Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:3 - ಪರಿಶುದ್ದ ಬೈಬಲ್‌

3 ನಾಬೋತನು, “ನಾನು ನನ್ನ ಭೂಮಿಯನ್ನು ಎಂದಿಗೂ ನಿನಗೆ ಕೊಡುವುದಿಲ್ಲ. ಅದು ನನ್ನ ವಂಶಕ್ಕೆ ಸೇರಿದ್ದು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದಕ್ಕೆ ನಾಬೋತನು ಅಹಾಬನಿಗೆ, “ನಾನು ಪಿತ್ರಾರ್ಜಿತ ಸ್ವತ್ತನ್ನು ಮಾರದಂತೆ ಯೆಹೋವನು ನನ್ನನ್ನು ತಡೆಯಲಿ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದಕ್ಕೆ ನಾಬೋತನು, “ಪಿತ್ರಾರ್ಜಿತ ಸೊತ್ತನ್ನು ನಿಮಗೆ ಮಾರದಂತೆ ಸರ್ವೇಶ್ವರ ನನ್ನನ್ನು ತಡೆಯಲಿ!” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದಕ್ಕೆ ನಾಬೋತನು - ನಾನು ಪಿತ್ರಾರ್ಜಿತ ಸ್ವಾಸ್ತ್ಯವನ್ನು ನಿನಗೆ ಮಾರದಂತೆ ಯೆಹೋವನು ನನ್ನನ್ನು ತಡೆಯಲಿ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ನಾಬೋತನು ಅಹಾಬನಿಗೆ, “ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡದಂತೆ ಯೆಹೋವ ದೇವರು ನನ್ನನ್ನು ತಡೆಯಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:3
22 ತಿಳಿವುಗಳ ಹೋಲಿಕೆ  

ಇಸ್ರೇಲರ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರೇಲರೆಲ್ಲರೂ ತಮ್ಮ ಪೂರ್ವಿಕರಿಂದ ಸ್ವಾಸ್ತ್ಯವಾಗಿ ಪಡೆದುಕೊಂಡ ತಮ್ಮ ಗೋತ್ರದ ಭೂಮಿಯನ್ನು ತಮ್ಮ ಸ್ವಾಧೀನದಲ್ಲೇ ಇಟ್ಟುಕೊಂಡಿರಬೇಕು.


“ಭೂಮಿಯು ನನಗೆ ಸೇರಿದ್ದು. ಆದ್ದರಿಂದ ನೀವು ನಿಜವಾಗಿಯೂ ಅದನ್ನು ಶಾಶ್ವತವಾಗಿ ಮಾರುವುದಕ್ಕಾಗುವುದಿಲ್ಲ. ನೀವು ಕೇವಲ ನನ್ನ ಆಶ್ರಯದಲ್ಲಿ ವಾಸಿಸುತ್ತಿರುವ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೀರಿ.


ರಾಜನು ತನ್ನ ಪ್ರಜೆಯ ಭೂಮಿಯನ್ನು ತನ್ನ ಉಪಯೋಗಕ್ಕೆಂದು ಬಲತ್ಕಾರದಿಂದ ಇಟ್ಟುಕೊಳ್ಳಬಾರದು ಅಥವಾ ತೆಗೆದುಕೊಳ್ಳಲೂಬಾರದು. ತನ್ನ ಸ್ವಂತ ಭೂಮಿಯಿಂದ ಪಾಲನ್ನು ತನ್ನ ಮಕ್ಕಳಿಗೆ ಕೊಡಬೇಕು. ಹೀಗೆ ನನ್ನ ಜನರು ತಮ್ಮ ಭೂಮಿಯನ್ನು ಕಳೆದುಕೊಳ್ಳುವದಿಲ್ಲ.”


ಹೀಗಿರಲಾಗಿ ನಾವೇನು ಮಾಡಬೇಕು? ನಾವು ಧರ್ಮಶಾಸ್ತ್ರದ ಅಧೀನದಲ್ಲಿರದೆ ಕೃಪೆಯ ಅಧೀನದಲ್ಲಿರುವುದರಿಂದ ಪಾಪ ಮಾಡಬೇಕೇ? ಇಲ್ಲ!


ಅಂಥ ವಿಷಯಗಳ ಬಗ್ಗೆ ನಾನು ಹೆಚ್ಚಳಪಡುವುದೇ ಇಲ್ಲ. ನಾನು ಹೆಮ್ಮೆಪಡಲು ನನಗಿರುವ ಒಂದೇ ಕಾರಣವೇನೆಂದರೆ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಶಿಲುಬೆಯೊಂದೇ. ಶಿಲುಬೆಯ ಮೇಲೆ ಯೇಸುವಿಗಾದ ಮರಣದ ಮೂಲಕ ಲೋಕವು ನನ್ನ ಪಾಲಿಗೆ ಸತ್ತುಹೋಯಿತು. ನಾನು ಸಹ ಲೋಕದ ಪಾಲಿಗೆ ಸತ್ತುಹೋದೆನು.


ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಹೀಗಿರಲಾಗಿ, ನಾನು ಕ್ರಿಸ್ತನ ಅಂಗಗಳನ್ನು ತೆಗೆದುಕೊಂಡು ಅವುಗಳನ್ನು ಸೂಳೆಯ ಅಂಗಗಳನ್ನಾಗಿ ಮಾಡಕೂಡದು.


ಹಾಗಾದರೆ, ಒಳ್ಳೆಯದೇ ನನಗೆ ಮರಣವನ್ನು ಬರಮಾಡಿತೆಂದರ್ಥವೇ? ಇಲ್ಲ! ಆದರೆ ಪಾಪವು ಒಳ್ಳೆಯದನ್ನೇ ಬಳಸಿಕೊಂಡು ನನಗೆ ಮರಣವನ್ನು ಬರಮಾಡಿತು. ಇದರಿಂದಾಗಿ, ನಾನು ಪಾಪದ ನಿಜಸ್ವರೂಪವನ್ನು ಕಾಣುವಂತಾಯಿತು. ಪಾಪವು ಬಹು ಕೆಟ್ಟದ್ದೆಂದು ಆಜ್ಞೆಯ ಮೂಲಕ ಸ್ಪಷ್ಟವಾಯಿತು.


ಪಾಪ ಮತ್ತು ಧರ್ಮಶಾಸ್ತ್ರ ಇವೆರಡೂ ಒಂದೇ ಎಂದು ನಾನು ಹೇಳುತ್ತಿರುವುದಾಗಿ ನೀವು ಭಾವಿಸಬಹುದು. ಆದರೆ ಅದು ನಿಜವಲ್ಲ. ಪಾಪವೆಂದರೆ ಏನೆಂಬುದನ್ನು ಕಲಿತುಕೊಳ್ಳಲು ಧರ್ಮಶಾಸ್ತ್ರವೊಂದೇ ನನಗೆ ಏಕೈಕ ಮಾರ್ಗವಾಗಿದೆ. ಧರ್ಮಶಾಸ್ತ್ರವಿಲ್ಲದಿದ್ದರೆ, ದುರಾಶೆ ಎಂದರೆ ಏನೆಂಬುದೇ ನನಗೆ ತಿಳಿಯುತ್ತಿರಲಿಲ್ಲ. “ಬೇರೆಯವರ ವಸ್ತುಗಳನ್ನು ನೀವು ಆಶಿಸಕೂಡದು” ಎಂದು ಧರ್ಮಶಾಸ್ತ್ರವು ಹೇಳಿದ್ದರಿಂದಲೇ ಅದು ನನಗೆ ತಿಳಿಯಿತು.


ಇಲ್ಲ! ನಾವು ನಮ್ಮ ಹಿಂದಿನ ಪಾಪಮಯ ಜೀವಿತಗಳ ಪಾಲಿಗೆ ಸತ್ತುಹೋದೆವು. ಹೀಗಿರಲು, ನಾವು ಪಾಪದಲ್ಲೇ ಜೀವಿಸಲು ಹೇಗೆ ಸಾಧ್ಯ?


ಹೀಗಿರಲು, ನಂಬಿಕೆಯ ಮಾರ್ಗವನ್ನು ಅನುಸರಿಸುವುದರ ಮೂಲಕ ನಾವು ಧರ್ಮಶಾಸ್ತ್ರವನ್ನು ಅಲ್ಲಗಳೆಯುತ್ತೇವೋ? ಇಲ್ಲ! ನಾವು ಧರ್ಮಶಾಸ್ತ್ರವನ್ನು ಸಮರ್ಥಿಸುತ್ತೇವೆ.


ಇಲ್ಲ! ದೇವರು ನಮ್ಮನ್ನು ದಂಡಿಸಲಾಗದಿದ್ದರೆ, ದೇವರು ಲೋಕಕ್ಕೆ ತೀರ್ಪುಮಾಡಲಾಗುವುದಿಲ್ಲ.


ಇಲ್ಲ! ಪ್ರತಿಯೊಬ್ಬ ವ್ಯಕ್ತಿ ಸುಳ್ಳುಗಾರನಾದರೂ ದೇವರು ಸತ್ಯವಂತನಾಗಿಯೇ ಇರುತ್ತಾನೆ. ಪವಿತ್ರ ಗ್ರಂಥವು ಹೀಗೆಂದು ಹೇಳುತ್ತದೆ: “ನಿನ್ನ ಮಾತುಗಳಲ್ಲಿ ನೀನು ನ್ಯಾಯಸ್ಥನೆಂದು ನಿರೂಪಿತನಾಗಬೇಕು. ನಿನಗೆ ತೀರ್ಪಾಗುವಾಗ ನೀನು ಜಯಗಳಿಸಬೇಕು.”


ನೀವು ನ್ಯಾಯವಂತರೆಂದು ನಾನು ಒಪ್ಪಿಕೊಳ್ಳುವುದಿಲ್ಲ. ನಾನು ನಿರಪರಾಧಿಯೆಂದು ನನ್ನ ಮರಣದ ದಿನದವರೆಗೂ ಹೇಳುತ್ತಲೇ ಇರುವೆನು.


“ದೇವರೇ, ನಾನು ಈ ನೀರನ್ನು ಕುಡಿಯಲಾರೆನು. ಯಾಕೆಂದರೆ ನನಗಾಗಿ ತಮ್ಮ ಪ್ರಾಣ ಕೊಡಲು ಹೆದರದೆ ನೀರನ್ನು ತಂದವರ ರಕ್ತವಿದು” ಎಂದು ದಾವೀದನು ಅರಿಕೆಮಾಡಿ ಆ ನೀರನ್ನು ಕುಡಿಯಲು ನಿರಾಕರಿಸಿದನು. ಈ ರೀತಿಯಾಗಿ ಅನೇಕ ಪರಾಕ್ರಮದ ಕಾರ್ಯಗಳನ್ನು ಈ ಮೂರು ಮಂದಿ ವೀರರು ಮಾಡಿದರು.


ದಾವೀದನು ತನ್ನ ಜನರಿಗೆ, “ಸೌಲನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ ನನ್ನ ರಾಜನೂ ಆಗಿರುವುದರಿಂದ ನಾನು ಅವನ ವಿರುದ್ಧವಾಗಿ ಏನೂ ಮಾಡಬಾರದು!” ಎಂದು ಹೇಳಿದನು.


ನಾನು ನಿಮಗಾಗಿ ಪ್ರಾರ್ಥಿಸದಿದ್ದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವನಾಗುತ್ತೇನೆ. ನಾನು ನಿಮಗೆ ಒಳ್ಳೆಯದೂ ಯೋಗ್ಯವೂ ಆಗಿರುವ ಮಾರ್ಗವನ್ನು ಉಪದೇಶಿಸುತ್ತೇನೆ.


ಅದಕ್ಕೆ ಜನರು, “ನಾವು ಯೆಹೋವನನ್ನು ಅನುಸರಿಸುವುದನ್ನು ಎಂದಿಗೂ ನಿಲ್ಲಿಸುವದಿಲ್ಲ. ನಾವು ಬೇರೆ ದೇವರುಗಳ ಸೇವೆಯನ್ನು ಎಂದಿಗೂ ಮಾಡುವುದಿಲ್ಲ.


“ಯೆಹೋವನಿಗೆ ವಿರೋಧಿಗಳಾಗಲು ನಮಗೆ ನಿಜವಾಗಿಯೂ ಇಷ್ಟವಿಲ್ಲ. ಆತನಿಗೆ ಅವಿಧೇಯರಾಗುವುದಕ್ಕೂ ಇಷ್ಟವಿಲ್ಲ. ನಿಜವಾದ ಯಜ್ಞವೇದಿಕೆಯು ಪವಿತ್ರಗುಡಾರದ ಎದುರಿಗೆ ಮಾತ್ರ ಇದೆ. ಆ ಯಜ್ಞವೇದಿಕೆಯು ನಮ್ಮ ದೇವರಾದ ಯೆಹೋವನದು ಎಂಬುದನ್ನು ನಾವು ಬಲ್ಲೆವು” ಎಂಬುದಾಗಿ ಉತ್ತರಕೊಟ್ಟರು.


ಆದರೆ ಯೋಸೇಫನು, “ನಾನು ನಿಮ್ಮೆಲ್ಲರನ್ನು ಗುಲಾಮರನ್ನಾಗಿ ಮಾಡುವುದಿಲ್ಲ; ಬಟ್ಟಲನ್ನು ಕದ್ದುಕೊಂಡವನು ಮಾತ್ರ ನನ್ನ ಗುಲಾಮನಾಗಿರಬೇಕು; ಉಳಿದ ನೀವೆಲ್ಲರೂ ನಿಮ್ಮ ತಂದೆಯ ಬಳಿಗೆ ಸಮಾಧಾನದಿಂದ ಹೋಗಬಹುದು” ಎಂದು ಹೇಳಿದನು.


ಆದರೆ ಸಹೋದರರು ಸೇವಕನಿಗೆ, “ರಾಜ್ಯಪಾಲನು ಈ ರೀತಿ ಹೇಳುವುದೇಕೆ? ನಾವು ಇಂಥಾ ಕೃತ್ಯವನ್ನು ಮಾಡಿಲ್ಲ.


ಹೀಗೆ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರೇಲರ ಪ್ರತಿಯೊಂದು ಕುಲವು ತನ್ನ ಸ್ವಾಸ್ತ್ಯವನ್ನು ಹೊಂದಿಕೊಂಡೇ ಇರುವುದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು