Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:16 - ಪರಿಶುದ್ದ ಬೈಬಲ್‌

16 ಮಧ್ಯಾಹ್ನದ ವೇಳೆಗೆ, ರಾಜನಾದ ಬೆನ್ಹದದನು ಮತ್ತು ಅವನ ಸಹಾಯಕ್ಕಾಗಿ ಬಂದಿದ್ದ ಮೂವತ್ತೆರಡು ಮಂದಿ ರಾಜರು, ಅವರ ಗುಡಾರಗಳಲ್ಲಿ ಕುಡಿಯುತ್ತಾ ಮತ್ತೇರಿಸಿಕೊಳ್ಳುತ್ತಿದ್ದರು. ಆ ಸಮಯದಲ್ಲಿ ರಾಜನಾದ ಅಹಾಬನ ಆಕ್ರಮಣವು ಆರಂಭವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮಧ್ಯಾಹ್ನದಲ್ಲಿ ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಜನರು ಅರಸರ ಸಂಗಡ ಮದ್ಯಪಾನ ಮಾಡಿ ಮತ್ತರಾಗಿ ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮಧ್ಯಾಹ್ನದಲ್ಲಿ, ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಮಂದಿ ರಾಜರ ಸಂಗಡ ಮದ್ಯಪಾನಮಾಡಿ ಮತ್ತನಾಗಿ, ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮಧ್ಯಾಹ್ನದಲ್ಲಿ ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಮಂದಿ ಅರಸರ ಸಂಗಡ ಮದ್ಯಪಾನಮಾಡಿ ಮತ್ತನಾಗಿ ಡೇರೆಯಲ್ಲಿ ಕೂತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರು ಮಧ್ಯಾಹ್ನದಲ್ಲಿ ಹೊರಟರು. ಆದರೆ ಬೆನ್ಹದದನೂ, ಅವರ ಸಹಾಯಕರಾದ ಮೂವತ್ತೆರಡು ಮಂದಿ ಅರಸರೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:16
13 ತಿಳಿವುಗಳ ಹೋಲಿಕೆ  

“ಲೈಂಗಿಕಪಾಪ, ಗಡುಸಾದ ಮದ್ಯ ಮತ್ತು ಹೊಸ ದ್ರಾಕ್ಷಾರಸ ಇವುಗಳಿಂದ ವಿಚಾರಪ್ರಜ್ಞೆಯನ್ನು ಕಳೆದುಕೊಳ್ಳುವರು.


ನಿನಗೆ ವಿರುದ್ಧವಾಗಿ ನನ್ನ ಯಾವ ಸೈನ್ಯವೂ ಯುದ್ಧಮಾಡದು. ಯಾರಾದರೂ ನಿನ್ನ ಮೇಲೆ ಆಕ್ರಮಣ ಮಾಡಿದರೆ ಆ ಶತ್ರುವನ್ನು ನೀನು ಗೆಲ್ಲುವೆ.


ಜಿಮ್ರಿಯು ಏಲನ ಅಧಿಕಾರಿಗಳಲ್ಲಿ ಒಬ್ಬನಾಗಿದ್ದನು. ಏಲನ ರಥಬಲದ ಅರ್ಧಭಾಗಕ್ಕೆ ಜಿಮ್ರಿಯು ಅಧಿಪತಿ. ಆದರೆ ಏಲನ ವಿರುದ್ಧ ಜಿಮ್ರಿಯು ಸಂಚುಮಾಡಿದನು. ರಾಜನಾದ ಏಲನು ತಿರ್ಚದಲ್ಲಿದ್ದನು. ಅವನು ಅರ್ಚನ ಮನೆಯಲ್ಲಿ ಕುಡಿದು ಮತ್ತನಾದನು. ಅರ್ಚನು ತಿರ್ಚದಲ್ಲಿದ್ದ ಅರಮನೆಯ ಮೇಲ್ವಿಚಾರಕ.


ಯೆಹೋವನು ಪ್ರವಾದಿಯಾದ ಯೇಹುವಿಗೆ ಒಂದು ಸಂದೇಶವನ್ನು ನೀಡಿದನು. ಈ ಸಂದೇಶವು ಬಾಷನ ಮತ್ತು ಅವನ ಕುಟುಂಬದ ವಿರುದ್ಧವಾಗಿತ್ತು. ಬಾಷನು ಯೆಹೋವನ ವಿರುದ್ಧವಾಗಿ ದುರಾಚಾರವನ್ನೆಸಗಿದನು. ಇದು ಯೆಹೋವನಿಗೆ ಹೆಚ್ಚು ಕೋಪವನ್ನು ಉಂಟುಮಾಡಿತು. ಯಾರೊಬ್ಬಾಮನ ಕುಟುಂಬವು ಅವನಿಗಿಂತ ಮುಂಚೆ ಮಾಡಿದ ಕಾರ್ಯಗಳನ್ನೇ ಬಾಷನೂ ಮಾಡಿದನು. ಬಾಷನು ಯಾರೊಬ್ಬಾಮನ ಕುಟುಂಬದವರನ್ನೆಲ್ಲಾ ಕೊಂದುಹಾಕಿದ್ದಕ್ಕಾಗಿಯೂ ಯೆಹೋವನು ಕೋಪಗೊಂಡನು.


ಅಹಾಬನು ಜಿಲ್ಲೆಗಳ ರಾಜ್ಯಪಾಲರುಗಳ ಸೇವೆ ಮಾಡುತ್ತಿರುವ ಯೌವನಸ್ಥರನ್ನು ಒಟ್ಟಾಗಿ ಸೇರಿಸಿದನು. ಅಲ್ಲಿ ಇನ್ನೂರ ಮೂವತ್ತೆರಡು ಮಂದಿ ಯುವಜನರಿದ್ದರು. ನಂತರ ರಾಜನು ಇಸ್ರೇಲಿನ ಸೈನ್ಯವನ್ನು ಒಟ್ಟಾಗಿ ಕರೆದನು. ಅವರಲ್ಲಿ ಒಟ್ಟು ಏಳುಸಾವಿರ ಸೈನಿಕರಿದ್ದರು.


ಮೊದಲು ಯುವಸಹಾಯಕರು ಆಕ್ರಮಣ ಮಾಡಿದರು. ರಾಜನಾದ ಬೆನ್ಹದದನ ಜನರು, ಸಮಾರ್ಯದಿಂದ ಸೈನಿಕರು ಹೊರಗೆ ಬಂದಿದ್ದಾರೆಂಬುದನ್ನು ಅವನಿಗೆ ತಿಳಿಸಿದರು.


ಅರಾಮ್ಯರ ರಾಜನ ಬಳಿ ಮೂವತ್ತೆರಡು ರಥಬಲದ ಅಧಿಪತಿಗಳಿದ್ದರು. ಆ ರಾಜನು ಇಸ್ರೇಲಿನ ರಾಜನನ್ನು ಕಂಡು ಹಿಡಿಯುವಂತೆ ಈ ಮೂವತ್ತೆರಡು ರಥಬಲದ ಅಧಿಪತಿಗಳಿಗೆ ಆಜ್ಞಾಪಿಸಿದ್ದನು. ಅರಾಮ್ಯರ ರಾಜನು, ಇಸ್ರೇಲಿನ ರಾಜನನ್ನು ಕೊಂದುಹಾಕುವಂತೆ ಈ ಅಧಿಕಾರಿಗಳಿಗೆ ಆಜ್ಞಾಪಿಸಿದ್ದನು;


ದ್ರಾಕ್ಷಾರಸವು ಪರಿಹಾಸ್ಯಕ್ಕೂ ಮದ್ಯವು ಕೂಗಾಟಕ್ಕೂ ನಡೆಸುತ್ತವೆ. ಅಮಲೇರಿಸಿಕೊಳ್ಳುವುದು ಮೂರ್ಖತನ.


ಈಗ ಆ ಜನರು ತಮ್ಮ ಸುಖಾಸನಗಳಲ್ಲಿ ಕಾಲನ್ನು ನೇರವಾಗಿ ಚಾಚಿಕೊಂಡು ಮಲಗಿದ್ದಾರೆ. ಆದರೆ ಅವರ ಸುಖದ ಸಮಯಗಳು ಅಂತ್ಯವಾಗುವವು. ಅವರು ಕೈದಿಗಳಂತೆ ಸೆರೆಹಿಡಿಯಲ್ಪಟ್ಟು ಪರದೇಶಕ್ಕೆ ಒಯ್ಯಲ್ಪಡುವರು. ಅವರಲ್ಲಿ ಕೆಲವರು ಸೆರೆ ಒಯ್ಯಲ್ಪಡುವವರಲ್ಲಿ ಮೊದಲಿಗರಾಗುವರು.


ಅವರು ಮದ್ಯವನ್ನು ಬೆರೆಸುವುದರಲ್ಲಿ ಪರಿಣಿತರು; ಮದ್ಯಸೇವನೆ ಮಾಡುವದಕ್ಕೆ ಹೆಸರಾದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು