Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:25 - ಪರಿಶುದ್ದ ಬೈಬಲ್‌

25 ಅಹಾಬನು ಮಾಡಿದಷ್ಟು ಪಾಪಗಳನ್ನು, ಇಲ್ಲವೆ ಕೆಟ್ಟಕಾರ್ಯಗಳನ್ನು ಮಾಡಿದ ಮನುಷ್ಯರು ಬೇರೆ ಯಾರೂ ಇಲ್ಲ. ಅವನು ಆ ಕಾರ್ಯಗಳನ್ನು ಮಾಡುವುದಕ್ಕೆ ಅವನ ಪತ್ನಿಯಾದ ಈಜೆಬೆಲಳು ಅವನನ್ನು ಒತ್ತಾಯಪಡಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹೆಂಡತಿ ಈಜೆಬೆಲಳಿಂದ ಪ್ರಚೋದಿತನಾಗಿ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಹೆಂಡತಿಯಾದ ಈಜೆಬೆಲಳಿಂದ ಪ್ರೇರಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡುವದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ತನ್ನ ಹೆಂಡತಿ ಈಜೆಬೆಲಳಿಂದ ಪ್ರೇರೇಪಿತನಾಗಿ, ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿ ಬಿಟ್ಟ ಅಹಾಬನ ಹಾಗೆ ದುಷ್ಟನು ಇನ್ನೊಬ್ಬನು ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:25
26 ತಿಳಿವುಗಳ ಹೋಲಿಕೆ  

ಎಲೀಯನು ಅಹಾಬನ ಹತ್ತಿರಕ್ಕೆ ಹೋದನು. ಅಹಾಬನು ಎಲೀಯನನ್ನು ಕಂಡು, “ನೀನು ನನ್ನನ್ನು ಮತ್ತೆ ಕಂಡುಹಿಡಿದೆ. ನೀನು ಯಾವಾಗಲೂ ನನಗೆ ವಿರೋಧವಾಗಿರುವೆ” ಎಂದನು. ಎಲೀಯನು, “ಹೌದು, ನಾನು ನಿನ್ನನ್ನು ಮತ್ತೆ ಕಂಡುಹಿಡಿದೆ. ಯೆಹೋವನ ವಿರುದ್ಧ ಪಾಪಮಾಡಲು ನೀನು ನಿನ್ನ ಜೀವನವನ್ನು ಯಾವಾಗಲೂ ಉಪಯೋಗಿಸುತ್ತಿರುವೆ.


ಕಾಮುಕಿಯ ಬಾಯಿ ಆಳವಾದ ಗುಂಡಿಯಂತಿದೆ. ಯೆಹೋವನಿಂದ ಶಪಿಸಲ್ಪಟ್ಟವರು ಆ ಗುಂಡಿಯೊಳಗೆ ಬೀಳುವರು.


ಇದಲ್ಲದೆ ಕೆಲವು ಸ್ತ್ರೀಯರು ಅಪಾಯಕರವಾದ ಬೋನುಗಳಂತಿರುವರು ಎಂಬುದನ್ನು ನಾನು ಕಂಡುಕೊಂಡೆ. ಅವರ ಹೃದಯಗಳು ಬಲೆಗಳಂತಿವೆ; ಅವರ ಕೈಗಳು ಸರಪಣಿಗಳಂತಿವೆ. ಆ ಸ್ತ್ರೀಯರಿಗೆ ಸಿಕ್ಕಿಬೀಳುವುದು ಮರಣಕ್ಕಿಂತಲೂ ಅಪಾಯಕರ. ದೇವರ ಭಕ್ತನು ಆ ಸ್ತ್ರೀಯರ ಬಳಿಯಿಂದ ಓಡಿಹೋಗುವನು; ಪಾಪಿಯಾದರೋ ಅವರಿಗೆ ಸಿಕ್ಕಿಕೊಳ್ಳುವನು.


ಜನರಿಗೆ ತಿಳಿದಿರುವ ಉದಾಹರಣೆಯ ಮೂಲಕ ನಾನು ಇದನ್ನು ನಿಮಗೆ ವಿವರಿಸುತ್ತೇನೆ. ಹಿಂದಿನ ಕಾಲದಲ್ಲಿ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೂ ದುಷ್ಟತ್ವಕ್ಕೂ ಗುಲಾಮರನ್ನಾಗಿ ಒಪ್ಪಿಸಿಕೊಟ್ಟಿದ್ದಿರಿ. ನೀವು ದುಷ್ಟತ್ವಕ್ಕಾಗಿ ಮಾತ್ರ ಜೀವಿಸಿದಿರಿ. ಅದೇ ರೀತಿಯಲ್ಲಿ ಈಗ ನೀವು ನಿಮ್ಮ ದೇಹದ ಅಂಗಗಳನ್ನು ನೀತಿಗೆ ಗುಲಾಮರನ್ನಾಗಿ ಒಪ್ಪಿಸಿಕೊಡಬೇಕು. ಆಗ ನೀವು ದೇವರಿಗಾಗಿ ಮಾತ್ರ ಜೀವಿಸುತ್ತೀರಿ.


ಆದರೆ ಯೆಹೂದ್ಯರಲ್ಲಿ ನಂಬದೆ ಹೋದ ಕೆಲವರು ಯೆಹೂದ್ಯರಲ್ಲದವರನ್ನು ಪ್ರಚೋಧಿಸಿ ಸಹೋದರರ ವಿರುದ್ಧ ಜನರನ್ನು ಎಬ್ಬಿಸಿದರು.


ಈಜೆಬೆಲಳು, “ನೀನು ಇಸ್ರೇಲಿಗೆಲ್ಲ ರಾಜ! ನಿನ್ನ ಹಾಸಿಗೆಯಿಂದ ಎದ್ದು ಬಾ. ನೀನು ಸ್ವಲ್ಪ ಊಟಮಾಡಿ, ಸಂತೋಷದಿಂದಿರು. ನಾನು ನಿನಗೆ ನಾಬೋತನ ದ್ರಾಕ್ಷಿತೋಟವನ್ನು ಕೊಡಿಸುತ್ತೇನೆ” ಎಂದು ಹೇಳಿದಳು.


ಹೀಗೆ ಈ ಯೆಹೂದ್ಯರು ಜನರನ್ನೂ ಯೆಹೂದ್ಯರ ಹಿರಿಯನಾಯಕರನ್ನೂ ಧರ್ಮೋಪದೇಶಕರನ್ನೂ ಗಲಿಬಿಲಿಗೊಳಿಸಿದರು. ಅವರು ಬಹು ಸಿಟ್ಟಿನಿಂದ ಬಂದು ಸ್ತೆಫನನನ್ನು ಬಂಧಿಸಿ ಯೆಹೂದ್ಯನಾಯಕರ ಸಭೆಗೆ ಕೊಂಡೊಯ್ದರು.


ಯೆಹೋವನು ಹೇಳುವುದೇನೆಂದರೆ: “ನಾನು ನಿನ್ನನ್ನು ಮಾರಿದ್ದು ಹಣಕ್ಕಾಗಿಯಲ್ಲ; ಆದ್ದರಿಂದ ನಾನು ನಿನ್ನನ್ನು ಹಣ ಕೊಡದೆ ಬಿಡುಗಡೆ ಮಾಡುವೆನು.”


ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.


ಇದಕ್ಕೆ ಮೊದಲು ಯೋಷೀಯನಂತಹ ರಾಜನು ಇರಲೇ ಇಲ್ಲ. ಯೋಷೀಯನು ತನ್ನ ಪೂರ್ಣ ಹೃದಯದಿಂದಲೂ ತನ್ನ ಪೂರ್ಣ ಆತ್ಮದಿಂದಲೂ ತನ್ನ ಪೂರ್ಣ ಶಕ್ತಿಯಿಂದಲೂ ಯೆಹೋವನ ಕಡೆಗೆ ತಿರುಗಿದನು. ಮೋಶೆಯ ಧರ್ಮಶಾಸ್ತ್ರವನ್ನು ಯೋಷೀಯನಂತೆ ಬೇರೆ ಯಾವ ರಾಜನೂ ಅನುಸರಿಸಿರಲಿಲ್ಲ. ಆ ಕಾಲದವರೆಗೆ ಯೋಷೀಯನಂತಹ ಮತ್ತೊಬ್ಬ ರಾಜನು ಇರಲೇ ಇಲ್ಲ.


ಅವರು ತಮ್ಮ ಗಂಡುಮಕ್ಕಳನ್ನು ಮತ್ತು ಹೆಣ್ಣುಮಕ್ಕಳನ್ನು ಬೆಂಕಿಯಲ್ಲಿ ಆಹುತಿಕೊಟ್ಟರು. ಅವರು ಭವಿಷ್ಯವನ್ನು ತಿಳಿಯಲು ಮಾಂತ್ರಿಕ ವಿದ್ಯೆಯನ್ನು ಮತ್ತು ಕಣಿಹೇಳುವುದನ್ನು ಕಲಿತರು. ಯೆಹೋವನು ಕೆಟ್ಟದ್ದೆಂದು ಹೇಳಿದ್ದಕ್ಕೆ ತಮ್ಮನ್ನು ತಾವು ಮಾರಿಕೊಂಡು ಯೆಹೋವನಿಗೆ ಕೋಪವನ್ನು ಉಂಟುಮಾಡಿದರು.


ಆದ್ದರಿಂದ ಈಜೆಬೆಲಳು ಎಲೀಯನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದಳು. ಈಜೆಬೆಲಳು, “ನೀನು ಆ ಪ್ರವಾದಿಗಳನ್ನು ಕೊಂದುಹಾಕಿದಂತೆ ನಾಳೆಯ ದಿನ ನಾನು ಇದೇ ಸಮಯಕ್ಕೆ ಮುಂಚೆ, ನಿನ್ನನ್ನು ಕೊಂದುಹಾಕುವೆನೆಂದು ಪ್ರಮಾಣ ಮಾಡುತ್ತೇನೆ. ನಾನು ಈ ಕಾರ್ಯದಲ್ಲಿ ವಿಜಯಿಯಾಗದಿದ್ದಲ್ಲಿ, ದೇವರುಗಳು ನನ್ನನ್ನು ಕೊಲ್ಲಲಿ” ಎಂದು ಹೇಳಿದಳು.


ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)


ಧರ್ಮಶಾಸ್ತ್ರವು ಆತ್ಮಿಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ಆತ್ಮಿಕನಲ್ಲ. ನಾನು ಪಾಪಕ್ಕೆ ಮಾರಲ್ಪಟ್ಟ ಗುಲಾಮನೋ ಎಂಬಂತೆ ಪಾಪವು ನನ್ನನ್ನು ಆಳುತ್ತದೆ.


ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.


ಎಲೀಯನು, “ಇಸ್ರೇಲಿನ ತೊಂದರೆಗೆ ನಾನು ಕಾರಣನಲ್ಲ. ನೀನು ಮತ್ತು ನಿನ್ನ ತಂದೆಯ ಕುಟುಂಬವು ಈ ತೊಂದರೆಗಳಿಗೆಲ್ಲ ಕಾರಣ. ಯೆಹೋವನ ಆಜ್ಞೆಗಳಿಗೆ ವಿಧೇಯನಾಗದೆ ಸುಳ್ಳುದೇವರುಗಳನ್ನು ಅನುಸರಿಸತೊಡಗಿದ್ದರಿಂದ ಆ ತೊಂದರೆಗಳಿಗೆಲ್ಲಾ ನೀನೇ ಕಾರಣನಾಗಿರುವೆ.


ಅಹಜ್ಯನು ಯೆಹೋವನ ವಿರುದ್ಧ ಪಾಪವನ್ನು ಮಾಡಿದನು. ಅವನು ತನ್ನ ತಂದೆಯಾದ ಅಹಾಬ, ತಾಯಿಯಾದ ಈಜೆಬೆಲ ಮತ್ತು ನೆಬಾಟನ ಮಗನಾದ ಯಾರೊಬ್ಬಾಮ ಮಾಡಿದಂತಹ ಕಾರ್ಯಗಳನ್ನೇ ಮಾಡಿದನು. ಈ ಆಡಳಿತಗಾರರೆಲ್ಲ ಇಸ್ರೇಲಿನ ಜನರನ್ನು ಮತ್ತಷ್ಟು ಪಾಪಕ್ಕೆ ನಡೆಸಿದರು.


ಯೇಹುವು ಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು. ನಂತರ ಅವನು, “ಈಗ ಶಾಪಗ್ರಸ್ತಳಾದ ಆ ಸ್ತ್ರೀಯನ್ನು ನೋಡಿ. ಅವಳು ರಾಜನ ಮಗಳಾದ್ದರಿಂದ ಸಮಾಧಿ ಮಾಡಿ” ಎಂದು ಹೇಳಿದನು.


ನೀವು ಅವರ ಪುತ್ರಿಯರಲ್ಲಿ ಕೆಲವರನ್ನು ನಿಮ್ಮ ಪುತ್ರರಿಗೆ ಹೆಂಡತಿಯರಾಗುವುದಕ್ಕೆ ಆರಿಸಿಕೊಳ್ಳುವಿರಿ. ಅವರ ಪುತ್ರಿಯರು ಸುಳ್ಳುದೇವರುಗಳ ಸೇವೆ ಮಾಡುತ್ತಾರೆ. ನಿಮ್ಮ ಪುತ್ರರನ್ನೂ ಅವರು ಅದೇ ಸೇವೆಗೆ ನಡೆಸುತ್ತಾರೆ.


ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನೆಲ್ಲ ಒಮ್ರಿಯು ಮಾಡಿದನು. ಒಮ್ರಿಯು ಅವನಿಗಿಂತಲೂ ಮುಂಚೆ ಇದ್ದ ರಾಜರುಗಳಲ್ಲೆಲ್ಲಾ ಅತ್ಯಂತ ಕೆಟ್ಟವನು.


ಅಹಜ್ಯನು ತನ್ನ ತಂದೆಯಂತೆಯೇ ಸುಳ್ಳುದೇವರಾದ ಬಾಳನನ್ನು ಪೂಜಿಸಿ ಅವನ ಸೇವೆ ಮಾಡಿದನು; ಇಸ್ರೇಲಿನ ದೇವರಾದ ಯೆಹೋವನನ್ನು ರೇಗಿಸಿದನು. ಯೆಹೋವನು ಮೊದಲು ಅಹಜ್ಯನ ತಂದೆಯ ಮೇಲೆ ಕೋಪಗೊಂಡಿದ್ದಂತೆ, ಅಹಜ್ಯನ ಮೇಲೂ ಕೋಪಗೊಂಡನು.


ಯೋರಾಮನು ಯೇಹುವನ್ನು, “ಶುಭವಾರ್ತೆಯುಂಟೋ?” ಎಂದು ಕೇಳಿದನು. ಯೇಹುವು, “ನಿನ್ನ ತಾಯಿಯಾದ ಈಜೆಬೆಲಳು ಅನೇಕ ಅನೈತಿಕ ಮತ್ತು ಮಾಂತ್ರಿಕ ಕಾರ್ಯಗಳನ್ನು ಮಾಡುತ್ತಿರುವ ತನಕ ಶುಭವಿರುವುದಿಲ್ಲ” ಎಂದು ಉತ್ತರಿಸಿದನು.


ಇಂಥ ಮದುವೆಗಳಿಂದಾಗಿ ಸೊಲೊಮೋನನು ಪಾಪಕ್ಕೆ ಒಳಗಾದನು ಎಂಬುದು ನಿಮಗೆ ತಿಳಿಯದೋ? ಅವನಂಥ ವೈಭವಶಾಲಿ ಅರಸನು ಯಾವ ರಾಜ್ಯದಲ್ಲಿಯೂ ಇರಲಿಲ್ಲ. ದೇವರು ಸೊಲೊಮೋನನನ್ನು ಪ್ರೀತಿಸಿದನು. ಇಡೀ ಇಸ್ರೇಲಿಗೆ ಅವನನ್ನು ಅರಸನನ್ನಾಗಿ ಮಾಡಿದನು. ಅಂಥವನೂ ಅನ್ಯಸ್ತ್ರೀಯರಿಂದಾಗಿ ಪಾಪ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು