Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:37 - ಪರಿಶುದ್ದ ಬೈಬಲ್‌

37 ನೀನು ನಗರವನ್ನು ಬಿಟ್ಟು ಕಿದ್ರೋನ್ ಹೊಳೆಯ ಹಿಂದಕ್ಕೆ ಹೋದರೆ, ನಿನ್ನನ್ನು ಕೊಲ್ಲಲಾಗುವುದು. ಅದು ನಿನ್ನ ಸ್ವಂತ ತಪ್ಪಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನೀನು ಇದನ್ನು ಬಿಟ್ಟು ಕಿದ್ರೋನ್ ಹಳ್ಳದ ಆಚೆಗೆ ಹೋದೆಯಾದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವುದೆಂದು ತಿಳಿದುಕೋ ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನೀನು ಇದನ್ನು ಬಿಟ್ಟು ಕಿದ್ರೋನ್ ಹಳ್ಳದ ಆಚೆಗೆ ಹೋದೆಯಾದರೆ, ಅದೇ ದಿವಸ ನಿನಗೆ ಮರಣಶಿಕ್ಷೆಯಾಗುವುದೆಂದು ತಿಳಿದುಕೋ; ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ನೀನು ಇದನ್ನು ಬಿಟ್ಟು ಕಿದ್ರೋನ್‍ಹಳ್ಳದ ಆಚೆಗೆ ಹೋದಿಯಾದರೆ ಅದೇ ದಿವಸದಲ್ಲಿ ನಿನಗೆ ಮರಣಶಿಕ್ಷೆಯಾಗುವದೆಂದು ತಿಳಿದುಕೋ; ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಯಾವ ದಿವಸದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವೆಯೋ, ಆ ದಿವಸದಲ್ಲಿ ನಿಶ್ಚಯವಾಗಿ ಸಾಯುವೆ ಎಂದು ಖಂಡಿತ ತಿಳಿದುಕೋ ಮತ್ತು ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:37
13 ತಿಳಿವುಗಳ ಹೋಲಿಕೆ  

ಜನರೆಲ್ಲರೂ ಜೋರಾಗಿ ಅಳುತ್ತಿದ್ದರು. ರಾಜನಾದ ದಾವೀದನು ಕಿದ್ರೋನ್ ಹಳ್ಳವನ್ನು ದಾಟಿಹೋದನು. ನಂತರ ಜನರೆಲ್ಲರೂ ಅರಣ್ಯಕ್ಕೆ ಹೋದರು.


ಈ ಮನೆಯಲ್ಲಿರುವ ಪ್ರತಿಯೊಬ್ಬರನ್ನು ನಾವು ಕಾಪಾಡುತ್ತೇವೆ. ನಿನ್ನ ಮನೆಯಲ್ಲಿ ಯಾರಿಗಾದರೂ ಪೆಟ್ಟಾದರೆ ಅದಕ್ಕೆ ನಾವು ಹೊಣೆಗಾರರಾಗುವೆವು. ಆದರೆ ಯಾರಾದರೂ ನಿನ್ನ ಮನೆಯಿಂದ ಹೊರಗೆ ಹೋದಾಗ ಕೊಲ್ಲಲ್ಪಟ್ಟರೆ ಅದಕ್ಕೆ ನಾವು ಹೊಣೆಗಾರರಲ್ಲ; ಅದಕ್ಕೆ ಅವರೇ ಹೊಣೆಗಾರರು.


ಯೇಸು ಪ್ರಾರ್ಥಿಸಿದ ಮೇಲೆ ತನ್ನ ಶಿಷ್ಯರೊಂದಿಗೆ ಹೊರಟನು. ಅವರು ಕಿದ್ರೋನ್ ಕಣಿವೆಯನ್ನು ದಾಟಿಹೋದರು. ಅದರ ಮತ್ತೊಂದು ಕಡೆಯಲ್ಲಿ ಆಲಿವ್ ಮರಗಳ ತೋಟವಿತ್ತು. ಯೇಸು ಮತ್ತು ಆತನ ಶಿಷ್ಯರು ಅಲ್ಲಿಗೆ ಹೋದರು.


ಆ ಕೆಟ್ಟ ಮಗನಿಂದ ಯಾರಾದರೂ ಸಾಲ ತೆಗೆದುಕೊಂಡಿದ್ದರೆ ಅವನು ಅವರಿಂದ ಬಡ್ಡಿಯನ್ನು ಕಡ್ಡಾಯವಾಗಿ ವಸೂಲು ಮಾಡಿದ್ದಿರಬಹುದು. ಹೀಗಿರುವದರಿಂದ ಆ ಕೆಟ್ಟ ಮಗನು ಹೆಚ್ಚುಕಾಲ ಬದುಕುವುದಿಲ್ಲ. ಅವನು ಭಯಂಕರ ಕೃತ್ಯಗಳನ್ನು ಮಾಡಿರುವದರಿಂದ ಕೊಲ್ಲಲ್ಪಡುವನು. ಅವನ ಮರಣಕ್ಕೆ ಅವನೇ ಜವಾಬ್ದಾರನು.


ಯೋಷೀಯನು ಅಶೇರಸ್ತಂಭವನ್ನು ದೇವಾಲಯದಿಂದ ತೆಗೆದುಹಾಕಿದನು. ಅವನು ಅಶೇರಸ್ತಂಭವನ್ನು ನಗರದ ಹೊರವಲಯದ ಕಿದ್ರೋನ್ ಕಣಿವೆಗೆ ತೆಗೆದುಕೊಂಡು ಹೋಗಿ ಅದನ್ನು ಅಲ್ಲಿ ಸುಟ್ಟುಹಾಕಿದನು. ನಂತರ ಅವನು ಅದನ್ನು ಪುಡಿಪುಡಿ ಮಾಡಿಸಿ ಧೂಳಿನಲ್ಲಿ ಬೆರಸಿ ಸಾಮಾನ್ಯ ಜನರ ಸ್ಮಶಾನದಲ್ಲಿ ಆ ಧೂಳನ್ನು ಚೆಲ್ಲಿದನು.


“ಯಾವನಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸಿದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಅವನು ತನ್ನ ತಂದೆತಾಯಿಗಳನ್ನು ಶಪಿಸಿದನು. ಅವನ ಮರಣಕ್ಕೆ ಅವನೇ ಜವಾಬ್ದಾರನಾಗಿದ್ದಾನೆ.


ಹೆಣಗಳನ್ನು ಮತ್ತು ಬೂದಿಯನ್ನು ಚೆಲ್ಲುವ ಇಡೀ ಕಣಿವೆ ಪ್ರದೇಶ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆಬಾಗಿಲಿನ ಮೂಲೆ, ಇವುಗಳವರೆಗಿರುವ ಬೆಟ್ಟಪ್ರದೇಶ ಅದರಲ್ಲಿ ಸೇರುವುದು. ಆ ಪ್ರದೇಶವೆಲ್ಲ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಜೆರುಸಲೇಮ್ ನಗರವು ಇನ್ನುಮೇಲೆ ಎಂದಿಗೂ ಕೆಡವಲ್ಪಡದು; ಹಾಳಾಗದು!”


ಯಾಜಕರು ದೇವಾಲಯದ ಒಳಭಾಗವನ್ನು ಪ್ರವೇಶಿಸಿ ಶುಚಿಮಾಡಿದರು. ದೇವಾಲಯದೊಳಗೆ ಇದ್ದ ಎಲ್ಲಾ ಹೊಲಸು ವಸ್ತುಗಳನ್ನು ಹೊರತೆಗೆದರು. ದೇವಾಲಯದ ಅಂಗಳಕ್ಕೆ ತಂದು ಅಲ್ಲಿಂದ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಬಿಸಾಡಿದರು.


ಆಸನು ತನ್ನ ಅಜ್ಜಿ ಮಾಕಳನ್ನು ರಾಣಿಯ ಪಟ್ಟದಿಂದ ಕೆಳಗಿಳಿಸಿದನು. ಮಾಕಳು ಅಶೇರ ದೇವತೆಯ ಒಂದು ಭೀಕರ ಮೂರ್ತಿಯನ್ನು ಮಾಡಿಸಿದ್ದಳು. ಅವನು ಅದನ್ನು ಕಿದ್ರೋನ್ ಕಣಿವೆಯಲ್ಲಿ ಸುಟ್ಟುಹಾಕಿದನು.


ಅವರನ್ನು ಕೊಂದ ಅಪರಾಧವು ಯೋವಾಬನ ಮೇಲೆಯೂ ಅವನ ಕುಟುಂಬದ ಮೇಲೆಯೂ ಶಾಶ್ವತವಾಗಿರಲಿ. ಆದರೆ ದಾವೀದನನ್ನೂ ಅವನ ಸಂತತಿಯವರನ್ನೂ ಅವನ ಸಿಂಹಾಸನವನ್ನೂ ಯೆಹೋವನು ಶಾಶ್ವತವಾಗಿ ಆಶೀರ್ವದಿಸಲಿ” ಎಂದು ಹೇಳಿದನು.


ಆಗ ರಾಜನು ಬೆನಾಯನಿಗೆ, “ಅವನು ಹೇಳಿದಂತೆ ಮಾಡು! ಅವನನ್ನು ಅಲ್ಲಿಯೇ ಕೊಂದುಬಿಡು. ನಂತರ ಅವನನ್ನು ಸಮಾಧಿ ಮಾಡು. ಆಗ ನನ್ನ ಕುಟುಂಬದವರು ಮತ್ತು ನಾನು ಯೋವಾಬನ ದೋಷದಿಂದ ಮುಕ್ತರಾಗುವೆವು. ಮುಗ್ಧ ಜನರು ಯೋವಾಬನಿಂದ ಕೊಲ್ಲಲ್ಪಟ್ಟ ಕಾರಣ ಈ ದೋಷವುಂಟಾಯಿತು.


ಅದಕ್ಕೆ ಶಿಮ್ಮಿಯು, “ನನ್ನ ರಾಜನೇ, ನೀನು ಹೇಳಿದಂತೆಯೇ ಆಗಲಿ. ನಾನು ನಿನಗೆ ವಿಧೇಯನಾಗಿರುವೆನು” ಎಂದು ಉತ್ತರಿಸಿದನು. ಹೀಗೆ ಶಿಮ್ಮಿಯು ಬಹು ದಿನಗಳವರೆಗೆ ಜೆರುಸಲೇಮಿನಲ್ಲಿ ವಾಸವಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು