Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:15 - ಪರಿಶುದ್ದ ಬೈಬಲ್‌

15 ಅಹಾಬನು ಜಿಲ್ಲೆಗಳ ರಾಜ್ಯಪಾಲರುಗಳ ಸೇವೆ ಮಾಡುತ್ತಿರುವ ಯೌವನಸ್ಥರನ್ನು ಒಟ್ಟಾಗಿ ಸೇರಿಸಿದನು. ಅಲ್ಲಿ ಇನ್ನೂರ ಮೂವತ್ತೆರಡು ಮಂದಿ ಯುವಜನರಿದ್ದರು. ನಂತರ ರಾಜನು ಇಸ್ರೇಲಿನ ಸೈನ್ಯವನ್ನು ಒಟ್ಟಾಗಿ ಕರೆದನು. ಅವರಲ್ಲಿ ಒಟ್ಟು ಏಳುಸಾವಿರ ಸೈನಿಕರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅಹಾಬನು ಪ್ರದೇಶಾಧಿಪತಿಗಳ ಸೇವಕರಾಗಿ ಕೆಲಸ ಮಾಡುವ ಯುವ ಅಧಿಕಾರಿಗಳನ್ನು ಲೆಕ್ಕಿಸಿದಾಗ ಇನ್ನೂರ ಮೂವತ್ತೆರಡು ಜನರಿದ್ದರು. ಇಸ್ರಾಯೇಲರ ಸೈನ್ಯವನ್ನು ಲೆಕ್ಕಿಸಿದಾಗ ಏಳು ಸಾವಿರ ಜನರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಹಾಬನು ಪ್ರದೇಶಾಧಿಪತಿಗಳ ಆಳುಗಳನ್ನು ಲೆಕ್ಕಿಸಿದಾಗ ಇನ್ನೂರ ಮೂವತ್ತೆರಡು ಮಂದಿ ಇದ್ದರು; ಇಸ್ರಯೇಲರ ಸೈನ್ಯವನ್ನು ಲೆಕ್ಕಿಸಿದಾಗ ಏಳು ಸಾವಿರ ಮಂದಿಯಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅಹಾಬನು ಪ್ರದೇಶಾಧಿಪತಿಗಳ ಆಳುಗಳನ್ನು ಲೆಕ್ಕಿಸಿದಾಗ ಇನ್ನೂರ ಮೂವತ್ತೆರಡು ಮಂದಿಯಿದ್ದರು; ಇಸ್ರಾಯೇಲ್ಯರ ಸೈನ್ಯವನ್ನು ಲೆಕ್ಕಿಸಿದಾಗ ಏಳು ಸಾವಿರ ಮಂದಿಯಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅಹಾಬನು ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳನ್ನು ಲೆಕ್ಕಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಿದ್ದರು. ಅವರ ತರುವಾಯ ಇಸ್ರಾಯೇಲರಾದ ಸೈನಿಕರನ್ನು ಲೆಕ್ಕಮಾಡಿದಾಗ ಏಳು ಸಾವಿರ ಜನರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:15
11 ತಿಳಿವುಗಳ ಹೋಲಿಕೆ  

ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು.


ಅರಾಮ್ಯರ ರಾಜನು ಯೆಹೋವಾಹಾಜನ ಸೇನೆಯನ್ನು ಸೋಲಿಸಿದನು. ಅರಾಮ್ಯರ ರಾಜನು ಐವತ್ತು ಮಂದಿ ರಾಹುತರನ್ನು, ಹತ್ತು ರಥಗಳನ್ನು ಮತ್ತು ಹತ್ತು ಸಾವಿರ ಭೂಸೈನಿಕರನ್ನು ಬಿಟ್ಟು ಉಳಿದವರೆಲ್ಲರನ್ನು ಸುಗ್ಗಿಯ ಕಾಲದಲ್ಲಿ ಗಾಳಿಗೆ ಹಾರಿಹೋಗುವ ಹೊಟ್ಟಿನಂತೆ ನಾಶಮಾಡಿದನು.


ಎಲೀಯನೇ, ಇಸ್ರೇಲಿನಲ್ಲಿ ನಂಬಿಗಸ್ಥನಾದ ವ್ಯಕ್ತಿಯು ನೀನೊಬ್ಬನು ಮಾತ್ರ ಅಲ್ಲ. ಆ ದುಷ್ಟಜನರು ಅನೇಕ ಜನರನ್ನು ಕೊಲ್ಲುತ್ತಾರೆ. ಆದರೂ, ಅದಾದ ನಂತರ, ಬಾಳನಿಗೆ ಎಂದೆಂದೂ ಬಾಗಿ ನಮಸ್ಕರಿಸದಿರುವ ಏಳು ಸಾವಿರ ಜನರು ಇನ್ನೂ ಇಸ್ರೇಲಿನಲ್ಲಿ ವಾಸಮಾಡುತ್ತಿದ್ದಾರೆ! ಬಾಳನ ವಿಗ್ರಹಕ್ಕೆ ಎಂದೂ ಮುದ್ದಿಡದ ಆ ಏಳು ಸಾವಿರ ಜನರನ್ನು ನಾನು ಅಲ್ಲಿ ಉಳಿಸುವೆನು.”


ಯೋನಾತಾನನು ತನ್ನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಸಹಾಯಕನಿಗೆ, “ಆ ಹೊರದೇಶಿಯರ ಪಾಳೆಯಕ್ಕೆ ಹೋಗೋಣ ಬಾ. ಈ ಜನರನ್ನು ಸೋಲಿಸಲು ಯೆಹೋವನು ಬಹುಶಃ ನಮ್ಮನ್ನು ಬಳಸಬಹುದು. ಯೆಹೋವನನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ನಮ್ಮಲ್ಲಿ ಅನೇಕ ಸೈನಿಕರಿದ್ದರೂ ಇಲ್ಲವೆ ಕೆಲವೇ ಸೈನಿಕರಿದ್ದರೂ ಅದು ಲೆಕ್ಕಕ್ಕೆ ಬರುವುದಿಲ್ಲ” ಎಂದು ಹೇಳಿದನು.


ಸೌಲನು ಮಿಗ್ರೋನಿನ ಬೆಟ್ಟದ ತುದಿಯಲ್ಲಿರುವ ಒಂದು ದಾಳಿಂಬೆ ಮರದ ಅಡಿಯಲ್ಲಿ ಕುಳಿತಿದ್ದನು. ಅದು ಆ ಸ್ಥಳದ ಕಣಕ್ಕೆ ಸಮೀಪವಾಗಿತ್ತು. ಸೌಲನ ಜೊತೆಯಲ್ಲಿ ಆರುನೂರು ಜನರಿದ್ದರು.


ಆಮೇಲೆ ಗಿದ್ಯೋನನು ಆ ಮುನ್ನೂರು ಜನರನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಗಿದ್ಯೋನನು ಪ್ರತಿಯೊಬ್ಬನಿಗೆ ಒಂದು ತುತ್ತೂರಿ ಮತ್ತು ಒಂದು ಬರಿದಾದ ಮಣ್ಣಿನ ಪಾತ್ರೆಯನ್ನು ಕೊಟ್ಟನು. ಪ್ರತಿಯೊಂದು ಪಾತ್ರೆಯ ಒಳಗಡೆ ಒಂದು ಉರಿಯುತ್ತಿರುವ ಪಂಜು ಇತ್ತು.


ಯೆಹೋವನು ಗಿದ್ಯೋನನಿಗೆ, “ನಾಯಿಯಂತೆ ನೀರನ್ನು ನೆಕ್ಕಿದ ಮುನ್ನೂರು ಮಂದಿಯಿಂದಲೇ ಮಿದ್ಯಾನ್ಯರನ್ನು ಸೋಲಿಸಿ ನಿಮ್ಮನ್ನು ರಕ್ಷಿಸುವೆನು. ಉಳಿದವರು ತಮ್ಮ ಮನೆಗಳಿಗೆ ಹೋಗಲಿ” ಎಂದು ಹೇಳಿದನು.


ಅಹಾಬನು, “ಅವರನ್ನು ಸೋಲಿಸಲು ನೀನು ಯಾರನ್ನು ಬಳಸಿಕೊಳ್ಳುವೆ?” ಎಂದನು. ಪ್ರವಾದಿಯು, “ಜಿಲ್ಲೆಗಳ ರಾಜ್ಯಪಾಲರುಗಳ ಸೇವೆಮಾಡುತ್ತಿರುವ ಯೌವನಸ್ಥರನ್ನು ಬಳಸಿಕೊಳ್ಳುತ್ತೇನೆ ಎಂದು ಯೆಹೋವನು ಹೇಳುತ್ತಾನೆ” ಎಂದು ಉತ್ತರಿಸಿದನು. ನಂತರ ರಾಜನು, “ಯುದ್ಧವನ್ನು ಆರಂಭಿಸುವವರು ಯಾರು?” ಎಂದು ಕೇಳಿದನು. “ನೀನೇ” ಎಂದು ಪ್ರವಾದಿಯು ಉತ್ತರಿಸಿದನು.


ಮಧ್ಯಾಹ್ನದ ವೇಳೆಗೆ, ರಾಜನಾದ ಬೆನ್ಹದದನು ಮತ್ತು ಅವನ ಸಹಾಯಕ್ಕಾಗಿ ಬಂದಿದ್ದ ಮೂವತ್ತೆರಡು ಮಂದಿ ರಾಜರು, ಅವರ ಗುಡಾರಗಳಲ್ಲಿ ಕುಡಿಯುತ್ತಾ ಮತ್ತೇರಿಸಿಕೊಳ್ಳುತ್ತಿದ್ದರು. ಆ ಸಮಯದಲ್ಲಿ ರಾಜನಾದ ಅಹಾಬನ ಆಕ್ರಮಣವು ಆರಂಭವಾಯಿತು.


ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ. ಭುಜಬಲದಿಂದಲೇ ಯಾವ ಯುದ್ಧವೀರನೂ ಸುರಕ್ಷಿತನಾಗಿರಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು