Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:29 - ಪರಿಶುದ್ದ ಬೈಬಲ್‌

29 “ಅಹಾಬನು ನನ್ನ ಎದುರಿನಲ್ಲಿ ತನ್ನನ್ನು ತಗ್ಗಿಸಿಕೊಂಡಿರುವುದನ್ನು ನಾನು ನೋಡುತ್ತಿದ್ದೇನೆ. ಆದ್ದರಿಂದ ಅವನ ಜೀವಮಾನಕಾಲದಲ್ಲಿ ಅವನಿಗೆ ಕೇಡಾಗದಂತೆ ಮಾಡುವೆನು. ಅವನ ಮಗ ರಾಜನಾಗುವವರೆಗೆ ನಾನು ಕಾಯುತ್ತೇನೆ. ನಂತರ ಅಹಾಬನ ಕುಟುಂಬಕ್ಕೆ ಕೇಡನ್ನು ಬರಮಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವನು ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಅದನ್ನು ಬರಮಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ಅಹಾಬನು ನನ್ನ ಮುಂದೆ ತನ್ನನ್ನೇ ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ಹೀಗೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡಿಸುವುದಿಲ್ಲ. ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಬರಮಾಡುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಬರಮಾಡುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ಜೀವಮಾನದಲ್ಲಿ ಆ ಕೇಡನ್ನು ಬರಮಾಡದೆ, ಅವನ ಮಗನ ಕಾಲದಲ್ಲಿ ಅವನ ಮನೆಯ ಮೇಲೆ ಬರಮಾಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:29
27 ತಿಳಿವುಗಳ ಹೋಲಿಕೆ  

ಕೆಲವು ಜನರು ತಿಳಿದುಕೊಂಡಿರುವಂತೆ, ಪ್ರಭುವು ತಾನು ವಾಗ್ದಾನ ಮಾಡಿದ್ದನ್ನು ತಡವಾಗಿ ನೆರವೇರಿಸುವುದಿಲ್ಲ. ದೇವರು ನಿಮ್ಮ ವಿಷಯದಲ್ಲಿ ಇನ್ನೂ ತಾಳ್ಮೆಯಿಂದಿದ್ದಾನಷ್ಟೆ. ಯಾವ ವ್ಯಕ್ತಿಯೂ ಕಳೆದುಹೋಗಬಾರದೆಂಬುದು ದೇವರ ಅಪೇಕ್ಷೆಯಾಗಿದೆ. ಪ್ರತಿಯೊಬ್ಬರೂ ತಮ್ಮ ಹೃದಯಗಳನ್ನು ಪರಿವರ್ತಿಸಿಕೊಂಡು, ಪಾಪ ಮಾಡುವುದನ್ನು ನಿಲ್ಲಿಸಬೇಕೆಂಬುದು ದೇವರ ಅಪೇಕ್ಷೆ.


ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ. ನಿನ್ನ ಜನಶೇಷವನ್ನು ಮನ್ನಿಸುವೆ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ.


ಯೇಹುವು “ಈಜೆಬೆಲಳನ್ನು ಹೊರಕ್ಕೆ ಎಸೆಯಿರಿ!” ಎಂದು ಅವರಿಗೆ ಹೇಳಿದನು. ಆಗ ಕಂಚುಕಿಗಳು ಈಜೆಬೆಲಳನ್ನು ಕೆಳಕ್ಕೆ ಎಸೆದರು. ಈಜೆಬೆಲಳ ರಕ್ತವು ಗೋಡೆಗಳ ಮೇಲೆ ಮತ್ತು ಕುದುರೆಗಳ ಮೇಲೆ ಚಿಮ್ಮಿತು. ಕುದುರೆಗಳು ಈಜೆಬೆಲಳ ದೇಹದ ಮೇಲೆ ತುಳಿದಾಡಿದವು.


ಯೆಹೋವನೇ, ಕನಿಕರವೂ ದಯೆಯೂ ಉಳ್ಳ ದೇವರು ನೀನೇ. ನೀನು ತಾಳ್ಮೆಯುಳ್ಳವನೂ ನಂಬಿಗಸ್ತನೂ ಪ್ರೀತಿಪೂರ್ಣನೂ ಆಗಿರುವೆ.


ಅವರು ನನ್ನ ಕುರಿತಾಗಿ ಕೇಳಿದ ಕೂಡಲೇ ವಿಧೇಯರಾಗುವರು. ಆ ವಿದೇಶಿಯರು ನನ್ನ ವಿಷಯದಲ್ಲಿ ಭಯದಿಂದಿರುವರು.


ಇಜ್ರೇಲಿನಲ್ಲಿ ವಾಸಿಸುತ್ತಿದ್ದ ಅಹಾಬನ ಕುಟುಂಬದ ಉಳಿದವರನ್ನೆಲ್ಲ ಯೇಹು ಕೊಂದುಹಾಕಿದನು. ಅಹಾಬನ ಆಪ್ತಮಿತ್ರರು, ಯಾಜಕರು ಮತ್ತು ಪ್ರಮುಖರನ್ನೆಲ್ಲ ಯೇಹುವು ಕೊಂದುಹಾಕಿದನು. ಅಹಾಬನ ಜನರಲ್ಲಿ ಯಾರನ್ನೂ ಉಳಿಸಲಿಲ್ಲ.


ದೇವರು ನಿಮ್ಮ ವಿಷಯದಲ್ಲಿ ಬಹು ಕನಿಕರ ಉಳ್ಳವನಾಗಿದ್ದಾನೆ; ತಾಳ್ಮೆ ಉಳ್ಳವನಾಗಿದ್ದಾನೆ. ನೀವು ಮಾರ್ಪಾಟಾಗಬೇಕೆಂದು ದೇವರು ನಿಮಗಾಗಿ ಕಾದುಕೊಂಡಿದ್ದಾನೆ. ಆದರೆ ನೀವು ಆತನ ಕರುಣೆಯ ಬಗ್ಗೆ ಆಲೋಚಿಸುವುದೇ ಇಲ್ಲ. ನೀವು ನಿಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳಬೇಕಾಗುತ್ತದೆಯೆಂದು ದೇವರ ಕನಿಕರವನ್ನು ಅರ್ಥಮಾಡಿಕೊಳ್ಳದೆ ಇದ್ದೀರಿ.


ಆ ಜನರು ಯೆಹೂದದ ಪಟ್ಟಣಗಳಲ್ಲಿಯೂ ಜೆರುಸಲೇಮಿನ ಬೀದಿಗಳಲ್ಲಿಯೂ ಏನು ಮಾಡುತ್ತಿದ್ದಾರೆಂಬುದು ನಿನಗೆ ಗೊತ್ತು.


ದೇವರೇ, ನಿನ್ನ ಕಾರ್ಯಗಳು ಎಷ್ಟು ಅದ್ಭುತವಾಗಿವೆ! ನಿನ್ನ ಮಹಾಶಕ್ತಿಯಿಂದಾಗಿ ಶತ್ರುಗಳು ನಿನಗೆ ಭಯಪಟ್ಟು ಅಡ್ಡಬೀಳುವರು.


ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋಗಿ, “ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಎಲ್ಲಿಯವರೆಗೆ ನನಗೆ ವಿಧೇಯನಾಗುವುದಿಲ್ಲ? ನನ್ನನ್ನು ಆರಾಧಿಸಲು ನನ್ನ ಜನರನ್ನು ಕಳುಹಿಸಿಕೊಡು!


ಬಳಿಕ ಯೇಸು ಸ್ತ್ರೀಯ ಕಡೆಗೆ ನೋಡಿ ಸಿಮೋನನಿಗೆ, “ಈ ಸ್ತ್ರೀಯು ನಿನಗೆ ಕಾಣುತ್ತಿರುವಳೇ? ನಾನು ನಿನ್ನ ಮನೆಯೊಳಗೆ ಬಂದಾಗ ನೀನು ನನ್ನ ಪಾದಗಳಿಗೆ ನೀರು ಕೊಡಲಿಲ್ಲ. ಆದರೆ ಈಕೆ ತನ್ನ ಕಣ್ಣೀರಿನಿಂದ ನನ್ನ ಪಾದಗಳನ್ನು ತೇವ ಮಾಡಿ ತನ್ನ ತಲೆಯ ಕೂದಲಿಂದ ಒರೆಸಿದಳು.


ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.


ಯೆಹೋವನು ಪ್ರವಾದಿಯಾದ ಎಲೀಯನಿಗೆ,


ಮುಂದಿನ ಎರಡು ವರ್ಷಗಳಲ್ಲಿ, ಇಸ್ರೇಲ್ ಮತ್ತು ಅರಾಮ್ಯರ ಮಧ್ಯೆ ಶಾಂತಿಯಿತ್ತು.


ಅರಸನೂ ಯೆಹೂದದ ನಾಯಕರೂ ತನ್ನೆದುರಿನಲ್ಲಿ ತಗ್ಗಿಸಿಕೊಂಡದ್ದನ್ನು ಯೆಹೋವನು ನೋಡಿ ಶೆಮಾಯನ ಮೂಲಕ ಈ ಸಂದೇಶವನ್ನು ಕಳುಹಿಸಿದನು. “ಅರಸನೂ ನಾಯಕರೂ ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವರನ್ನು ನಾಶಪಡಿಸದೆ ಬೇಗನೆ ರಕ್ಷಿಸುವೆನು. ಜೆರುಸಲೇಮಿನ ಮೇಲೆ ನನ್ನ ಕೋಪವು ಸುರಿಯುವಂತೆ ನಾನು ಶೀಶಕನನ್ನು ಉಪಯೋಗಿಸುವದಿಲ್ಲ.


ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.


ಆದರೆ ನಿನ್ನ ತಂದೆಯಾದ ದಾವೀದನನ್ನು ನಾನು ಪ್ರೀತಿಸಿದ್ದರಿಂದ ನೀನು ಜೀವಂತವಾಗಿರುವಾಗಲೇ ನಿನ್ನ ರಾಜ್ಯವನ್ನು ನಿನ್ನಿಂದ ನಾನು ತೆಗೆದುಕೊಳ್ಳುವುದಿಲ್ಲ. ನಿನ್ನ ಮಗನು ರಾಜನಾಗುವವರೆಗೆ ನಾನು ಕಾಯುತ್ತೇನೆ. ನಂತರ ನಾನು ಅದನ್ನು ಅವನಿಂದ ತೆಗೆದುಕೊಳ್ಳುತ್ತೇನೆ.


ಆದರೆ ಯೇಹು ತನ್ನ ಬಿಲ್ಲನ್ನು ಸೆಳೆದು, ಶಕ್ತಿಯನ್ನೆಲ್ಲ ಒಗ್ಗೂಡಿಸಿ ಯೋರಾಮನ ಬೆನ್ನಿಗೆ ಬಾಣದಿಂದ ಹೊಡೆದನು. ಬಾಣವು ಯೋರಾಮನ ಹೃದಯವನ್ನು ಛೇದಿಸಿತು. ಯೋರಾಮನು ತನ್ನ ರಥದಲ್ಲಿಯೇ ಸತ್ತುಬಿದ್ದನು.


ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳಿದ್ದರು. ಯೇಹುವು ಇಜ್ರೇಲಿನ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಪತ್ರಗಳನ್ನು ಬರೆದು ಸಮಾರ್ಯಕ್ಕೆ ಕಳುಹಿಸಿದನು. ಅಹಾಬನ ಮಕ್ಕಳನ್ನು ಬೆಳೆಸಿದ ಪಾಲಕರಿಗೂ ಅವನು ಪತ್ರಗಳನ್ನು ಕಳುಹಿಸಿದನು. ಯೇಹುವು ಪತ್ರಗಳಲ್ಲಿ,


ನಾನೇ ಎಲ್ಲವನ್ನು ಉಂಟುಮಾಡಿದೆನು. ನಾನು ಸೃಷ್ಟಿಸಿದ್ದರಿಂದ ಅವು ಅಸ್ತಿತ್ವದಲ್ಲಿವೆ.” ಇವು ಯೆಹೋವನ ನುಡಿಗಳು. “ಎಂಥ ಜನರನ್ನು ನಾನು ಪರಿಪಾಲಿಸುತ್ತೇನೆಂದು ಕೇಳುವಿರಾ? ಬಡವರ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ದುಃಖಿಸುವ ಜನರಿಗಾಗಿ ನಾನು ಚಿಂತಿಸುತ್ತೇನೆ. ನನ್ನ ಮಾತುಗಳಿಗೆ ವಿಧೇಯರಾಗುವವರಿಗಾಗಿ ನಾನು ಚಿಂತಿಸುತ್ತೇನೆ.


ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”


ಜನರು ಮಾಡಿದವುಗಳನ್ನು ದೇವರು ನೋಡಿದನು; ಅವರು ದುಷ್ಟತನ ಮಾಡುವದನ್ನು ನಿಲ್ಲಿಸಿದ್ದನ್ನು ಗಮನಿಸಿದನು. ಆತನು ಅವರನ್ನು ದಂಡಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು