1 ಅರಸುಗಳು 20:1 - ಪರಿಶುದ್ದ ಬೈಬಲ್1 ಬೆನ್ಹದದನು ಅರಾಮಿನ ರಾಜ. ಅವನು ತನ್ನ ಸೇನೆಯನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವನ ಹತ್ತಿರ ಮೂವತ್ತೆರಡು ಮಂದಿ ರಾಜರಿದ್ದರು. ಅವರ ಬಳಿ ಕುದುರೆಗಳೂ ರಥಗಳೂ ಇದ್ದವು. ಅವರು ಸಮಾರ್ಯಕ್ಕೆ ವಿರುದ್ಧವಾಗಿ ಹೋಗಿ ಅದಕ್ಕೆ ಮುತ್ತಿಗೆ ಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಅರಸರೊಂದಿಗೆ ಹೊರಟು ಬಂದು ಸಮಾರ್ಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸಿರಿಯಾದವರ ಅರಸ ಬೆನ್ಹದದನು ತನ್ನ ಇಡೀ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತು ಎರಡು ಮಂದಿ ರಾಜರೊಡನೆ ಹೊರಟು ಬಂದು, ಸಮಾರಿಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಮಂದಿ ಅರಸರೊಡನೆ ಹೊರಟು ಬಂದು ಸಮಾರ್ಯಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸರಿದ್ದರು. ಅವನು ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ, ಅದರ ಮೇಲೆ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿ |
ನನ್ನ ಒಡೆಯನಾದ ಯೆಹೋವನನ್ನು ತುಚ್ಛೀಕರಿಸಲಿಕ್ಕೆ ನೀನು ನಿನ್ನ ಅಧಿಕಾರಿಯನ್ನು ಕಳುಹಿಸಿದೆ. “ನನ್ನಲ್ಲಿ ಬಲ ಸಾಮರ್ಥ್ಯಗಳಿವೆ; ನನ್ನಲ್ಲಿ ಅನೇಕಾನೇಕ ರಥಗಳಿವೆ. ನನ್ನ ಬಲದಿಂದ ನಾನು ಲೆಬನೋನನ್ನು ಸೋಲಿಸಿದೆ. ಲೆಬನೋನಿನ ಉನ್ನತ ಶಿಖರಗಳನ್ನು ನಾನು ಏರಿದೆನು. ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ (ಸೈನ್ಯ) ನಾನು ಕಡಿದುಹಾಕಿದೆನು. ನಾನು ಅತ್ಯುನ್ನತ ಶಿಖರಕ್ಕೂ ದಟ್ಟವಾದ ಕಾಡಿನೊಳಗೂ ಹೋಗಿದ್ದೇನೆ.
ಆಗ ಬೆಜೆಕ್ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.
ಎಲೀಷನು ಸತ್ತಬಾಲಕನಿಗೆ ಮತ್ತೆ ಜೀವವನ್ನು ಬರುವಂತೆ ಮಾಡಿದ್ದರ ಬಗ್ಗೆ ಗೇಹಜಿಯು ರಾಜನಿಗೆ ಹೇಳುತ್ತಿದ್ದನು. ಎಲೀಷನು ಮರಳಿ ಜೀವಬರಿಸಿದ ಬಾಲಕನ ತಾಯಿಯು ಆ ಸಮಯದಲ್ಲಿ ರಾಜನ ಬಳಿಗೆ ಹೋದಳು. ತನ್ನ ಮನೆಯನ್ನು ಮತ್ತು ಭೂಮಿಯನ್ನು ತನಗೆ ಕೊಡಿಸಬೇಕೆಂದು ಕೇಳಿಕೊಳ್ಳಲು ಆಕೆ ಬಂದಿದ್ದಳು. ಗೇಹಜಿಯು, “ನನ್ನ ಒಡೆಯನೇ, ರಾಜನೇ, ಇವಳೇ ಆ ಸ್ತ್ರೀಯು! ಎಲೀಷನು ಮರಳಿ ಜೀವಬರಿಸಿದ ಬಾಲಕನು ಇವನೇ!” ಎಂದು ಹೇಳಿದನು.