Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:28 - ಪರಿಶುದ್ದ ಬೈಬಲ್‌

28 ಮೀಕಾಯೆಹು ಗಟ್ಟಿಯಾದ ಧ್ವನಿಯಲ್ಲಿ, “ನಾನು ಏನು ಹೇಳುತ್ತೇನೆಂಬುದನ್ನು ಜನರೆಲ್ಲರೂ ಕೇಳಿರಿ! ರಾಜನಾದ ಅಹಾಬನೇ, ನೀನು ಈ ಹೋರಾಟದಿಂದ ಜೀವಸಹಿತ ಮನೆಗೆ ಬಂದರೆ, ಯೆಹೋವನು ನನ್ನ ಮೂಲಕ ಮಾತನಾಡಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತವಾಗಿ ಬರುವುದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ” ಎಂದು ಹೇಳಿ “ಎಲ್ಲಾ ಜನರೇ, ಇದನ್ನು ಕೇಳಿರಿ” ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತನಾಗಿ ಬರುವುದಾದರೆ ನಾನು ನುಡಿದದ್ದು ಸರ್ವೇಶ್ವರನ ಮಾತಲ್ಲವೆಂದು ತಿಳಿದುಕೋ,” ಎಂದು ಹೇಳಿ, “ಮಹಾಜನರೇ, ನನ್ನ ಮಾತನ್ನು ಗಮನದಲ್ಲಿಡಿ,” ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮೀಕಾಯೆಹುವು ಅರಸನಿಗೆ - ನೀನು ಸುರಕ್ಷಿತನಾಗಿ ಬರುವದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ ಎಂದು ಹೇಳಿ - ಎಲ್ಲಾ ಜನರೇ, ಇದನ್ನು ಕೇಳಿರಿ ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅದಕ್ಕೆ ಮೀಕಾಯನು, “ನೀನು ಸಮಾಧಾನದಿಂದ ನಿಜವಾಗಿ ಬಂದರೆ, ಯೆಹೋವ ದೇವರು ನನ್ನ ಮುಖಾಂತರ ಮಾತನಾಡಿಲ್ಲ, ಎಂದು ಹೇಳಿ; ಜನರೇ ನೀವೆಲ್ಲರೂ ನನ್ನ ಮಾತನ್ನು ಗಮನದಲ್ಲಿಡಿರಿ!” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:28
15 ತಿಳಿವುಗಳ ಹೋಲಿಕೆ  

ಎಲ್ಲಾ ಜನರೇ, ಕೇಳಿರಿ! ಭೂಮಿಯೂ ಅದರಲ್ಲಿರುವವರೆಲ್ಲರೂ ಕೇಳಿರಿ! ನನ್ನ ಒಡೆಯನಾದ ಯೆಹೋವನು ತನ್ನ ಪವಿತ್ರ ಆಲಯದಿಂದ ಬರುವನು. ನಿಮ್ಮ ವಿರುದ್ಧ ಸಾಕ್ಷಿಯಾಗಿ ಆತನು ಬರುವನು.


ಇಲ್ಲಿರುವ ಜನರು ಸಾಯುವರು. ಆದರೆ ಇವರ ಅಂತ್ಯವು ಎಲ್ಲರಿಗೂ ಸಂಭವಿಸುವ ಅಂತ್ಯವಾಗಿದ್ದರೆ, ಯೆಹೋವನು ನನ್ನನ್ನು ಕಳುಹಿಸಲಿಲ್ಲವೆಂದು ತಿಳಿದುಕೊಳ್ಳಬೇಕು.


ದಾವೀದನೇ ಕ್ರಿಸ್ತನನ್ನು ‘ಪ್ರಭು’ ಎಂದು ಕರೆದಿರುವಾಗ ಕ್ರಿಸ್ತನು ದಾವೀದನ ಮಗನಾಗುವುದು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದನು. ಯೇಸುವಿನ ಮಾತನ್ನು ಕೇಳಿ, ಅನೇಕ ಜನರು ಬಹಳ ಸಂತೋಷಪಟ್ಟರು.


ಇಸ್ರೇಲಿನ ಜನರೇ, ಈ ಸಂದೇಶಕ್ಕೆ ಕಿವಿಗೊಡಿರಿ! ನಿಮ್ಮ ವಿಷಯವಾಗಿ ಯೆಹೋವನು ಹೀಗೆ ಹೇಳಿದ್ದಾನೆ. ಇಸ್ರೇಲೇ, ಇದು ನಾನು ಈಜಿಪ್ಟ್‌ನಿಂದ ಬಿಡಿಸಿಕೊಂಡು ಬಂದ ಎಲ್ಲಾ ಕುಟುಂಬಗಳವರ (ಇಸ್ರೇಲ್) ವಿಷಯವಾದ ಸಂದೇಶ.


ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.


ಆಗ ಮೀಕಾಯೆಹುವು, “ಅಹಾಬನೇ, ನೀನು ರಣರಂಗದಿಂದ ಸುರಕ್ಷಿತವಾಗಿ ಬಂದರೆ ಯೆಹೋವನು ನನ್ನ ಮೂಲಕ ಮಾತನಾಡಲಿಲ್ಲವೆಂದು ತಿಳಿದುಕೋ. ಜನರೇ, ನನ್ನ ಮಾತನ್ನು ಕೇಳಿ ನೆನಪಿನಲ್ಲಿಡಿರಿ” ಎಂದು ಉತ್ತರಕೊಟ್ಟನು.


ಎಲೀಯನು ಸೇನಾಧಿಪತಿಗೆ ಮತ್ತು ಅವನ ಐವತ್ತು ಮಂದಿ ಜನರಿಗೆ, “ನಾನು ದೇವಮನುಷ್ಯನಾಗಿದ್ದರೆ ಪರಲೋಕದಿಂದ ಬೆಂಕಿಯು ಕೆಳಗಿಳಿದು ಬಂದು ನಿನ್ನನ್ನೂ ನಿನ್ನ ಐವತ್ತು ಜನರನ್ನೂ ನಾಶಗೊಳಿಸಲಿ!” ಎಂದು ಹೇಳಿದನು. ಆಗ ಪರಲೋಕದಿಂದ ದೇವರ ಬೆಂಕಿಯು ಇಳಿದು ಬಂದು ಸೇನಾಧಿಪತಿಯನ್ನೂ ಅವನ ಐವತ್ತು ಜನರನ್ನೂ ನಾಶಗೊಳಿಸಿತು.


ಎಲೀಯನು ಐವತ್ತು ಮಂದಿಯ ಸೇನಾಧಿಪತಿಗೆ, “ನಾನು ಒಬ್ಬ ದೇವಮನುಷ್ಯನಾಗಿರುವದಾದರೆ ಪರಲೋಕದಿಂದ ಬೆಂಕಿಯು ಕೆಳಗಿಳಿದು ಬಂದು ನಿನ್ನನ್ನೂ ನಿನ್ನ ಐವತ್ತು ಸೈನಿಕರನ್ನೂ ನಾಶಗೊಳಿಸಲಿ!” ಎಂದು ಉತ್ತರಿಸಿದನು. ಆಗ ಬೆಂಕಿಯು ಪರಲೋಕದಿಂದ ಬಂದು ಆ ಸೇನಾಧಿಪತಿಯನ್ನು ಮತ್ತು ಅವನ ಐವತ್ತು ಮಂದಿ ಸೈನಿಕರನ್ನು ನಾಶಗೊಳಿಸಿತು.


“ಹನನ್ಯನೇ, ನಾನು ಹೇಳಬೇಕಾದುದನ್ನು ಕೇಳು. ಸಮಸ್ತ ಜನರಿಗೆ ನಾನು ಹೇಳಬೇಕಾದುದನ್ನು ಕೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು