Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:37 - ಪರಿಶುದ್ದ ಬೈಬಲ್‌

37 ರಾಜನಾದ ಅಹಾಬನು ಈ ರೀತಿಯಲ್ಲಿ ಸತ್ತುಹೋದನು. ಅವನ ದೇಹವನ್ನು ಕೆಲವು ಜನರು ಸಮಾರ್ಯಕ್ಕೆ ತೆಗೆದುಕೊಂಡು ಹೋದರು. ಅವರು ಅವನನ್ನು ಅಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅರಸನು ಸಾಯಲು ಅವನನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅರಸನ ಶವವನ್ನು ಸಮಾರಿಯಕ್ಕೆ ತಂದು ಅಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅರಸನು ಸಾಯಲು ಅವನನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಇಸ್ರಾಯೇಲಿನ ಅರಸನ ಶವವನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:37
7 ತಿಳಿವುಗಳ ಹೋಲಿಕೆ  

ಸೂರ್ಯನು ಮುಳುಗುತ್ತಿರಲು, ಇಸ್ರೇಲಿನ ಸೈನ್ಯದ ಪ್ರತಿಯೊಬ್ಬನು ತನ್ನ ಊರಿಗೂ ತನ್ನ ನಾಡಿಗೂ ಹೋಗಬೇಕು! ಎಂಬ ಕೂಗು ಸೈನ್ಯದಲ್ಲೆಲ್ಲಾ (ಪಾಳೆಯದಲ್ಲಿ) ಹಬ್ಬಿತು.


ಆ ಜನರು ಅಹಾಬನ ರಥವನ್ನು ಸಮಾರ್ಯದ ಕೊಳದ ನೀರಿನಲ್ಲಿ ತೊಳೆದರು. ರಥದಲ್ಲಿದ್ದ ರಾಜನಾದ ಅಹಾಬನ ರಕ್ತವನ್ನು ನಾಯಿಗಳು ನೆಕ್ಕಿದವು. ದೇವದಾಸಿಯರು ಆ ಕೊಳದ ನೀರನ್ನು ಸ್ನಾನಕ್ಕೆ ಉಪಯೋಗಿಸುತ್ತಿದ್ದರು. ಯೆಹೋವನು ಹೇಳಿದ್ದ ರೀತಿಯಲ್ಲಿಯೇ ಈ ಸಂಗತಿಗಳು ಸಂಭವಿಸಿದವು.


ಆದರೆ ಒಮ್ರಿಯು ಸಮಾರ್ಯ ಬೆಟ್ಟವನ್ನು ಶೆಮೆರನಿಂದ ಅರವತ್ತೆಂಟು ಕಿಲೋಗ್ರಾಂ ಬೆಳ್ಳಿಗೆ ಕೊಂಡುಕೊಂಡನು. ಒಮ್ರಿಯು ಆ ಬೆಟ್ಟದ ಮೇಲೆ ಒಂದು ನಗರವನ್ನು ಕಟ್ಟಿಸಿದನು. ಅವನು ಆ ನಗರಕ್ಕೆ ಸಮಾರ್ಯವೆಂದು ಅದರ ಒಡೆಯನಾದ ಶೆಮೆರನ ಹೆಸರನ್ನು ಇಟ್ಟನು.


ಬಳಿಕ ಪ್ರವಾದಿಯು ರಾಜನಿಗೆ, “ಯೆಹೋವನು ನಿನಗೆ ಹೀಗೆನ್ನುತ್ತಾನೆ, ‘ನಾನು ಸಂಹರಿಸೆಂದು ಹೇಳಿದ ಮನುಷ್ಯನನ್ನು ನೀನು ಸ್ವತಂತ್ರನಾಗಿಸಿದೆ. ಆದ್ದರಿಂದ ಅವನಿಗೆ ಸಂಭವಿಸಬೇಕಾದದ್ದು ನಿನಗೆ ಸಂಭವಿಸುವುದು. ನೀನು ಸಾಯುವೆ! ಶತ್ರುಗಳಿಗೆ ಸಂಭವಿಸಬೇಕಾದದ್ದು ನಿನ್ನ ಜನರಿಗೆ ಸಂಭವಿಸುವುದು. ನಿನ್ನ ಜನರು ಸಾಯುತ್ತಾರೆ!’” ಎಂದು ಹೇಳಿದನು.


ದುಷ್ಟರಾದರೋ ಆಪತ್ತುಗಳಿಂದ ಸಾಯುವರು. ನೀತಿವಂತರ ವೈರಿಗಳು ನಾಶವಾಗುವರು.


ಸುಳ್ಳುಪ್ರವಾದಿಗಳು ಸುಳ್ಳನ್ನೇ ಹೇಳುತ್ತಾರೆ. ಅವರು ಹೇಳಿದ್ದೆಲ್ಲವೂ ಸುಳ್ಳು ಎಂದು ಯೆಹೋವನು ತೋರಿಸಿಕೊಡುತ್ತಾನೆ. ಮಂತ್ರಗಾರರನ್ನು ದೇವರು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಜ್ಞಾನಿಗಳನ್ನು ಗಲಿಬಿಲಿಗೊಳಿಸುತ್ತಾನೆ. ಅವರು ತಮಗೆ ಎಲ್ಲವೂ ಗೊತ್ತಿದೆ ಎಂದು ತಿಳಿದುಕೊಳ್ಳುತ್ತಾರೆ. ಆದರೆ ದೇವರು ಅವರನ್ನು ಮೂಢರನ್ನಾಗಿ ಮಾಡುತ್ತಾನೆ.


“‘ಅವರನ್ನು ಯೆಹೋವನು ಕಳುಹಿಸಿಲ್ಲದಿದ್ದರೂ ಅವರು, “ಯೆಹೋವನು ಇದನ್ನು ಹೇಳಿದ್ದಾನೆ” ಎನ್ನುತ್ತಾರೆ. ಅವರು ಮಾಟಮಂತ್ರ ಮಾಡಿ ಇಂತಿಂಥದ್ದು ಸಂಭವಿಸುವುದು ಎಂದು ಸುಳ್ಳು ಹೇಳುತ್ತಾರೆ. ದೇವರು ನಮ್ಮನ್ನು ಕಳುಹಿಸಿದ್ದು ಎಂದು ಸುಳ್ಳು ಹೇಳುವರು. ಅವರು ತಮ್ಮ ಸುಳ್ಳು ನಿಜವಾಗುತ್ತಿರುವದನ್ನು ನೋಡಲು ಕಾಯುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು