Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:34 - ಪರಿಶುದ್ದ ಬೈಬಲ್‌

34 ಬೆನ್ಹದದನು ಅವನಿಗೆ, “ಅಹಾಬನೇ, ನನ್ನ ತಂದೆಯು ನಿನ್ನ ತಂದೆಯಿಂದ ವಶಪಡಿಸಿಕೊಂಡಿರುವ ಪಟ್ಟಣಗಳನ್ನು ನಿನಗೇ ಬಿಟ್ಟುಬಿಡುತ್ತೇನೆ. ನನ್ನ ತಂದೆಯು ಸಮಾರ್ಯದಲ್ಲಿ ಮಾಡಿದಂತೆ ನೀನೂ ದಮಸ್ಕದಲ್ಲಿ ಅಂಗಡಿಗಳನ್ನು ಹಾಕಬಹುದು” ಎಂದನು. ಅಹಾಬನು, “ನೀನು ಇದಕ್ಕೆ ಒಪ್ಪಿಕೊಂಡರೆ, ನಾನು ನಿನ್ನನ್ನು ಸ್ವತಂತ್ರವಾಗಿ ಹೋಗಲು ಬಿಡುತ್ತೇನೆ” ಎಂದನು. ಆ ಇಬ್ಬರು ರಾಜರುಗಳು ಶಾಂತಿಸಂಧಾನವನ್ನು ಮಾಡಿಕೊಂಡರು. ರಾಜನಾದ ಅಹಾಬನು ಬೆನ್ಹದದನಿಗೆ ಸ್ವತಂತ್ರವನ್ನು ಕೊಟ್ಟು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಬೆನ್ಹದದನು ಅವನಿಗೆ, “ನನ್ನ ತಂದೆಯು ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ, ಅವನು ಸಮಾರ್ಯದಲ್ಲಿ ಮಾಡಿದಂತೆ ನೀನು ನಿನಗೋಸ್ಕರ ದಮಸ್ಕದಲ್ಲಿ ಕೆಲವು ಕೇರಿಗಳನ್ನು ನಿನ್ನದಾಗಿಸಿಕೊಳ್ಳಬಹುದು” ಎಂದು ಹೇಳಿದನು. ಆಗ ಅಹಾಬನು, “ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ” ಎಂದು ಹೇಳಿ ಅವನಿಂದ ಪ್ರಮಾಣ ಮಾಡಿಸಿ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಬೆನ್ಹದದನು ಅವನಿಗೆ, “ನನ್ನ ತಂದೆ, ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ; ಅವನು ಸಮಾರಿಯಾದಲ್ಲಿ ಮಾಡಿದಂತೆ ನೀನೂ ನನಗಾಗಿ ದಮಸ್ಕದಲ್ಲಿ ಕೆಲವು ವ್ಯಾಪಾರ ಕೇಂದ್ರಗಳನ್ನು ಸ್ಥಾಪಿಸಿಕೊಳ್ಳಬಹುದು,” ಎಂದು ಹೇಳಿದನು. ಅಹಾಬನು, “ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ,” ಎಂದು ಹೇಳಿ, ಅವನಿಂದ ಪ್ರಮಾಣಮಾಡಿಸಿ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಬೆನ್ಹದದನು ಅವನಿಗೆ - ನನ್ನ ತಂದೆಯು ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ; ಅವನು ಸಮಾರ್ಯದಲ್ಲಿ ಮಾಡಿದಂತೆ ನೀನೂ ನಿನಗೋಸ್ಕರ ದಮಸ್ಕದಲ್ಲಿ ಕೆಲವು ಕೇರಿಗಳನ್ನು ಮಾಡಿಸಿಕೊಳ್ಳಬಹುದು ಎಂದು ಹೇಳಲು ಅಹಾಬನು - ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ ಎಂದು ಹೇಳಿ ಅವನಿಂದ ಪ್ರಮಾಣಮಾಡಿಸಿ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆಗ ಬೆನ್ಹದದನು ಅವನಿಗೆ, “ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣಗಳನ್ನು ತಿರುಗಿಕೊಡುತ್ತೇನೆ. ನನ್ನ ತಂದೆ ಸಮಾರ್ಯದಲ್ಲಿ ಮಾಡಿದ ಹಾಗೆಯೇ, ದಮಸ್ಕದಲ್ಲಿ ನೀನು ನಿನಗಾಗಿ ಬೀದಿಗಳನ್ನು ಮಾಡಿಸಬೇಕು,” ಎಂದನು. ಅದಕ್ಕೆ ಅಹಾಬನು, “ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳುಹಿಸಿಬಿಡುತ್ತೇನೆ,” ಎಂದನು. ಹೀಗೆಯೇ ಅಹಾಬನು ಬೆನ್ಹದದನ ಸಂಗಡ ಒಡಂಬಡಿಕೆಯನ್ನು ಮಾಡಿ, ಅವನನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:34
12 ತಿಳಿವುಗಳ ಹೋಲಿಕೆ  

ರಾಜನಾದ ಬೆನ್ಹದದನು ರಾಜನಾದ ಆಸನ ಜೊತೆ ಒಪ್ಪಂದ ಮಾಡಿಕೊಂಡನು. ಆದ್ದರಿಂದ ಅವನು ತನ್ನ ಸೈನ್ಯವನ್ನು ಇಸ್ರೇಲಿನ ಪಟ್ಟಣಗಳ ವಿರುದ್ದ ಹೋರಾಡಲು ಕಳುಹಿಸಿದನು. ಬೆನ್ಹದದನು ಇಯ್ಯೋನ್, ದಾನ್, ಅಬೇಲ್ಬೇತ್ಮಾಕಾ ಪಟ್ಟಣಗಳನ್ನು ಮತ್ತು ಗಲಿಲಾಯ ಸರೋವರದ ಸುತ್ತಲಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿದನು. ಅವನು ನಫ್ತಾಲಿ ಪ್ರದೇಶವನ್ನೆಲ್ಲ ಸೋಲಿಸಿದನು.


ದುಷ್ಟರಿಗೆ ದಯೆತೋರಿಸಿದರೆ ಅವರು ಸುಕಾರ್ಯಗಳನ್ನು ಮಾಡಲು ಕಲಿಯುವುದಿಲ್ಲ. ದುಷ್ಟರು ಯಥಾರ್ಥರ ಲೋಕದಲ್ಲಿ ಜೀವಿಸಿದರೂ ಅವರು ದುಷ್ಕೃತ್ಯಗಳನ್ನೇ ಮಾಡುವರು. ಆ ದುಷ್ಟರು ಯೆಹೋವನ ಮಹತ್ವವನ್ನು ಎಂದೂ ಗಮನಿಸಲಾರರು.


ಬಳಿಕ ಪ್ರವಾದಿಯು ರಾಜನಿಗೆ, “ಯೆಹೋವನು ನಿನಗೆ ಹೀಗೆನ್ನುತ್ತಾನೆ, ‘ನಾನು ಸಂಹರಿಸೆಂದು ಹೇಳಿದ ಮನುಷ್ಯನನ್ನು ನೀನು ಸ್ವತಂತ್ರನಾಗಿಸಿದೆ. ಆದ್ದರಿಂದ ಅವನಿಗೆ ಸಂಭವಿಸಬೇಕಾದದ್ದು ನಿನಗೆ ಸಂಭವಿಸುವುದು. ನೀನು ಸಾಯುವೆ! ಶತ್ರುಗಳಿಗೆ ಸಂಭವಿಸಬೇಕಾದದ್ದು ನಿನ್ನ ಜನರಿಗೆ ಸಂಭವಿಸುವುದು. ನಿನ್ನ ಜನರು ಸಾಯುತ್ತಾರೆ!’” ಎಂದು ಹೇಳಿದನು.


“ಪ್ರತಿಯೊಬ್ಬನೂ ‘ಇನ್ನೊಬ್ಬನು ನಿನಗೆ ವಿರುದ್ಧವಾಗಿ ಕೇಡು ಬಗೆಯುತ್ತಾನೆ’ ಎಂದು ಹೇಳುವನು. ಅದನ್ನು ನೀನು ನಂಬಬೇಡ. ಆ ಜನರು ಭಯಪಡುವ ವಿಷಯಗಳಿಗೆ ನೀನು ಭಯಪಡಬೇಡ.


ಅರಾಮ್ಯರ ರಾಜನು ತನ್ನ ರಥದ ಅಧಿಪತಿಗಳಿಗೆ, “ನೀವು ಜನರೊಂದಿಗೆ ಯುದ್ಧಮಾಡಬೇಡಿರಿ, ಅಧಿಕಾರಿಗಳ ಮತ್ತು ಸಾಮಾನ್ಯ ಸೈನಿಕರ ಗೊಡವೆಗೆ ಹೋಗಬೇಡಿರಿ. ಆದರೆ ನೀವು ಇಸ್ರೇಲಿನ ರಾಜನಾದ ಅಹಾಬನೊಂದಿಗೇ ಯುದ್ಧಮಾಡಿರಿ” ಎಂದು ಹೇಳಿದನು.


ಇದಕ್ಕೆ ಬೆನ್ಹದದನು ಒಪ್ಪಿ ತನ್ನ ಸೇನಾಪತಿಗಳನ್ನು ಇಸ್ರೇಲಿನ ಪಟ್ಟಣಗಳ ಮೇಲೆ ಆಕ್ರಮಣಮಾಡಲು ಕಳುಹಿಸಿದನು. ಅವರು ಹೋಗಿ ಇಯ್ಯೋನ್, ದಾನ್, ಅಬೇಲ್ಮಯಿಮ್ ಎಂಬ ಪಟ್ಟಣಗಳ ಮೇಲೆಯೂ ಭಂಡಾರಗಳನ್ನು ಇಟ್ಟಿದ ನಫ್ತಾಲಿ ಪ್ರಾಂತ್ಯದ ಎಲ್ಲಾ ಪಟ್ಟಣಗಳ ಮೇಲೆಯೂ ಆಕ್ರಮಣ ಮಾಡಿದರು.


ಅರಾಮ್ಯರ ರಾಜನ ಬಳಿ ಮೂವತ್ತೆರಡು ರಥಬಲದ ಅಧಿಪತಿಗಳಿದ್ದರು. ಆ ರಾಜನು ಇಸ್ರೇಲಿನ ರಾಜನನ್ನು ಕಂಡು ಹಿಡಿಯುವಂತೆ ಈ ಮೂವತ್ತೆರಡು ರಥಬಲದ ಅಧಿಪತಿಗಳಿಗೆ ಆಜ್ಞಾಪಿಸಿದ್ದನು. ಅರಾಮ್ಯರ ರಾಜನು, ಇಸ್ರೇಲಿನ ರಾಜನನ್ನು ಕೊಂದುಹಾಕುವಂತೆ ಈ ಅಧಿಕಾರಿಗಳಿಗೆ ಆಜ್ಞಾಪಿಸಿದ್ದನು;


ಅಮ್ಮೋನಿಯನಾದ ನಾಹಾಷನು ಒಂದು ತಿಂಗಳ ನಂತರ, ತನ್ನ ಸೈನ್ಯದೊಂದಿಗೆ ಯಾಬೇಷ್‌ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯಾಬೇಷಿನ ಜನರೆಲ್ಲ ನಾಹಾಷನಿಗೆ, “ನೀನು ನಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುವುದಾದರೆ, ನಾವು ನಿನ್ನ ಸೇವೆಮಾಡುತ್ತೇವೆ” ಎಂದು ಹೇಳಿದರು.


ರಾಜನಾದ ಅಹಾಬನು ತಾನು ಬೆನ್ಹದದನನ್ನು ಕೊಲ್ಲುವುದಿಲ್ಲವೆಂಬುದನ್ನು ಯಾವುದಾದರೂ ಸೂಚನೆಯ ಮೂಲಕ ತಿಳಿಸಬಹುದೆಂದು ಬೆನ್ಹದದನ ಜನರು ಅಪೇಕ್ಷೆಪಟ್ಟಿದ್ದರು. ಅಹಾಬನು ಬೆನ್ಹದದನನ್ನು ತನ್ನ ಸೋದರನೆಂದು ಕರೆದಾಗ, ಸಲಹೆಗಾರರು ತ್ವರಿತವಾಗಿ, “ಹೌದು! ಬೆನ್ಹದದನು ನಿನ್ನ ಸೋದರನೇ” ಎಂದರು. ಅಹಾಬನು, “ಅವನನ್ನು ನನ್ನ ಬಳಿಗೆ ಕರೆತನ್ನಿ” ಎಂದನು. ಬೆನ್ಹದದನು ರಾಜನಾದ ಅಹಾಬನ ಬಳಿಗೆ ಬಂದನು. ರಾಜನಾದ ಅಹಾಬನು ಅವನನ್ನು ತನ್ನೊಡನೆ ರಥದಲ್ಲಿ ಕುಳ್ಳಿರಿಸಿಕೊಂಡನು.


ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮಗೆ ಅಧೀನಪಡಿಸುವನು. ನೀವು ಅವರನ್ನು ಸೋಲಿಸಿಬಿಡುವಿರಿ. ನೀವು ಅವರನ್ನು ಸಂಪೂರ್ಣವಾಗಿ ನಾಶಮಾಡಬೇಕು. ಅವರೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಬೇಡಿ ಮತ್ತು ಅವರಿಗೆ ಕರುಣೆಯನ್ನು ತೋರಬೇಡಿ.


ಸೌಲನು ಅಮಾಲೇಕ್ಯರ ರಾಜನಾದ ಅಗಾಗನನ್ನು ಜೀವಸಹಿತ ಉಳಿಸಿದನು. ಆದರೆ ಉಳಿದ ಅಮಾಲೇಕ್ಯರನ್ನೆಲ್ಲ ಕೊಂದುಹಾಕಿದನು.


ಹೀಗೆ ಸೌಲನು ಮತ್ತು ಇಸ್ರೇಲ್ ಸೈನಿಕರು ಅಗಾಗನಿಗೆ ಜೀವದಾನ ಮಾಡಿದರು. ಅವರು ಉತ್ತಮ ಕುರಿಗಳನ್ನೂ ದನಗಳನ್ನೂ ಆಡಿನ ಮರಿಗಳನ್ನೂ ಉಳಿಸಿದರು. ಅವರು ಉಪಯುಕ್ತವಾದುದನ್ನು ಉಳಿಸಿ, ಅನುಪಯುಕ್ತವಾದುದನ್ನು ನಾಶಗೊಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು