Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:3 - ಪರಿಶುದ್ದ ಬೈಬಲ್‌

3 ನಿನ್ನ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಎಚ್ಚರಿಕೆಯಿಂದ ಅನುಸರಿಸು. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆಜ್ಞೆಗಳಿಗೂ ಕಟ್ಟಳೆಗಳಿಗೂ ನಿರ್ಣಯಗಳಿಗೂ ಒಡಂಬಡಿಕೆಗಳಿಗೂ ವಿಧೇಯನಾಗಿರು. ಆಗ ನೀನು ನಿನ್ನ ಎಲ್ಲ ಕೆಲಸಕಾರ್ಯಗಳಲ್ಲೂ ನೀನು ಹೋಗುವ ಎಲ್ಲಾ ಕಡೆಗಳಲ್ಲೂ ಯಶಸ್ಸನ್ನು ಗಳಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿನ್ನ ದೇವರಾದ ಯೆಹೋವನ ಅಪ್ಪಣೆಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆದುಕೋ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆತನ ಆಜ್ಞಾನಿಯಮವಿಧಿ ನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಯಾವುದನ್ನು ಮಾಡಿದರೂ ಎಲ್ಲಿಗೆ ಹೋದರೂ ಸಫಲನಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿನ್ನ ದೇವರಾದ ಸರ್ವೇಶ್ವರಸ್ವಾಮಿಯ ಕಟ್ಟಳೆಯನ್ನು ಕೈಗೊಂಡು ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಅವರ ಆಜ್ಞಾನಿಯಮ-ವಿಧಿನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ ಎಲ್ಲಿಗೆ ಹೋದರೂ ಕೃತಾರ್ಥನಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿನ್ನ ದೇವರಾದ ಯೆಹೋವನ ಕಟ್ಟಳೆಯನ್ನು ಕೈಕೊಂಡು ಆತನ ಮಾರ್ಗದಲ್ಲೇ ನಡೆದುಕೋ; ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆತನ ಆಜ್ಞಾನಿಯಮ ವಿಧಿನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವದಾದರೆ ನೀನು ಯಾವದನ್ನು ಮಾಡಿದರೂ ಎಲ್ಲಿಗೆ ಹೋದರೂ ಕೃತಾರ್ಥನಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿನ್ನ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಅನುಸರಿಸಿ ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ನಿಯಮದಲ್ಲಿ ಬರೆದಿರುವ ಅವರ ಆಜ್ಞಾನಿಯಮಗಳಿಗೂ, ವಿಧಿನಿರ್ಣಯಗಳಿಗೂ ವಿಧೇಯನಾಗಿರು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ, ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿಯೂ ಯಶಸ್ವಿಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:3
33 ತಿಳಿವುಗಳ ಹೋಲಿಕೆ  

ನೀವು ದೇವರೊಡನೆ ಮಾಡಿದ ಒಪ್ಪಂದವನ್ನು ಪಾಲಿಸುತ್ತಾ ಬಂದರೆ ನೀವು ನಿಮ್ಮ ಕಾರ್ಯಗಳಲ್ಲಿ ಜಯವನ್ನು ಹೊಂದುವಿರಿ.


ಆತನ ಒಡಂಬಡಿಕೆಗೆ ಸಂಪೂರ್ಣಹೃದಯದಿಂದ ವಿಧೇಯರಾಗುವವರು ಧನ್ಯರು.


ನನ್ನ ಮಗನಾದ ಸೊಲೊಮೋನನೂ ನಿನಗೆ ನಂಬಿಗಸ್ತನಾಗಿರುವಂತೆ ಸಹಾಯಮಾಡು. ನಿನ್ನ ಆಜ್ಞೆ, ಕಟ್ಟಳೆ ಮತ್ತು ನಿಯಮಗಳನ್ನು ಅನುಸರಿಸಲು ಸಹಾಯಮಾಡು. ನಿನ್ನ ಮಂದಿರಕ್ಕಾಗಿ ನಾನು ಇಷ್ಟೆಲ್ಲವನ್ನು ಸಿದ್ಧಮಾಡಿರುವೆನಲ್ಲಾ, ಅವನು ಅದನ್ನು ಕಟ್ಟಿ ಪೂರ್ಣಗೊಳಿಸಲು ಸಹಾಯಮಾಡು.”


ನಿನ್ನ ಕಟ್ಟಳೆಗಳನ್ನು ಎಂದೆಂದಿಗೂ ನಿತ್ಯಸ್ವಾಸ್ತ್ಯವನ್ನಾಗಿ ಆರಿಸಿಕೊಂಡಿದ್ದೇನೆ. ಅವು ನನ್ನ ಹೃದಯಕ್ಕೆ ಆನಂದಕರವಾಗಿವೆ.


“ನನ್ನ ಸೇವಕನಾದ ಮೋಶೆಯ ಕಟ್ಟಳೆಗಳನ್ನು ಅನುಸರಿಸಲು ಮರೆಯಬೇಡಿ. ಹೋರೇಬ್ ಬೆಟ್ಟದಲ್ಲಿ ನಾನು ಆ ನ್ಯಾಯವಿಧಿಗಳನ್ನು ಅವನಿಗೆ ಕೊಟ್ಟೆನು. ಆ ಕಟ್ಟಳೆಗಳೆಲ್ಲಾ ಇಸ್ರೇಲ್ ಜನರಿಗಾಗಿ ಇರುವದು.”


ನೀನು ನೀತಿಯ ಕಟ್ಟಳೆಗಳನ್ನೇ ಕೊಟ್ಟಿರುವೆ. ಅವು ನಂಬಿಕೆಗೆ ಯೋಗ್ಯವಾಗಿವೆ.


ಯೆಹೋವನು ದಾವೀದನ ಜೊತೆಗಿದ್ದನು. ಆದ್ದರಿಂದ ದಾವೀದನು ಎಲ್ಲದರಲ್ಲೂ ಯಶ್ವಸಿಯಾದನು.


ಆದರೆ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶವನ್ನು ಮತ್ತು ವಿಧಿಗಳನ್ನು ಪಾಲಿಸಬೇಕೆಂಬುದನ್ನು ಜ್ಞಾಪಕದಲ್ಲಿಡಿ. ನೀವು ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸಬೇಕು ಮತ್ತು ಆತನ ಸೇವೆ ಮಾಡಬೇಕು. ನೀವು ಆತನನ್ನು ಅನುಸರಿಸುತ್ತಾ ನಿಮ್ಮಿಂದ ಸಾಧ್ಯವಾದಷ್ಟು ಆತನ ಸೇವೆ ಮಾಡಬೇಕು” ಎಂದು ಹೇಳಿದನು.


ಯೆಹೋವನ ಉಪದೇಶಗಳು ನಿಷ್ಕಳಂಕವಾಗಿವೆ. ಅವು ದೇವಜನರಿಗೆ ಬಲವನ್ನು ಕೊಡುತ್ತವೆ. ಯೆಹೋವನ ಕಟ್ಟಳೆಯು ಭರವಸೆಗೆ ಯೋಗ್ಯವಾಗಿದೆ. ಅದು ಮೂಢರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.


ಯೆಹೋವನು ಹಿಜ್ಕೀಯನೊಂದಿಗಿದ್ದನು. ಹಿಜ್ಕೀಯನು ತಾನು ಮಾಡಿದ್ದರಲ್ಲೆಲ್ಲಾ ಜಯಗಳಿಸಿದನು. ಹಿಜ್ಕೀಯನು ಅಶ್ಶೂರದ ರಾಜನೊಂದಿಗಿದ್ದ ಸಂಬಂಧವನ್ನು ಕಡಿದುಹಾಕಿದನು. ಅಶ್ಶೂರದ ರಾಜನ ಸೇವೆಯನ್ನು ಹಿಜ್ಕೀಯನು ನಿಲ್ಲಿಸಿದನು.


ದಾವೀದನು ಎದೋಮಿನ ಎಲ್ಲಾ ಕಡೆಯಲ್ಲೂ ಕಾವಲುದಂಡನ್ನು ಇರಿಸಿದನು. ಎದೋಮಿನ ಜನರೆಲ್ಲರೂ ದಾವೀದನ ಸೇವಕರಾದರು. ದಾವೀದನು ಹೋದ ಕಡೆಗಳಲ್ಲೆಲ್ಲಾ ಯೆಹೋವನು ಜಯವನ್ನು ಉಂಟುಮಾಡಿದನು.


ಬಳಿಕ ದಾವೀದನು ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಅರಾಮ್ಯರು ದಾವೀದನ ಸೇವಕರಾದರು ಮತ್ತು ಅವನಿಗೆ ಕಾಣಿಕೆಗಳನ್ನು ತಂದರು. ದಾವೀದನು ಹೋದ ಸ್ಥಳಗಳಲ್ಲೆಲ್ಲ ಯೆಹೋವನು ಜಯವನ್ನು ಉಂಟುಮಾಡಿದನು.


ಫಿಲಿಷ್ಟಿಯ ಸೇನಾಧಿಪತಿಗಳು ಇಸ್ರೇಲರೊಂದಿಗೆ ಹೋರಾಡಲು ಹೋಗುತ್ತಲೇ ಇದ್ದರು. ಆದರೆ ದಾವೀದನು ಪ್ರತಿಸಲವೂ ಅವರನ್ನು ಸೋಲಿಸುತ್ತಿದ್ದನು. ದಾವೀದನು ಸೌಲನ ಒಬ್ಬ ಯಶಸ್ವಿಯಾದ ಅಧಿಕಾರಿಯಾಗಿದ್ದನು! ಆದ್ದರಿಂದ ದಾವೀದನು ಪ್ರಖ್ಯಾತನಾದನು.


ಸೌಲನು ದಾವೀದನನ್ನು ಬೇರೆಬೇರೆ ಯುದ್ಧಗಳಲ್ಲಿ ಹೋರಾಡಲು ಕಳುಹಿಸಿದನು. ದಾವೀದನು ಆ ಯುದ್ಧಗಳಲ್ಲೆಲ್ಲಾ ಯಶ್ವಸಿಯಾದನು. ಆದ್ದರಿಂದ ಸೌಲನು ದಾವೀದನನ್ನು ಸೈನ್ಯಾಧಿಪತಿಯನ್ನಾಗಿ ನೇಮಿಸಿದನು. ಇದು ಸೌಲನ ಅಧಿಕಾರಿಗಳಿಗೂ ಇತರರಿಗೂ ಸಂತಸವನ್ನು ಉಂಟುಮಾಡಿತು!


ಇಸ್ರೇಲ್ ಸಮೂಹದವರನ್ನೆಲ್ಲಾ ಮೋಶೆ ಒಟ್ಟಾಗಿ ಸೇರಿಸಿ ಅವರಿಗೆ ಹೇಳಿದ್ದೇನೆಂದರೆ: “ಇಸ್ರೇಲ್ ಜನರೇ, ನಾನು ಈ ಹೊತ್ತು ಹೇಳುವ ಕಟ್ಟಳೆಗಳಿಗೆ ಕಿವಿಗೊಡಿರಿ. ಇವುಗಳನ್ನು ಕಲಿತುಕೊಂಡು ಪಾಲಿಸುವವರಾಗಿರಿ.


ಈಜಿಪ್ಟಿನಿಂದ ಹೊರಬಂದ ಅವರಿಗೆ ಈ ಉಪದೇಶಗಳನ್ನು, ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಕೊಟ್ಟನು.


ನಾನು ನಿಮಗೆ ಈ ಹೊತ್ತು ಕೊಡುವ ಉಪದೇಶಗಳಿಗೆ ನ್ಯಾಯದಲ್ಲೂ ಒಳ್ಳೆಯದರಲ್ಲೂ ಸರಿಸಮಾನವಾದ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಬೇರೆ ಯಾವ ದೊಡ್ಡ ದೇಶವೂ ಹೊಂದಿಲ್ಲ!


“ಯೆಹೋವನು ನನಗೆ ಆಜ್ಞಾಪಿಸಿದ ವಿಧಿನಿಯಮಗಳನ್ನು ನಾನು ನಿಮಗೆ ಬೋಧಿಸಿದೆನು. ಈಗ ನೀವು ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿ ನೀವು ನೆಲೆಸುವಾಗ ಆ ವಿಧಿನಿಯಮಗಳನ್ನು ಅನುಸರಿಸಬೇಕೆಂದು ನಾನು ನಿಮಗೆ ಬೋಧಿಸಿದೆನು.


“ಇಸ್ರೇಲರೇ, ಈಗ ನಾನು ಉಪದೇಶಿಸಲಿರುವ ಕಟ್ಟಳೆಗಳಿಗೂ ಆಜ್ಞೆಗಳಿಗೂ ಕಿವಿಗೊಡಿರಿ. ನೀವು ಅವುಗಳಿಗೆ ವಿಧೇಯರಾದರೆ ಜೀವಿಸುವಿರಿ. ಆಗ ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿರಿ.


ನೀವು ಏಳು ದಿನಗಳು ಹಗಲುರಾತ್ರಿ ದೇವದರ್ಶನಗುಡಾರದ ಬಾಗಿಲಿನಲ್ಲಿ ಇರಬೇಕು. ನೀವು ಯೆಹೋವನ ಆಜ್ಞೆಗಳಿಗೆ ವಿಧೇಯರಾಗದಿದ್ದರೆ ಸಾಯುವಿರಿ! ಯೆಹೋವನು ಆ ಆಜ್ಞೆಗಳನ್ನು ನನಗೆ ಕೊಟ್ಟನು.”


ಸೊಲೊಮೋನನು ತನಗೆ ಯೆಹೋವನ ಮೇಲಿದ್ದ ಪ್ರೀತಿಯನ್ನು ತೋರ್ಪಡಿಸಿದನು. ಅವನ ತಂದೆಯಾದ ದಾವೀದನು ಅವನಿಗೆ ಮಾಡಬೇಕೆಂದು ಹೇಳಿದ್ದ ಎಲ್ಲ ಕಾರ್ಯಗಳನ್ನು ಮಾಡುವುದರ ಮೂಲಕ ವಿಧೇಯತೆಯನ್ನು ತೋರ್ಪಡಿಸಿದನು. ಆದರೆ ಸೊಲೊಮೋನನು ತನಗೆ ದಾವೀದನು ಹೇಳದೆ ಇದ್ದ ಕೆಲವು ಕಾರ್ಯಗಳನ್ನೂ ಮಾಡಿದನು. ಸೊಲೊಮೋನನು ಎತ್ತರವಾದ ಸ್ಥಳಗಳನ್ನು ಯಜ್ಞವನ್ನರ್ಪಿಸಲು ಮತ್ತು ಧೂಪಹಾಕಲು ಉಪಯೋಗಿಸುತ್ತಿದ್ದನು.


ನಾವು ಅವರ ದೇಶವನ್ನು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರಿಗೆ ಹಂಚಿದೆವು.


“ಯೆಹೋವನ ಆಜ್ಞೆಗಳನ್ನೆಲ್ಲಾ ಜಾಗರೂಕತೆಯಿಂದ ಕೈಕೊಂಡು ನಡೆಯಿರಿ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಎಲ್ಲವನ್ನು ಪಾಲಿಸಿರಿ. ಆ ಧರ್ಮಶಾಸ್ತ್ರಕ್ಕೆ ವಿಮುಖರಾಗಬೇಡಿ.


ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು