Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:13 - ಪರಿಶುದ್ದ ಬೈಬಲ್‌

13 ಈ ಕಾರ್ಯಗಳು ನಡೆಯುತ್ತಿರುವಾಗ, ಮೀಕಾಯೆಹುವನ್ನು ಕಂಡುಹಿಡಿಯಲು ಅಧಿಕಾರಿಯೊಬ್ಬನು ಹೋದನು. ಅಧಿಕಾರಿಯು ಮೀಕಾಯೆಹುವನ್ನು ಕಂಡುಹಿಡಿದು, ಅವನಿಗೆ, “ರಾಜನಿಗೆ ಶುಭವಾಗುವುದೆಂದು ಪ್ರವಾದಿಗಳೆಲ್ಲರೂ ಹೇಳಿದ್ದಾರೆ. ಆದ್ದರಿಂದ ಅವರು ಹೇಳಿದಂತೆಯೇ ನೀನೂ ಹೇಳುವುದು ನಿನಗೇ ಒಳ್ಳೆಯದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮೀಕಾಯೆಹುವನ್ನು ಕರೆಯುವುದಕ್ಕೆ ಹೋದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಾರೆ, ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು, “ನೋಡಿ, ಎಲ್ಲಾ ಪ್ರವಾದಿಗಳು ಏಕಮನಸ್ಸಿನಿಂದ ಅರಸರಿಗೆ ಶುಭವನ್ನೇ ಮುಂದೆ ತಿಳಿಸುತ್ತಾರೆ; ದಯವಿಟ್ಟು ನೀವೂ ಅವರಂತೆ ಶುಭವನ್ನೇ ಮುಂತಿಳಿಸಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮೀಕಾಯೆಹುವನ್ನು ಕರೆಯುವದಕ್ಕೆ ಹೋದ ದೂತನು ಅವನಿಗೆ - ಎಲ್ಲಾ ಪ್ರವಾದಿಗಳೂ ಏಕಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಿರುತ್ತಾರೆ; ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಮೀಕಾಯನನ್ನು ಕರೆಯಲು ಹೋದ ದೂತನು ಅವನಿಗೆ, “ನೋಡು, ಎಲ್ಲ ಪ್ರವಾದಿಗಳು ಏಕಮನಸ್ಸಿನಿಂದ ಅರಸನಿಗೆ ಒಳ್ಳೆಯದನ್ನೇ ಪ್ರವಾದಿಸಿದ್ದಾರೆ. ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೆಯ ಮಾತು ಆಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:13
12 ತಿಳಿವುಗಳ ಹೋಲಿಕೆ  

ಈ ಜನರು ನನ್ನ ಮಾತುಗಳನ್ನು ಕೇಳಲು ಇಷ್ಟಪಡುವದಿಲ್ಲ. ಆದರೆ ಬೇರೊಬ್ಬನ ಸುಳ್ಳು ಮಾತುಗಳನ್ನು ಕೇಳಲು ಇಷ್ಟಪಡುವರು. ಸುಳ್ಳು ಪ್ರವಾದಿಯು ಬಂದು, “ನಿಮಗೆ ಒಳ್ಳೆಯ ಭವಿಷ್ಯವಿದೆ. ಬೇಕಾದಷ್ಟು ದ್ರಾಕ್ಷಾರಸ, ಮದ್ಯವು ನಿಮಗೆ ದೊರಕುವವು” ಎಂದು ಹೇಳಿದರೆ ಅವರು ಅವನನ್ನು ನಂಬಿ ಸ್ವೀಕರಿಸಿಕೊಳ್ಳುವರು.


ಅವರ ದುಷ್ಟತನವು ಅವರ ಅರಸರನ್ನು ಸಂತಸಗೊಳಿಸುತ್ತದೆ. ಅವರ ಸುಳ್ಳುಗಳು ಅವರ ನಾಯಕರನ್ನು ಸಂತೋಷಪಡಿಸುತ್ತವೆ.


ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ನಿಮ್ಮಂಥವನೆಂದು ನೀವು ಆಲೋಚಿಸಿಕೊಂಡಿರಿ. ಈಗಲಾದರೋ ನಾನು ಮೌನವಾಗಿರುವುದಿಲ್ಲ! ಎಲ್ಲವನ್ನು ನಿಮಗೆ ವಿವರಿಸಿ ನಿಮ್ಮ ಮುಂದೆಯೇ ನಿಮ್ಮನ್ನು ಟೀಕಿಸುವೆನು!


ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು. ಮೂಢರು ಭಯಂಕರವಾದ ಅಸಹ್ಯಕೃತ್ಯಗಳನ್ನು ಮಾಡುವರು. ಅವರಲ್ಲಿ ಒಳ್ಳೆಯದನ್ನು ಮಾಡುವವರು ಇಲ್ಲವೇ ಇಲ್ಲ.


ನಾನು ಯೆಹೋವನನ್ನೇ ಆಶ್ರಯಿಸಿಕೊಂಡಿದ್ದೇನೆ. ಹೀಗಿರಲು, “ನಿನ್ನ ಬೆಟ್ಟಕ್ಕೆ ಪಕ್ಷಿಯಂತೆ ಹಾರಿಹೋಗು” ಎಂದು ನೀವು ಹೇಳುವುದೇಕೆ?


ಆದ್ದರಿಂದ ಆ ನಿಸ್ಸಹಾಯಕರು, “ದೇವರು ನಮ್ಮನ್ನು ಮರೆತುಬಿಟ್ಟಿದ್ದ್ದಾನೆ! ನಮಗೆ ಶಾಶ್ವತವಾಗಿ ವಿಮುಖನಾಗಿದ್ದಾನೆ! ನಮಗೆ ಸಂಭವಿಸುತ್ತಿರುವುದನ್ನು ಆತನು ನೋಡುವುದಿಲ್ಲ!” ಎಂದು ಯೋಚಿಸತೊಡಗುವರು.


ಇತರ ಪ್ರವಾದಿಗಳೆಲ್ಲರೂ ಚಿದ್ಕೀಯನ ಮಾತನ್ನು ಬೆಂಬಲಿಸಿದರು. ಪ್ರವಾದಿಯು, “ನಿನ್ನ ಸೈನ್ಯವು ಈಗ ಹೊರಡಲಿ. ಅವರು ರಾಮೋತಿನಲ್ಲಿ ಅರಾಮ್ಯರ ಸೈನ್ಯದ ವಿರುದ್ಧ ಹೋರಾಡಲೇಬೇಕು. ನೀನು ಹೋರಾಟದಲ್ಲಿ ಜಯಗಳಿಸುವೆ. ನೀನು ಗೆಲ್ಲುವಂತೆ ಯೆಹೋವನು ಮಾಡುತ್ತಾನೆ” ಎಂದನು.


ಆದರೆ ಮೀಕಾಯೆಹುವು, “ಇಲ್ಲ! ಯೆಹೋವನಾಣೆ, ಆತನು ತಿಳಿಸುವುದನ್ನೇ ನಾನು ಹೇಳುತ್ತೇನೆ” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು