Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:29 - ಪರಿಶುದ್ದ ಬೈಬಲ್‌

29 ಈ ಎರಡು ಸೈನ್ಯಗಳೂ ಎದುರುಬದುರಾಗಿ ಏಳು ದಿನಗಳ ಕಾಲ ಪಾಳೆಯವನ್ನು ಹೂಡಿದವು. ಏಳನೆಯ ದಿನ ಯುದ್ಧವು ಆರಂಭವಾಯಿತು. ಇಸ್ರೇಲರು ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಸೈನಿಕರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಈ ಎರಡು ಸೈನ್ಯಗಳು ಏಳು ದಿನಗಳ ವರೆಗೆ ಎದುರುಬದುರಾಗಿ ಪಾಳೆಯ ಮಾಡಿಕೊಂಡಿದ್ದವು. ಏಳನೆಯ ದಿನದಲ್ಲಿ ಯುದ್ಧ ಪ್ರಾರಂಭವಾಗಲು ಇಸ್ರಾಯೇಲರು ಆ ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಕಾಲಾಳುಗಳನ್ನು ವಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಈ ಎರಡು ಸೈನ್ಯಗಳೂ ಏಳುದಿನಗಳವರೆಗೆ ಎದುರುಬದುರಾಗಿ ಪಾಳೆಯಮಾಡಿಕೊಂಡಿದ್ದವು; ಏಳನೆಯ ದಿನದಲ್ಲಿ ಯುದ್ಧಪ್ರಾರಂಭವಾಯಿತು. ಇಸ್ರಯೇಲರು ಆ ಒಂದೇ ದಿನದಲ್ಲಿ ಸಿರಿಯಾದವರ ಒಂದು ಲಕ್ಷಮಂದಿ ಕಾಲಾಳುಗಳನ್ನು ವಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಈ ಎರಡು ಸೈನ್ಯಗಳೂ ಏಳು ದಿನಗಳವರೆಗೆ ಎದುರುಬದುರಾಗಿ ಪಾಳೆಯಮಾಡಿಕೊಂಡಿದ್ದವು. ಏಳನೆಯ ದಿನದಲ್ಲಿ ಯುದ್ಧ ಪ್ರಾರಂಭವಾಗಲು ಇಸ್ರಾಯೇಲ್ಯರು ಆ ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಕಾಲಾಳುಗಳನ್ನು ವಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಏಳು ದಿವಸ ಎರಡು ಸೈನ್ಯಗಳೂ ಎದುರುಬದುರಾಗಿ ದಂಡಿಳಿದಿದ್ದರು. ಆದರೆ ಏಳನೆಯ ದಿವಸದಲ್ಲಿ ಯುದ್ಧಕ್ಕೆ ಕೂಡಿದಾಗ, ಇಸ್ರಾಯೇಲರು ಅರಾಮ್ಯರಲ್ಲಿ ಲಕ್ಷಮಂದಿ ಕಾಲಾಳುಗಳನ್ನು ಒಂದೇ ದಿವಸದಲ್ಲಿ ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:29
13 ತಿಳಿವುಗಳ ಹೋಲಿಕೆ  

ಆ ರಾತ್ರಿ, ಯೆಹೋವನ ದೂತನು ಹೊರಟುಹೋಗಿ ಅಶ್ಶೂರದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಸಂಹರಿಸಿದನು. ಜನರು ಬೆಳಿಗ್ಗೆ ಎದ್ದಾಗ ಸುತ್ತಲೂ ಹೆಣಗಳು ಬಿದ್ದಿದ್ದವು.


ಯೆಹೋವನು ಸದಾಕಾಲವೂ ರಾಜನಾಗಿರುವನು. ಆತನು ತನ್ನ ದೇಶದಿಂದ ಕೆಡುಕರನ್ನು ತೆಗೆದುಹಾಕುವನು.


ಅಬೀಯನ ಸೈನ್ಯವು ಇಸ್ರೇಲಿನ ಸೈನ್ಯದ ಮೇಲೆ ಮಹಾಜಯವನ್ನು ಗಳಿಸಿತು. ಯಾರೊಬ್ಬಾಮನ ಐದು ಲಕ್ಷ ಪಳಗಿದ ಸೈನಿಕರು ಕೊಲ್ಲಲ್ಪಟ್ಟರು.


ಆದರೆ ದಾವೀದನು ಅರಾಮ್ಯರನ್ನು ಸೋಲಿಸಿದನು. ಅರಾಮ್ಯರು ಇಸ್ರೇಲರನ್ನು ಬಿಟ್ಟು ಓಡಿಹೋದರು. ದಾವೀದನು ಅರಾಮ್ಯರ ಏಳು ನೂರು ಮಂದಿ ರಥದ ಸಾರಥಿಯರನ್ನೂ ನಲವತ್ತು ಸಾವಿರ ಮಂದಿ ರಾಹುತರನ್ನೂ ಕೊಂದುಹಾಕಿದನು. ಅರಾಮ್ಯರ ಸೇನಾಪತಿಯಾದ ಶೋಬಕನನ್ನು ಸಹ ದಾವೀದನು ಕೊಂದುಹಾಕಿದನು.


ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಗೊಲ್ಯಾತನು ಹೊರಬಂದು ಇಸ್ರೇಲ್ ಸೈನ್ಯಕ್ಕೆ ಎದುರಾಗಿ ನಿಲ್ಲುತ್ತಿದ್ದನು. ಈ ರೀತಿ ಗೊಲ್ಯಾತನು ಇಸ್ರೇಲರನ್ನು ನಲವತ್ತು ದಿನಗಳ ಕಾಲ ಹೀಯಾಳಿಸಿದನು.


ಏಳನೆಯ ದಿನ ಸೂರ್ಯೋದಯವಾಗುತ್ತಲೇ ಅವರು ಎದ್ದರು. ಪಟ್ಟಣದ ಸುತ್ತಲು ಅವರು ಏಳು ಸಲ ಸುತ್ತಿದರು. ಅವರು ಮುಂಚಿನ ದಿನಗಳಲ್ಲಿ ನಡೆದ ಕ್ರಮದಲ್ಲಿಯೇ ನಡೆದರು. ಆದರೆ ಆ ದಿನ ಅವರು ನಗರದ ಸುತ್ತಲು ಏಳು ಸಲ ಸುತ್ತಿದರು.


ಇಸಾಕನು ನಲವತ್ತು ವರ್ಷದವನಾಗಿದ್ದಾಗ ರೆಬೆಕ್ಕಳನ್ನು ಮದುವೆಯಾದನು. ರೆಬೆಕ್ಕಳು ಪದ್ದನ್ ಅರಾಮಿನವಳು. ಆಕೆ ಬೆತೂವೇಲನ ಮಗಳು ಮತ್ತು ಅರಾಮ್ಯನಾದ ಲಾಬಾನನ ತಂಗಿ.


ಇಸ್ರೇಲಿನ ರಾಜನ ಹತ್ತಿರಕ್ಕೆ ಬಂದ ದೇವಮನುಷ್ಯನ ಸಂದೇಶವು ಇಂತಿದೆ: “ಯೆಹೋವನು ಹೀಗೆಂದನು: ‘ಯೆಹೋವನಾದ ನನ್ನನ್ನು ಬೆಟ್ಟಗಳ ದೇವರೆಂದು ಅರಾಮ್ಯದ ಜನರು ಹೇಳಿದ್ದಾರೆ. ನಾನು ಕಣಿವೆಗಳ ದೇವರಲ್ಲವೆಂದು ಸಹ ಅವರು ಯೋಚಿಸಿಕೊಂಡಿದ್ದಾರೆ. ಆದ್ದರಿಂದ ಈ ಮಹಾಸೇನೆಯನ್ನು ನೀನು ಸೋಲಿಸುವಂತೆ ನಾನು ಅವಕಾಶ ಮಾಡುತ್ತೇನೆ. ನಾನೇ ಯೆಹೋವನೆಂಬುದು ಆಗ ನಿನಗೇ ತಿಳಿಯುತ್ತದೆ!’”


ಬದುಕಿ ಉಳಿದವರು ಅಫೇಕ್ ನಗರಕ್ಕೆ ಓಡಿಹೋದರು. ಆ ನಗರದ ಗೋಡೆಯು ಉಳಿದಿದ್ದ ಇಪ್ಪತ್ತೇಳು ಸಾವಿರ ಜನರ ಮೇಲೆ ಉರುಳಿ ಬಿತ್ತು. ಬೆನ್ಹದದನೂ ನಗರಕ್ಕೆ ಓಡಿಹೋಗಿ ಒಂದು ಕೊಠಡಿಯಲ್ಲಿ ಅವಿತುಕೊಂಡನು.


ಎಲೀಷನು, “ಪೂರ್ವದಿಕ್ಕಿನ ಕಿಟಕಿಯನ್ನು ತೆಗೆ” ಎಂದು ಹೇಳಿದನು. ಯೋವಾಷನು ಕಿಟಕಿಯನ್ನು ತೆರೆದನು. ಆಗ ಎಲೀಷನು, “ಹೊಡಿ” ಎಂದನು. ಯೋವಾಷನು ಹೊಡೆದನು. ಆಗ ಎಲೀಷನು, “ಅದು ಯೆಹೋವನ ವಿಜಯದ ಬಾಣ! ಅರಾಮ್ಯರ ಮೇಲಿನ ವಿಜಯದ ಬಾಣ! ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸುವೆ. ನೀನು ಅವರನ್ನು ನಾಶಗೊಳಿಸುವೆ” ಎಂದು ಹೇಳಿದನು.


ಹಜಾಯೇಲನು ಸಾಯುವುದಕ್ಕೆ ಮೊದಲು, ಯೋವಾಷನ ತಂದೆಯಾದ ಯೆಹೋವಾಹಾಜನಿಂದ ಯುದ್ಧದಲ್ಲಿ ಕೆಲವು ನಗರಗಳನ್ನು ಮತ್ತೆ ವಶಪಡಿಸಿಕೊಂಡನು. ಆದರೆ ಈಗ ಯೋವಾಷನು ಹಜಾಯೇಲನ ಮಗನಾದ ಬೆನ್ಹದದನಿಂದ ಈ ನಗರಗಳನ್ನು ವಶಪಡಿಸಿಕೊಂಡನು. ಯೋವಾಷನು ಬೆನ್ಹದದನನ್ನು ಮೂರು ಸಲ ಸೋಲಿಸಿ ಇಸ್ರೇಲಿನ ನಗರಗಳನ್ನು ವಶಪಡಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು