Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:21 - ಪರಿಶುದ್ದ ಬೈಬಲ್‌

21 ರಾಜನಾದ ಅಹಾಬನು ತನ್ನ ಸೈನ್ಯವನ್ನು ಮುನ್ನಡೆಸಿ, ಅರಾಮ್ಯರ ಸೇನೆಯಿಂದ ರಥಗಳನ್ನೂ ಅಶ್ವಸೇನೆಯನ್ನೂ ಸೋಲಿಸಿದನು. ಅರಾಮ್ಯರ ಸೇನೆಯ ಮಹಾ ಅಪಜಯಕ್ಕೆ ರಾಜನಾದ ಅಹಾಬನು ಕಾರಣನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಸ್ರಾಯೇಲರ ಅರಸನು ಹೊರಟು ಬಂದು ಅರಾಮ್ಯರ ರಥಾಶ್ವಬಲಗಳನ್ನು ಸೋಲಿಸಿ ಮಹಾಸಮೂಹವನ್ನು ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇಸ್ರಯೇಲರ ಅರಸನು ಹೊರಟುಬಂದು ಸಿರಿಯಾದವರ ರಥಾಶ್ವಬಲಗಳನ್ನು ಸೋಲಿಸಿ, ಮಹಾಸಮೂಹವನ್ನು ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇಸ್ರಾಯೇಲ್ಯರ ಅರಸನು ಹೊರಟುಬಂದು ಅರಾಮ್ಯರ ರಥಾಶ್ವಬಲಗಳನ್ನು ಸೋಲಿಸಿ ಮಹಾಸಮೂಹವನ್ನು ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ, ರಥಗಳನ್ನೂ ಹೊಡೆದು, ಅರಾಮ್ಯರನ್ನು ಮಹಾ ಸಂಹಾರದಿಂದ ನಾಶಮಾಡಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:21
11 ತಿಳಿವುಗಳ ಹೋಲಿಕೆ  

ಮೋವಾಬಿನ ಜನರು ಇಸ್ರೇಲರ ಪಾಳೆಯಕ್ಕೆ ಬಂದರು. ಆದರೆ ಇಸ್ರೇಲರು ಹೊರಗೆ ಬಂದು ಮೋವಾಬಿನ ಸೈನ್ಯದ ಮೇಲೆ ಆಕ್ರಮಣ ಮಾಡಿದರು. ಮೋವಾಬಿನ ಜನರು ಇಸ್ರೇಲಿಯರಿಂದ ತಪ್ಪಿಸಿಕೊಂಡು ಓಡಿಹೋದರು. ಇಸ್ರೇಲರು ಮುನ್ನುಗ್ಗಿ ಮೋವಾಬಿನವರನ್ನು ಕೊಂದುಹಾಕಿದರು.


ಯೆಹೋವನಿಗೆ ಇದು ಸುಲಭ ಸಾಧ್ಯ. ಮೋವಾಬ್ಯರನ್ನು ನೀವು ಸೋಲಿಸುವಂತೆ ಆತನೇ ಅವಕಾಶ ಮಾಡುತ್ತಾನೆ.


ಇಸ್ರೇಲಿನ ಮತ್ತು ಯೆಹೂದದ ಸೈನಿಕರು ಆರ್ಭಟಮಾಡುತ್ತಾ ಫಿಲಿಷ್ಟಿಯರ ಬೆನ್ನಟ್ಟಿದರು. ಇಸ್ರೇಲರು ಫಿಲಿಷ್ಟಿಯರನ್ನು ಗತ್ ನಗರದ ಗಡಿಯವರೆಗೂ ಎಕ್ರೋನಿನ ಬಾಗಿಲುಗಳ ವರೆಗೂ ಅಟ್ಟಿಸಿಕೊಂಡು ಹೋದರು. ಅವರು ಅನೇಕ ಫಿಲಿಷ್ಟಿಯರನ್ನು ಕೊಂದರು. ಅವರ ಶವಗಳು ಶಾರಯಿಮಿನ ಮಾರ್ಗದುದ್ದಕ್ಕೂ ಗತ್ ಮತ್ತು ಎಕ್ರೋನ್‌ಗಳವರೆಗೆ ಬಿದ್ದಿದ್ದವು.


ಏಹೂದನು ಇಸ್ರೇಲರಿಗೆ, “ನನ್ನನ್ನು ಹಿಂಬಾಲಿಸಿರಿ, ನಮ್ಮ ಶತ್ರುಗಳಾದ ಮೋವಾಬ್ಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ” ಎಂದನು. ಇಸ್ರೇಲರು ಏಹೂದನನ್ನು ಹಿಂಬಾಲಿಸಿದರು. ಅವರು ಜೋರ್ಡನ್ ನದಿಯ ಹಾಯಗಡಗಳನ್ನೆಲ್ಲಾ ವಶಪಡಿಸಿಕೊಂಡರು. ಆ ಸ್ಥಳಗಳು ಮೋವಾಬಿಗೆ ಹೋಗುವ ದಾರಿಯಲ್ಲಿದ್ದವು. ಜೋರ್ಡನ್ ನದಿಯನ್ನು ದಾಟಿಹೋಗಲು ಇಸ್ರೇಲರು ಯಾರಿಗೂ ಅವಕಾಶ ಕೊಡಲಿಲ್ಲ.


ಆದರೆ ಇಸ್ರೇಲಿನ ಪ್ರತಿಯೊಬ್ಬನೂ ತನ್ನ ಮೇಲೆ ಬಿದ್ದವನನ್ನು ಕೊಂದುಹಾಕುತ್ತಿದ್ದನು. ಅರಾಮ್ಯದ ಜನರು ಓಡಿಹೋಗಲು ಆರಂಭಿಸಿದರು. ಇಸ್ರೇಲಿನ ಸೈನ್ಯವು ಅವರನ್ನು ಅಟ್ಟಿಸಿಕೊಂಡು ಹೋಯಿತು. ರಾಜನಾದ ಬೆನ್ಹದದನು ಅಶ್ವಸೇನೆಯ ಕುದುರೆಯೊಂದರ ಮೇಲೆ ಕುಳಿತು ತಪ್ಪಿಸಿಕೊಂಡನು.


ಆಗ ಆ ಪ್ರವಾದಿಯು ರಾಜನಾದ ಅಹಾಬನಲ್ಲಿಗೆ ಹೋಗಿ, “ಅರಾಮಿನ ರಾಜನಾದ ಬೆನ್ಹದದನು ಮುಂದಿನ ವಸಂತಮಾಸದಲ್ಲಿ ನಿನ್ನ ವಿರುದ್ಧ ಯುದ್ಧಮಾಡಲು ಮತ್ತೆ ಬರುತ್ತಾನೆ. ಈಗ ನೀನು ಮನೆಗೆ ಹೋಗಿ ನಿನ್ನ ಸೈನ್ಯವನ್ನು ಬಲಪಡಿಸು. ಅವನ ವಿರುದ್ಧ ನೀನು ಸಮರ್ಥನಾಗಲು ಎಚ್ಚರಿಕೆಯಿಂದ ಉಪಾಯಗಳನ್ನು ಮಾಡು” ಎಂದು ಹೇಳಿದನು.


ಯೆಹೋಶುವನು ಮತ್ತು ಇಸ್ರೇಲಿನ ಜನರು ವೈರಿಗಳನ್ನು ಕೊಂದರು. ಆದರೆ ಕೆಲವು ಶತ್ರುಗಳು ಎತ್ತರವಾದ ಗೋಡೆಗಳುಳ್ಳ ತಮ್ಮ ಪಟ್ಟಣಗಳಿಗೆ ಹೋಗಿ ಅಡಗಿಕೊಳ್ಳಲು ಸಾಧ್ಯವಾಯಿತು. ಆ ಜನರು ಕೊಲ್ಲಲ್ಪಡಲಿಲ್ಲ.


ಅವನು ಅವರನ್ನು ಸೋಲಿಸಿ ಅರೋಯೇರ್ ನಗರದಿಂದ ಮಿನ್ನೀತ್ ನಗರದವರೆಗೆ ಇಪ್ಪತ್ತು ನಗರಗಳನ್ನು ಗೆದ್ದುಕೊಂಡನು. ಆಮೇಲೆ ಅವನು ಅಮ್ಮೋನಿಯರ ಸಂಗಡ ಯುದ್ಧಮಾಡಿ ಅಬೇಲ್‌ಕೆರಾಮೀಮ್ ನಗರವನ್ನು ಗೆದ್ದುಕೊಂಡನು. ಇಸ್ರೇಲರು ಅಮ್ಮೋನಿಯರನ್ನು ಸೋಲಿಸಿದರು. ಅಮ್ಮೋನಿಯರಿಗೆ ಇದೊಂದು ದೊಡ್ಡ ಸೋಲಾಯಿತು.


ಯುದ್ಧವು ಮತ್ತೆ ಬಂದಿತು. ದಾವೀದನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಿ ಅವರನ್ನು ಸೋಲಿಸಿ ಓಡಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು