Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:27 - ಪರಿಶುದ್ದ ಬೈಬಲ್‌

27 ಎಲೀಯನು ಮಾತನಾಡಿದ ನಂತರ ಅಹಾಬನು ಬಹಳ ಶೋಕತಪ್ತನಾದನು. ಅವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಸುತ್ತಿಕೊಂಡನು. ಅವನು ಊಟಮಾಡದೆ ಹಾಗೆಯೇ ಮಲಗಿಕೊಂಡನು; ದುಃಖದಿಂದ ತಳಮಳಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಗಳನ್ನು ಹರಿದುಕೊಂಡು, ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನಮನಸ್ಸಿನಿಂದ ಪ್ರವರ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ದುಃಖದಿಂದ ಹರಿದುಕೊಂಡನು; ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ವರ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ಹರಿದುಕೊಂಡು ಹಗಲಿರುಳು ಮೈಮೇಲೆ ಗೋಣೀತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ಪ್ರವರ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ, ಅವನು ತನ್ನ ವಸ್ತ್ರಗಳನ್ನು ಹರಿದು, ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನತೆಯಿಂದ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:27
18 ತಿಳಿವುಗಳ ಹೋಲಿಕೆ  

ಆ ಸ್ತ್ರೀಯ ಮಾತುಗಳನ್ನು ರಾಜನು ಕೇಳಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನೆಲ್ಲಾ ಹರಿದುಕೊಂಡನು. ಅವನ ಮೈಮೇಲೆ ಗೋಣಿತಟ್ಟಿರುವುದು ಜನರಿಗೆಲ್ಲಾ ಕಾಣಿಸಿತು.


ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಸುತ್ತಿಕೊಂಡು ಬಹುದಿನಗಳವರೆಗೆ ದುಃಖಪಟ್ಟನು.


ದಾವೀದನು ಯೋವಾಬನಿಗೆ ಮತ್ತು ಅವನ ಜೊತೆಯಲ್ಲಿದ್ದ ಜನರಿಗೆಲ್ಲ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು ಮತ್ತು ಶೋಕಸೂಚಕ ವಸ್ತ್ರಗಳನ್ನು ಧರಿಸಿಕೊಂಡು ಅಬ್ನೇರನಿಗಾಗಿ ಶೋಕಿಸಿ” ಎಂದು ಹೇಳಿದನು. ರಾಜನಾದ ದಾವೀದನೂ ಶವಸಂಸ್ಕಾರಕ್ಕೆ ಹೋದನು. ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಸಮಾಧಿ ಮಾಡಿದರು. ಅಬ್ನೇರನ ಸಮಾಧಿಯ ಹತ್ತಿರ ರಾಜನಾದ ದಾವೀದನೂ ಇತರ ಜನರೂ ಗೋಳಾಡಿದರು.


ಯಾಜಕರೇ, ನೀವು ನಿಮ್ಮ ಶೋಕವಸ್ತ್ರವನ್ನು ಧರಿಸಿ ಗಟ್ಟಿಯಾಗಿ ರೋಧಿಸಿರಿ. ವೇದಿಕೆಯಲ್ಲಿ ಸೇವೆಮಾಡುವವರೇ, ಗಟ್ಟಿಯಾಗಿ ರೋಧಿಸಿರಿ. ನನ್ನ ದೇವರ ಸೇವಕರೇ, ನೀವು ನಿಮ್ಮ ಶೋಕವಸ್ತ್ರಗಳಲ್ಲಿಯೇ ನಿದ್ರೆಮಾಡಿರಿ. ಯಾಕೆಂದರೆ ಇನ್ನು ದೇವಾಲಯದಲ್ಲಿ ಧಾನ್ಯ ಮತ್ತು ಪಾನಸಮರ್ಪಣೆ ಇಲ್ಲ.


ನಾನೇನು ಹೇಳಲಿ? ನನಗೆ ಸಂಭವಿಸಲಿರುವುದನ್ನು ನನ್ನ ಒಡೆಯನು ತಿಳಿಸಿದ್ದಾನೆ. ನನ್ನ ಒಡೆಯನು ಅದನ್ನು ನೆರವೇರಿಸುತ್ತಾನೆ. ನನ್ನ ಆತ್ಮದಲ್ಲಿ ಸಂಕಟಗಳೆಲ್ಲಾ ತುಂಬಿವೆ. ನಾನು ನನ್ನ ಜೀವಮಾನವೆಲ್ಲಾ ದೀನನಾಗುವೆನು.


ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಜನರಿಗೆ, ಅವರ ಸತ್ತುಹೋದ ಸ್ನೇಹಿತರಿಗೋಸ್ಕರ ರೋಧಿಸಿ ದುಃಖಿಸಿರಿ ಎಂದು ಹೇಳುವನು. ಜನರು ತಮ್ಮ ತಲೆಗಳನ್ನು ಬೋಳಿಸಿ ಶೋಕವಸ್ತ್ರಗಳನ್ನು ಧರಿಸುವರು.


“ನಾನು ಬಹು ದುಃಖಿತನಾಗಿದ್ದೇನೆ; ಗೋಣಿತಟ್ಟನ್ನು ಸುತ್ತಿಕೊಂಡಿದ್ದೇನೆ; ಸೋತುಹೋದೆನೆಂದು ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತುಕೊಂಡಿದ್ದೇನೆ.


ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಹಿಜ್ಕೀಯನ ಬಳಿಗೆ ಬಂದರು. ಅವರು ದುಃಖದಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡಿದ್ದರು. ಅಶ್ಶೂರದ ಸೇನಾಧಿಪತಿಯಾದ ರಬ್ಷಾಕೆಯು ಹೇಳಿದ ಸಂಗತಿಗಳನ್ನು ಅವರು ಹಿಜ್ಕೀಯನಿಗೆ ತಿಳಿಸಿದರು.


ನಿನೆವೆಯ ಅರಸನು ಇದನ್ನು ಕೇಳಿ ತಾನು ಮಾಡಿದ ದುಷ್ಕೃತ್ಯಗಳಿಗಾಗಿ ಮನಮರುಗಿದನು. ತಾನು ಸಿಂಹಾಸನದಿಂದಿಳಿದು ರಾಜವಸ್ತ್ರವನ್ನು ತೆಗೆದಿಟ್ಟು ಶೋಕವಸ್ತ್ರವನ್ನು ಧರಿಸಿ ಬೂದಿಯ ಮೇಲೆ ಕುಳಿತುಕೊಂಡನು.


ನಾನು ನನ್ನ ಇಬ್ಬರು ಸಾಕ್ಷಿಗಳಿಗೆ ಅಧಿಕಾರವನ್ನು ಕೊಡುತ್ತೇನೆ. ಅವರು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದನೆ ಮಾಡುತ್ತಾರೆ. ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡಿರುತ್ತಾರೆ.”


ಯೆಹೋವನು ಪ್ರವಾದಿಯಾದ ಎಲೀಯನಿಗೆ,


ರಾಜನಾದ ಹಿಜ್ಕೀಯನು ಅವುಗಳನ್ನೆಲ್ಲ ಕೇಳಿ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯದೊಳಕ್ಕೆ ಹೋದನು.


ದಾವೀದನು ಮೇಲಕ್ಕೆ ನೋಡಿದಾಗ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನು ಕಂಡನು. ದೇವದೂತನು ತನ್ನ ಖಡ್ಗವನ್ನು ಜೆರುಸಲೇಮಿನ ಮೇಲೆ ಚಾಚಿದ್ದನು. ಆಗ ದಾವೀದನೂ ಅವನೊಂದಿಗಿದ್ದ ಹಿರಿಯರೂ ಬಗ್ಗಿ ನೆಲದ ಮೇಲೆ ಮುಖಗಳನ್ನಿಟ್ಟು ನಮಸ್ಕರಿಸಿದರು. ಅವರು ಶೋಕವಸ್ತ್ರಗಳನ್ನು ಧರಿಸಿದ್ದರು.


ಈ ಸುರುಳಿಯಲ್ಲಿದ್ದ ಸಂದೇಶವನ್ನು ಕೇಳಿ ರಾಜನಾದ ಯೆಹೋಯಾಕೀಮನು ಮತ್ತು ಅವನ ಸೇವಕರು ಗಾಬರಿಯಾಗಲಿಲ್ಲ. ತಾವು ತಪ್ಪು ಮಾಡಿದ್ದಕ್ಕಾಗಿ ದುಃಖವನ್ನು ಸೂಚಿಸಲು ಅವರು ತಮ್ಮ ವಸ್ತ್ರಗಳನ್ನು ಹರಿದುಕೊಳ್ಳಲಿಲ್ಲ.


ಜನರು ಮಾಡಿದವುಗಳನ್ನು ದೇವರು ನೋಡಿದನು; ಅವರು ದುಷ್ಟತನ ಮಾಡುವದನ್ನು ನಿಲ್ಲಿಸಿದ್ದನ್ನು ಗಮನಿಸಿದನು. ಆತನು ಅವರನ್ನು ದಂಡಿಸಲಿಲ್ಲ.


ಈ ದುಃಖದ ಸಮಾಚಾರವನ್ನು ಕೇಳಿ ಜನರು ನೊಂದುಕೊಂಡರು. ಅವರಲ್ಲಿ ಒಬ್ಬರಾದರೂ ತಮ್ಮ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು