Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:5 - ಪರಿಶುದ್ದ ಬೈಬಲ್‌

5 ಆದರೆ ಯೆಹೋವನ ಸಲಹೆಯನ್ನು ನಾವು ಮೊದಲು ಕೇಳಬೇಕಾಗಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ಈಗ ವಿಚಾರಿಸು” ಎಂದು ಇಸ್ರಾಯೇಲರ ಅರಸನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮಾತ್ರವಲ್ಲ, “ಸರ್ವೇಶ್ವರನ ಸನ್ನಿಧಿಯಲ್ಲಿ ಈಗಲೆ ವಿಚಾರಿಸು,” ಎಂದು ಇಸ್ರಯೇಲರ ಅರಸನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನ ಸನ್ನಿಧಿಯಲ್ಲಿ ಈಗ ವಿಚಾರಿಸು ಎಂದು ಇಸ್ರಾಯೇಲ್ಯರ ಅರಸನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ಈ ಹೊತ್ತು ಮೊದಲು ಯೆಹೋವ ದೇವರ ಆಲೋಚನೆಯನ್ನು ವಿಚಾರಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:5
22 ತಿಳಿವುಗಳ ಹೋಲಿಕೆ  

ಪಷ್ಹೂರ ಮತ್ತು ಚೆಫನ್ಯರು ಹೀಗೆಂದರು: “ನಮಗೋಸ್ಕರ ಯೆಹೋವನನ್ನು ಪ್ರಾರ್ಥಿಸಿ ಮುಂದೆ ಸಂಭವಿಸುವುದನ್ನು ವಿಚಾರಿಸು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿರುವನು; ಆದ್ದರಿಂದ ಮುಂದೆ ಸಂಭವಿಸುವುದನ್ನು ನಾವು ತಿಳಿಯ ಬಯಸುತ್ತೇವೆ. ಮೊದಲಿನಂತೆ ಯೆಹೋವನು ನಮಗೋಸ್ಕರ ಅದ್ಭುತಗಳನ್ನೂ ಮಾಡಬಹುದು. ನೆಬೂಕದ್ನೆಚ್ಚರನು ನಮ್ಮ ಮೇಲೆ ಧಾಳಿ ಮಾಡುವುದನ್ನು ನಿಲ್ಲಿಸಿ ಹೊರಟುಹೋಗುವಂತೆ ಆತನು ಮಾಡಬಹುದು.”


ಆದರೆ ಯೆಹೋಷಾಫಾಟನು, “ಯೆಹೋವನ ಪ್ರವಾದಿಗಳಲ್ಲಿ ನಿಜವಾಗಿಯೂ ಯಾರಾದರೊಬ್ಬರು ಇಲ್ಲಿರಬೇಕು. ನಾವೇನು ಮಾಡಬೇಕೆಂದು ಯೆಹೋವನು ಹೇಳುತ್ತಾನೆ. ಅದಕ್ಕಾಗಿ ನಾವು ಆ ಪ್ರವಾದಿಯನ್ನು ಕೇಳೋಣ” ಎಂದು ಹೇಳಿದನು. ಇಸ್ರೇಲಿನ ರಾಜನ ಸೇವಕರಲ್ಲಿ ಒಬ್ಬನು, “ಶಾಫಾಟನ ಮಗನಾದ ಎಲೀಷನು ಇಲ್ಲಿಯೇ ಇದ್ದಾನೆ. ಎಲೀಷನು ಎಲೀಯನ ಸೇವಕನಾಗಿದ್ದನು” ಎಂದು ಹೇಳಿದನು.


ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.


“ನರಪುತ್ರನೇ, ಈ ಜನರು ತಮ್ಮ ವಿಗ್ರಹಗಳಿಗೆ ಪ್ರತಿಷ್ಠಿತರಾಗಿದ್ದಾರೆ ಮತ್ತು ಪಾಪಕ್ಕೆ ಬೀಳಲು ತಮಗೆ ತಾವೇ ಅವಕಾಶಮಾಡಿಕೊಡುತ್ತಾರೆ. ಸಹಾಯಕ್ಕಾಗಿ ನನ್ನನ್ನು ಕೇಳಿಕೊಳ್ಳಲು ಅವರಿಗೆ ಅವಕಾಶ ಕೊಡಬೇಕೇ? ಇಲ್ಲ.


ಸೌಲನು ಯೆಹೋವನಿಗೆ ಅವಿಧೇಯನಾಗಿದ್ದರಿಂದ ಸತ್ತನು. ಅವನು ಯೆಹೋವನ ಮಾತನ್ನು ಕೇಳದೆ ಹೋದನು.


ಆದರೆ ಯೆಹೋವನ ದೂತನೊಬ್ಬನು ತಿಷ್ಬೀಯನಾದ ಎಲೀಯನಿಗೆ, “ರಾಜನಾದ ಅಹಜ್ಯನು ಸಮಾರ್ಯದಿಂದ ಕೆಲವು ಸಂದೇಶಕರನ್ನು ಕಳುಹಿಸಿದ್ದಾನೆ. ನೀನು ಹೋಗಿ ಅವರನ್ನು ಭೇಟಿಯಾಗಿ ಅವರಿಗೆ, ‘ಇಸ್ರೇಲಿನಲ್ಲಿಯೂ ಒಬ್ಬ ದೇವರಿದ್ದಾನೆ! ಹೀಗಿರುವಾಗ ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ ಪ್ರಶ್ನೆಗಳನ್ನು ಕೇಳುವುದೇಕೆ?


ನಂತರ ದಾವೀದನು ಯೆಹೋವನಲ್ಲಿ, “ನಮ್ಮ ಕುಟುಂಬಗಳನ್ನು ಅಪಹರಿಸಿದ ಜನರನ್ನು ನಾನು ಅಟ್ಟಿಸಿಕೊಂಡು ಹೋಗಬೇಕೇ? ನಾನು ಅವರನ್ನು ಸೆರೆಹಿಡಿಯುವೆನೇ?” ಎಂದು ಪ್ರಾರ್ಥಿಸಿದನು. ಯೆಹೋವನು, “ಅವರನ್ನು ಅಟ್ಟಿಸಿಕೊಂಡು ಹೋಗು. ಅವರನ್ನು ನೀನು ಸೆರೆಹಿಡಿಯಬಹುದು. ನಿಮ್ಮ ಕುಟುಂಬಗಳನ್ನು ನೀವು ರಕ್ಷಿಸಬಹುದು” ಎಂದು ಉತ್ತರಿಸಿದನು.


ದಾವೀದನು ಮತ್ತೆ ಯೆಹೋವನನ್ನು ಕೇಳಿದನು. ಯೆಹೋವನು ದಾವೀದನಿಗೆ, “ಕೆಯೀಲಾಕ್ಕೆ ಹೋಗು. ಫಿಲಿಷ್ಟಿಯರನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುತ್ತೇನೆ” ಎಂದು ಹೇಳಿದನು.


ದಾವೀದನು, “ನಾನು ಹೋಗಿ ಈ ಫಿಲಿಷ್ಟಿಯರೊಡನೆ ಹೋರಾಡಲೇ?” ಎಂದು ಯೆಹೋವನನ್ನು ಕೇಳಿದನು. ಯೆಹೋವನು ದಾವೀದನಿಗೆ, “ಹೋಗು ಫಿಲಿಷ್ಟಿಯರ ಮೇಲೆ ಆಕ್ರಮಣ ಮಾಡು. ಕೆಯೀಲಾವನ್ನು ರಕ್ಷಿಸು” ಎಂದು ಹೇಳಿದನು.


ಸೌಲನು ಅಹೀಯನಿಗೆ, “ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು. (ಆ ಸಮಯದಲ್ಲಿ ದೇವರ ಪವಿತ್ರ ಪೆಟ್ಟಿಗೆಯು ಇಸ್ರೇಲರೊಂದಿಗೆ ಇತ್ತು.)


ಆಗ ಇಸ್ರೇಲಿನ ಸೈನಿಕರು ಕೆಲವರನ್ನು ಗಿಬೆಯದ ಸುತ್ತಲೂ ಅಡಗಿಸಿಟ್ಟರು.


ಇಸ್ರೇಲಿನ ಜನರು ಬೇತೇಲಿಗೆ ಹೋದರು. ಬೇತೇಲಿನಲ್ಲಿ ಅವರು “ಯಾವ ಕುಲದವರು ಮೊದಲು ಬೆನ್ಯಾಮೀನ್ಯರ ಮೇಲೆ ಧಾಳಿಮಾಡಬೇಕು” ಎಂದು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಯೆಹೂದ ಕುಲದವರು ಮೊದಲು ಹೋಗಬೇಕು” ಎಂದು ಉತ್ತರಿಸಿದನು.


ಯೆಹೋಶುವನು ಮರಣಹೊಂದಿದ ನಂತರ ಇಸ್ರೇಲರು ಯೆಹೋವನಿಗೆ, “ನಮ್ಮಲ್ಲಿ ಯಾವ ಕುಲದವರು ಮೊದಲು ಹೋಗಿ ಕಾನಾನ್ಯರ ವಿರುದ್ಧ ಯುದ್ಧಮಾಡಬೇಕು?” ಎಂದು ಕೇಳಿದರು.


ಅವರು ಹೇಳುತ್ತಿರುವುದು ನಿಜವೇ ಎಂದು ತಿಳಿದುಕೊಳ್ಳಲು ಇಸ್ರೇಲರು ಅವರ ರೊಟ್ಟಿಯನ್ನು ತಿಂದು ನೋಡಿದರು; ಆದರೆ ತಾವು ಏನು ಮಾಡಬೇಕೆಂದು ಯೆಹೋವನನ್ನು ಕೇಳಲಿಲ್ಲ.


ಆದ್ದರಿಂದ ಅಹಾಬನು ರಾಜನಾದ ಯೆಹೋಷಾಫಾಟನನ್ನು, “ಅರಾಮ್ಯರ ವಿರುದ್ಧವಾಗಿ ರಾಮೋತಿನಲ್ಲಿ ಹೋರಾಟ ಮಾಡುವುದಕ್ಕೆ ನೀನು ನಮ್ಮೊಂದಿಗೆ ಸೇರಿಕೊಳ್ಳುವೆಯಾ?” ಎಂದು ಕೇಳಿದನು. ಯೆಹೋಷಾಫಾಟನು, “ಆಗಲಿ, ನಾನು ನಿನ್ನ ಜೊತೆ ಸೇರಿಕೊಳ್ಳುತ್ತೇನೆ. ನನ್ನ ಸೈನ್ಯಗಳು ಮತ್ತು ನನ್ನ ಕುದುರೆಗಳು ನಿನ್ನ ಸೈನ್ಯದ ಜೊತೆ ಸೇರಲು ಸಿದ್ಧವಾಗಿವೆ.


ಅಹಾಬನು ಪ್ರವಾದಿಗಳ ಸಭೆಯೊಂದನ್ನು ಕರೆದನು. ಆ ಸಮಯದಲ್ಲಿ ನಾನೂರುಮಂದಿ ಪ್ರವಾದಿಗಳಿದ್ದರು. ಅಹಾಬನು ಪ್ರವಾದಿಗಳನ್ನು, “ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ನಾನು ರಾಮೋತಿಗೆ ಹೋಗಬೇಕೇ? ಅಥವಾ ನಾನು ಬೇರೊಂದು ಸಮಯಕ್ಕಾಗಿ ಕಾಯಬೇಕೇ?” ಎಂದು ಕೇಳಿದನು. ಪ್ರವಾದಿಗಳು, “ನೀನು ಹೋಗಿ ಯುದ್ಧಮಾಡು. ನೀನು ಗೆಲ್ಲುವಂತೆ ಯೆಹೋವನು ಮಾಡುವನು” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು