Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:9 - ಪರಿಶುದ್ದ ಬೈಬಲ್‌

9 ಅವನನ್ನು ದಂಡಿಸದೆ ಬಿಡಬೇಡ. ನೀನು ಬುದ್ಧಿವಂತ! ಅವನಿಗೆ ಏನು ಮಾಡಬೇಕೆಂಬುದು ನಿನಗೆ ತಿಳಿದಿದೆ. ಆದರೆ ಅವನು ಮುದಿತನದಲ್ಲಿ ಸಮಾಧಾನದಿಂದ ಸಾಯಲು ಬಿಡಬೇಡ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ. ನೀನು ಬುದ್ಧಿವಂತನಲ್ಲವೋ. ಅವನ ಮುದಿತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿರುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ; ನೀನು ಬುದ್ಧಿವಂತ; ಅವನ ಮುದಿತಲೆ ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ; ನೀನು ಬುದ್ಧಿವಂತನಲ್ಲವೋ! ಅವನ ಮುದಿ ತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂಬದು ನಿನಗೆ ಗೊತ್ತಿರುವದು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ನೀನು ಬುದ್ಧಿವಂತನಾಗಿರುವುದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ. ಆದರೆ ಅವನ ನರೆತಲೆಯನ್ನು ರಕ್ತದಿಂದ ಸಮಾಧಿ ಸೇರುವಂತೆ ಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:9
13 ತಿಳಿವುಗಳ ಹೋಲಿಕೆ  

ಆದರೆ ಈಗ ನೀನು ರಾಜನಾಗಿರುವೆ. ಆದ್ದರಿಂದ ನಿನ್ನ ಜ್ಞಾನಕ್ಕೆ ಸರಿತೋಚಿದ ರೀತಿಯಲ್ಲಿ ನೀನು ಅವನನ್ನು ದಂಡಿಸು. ಆದರೆ ನೀನು ಅವನನ್ನು ಖಂಡಿತವಾಗಿ ಕೊಲ್ಲಲೇಬೇಕು. ಅವನು ಮುದಿತನದಲ್ಲಿ ಸಮಾಧಾನದಿಂದ ಸಾಯಲು ಬಿಡಬೇಡ!”


ನಮ್ಮ ತಂದೆಯೂ ಆ ಕೂಡಲೇ ಸತ್ತುಹೋಗುವನು; ನಮ್ಮ ತಂದೆ ದುಃಖದಿಂದ ಸಾಯಲು ನಾವೇ ಕಾರಣರಾಗುವೆವು.


ಯಾಕೋಬನು, “ನಾನು ನಿಮ್ಮೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡುವುದಿಲ್ಲ. ಅವನ ಸಹೋದರನು ಸತ್ತುಹೋದನು; ನನ್ನ ಹೆಂಡತಿಯಾದ ರಾಹೇಲಳಲ್ಲಿ ಹುಟ್ಟಿದ ಗಂಡುಮಕ್ಕಳಲ್ಲಿ ಇವನೊಬ್ಬನೇ ಉಳಿದಿರುವುದು. ಈಜಿಪ್ಟಿಗೆ ಪ್ರಯಾಣ ಮಾಡುವಾಗ ಇವನಿಗೆ ಅಪಾಯ ಸಂಭವಿಸಿದರೆ ವಯಸ್ಸಾದ ನಾನು ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣವಾಗುವಿರಿ” ಎಂದು ಹೇಳಿದನು.


ನನ್ನ ಎಲ್ಲಾ ಸಂಕಟಗಳಿಂದ ಇನ್ನೂ ಭಯಗೊಂಡಿರುವೆ. ಯಾಕೆಂದರೆ ನನ್ನನ್ನು ಅಪರಾಧಿಯೆಂದು ದೇವರು ಹೇಳುತ್ತಿದ್ದಾನೆ.


ಸೊಲೊಮೋನನ ತೀರ್ಪಿನ ವಿಚಾರವು ಇಸ್ರೇಲಿನ ಜನರಿಗೆ ತಿಳಿಯಿತು. ಅವನು ವಿವೇಕಿಯಾದುದರಿಂದ ಅವರು ಅವನನ್ನು ಗೌರವಿಸಿದರು ಮತ್ತು ಸನ್ಮಾನಿಸಿದರು. ಅವನು ದೇವರ ಜ್ಞಾನದಿಂದ ಸಮಂಜಸವಾದ ತೀರ್ಪು ನೀಡುತ್ತಾನೆಂದು ಅವರು ಕಂಡುಕೊಂಡರು.


ನಿನ್ನ ಕೋರಿಕೆಯನ್ನು ಅನುಗ್ರಹಿಸುವೆನು; ನಿನ್ನನ್ನು ಜ್ಞಾನಿಯನ್ನಾಗಿಯೂ ವಿವೇಕಿಯನ್ನಾಗಿಯೂ ಮಾಡುವೆನು. ಪೂರ್ವಕಾಲದಲ್ಲಿ ನಿನ್ನಂತವರು ಯಾರೊಬ್ಬರೂ ಇರಲಿಲ್ಲ ಎನ್ನುವಷ್ಟು ಜ್ಞಾನಿಯನ್ನಾಗಿ ನಿನ್ನನ್ನು ಮಾಡುತ್ತೇನೆ. ಮುಂದೆ ನಿನ್ನಂತವರು ಯಾರೊಬ್ಬರೂ ಇರುವುದಿಲ್ಲ.


ಆದರೆ ನೀವು ಈ ಸಂಗತಿಗಳನ್ನು ಮಾಡದಿದ್ದರೆ, ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿದವರಾಗಿರುವಿರಿ. ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ಖಚಿತವಾಗಿ ತಿಳಿದುಕೊಳ್ಳಿರಿ.


“ನೀವು ದೇವರನ್ನಾಗಲಿ ಅಥವಾ ನಿಮ್ಮ ನಾಯಕರುಗಳನ್ನಾಗಲಿ ಶಪಿಸಬಾರದು.


“ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ದಾವೀದನು ಬಹುರೀಮಿಗೆ ಬಂದನು. ಸೌಲನ ಕುಟುಂಬಕ್ಕೆ ಸೇರಿದ ಗೇರನ ಮಗನಾದ ಶಿಮ್ಮಿಯು ದಾವೀದನನ್ನು ಶಪಿಸುತ್ತಾ ಬಹುರೀಮಿನಿಂದ ಹೊರಗೆ ಬಂದನು.


“ದೇವರು ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ನಿರ್ಮಿಸಿದನು. ಆದ್ದರಿಂದ ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.”


ಯಾಕೆಂದರೆ ಅವನಿಗೆ ಬೇರೆ ಯಾವ ಹೊದಿಕೆಯೂ ಇಲ್ಲ; ಅದನ್ನೇ ಅವನು ಧರಿಸಿಕೊಳ್ಳಬೇಕು. ಅವನು ಮಲಗಿಕೊಳ್ಳುವಾಗ ಚಳಿಯಿಂದ ನನಗೆ ಮೊರೆಯಿಟ್ಟರೆ, ನಾನು ಅವನ ಮೊರೆಯನ್ನು ಕೇಳಿ ಅವನಿಗೆ ದಯೆತೋರುವೆನು.


ನಾನು ರಾಜನಾಗಿದ್ದರೂ ಏನೂ ಮಾಡಲಾರದ ಸ್ಥಿತಿಯಲ್ಲಿದ್ದೇನೆ. ಚೆರೂಯಳ ಗಂಡುಮಕ್ಕಳಾದ ಇವರು ನನಗೆ ಬಹಳ ಕೇಡನ್ನು ಮಾಡಿದರು. ಯೆಹೋವನು ಈ ಜನರಿಗೆ ತಕ್ಕ ದಂಡನೆಯನ್ನು ನೀಡಲಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು