ ಗುಂಪನ್ನು, ಅಬೀಷೈ ಎರಡನೆ ಗುಂಪನ್ನು, ಗತ್‌ನ ಇತ್ತೈಯನು ಮೂರನೆ ಗುಂಪನ್ನು ನಡೆಸಿದರು. ರಾಜನಾದ ದಾವೀದನು, “ನಾನೂ ನಿಮ್ಮ ಜೊತೆಯಲ್ಲಿ ಬರುತ್ತೇನೆ” ಎಂದು ಅವರಿಗೆ ಹೇಳಿದನು.


ಅಬ್ಷಾಲೋಮನು ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ಮಾಡಿದನು. ಅಮಾಸನು ಯೋವಾಬನ ಸ್ಥಾನಕ್ಕೆ ಬಂದನು. ಅಮಾಸನು ಇಸ್ರೇಲನಾದ ಇತ್ರನ ಮಗ. ಅಮಾಸನ ತಾಯಿಯಾದ ಅಬೀಗಲಳು, ನಾಹಾಷನ ಮಗಳು ಮತ್ತು ಚೆರೂಯಳ ಸೋದರಿ.


ಅವರ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರು ಜಾರಿ ಕೆಟ್ಟಕಾರ್ಯಗಳನ್ನು ಮಾಡಿದಾಗ ನಾನು ಅವರನ್ನು ಶಿಕ್ಷಿಸುವೆನು. ಅವರ ಮಹಾಸಂಕಟ ಕಾಲವು ಹತ್ತಿರವೇ ಇದೆ. ಅವರಿಗೋಸ್ಕರ ಸಿದ್ಧವಾಗಿರುವ ಶಿಕ್ಷೆಯು ಬೇಗನೆ ಬರುತ್ತದೆ.’


ಈ ಯಜ್ಞವೇದಿಕೆಯ ನಾಲ್ಕು ಮೂಲೆಗಳಿಗೆ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಪ್ರತಿಯೊಂದು ಕೊಂಬೂ ಯಜ್ಞವೇದಿಕೆಗೆ ಜೋಡಿಸಲ್ಪಟ್ಟಿರಬೇಕು. ಹೀಗೆ ಅವು ಯಜ್ಞವೇದಿಕೆಯ ಅವಿಭಾಜ್ಯ ಭಾಗವಾಗಿರಬೇಕು. ಬಳಿಕ ಯಜ್ಞವೇದಿಕೆಯನ್ನು ತಾಮ್ರದ ತಗಡಿನಿಂದ ಹೊದಿಸಬೇಕು.


ಆದರೆ ಒಬ್ಬನು ಕೋಪದಿಂದಾಗಲಿ ದ್ವೇಷದಿಂದಾಗಲಿ ಇನ್ನೊಬ್ಬನನ್ನು ಕೊಂದರೆ, ಆ ಕೊಲೆಗಾರನಿಗೆ ದಂಡನೆಯಾಗಬೇಕು. ನನ್ನ ಯಜ್ಞವೇದಿಕೆಯಿಂದ ಅವನನ್ನು ದೂರಕ್ಕೆ ತೆಗೆದುಕೊಂಡು ಹೋಗಿ ಕೊಲ್ಲಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು