Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:26 - ಪರಿಶುದ್ದ ಬೈಬಲ್‌

26 ಆಗ ರಾಜನಾದ ಅಹಾಬನು ಮೀಕಾಯೆಹುವನ್ನು ಬಂಧಿಸುವಂತೆ ತನ್ನ ಅಧಿಕಾರಿಯೊಬ್ಬನಿಗೆ ಆಜ್ಞೆ ಮಾಡಿದನು. ರಾಜನಾದ ಅಹಾಬನು, “ಅವನನ್ನು ಬಂಧಿಸಿ, ನಗರಾಧಿಕಾರಿಯಾದ ಆಮೋನ ಮತ್ತು ರಾಜಪುತ್ರನಾದ ಯೋವಾಷನ ಬಳಿಗೆ ತೆಗೆದುಕೊಂಡು ಹೋಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಇಸ್ರಾಯೇಲಿನ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ, ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆಗ ಇಸ್ರಯೇಲರ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ಇಸ್ರಾಯೇಲ್ಯರ ಅರಸನು [ಸೇವಕರಿಗೆ] - ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ಇಸ್ರಾಯೇಲಿನ ಅರಸನು ಹೇಳಿದ್ದೇನೆಂದರೆ, “ನೀವು ಮೀಕಾಯನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ, ಅರಸನ ಮಗನಾದ ಯೋವಾಷನ ಬಳಿಗೂ ತೆಗೆದುಕೊಂಡುಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:26
9 ತಿಳಿವುಗಳ ಹೋಲಿಕೆ  

ಮೀಕಾಯೆಹು, “ಕೇಡು ಬೇಗನೆ ಬರಲಿದೆ. ಆಗ ನೀನು ಹೋಗಿ ಒಂದು ಚಿಕ್ಕ ಕೊಠಡಿಯಲ್ಲಿ ಅಡಗಿಕೊಳ್ಳುವೆ. ನಾನು ಸತ್ಯವನ್ನೇ ನುಡಿದೆನೆಂದು ಆಗ ನಿನಗೆ ತಿಳಿಯುತ್ತದೆ!” ಎಂದನು.


ಮೀಕಾಯೆಹುವನ್ನು ಸೆರೆಮನೆಯಲ್ಲಿಡಬೇಕೆಂದು ಅವರಿಗೆ ತಿಳಿಸಿ. ಅವನಿಗೆ ತಿನ್ನಲು ಸ್ವಲ್ಪ ರೊಟ್ಟಿ ಮತ್ತು ಕುಡಿಯಲು ಸ್ವಲ್ಪ ನೀರನ್ನು ಮಾತ್ರ ಕೊಡಿ. ನಾನು ಯುದ್ಧದಿಂದ ಮನೆಗೆ ಹಿಂದಿರುಗುವವರೆಗೆ ಅವನನ್ನು ಅಲ್ಲಿಯೇ ಇಡಿ” ಎಂದು ಹೇಳಿದನು.


ರಾಜನಾದ ಅಹಾಬನು ತನ್ನ ಅಧಿಕಾರಿಗಳಲ್ಲಿ ಒಬ್ಬನಿಗೆ, “ಹೋಗಿ, ಮೀಕಾಯೆಹುವನ್ನು ಕಂಡುಹಿಡಿ” ಎಂದು ತಿಳಿಸಿದನು.


ಅಹಜ್ಯನು ಎಲೀಯನ ಬಳಿಗೆ ಒಬ್ಬ ಸೇನಾಧಿಪತಿಯನ್ನು ಮತ್ತು ಐವತ್ತು ಮಂದಿ ಜನರನ್ನು ಕಳುಹಿಸಿದನು. ಸೇನಾಧಿಪತಿಯು ಎಲೀಯನ ಬಳಿಗೆ ಹೋದನು. ಆ ಸಮಯದಲ್ಲಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿದ್ದನು. ಆ ಸೇನಾಧಿಪತಿಯು ಎಲೀಯನಿಗೆ, “ದೇವಮನುಷ್ಯನೇ, ರಾಜನು ಹೇಳುತ್ತಾನೆ, ‘ಕೆಳಗಿಳಿದು ಬಾ’” ಎಂದು ಹೇಳಿದನು.


ಅವರಿಗೆ “ಮೀಕಾಯೆಹುವನ್ನು ಸೆರೆಮನೆಗೆ ಹಾಕಿ. ನಾನು ಯುದ್ಧದಿಂದ ಸುರಕ್ಷಿತವಾಗಿ ಹಿಂತಿರುಗುವ ತನಕ ಬರಿ ರೊಟ್ಟಿ ಮತ್ತು ನೀರನ್ನು ಮಾತ್ರ ಅವನಿಗೆ ಕೊಡಿ ಎಂದು ಅರಸನು ಆಜ್ಞಾಪಿಸುತ್ತಾನೆ ಎಂದು ಹೇಳಿ” ಎಂದನು.


ರಾಜನಾದ ಯೆಹೋಯಾಕೀಮನು ಲಿಪಿಕಾರನಾದ ಬಾರೂಕನನ್ನು ಮತ್ತು ಪ್ರವಾದಿಯಾದ ಯೆರೆಮೀಯನನ್ನು ಬಂಧಿಸಬೇಕೆಂದು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶೆಲೆಮ್ಯ ಇವರಿಗೆ ಆಜ್ಞೆಯನ್ನು ಕೊಟ್ಟನು. ಆದರೆ ಅವರಿಂದ ಬಾರೂಕನನ್ನು ಮತ್ತು ಯೆರೆಮೀಯನನ್ನು ಹುಡುಕಲಾಗಲಿಲ್ಲ. ಯಾಕೆಂದರೆ ಯೆಹೋವನು ಅವರನ್ನು ಬಚ್ಚಿಟ್ಟಿದ್ದನು.


ಸಂತೋಷಪಡಿರಿ, ಆನಂದಿಸಿರಿ. ಪರಲೋಕದಲ್ಲಿ ನಿಮಗಾಗಿ ಕಾದಿರುವ ಹೆಚ್ಚಿನ ಪ್ರತಿಫಲವನ್ನು ನೀವು ಹೊಂದುವಿರಿ. ನಿಮಗಿಂತ ಮುಂಚೆ ಜೀವಿಸಿದ್ದ ಪ್ರವಾದಿಗಳಿಗೂ ಜನರು ಹೀಗೆಯೇ ಮಾಡಿದರು.


“ನಿಮ್ಮ ವಿರೋಧಿಯು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆದೊಯ್ಯುವಾಗ ಬೇಗನೆ ಅವನೊಂದಿಗೆ ಸ್ನೇಹಿತರಾಗಿ. ನೀವು ನ್ಯಾಯಾಲಯಕ್ಕೆ ಹೋಗುವ ಮೊದಲೇ ಇದನ್ನು ಮಾಡಬೇಕು. ನೀವು ಅವನ ಸ್ನೇಹಿತರಾಗದಿದ್ದರೆ, ಅವನು ನಿಮ್ಮನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿಯು ನಿಮ್ಮನ್ನು ಸೆರೆಮನೆಗೆ ಹಾಕಲು ಕಾವಲುಗಾರನಿಗೆ ಒಪ್ಪಿಸಬಹುದು.


ಆದರೆ ನೀತಿಯಬಾಳ್ವೆ, ಇಂದ್ರಿಯನಿಗ್ರಹ ಮತ್ತು ಮುಂದೆ ಬರಲಿರುವ ನ್ಯಾಯತೀರ್ಪುಗಳ ಬಗ್ಗೆ ಪೌಲನು ಮಾತಾಡಿದಾಗ ಅವನು ಭಯಗೊಂಡು, “ಈಗ ನೀನು ಹೋಗು! ನನಗೆ ಹೆಚ್ಚು ಸಮಯವಿರುವಾಗ ನಿನ್ನನ್ನು ಕರೆಯಿಸುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು