Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:4 - ಪರಿಶುದ್ದ ಬೈಬಲ್‌

4 ಆದ್ದರಿಂದ ಅಹಾಬನು ರಾಜನಾದ ಯೆಹೋಷಾಫಾಟನನ್ನು, “ಅರಾಮ್ಯರ ವಿರುದ್ಧವಾಗಿ ರಾಮೋತಿನಲ್ಲಿ ಹೋರಾಟ ಮಾಡುವುದಕ್ಕೆ ನೀನು ನಮ್ಮೊಂದಿಗೆ ಸೇರಿಕೊಳ್ಳುವೆಯಾ?” ಎಂದು ಕೇಳಿದನು. ಯೆಹೋಷಾಫಾಟನು, “ಆಗಲಿ, ನಾನು ನಿನ್ನ ಜೊತೆ ಸೇರಿಕೊಳ್ಳುತ್ತೇನೆ. ನನ್ನ ಸೈನ್ಯಗಳು ಮತ್ತು ನನ್ನ ಕುದುರೆಗಳು ನಿನ್ನ ಸೈನ್ಯದ ಜೊತೆ ಸೇರಲು ಸಿದ್ಧವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಯೆಹೋಷಾಫಾಟನಿಗೆ, “ಯುದ್ಧಮಾಡುವುದಕ್ಕಾಗಿ ನೀನು ನಮ್ಮ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಲು ಅವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯೆಹೋಷಾಫಾಟನನ್ನು, “ಯುದ್ಧಮಾಡುವುದಕ್ಕೆ ನೀನೂ ನಮ್ಮ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತಿಯೋ?’ ಎಂದು ಕೇಳಿದನು. ಅವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋಷಾಫಾಟನನ್ನು - ಯುದ್ಧಮಾಡುವದಕ್ಕಾಗಿ ನೀನೂ ನಮ್ಮ ಜೊತೆಯಲ್ಲಿ ರಾಮೋತ್‍ಗಿಲ್ಯಾದಿಗೆ ಬರುತ್ತೀಯೋ ಎಂದು ಕೇಳಲು ಅವನು - ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇಯಲ್ಲವೋ ಎಂದು ಉತ್ತರಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಅವನು ಯೆಹೋಷಾಫಾಟನಿಗೆ, “ನೀನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ?” ಎಂದನು. ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:4
13 ತಿಳಿವುಗಳ ಹೋಲಿಕೆ  

ಯೋರಾಮನು ಯೆಹೂದದ ರಾಜನಾದ ಯೆಹೋಷಾಫಾಟನ ಬಳಿಗೆ ಸಂದೇಶಕರನ್ನು ಕಳುಹಿಸಿ, “ನನ್ನ ಆಳ್ವಿಕೆಯಿಂದ ಮೋವಾಬಿನ ರಾಜನು ಬೇರ್ಪಟ್ಟಿದ್ದಾನೆ. ಮೋವಾಬಿನ ವಿರುದ್ಧ ಹೋರಾಡಲು ನನ್ನ ಜೊತೆ ಬರುವೆಯಾ?” ಎಂದು ಕೇಳಿದನು. ಯೆಹೋಷಾಫಾಟನು, “ಆಗಲಿ, ನಿನ್ನ ಜೊತೆ ನಾನೂ ಬರುತ್ತೇನೆ. ನಾನೂ ನೀನೂ ಒಂದೇ. ನನ್ನ ಜನರೂ ನಿನ್ನ ಜನರೂ ಒಂದೇ. ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ” ಎಂದು ಹೇಳಿದನು.


ಕತ್ತಲೆಯಲ್ಲಿರುವ ಜನರು ಮಾಡುವಂಥ ಕಾರ್ಯಗಳನ್ನು ಮಾಡಬೇಡಿ. ಅವುಗಳಿಂದ ಒಳ್ಳೆಯದೇನೂ ಆಗುವುದಿಲ್ಲ. ಆದರೆ ಕತ್ತಲೆಯಲ್ಲಿ ನಡೆಯುವ ಕಾರ್ಯಗಳು ತಪ್ಪಾದವುಗಳೆಂದು ತೋರಿಸಲು ಒಳ್ಳೆಯ ಕಾರ್ಯಗಳನ್ನು ಮಾಡಿರಿ.


“ಜಯಗಳಿಸುವವನಿಗೆ ಮತ್ತು ನಾನು ಅಪೇಕ್ಷಿಸುವುದನ್ನು ಕೊನೆಯವರೆಗೆ ಮಾಡುವವನಿಗೆ ಜನಾಂಗಗಳ ಮೇಲಿನ ಅಧಿಕಾರವನ್ನು ನೀಡುತ್ತೇನೆ:


ನೀವು ಅವನನ್ನು ಸ್ವಾಗತಿಸಿದರೆ ಅವನ ಕೆಟ್ಟಕಾರ್ಯಕ್ಕೆ ನೀವೂ ಸಹಾಯ ಮಾಡಿದಂತಾಗುವುದು.


ಮೋಸ ಹೋಗಬೇಡಿರಿ. “ದುರ್ಜನರ ಸಹವಾಸ ಸದಾಚಾರದ ಭಂಗ.”


ಜ್ಞಾನಿಗಳೊಂದಿಗೆ ಸ್ನೇಹದಿಂದಿರಿ. ಆಗ ನೀವೂ ಜ್ಞಾನಿಗಳಾಗುವಿರಿ. ಆದರೆ ನೀವು ಜ್ಞಾನಹೀನರನ್ನು ನಿಮ್ಮ ಸ್ನೇಹಿತರನ್ನಾಗಿ ಆಯ್ದುಕೊಂಡರೆ, ನಿಮಗೆ ತೊಂದರೆ ಉಂಟಾಗುವುದು.


ದೇವದರ್ಶಿಯಾದ ಯೇಹೂ ಅವನನ್ನು ಎದುರುಗೊಂಡನು. ಅವನು ಹನಾನೀಯನ ಮಗ. ರಾಜನಿಗೆ ಯೇಹುವು ಹೇಳಿದ್ದೇನೆಂದರೆ, “ನೀನು ದುಷ್ಟಜನರಿಗೆ ಸಹಾಯಮಾಡಿದ್ದೇಕೆ? ಯೆಹೋವನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸಿದ್ದೇಕೆ? ಆ ಕಾರಣಕ್ಕಾಗಿ ಯೆಹೋವನು ನಿನ್ನ ಮೇಲೆ ಕೋಪಗೊಂಡಿದ್ದಾನೆ.


ಇಸ್ರೇಲರ ಅರಸನಾದ ಅಹಾಬನು ಯೆಹೂದದ ಅರಸನಾದ ಯೆಹೋಷಾಫಾಟನಿಗೆ, “ನೀನು ನನ್ನೊಂದಿಗೆ ರಾಮೋತ್‌ಗಿಲ್ಯಾದಿಗೆ ಯುದ್ಧಮಾಡಲು ಬರುವಿಯಾ?” ಎಂದು ಕೇಳಲು, ಯೆಹೋಷಾಫಾಟನು, “ನಾನು ನಿನ್ನವನೆ, ನನ್ನ ಜನರು ನಿನ್ನ ಜನರೇ ಆಗಿದ್ದಾರೆ. ನಾವು ಯುದ್ಧಮಾಡಲು ನಿಮ್ಮೊಂದಿಗೆ ಬರುತ್ತೇವೆ” ಎಂದು ಅಹಾಬನಿಗೆ ಉತ್ತರಿಸಿದನು.


ರಾಮೋತ್ ಗಿಲ್ಯಾದಿಗೆ ಬೆನ್‌ಗೆಬೆರನು ರಾಜ್ಯಪಾಲನಾಗಿದ್ದನು. ಗಿಲ್ಯಾದಿನ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ ಮತ್ತು ಪಟ್ಟಣಗಳೆಲ್ಲಕ್ಕೂ ಅವನು ರಾಜ್ಯಪಾಲನಾಗಿದ್ದನು. ಅವನು ಬಾಷಾನಿನ ಅರ್ಗೋಬ್ ಜಿಲ್ಲೆಗೂ ರಾಜ್ಯಪಾಲನಾಗಿದ್ದನು. ಈ ಪ್ರದೇಶದಲ್ಲಿ ಗೋಡೆಗಳಿಂದ ಸುತ್ತುವರಿದ ಅರವತ್ತು ನಗರಗಳಿದ್ದವು. ಈ ನಗರಗಳ ದ್ವಾರದಲ್ಲಿ ಹಿತ್ತಾಳೆಯ ಸಲಾಕೆಗಳುಳ್ಳ ಬಾಗಿಲುಗಳಿದ್ದವು.


ಆದರೆ ಯೆಹೋವನ ಸಲಹೆಯನ್ನು ನಾವು ಮೊದಲು ಕೇಳಬೇಕಾಗಿದೆ” ಎಂದನು.


ನಂತರ ರಾಜನಾದ ಅಹಾಬನು ಮತ್ತು ರಾಜನಾದ ಯೆಹೋಷಾಫಾಟನು ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ಹೋದರು. ಅದು ಗಿಲ್ಯಾದಿನ ಪ್ರದೇಶವೆಂಬಲ್ಲಿ ನಡೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು