Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:24 - ಪರಿಶುದ್ದ ಬೈಬಲ್‌

24 ಆಗ ಪ್ರವಾದಿಯಾದ ಚಿದ್ಕೀಯನು ಮೀಕಾಯೆಹುವಿನ ಹತ್ತಿರಕ್ಕೆ ಹೋಗಿ ಅವನ ಮುಖದ ಮೇಲೆ ಹೊಡೆದು, “ಯೆಹೋವನ ಆತ್ಮವು ನನ್ನನ್ನು ಬಿಟ್ಟುಹೋಗಿದೆ ಎಂಬುದನ್ನೂ ಈಗ ನಿನ್ನ ಮೂಲಕ ಮಾತನಾಡುತ್ತಿದ್ದಾನೆ ಎಂಬುದನ್ನೂ ನೀನು ನಿಜವಾಗಿಯೂ ನಂಬುವೆಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು?” ಎನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಗ ಕೆನಾನನ ಮಗ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಬಂದು ಅವನ ಕೆನ್ನೆಗೆ ಒಂದು ಪೆಟ್ಟುಕೊಟ್ಟು, “ಸರ್ವೇಶ್ವರನ ಆತ್ಮ ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವುದಕ್ಕೆ ಯಾವ ಮಾರ್ಗವಾಗಿ ಬಂದಿತು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ - ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು ಅನ್ನಲು ಮೀಕಾಯೆಹುವು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಕೆನಾನನ ಮಗನಾದ ಚಿದ್ಕೀಯನು ಸಮೀಪಕ್ಕೆ ಬಂದು, ಮೀಕಾಯನ ಕೆನ್ನೆಯ ಮೇಲೆ ಹೊಡೆದು, “ಯೆಹೋವ ದೇವರ ಆತ್ಮವು ನನ್ನನ್ನು ಬಿಟ್ಟು, ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಬಂದಿತು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:24
16 ತಿಳಿವುಗಳ ಹೋಲಿಕೆ  

ಪ್ರಧಾನಯಾಜಕನಾದ ಅನನೀಯನು ಅಲ್ಲಿದ್ದನು. ಪೌಲನು ಹೇಳಿದ್ದನ್ನು ಕೇಳಿದ ಅನನೀಯನು ಪೌಲನ ಪಕ್ಕದಲ್ಲಿ ನಿಂತಿದ್ದವರಿಗೆ ಪೌಲನ ಬಾಯಿಯ ಮೇಲೆ ಹೊಡೆಯಲು ಹೇಳಿದನು.


ಬಲಶಾಲಿಯಾದ ನಗರಿಯೇ, ನಿನ್ನ ಸೈನಿಕರನ್ನು ಕೂಡಿಸು. ಅವರು ನಮ್ಮ ಮೇಲೆ ದಾಳಿಮಾಡಲು ಸುತ್ತುವರಿದಿದ್ದಾರೆ. ಇಸ್ರೇಲಿನ ನ್ಯಾಯಾಧೀಶನ ಕೆನ್ನೆಯ ಮೇಲೆ ಕೋಲಿನಿಂದ ಹೊಡೆಯುವರು.


ಆ ವ್ಯಕ್ತಿಯು ತನ್ನನ್ನು ಹೊಡೆಯುವವರಿಗೆ ತನ್ನ ಕೆನ್ನೆಯನ್ನು ಒಡ್ಡಬೇಕು. ಅವನು ತನಗೆ ಜನರಿಂದಾಗುವ ಗೇಲಿಯನ್ನು ಸಹಿಸಿಕೊಳ್ಳಬೇಕು.


“ಸೇವಕನು ತನ್ನ ಒಡೆಯನಿಗಿಂತ ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಿಸಿಕೊಳ್ಳಿ. ಜನರು ನನ್ನನ್ನು ಹಿಂಸಿಸಿದಂತೆ ನಿಮ್ಮನ್ನೂ ಹಿಂಸಿಸುವರು ಮತ್ತು ನನ್ನ ಉಪದೇಶಕ್ಕೆ ವಿಧೇಯರಾದರೆ ನಿಮ್ಮ ಉಪದೇಶಕ್ಕೂ ವಿಧೇಯರಾಗುವರು.


“ಈ ಲೋಕವು ನಿಮ್ಮನ್ನು ದ್ವೇಷ ಮಾಡಿದರೆ, ಅದು ಮೊದಲು ನನ್ನನ್ನೇ ದ್ವೇಷ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿರಿ.


ಅಲ್ಲಿದ್ದ ಕೆಲವು ಜನರು ಯೇಸುವಿಗೆ ಉಗುಳಿ, ಆತನ ಮುಖವನ್ನು ಮುಚ್ಚಿ, ಮುಷ್ಠಿಯಿಂದ ಗುದ್ದಿ, “ನಮಗೆ ಪ್ರವಾದನೆ ಹೇಳು” ಎಂದರು. ನಂತರ ಕಾವಲುಗಾರರು ಯೇಸುವನ್ನು ದೂರ ಕರೆದುಕೊಂಡು ಹೋಗಿ, ಆತನನ್ನು ಹೊಡೆದರು.


ಅವರು, “ಕ್ರಿಸ್ತನೇ, ನಮಗೆ ಪ್ರವಾದನೆ ಹೇಳು! ನಿನಗೆ ಹೊಡೆದವರು ಯಾರು?” ಎಂದು ಅಪಹಾಸ್ಯ ಮಾಡಿದರು.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ದುಷ್ಟನಿಗೆ ವಿರೋಧವಾಗಿ ನಿಂತುಕೊಳ್ಳಬೇಡಿ. ಯಾವನಾದರೂ ನಿಮ್ಮ ಬಲಗೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡಿರಿ.


ಪ್ರವಾದಿಗಳಲ್ಲಿ ಚಿದ್ಕೀಯ ಎಂಬ ಹೆಸರಿನವನೊಬ್ಬನಿದ್ದನು. ಅವನು ಕೆನಾನನ ಮಗ. ಚಿದ್ಕೀಯನು ಕೆಲವು ಕಬ್ಬಿಣದ ಕೊಂಬುಗಳನ್ನು ಮಾಡಿಸಿದ್ದನು. ಆಗ ಅವನು ಅಹಾಬನಿಗೆ, “ಯೆಹೋವನು ಹೀಗೆನ್ನುವನು: ‘ಅರಾಮ್ಯರ ಸೈನ್ಯದ ವಿರುದ್ಧ ಹೋರಾಡಲು ನೀನು ಈ ಕೊಂಬುಗಳನ್ನು ಬಳಸುವೆ. ನೀನು ಅವರನ್ನು ಸೋಲಿಸುವೆ ಮತ್ತು ನಾಶಗೊಳಿಸುವೆ’” ಎಂದು ಹೇಳಿದನು.


ಪೌಲನು ಅನನೀಯನಿಗೆ, “ದೇವರು ನಿನ್ನನ್ನು ಸಹ ಹೊಡೆಯುವನು! ಸುಣ್ಣ ಬಳಿದ ಗೋಡೆ ನೀನು! ಮೋಶೆಯ ಧರ್ಮಶಾಸ್ತ್ರಕ್ಕನುಸಾರವಾಗಿ ನ್ಯಾಯತೀರ್ಪು ಮಾಡಲು ಅಲ್ಲಿ ಕುಳಿತುಕೊಂಡು ನನಗೆ ಹೊಡೆಯಲು ಅವರಿಗೆ ಹೇಳುತ್ತಿರುವೆಯಾ! ಮೋಶೆಯ ಧರ್ಮಶಾಸ್ತ್ರಕ್ಕೆ ಅದು ವಿರುದ್ಧವಾದದ್ದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು